AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಪ್ಪ-ಅಮ್ಮ ಹಿಂಸೆ ನೀಡುತ್ತಾರೆಂದು ಮಕ್ಕಳ ಸಹಾಯವಾಣಿಗೆ ಕರೆ ಮಾಡಿದ 10 ವರ್ಷದ ಬಾಲಕಿ!

ಹಿಮಾಚಲ ಪ್ರದೇಶದ ಬಿಲಾಸ್‌ಪುರದಲ್ಲಿ 10 ವರ್ಷದ ಬಾಲಕಿ ಮಕ್ಕಳ ಸಹಾಯವಾಣಿಗೆ ಕರೆ ಮಾಡಿ ತನ್ನ ಪೋಷಕರ ದೌರ್ಜನ್ಯದ ಆರೋಪ ಮಾಡಿದ್ದಾಳೆ. ಆಕೆಯ ಪೋಷಕರು ಇನ್ನುಮುಂದೆ ತಮ್ಮ ಮಗಳನ್ನು ಚೆನ್ನಾಗಿ ನಡೆಸಿಕೊಳ್ಳುವಂತೆ ಮನವೊಲಿಸಲು ಪ್ರಯತ್ನಿಸಲಾಗಿದೆ. ಆದರೆ, ಆ ಬಾಲಕಿ ತನ್ನ ಪೋಷಕರೊಂದಿಗೆ ವಾಸ ಮಾಡಲು ನಿರಾಕರಿಸಿದ್ದಾಳೆ.

ಅಪ್ಪ-ಅಮ್ಮ ಹಿಂಸೆ ನೀಡುತ್ತಾರೆಂದು ಮಕ್ಕಳ ಸಹಾಯವಾಣಿಗೆ ಕರೆ ಮಾಡಿದ 10 ವರ್ಷದ ಬಾಲಕಿ!
Helpline
ಸುಷ್ಮಾ ಚಕ್ರೆ
|

Updated on: Oct 28, 2025 | 7:54 PM

Share

ಬಿಲಾಸ್‌ಪುರ, ಅಕ್ಟೋಬರ್ 28: ಹಿಮಾಚಲ ಪ್ರದೇಶದ (Himachal Pradesh) ಬಿಲಾಸ್‌ಪುರದಲ್ಲಿ 10 ವರ್ಷದ ಬಾಲಕಿಯೊಬ್ಬರು ಮಕ್ಕಳ ಸಹಾಯವಾಣಿಗೆ (Child Helpline) ಕರೆ ಮಾಡಿ ತನ್ನ ಪೋಷಕರಿಂದ ದೈಹಿಕ ಮತ್ತು ಮಾನಸಿಕ ದೌರ್ಜನ್ಯ ನಡೆಯುತ್ತಿದೆ ಎಂದು ಆರೋಪ ಮಾಡಿದ್ದಾಳೆ. ಅವರ ಪೋಷಕರ ವಿರುದ್ಧ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಇಂದು ದೂರು ನೀಡಿದೆ.

ಮಕ್ಕಳ ಸಹಾಯವಾಣಿ 1098ಗೆ ನೀಡಿದ ದೂರಿನಲ್ಲಿ ಆ ಬಾಲಕಿ ತನ್ನ ಪೋಷಕರು ಆಗಾಗ ನನ್ನನ್ನು ಹೊಡೆಯುತ್ತಾರೆ ಮತ್ತು ಗದರಿಸುತ್ತಾರೆ. ಇದರಿಂದಾಗಿ ಮನೆಯಲ್ಲಿ ಉದ್ವಿಗ್ನ ವಾತಾವರಣ ನಿರ್ಮಾಣವಾಗುತ್ತಿದೆ ಎಂದು ಅಪ್ರಾಪ್ತ ಬಾಲಕಿ ಹೇಳಿದ್ದಾಳೆ. ಈ ಕುರಿತಾದ ದೂರಿನ ನಂತರ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಪೊಲೀಸರಿಗೆ ಮಾಹಿತಿ ನೀಡಿದೆ.

ಇದನ್ನೂ ಓದಿ: ಮಕ್ಕಳ ಸಹಾಯವಾಣಿಯ​​ನ್ನು 112 ನಲ್ಲಿ ವಿಲೀನಕ್ಕೆ ಮುಂದಾದ ಕೇಂದ್ರ ಸರ್ಕಾರ: ಆತಂಕದಲ್ಲಿ ಚೈಲ್ಡ್ ಲೈನ್ ಸಿಬ್ಬಂದಿ

ಬಳಿಕ ಮಹಿಳಾ ಅಧಿಕಾರಿಯ ನೇತೃತ್ವದ ಪೊಲೀಸ್ ತಂಡವು ಆ ಬಾಲಕಿಯ ಮನೆಗೆ ಭೇಟಿ ನೀಡಿ ಪರಿಸ್ಥಿತಿಯ ಬಗ್ಗೆ ವಿಚಾರಿಸಿದೆ. ಪೊಲೀಸರು ಬಾಲಕಿಯ ಪೋಷಕರಿಗೆ ಭವಿಷ್ಯದಲ್ಲಿ ಯಾವುದೇ ರೀತಿಯ ದೈಹಿಕ ಹಿಂಸೆ ನೀಡದಂತೆ, ಗದರದಂತೆ ಎಚ್ಚರಿಕೆ ನೀಡಿದ್ದಾರೆ. ಆಕೆಯ ಪೋಷಕರು ಇನ್ನುಮುಂದೆ ತಮ್ಮ ಮಗಳನ್ನು ಚೆನ್ನಾಗಿ ನಡೆಸಿಕೊಳ್ಳುವಂತೆ ಮನವೊಲಿಸಲು ಪ್ರಯತ್ನಿಸಲಾಗಿದೆ. ಆದರೆ, ಆ ಬಾಲಕಿ ತನ್ನ ಪೋಷಕರೊಂದಿಗೆ ವಾಸ ಮಾಡಲು ನಿರಾಕರಿಸಿದ್ದಾಳೆ.

ಇದನ್ನೂ ಓದಿ: ಎಸ್ಸೆಸ್ಸೆಲ್ಸಿಯಲ್ಲಿ ಶೇ 94 ಅಂಕ ಪಡೆದಿದ್ದ ವಿದ್ಯಾರ್ಥಿನಿಗೆ ವಿವಾಹ ಯತ್ನ, ಸಹಾಯವಾಣಿಗೆ ಕರೆ ಮಾಡಿ ದಿಟ್ಟತನ ಮೆರೆದ ಬಾಲಕಿ

ಪೊಲೀಸರು ಪಂಚಾಯತ್ ಪ್ರತಿನಿಧಿಗಳನ್ನು ಕೂಡ ಸ್ಥಳಕ್ಕೆ ಕರೆಸಿದ್ದಾರೆ. ಅವರು ಕೂಡ ಹುಡುಗಿಯನ್ನು ಮನವೊಲಿಸಲು ಪ್ರಯತ್ನಿಸಿದರು. ಆದರೆ ಅವಳು ಅಪ್ಪ-ಅಮ್ಮನ ಜೊತೆ ಇರಲು ಒಪ್ಪಲಿಲ್ಲ. ನಂತರ, ಇಲಾಖೆಯ ಅಧಿಕಾರಿಗಳು ಸ್ಥಳಕ್ಕೆ ಆಗಮಿಸಿ ಹುಡುಗಿಯನ್ನು ತಮ್ಮ ಸುಪರ್ದಿಗೆ ತೆಗೆದುಕೊಂಡರು.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
Sushma Chakre
Sushma Chakre

ಮೂಲತಃ ಮಲೆನಾಡ ಹೆಬ್ಬಾಗಿಲು ಶಿವಮೊಗ್ಗದವಳು. ಬೆಂಗಳೂರಿನಲ್ಲಿ ವಾಸ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದೇನೆ. 10 ವರ್ಷಗಳಿಂದ ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡ, ಟಿವಿ9 ಡಿಜಿಟಲ್ ವಿಭಾಗದಲ್ಲಿ ಕೆಲಸ ಮಾಡಿದ ಅನುಭವವಿದೆ. ಸಾಹಿತ್ಯ, ಸಂಗೀತ, ಸಿನಿಮಾ, ಬರವಣಿಗೆಯಲ್ಲಿ ಆಸಕ್ತಿ.

Read More
ವಿವಾಹ ವಾರ್ಷಿಕೋತ್ಸವದ ದಿನ ದರ್ಶನ್ ಭೇಟಿ ಮಾಡಿ ಹೊರಟ ವಿಜಯಲಕ್ಷ್ಮಿ; ವಿಡಿಯೋ
ವಿವಾಹ ವಾರ್ಷಿಕೋತ್ಸವದ ದಿನ ದರ್ಶನ್ ಭೇಟಿ ಮಾಡಿ ಹೊರಟ ವಿಜಯಲಕ್ಷ್ಮಿ; ವಿಡಿಯೋ
ಮನೆ ಮೇಲೆ ಬಿದ್ದ ಬೃಹತ್​ ಮರ: ಆಚೆ ಬರಲಾಗದೇ ಮನೆಯೊಳಗೆ ಮೂವರು ಲಾಕ್
ಮನೆ ಮೇಲೆ ಬಿದ್ದ ಬೃಹತ್​ ಮರ: ಆಚೆ ಬರಲಾಗದೇ ಮನೆಯೊಳಗೆ ಮೂವರು ಲಾಕ್
ಹತ್ತು ತಿಂಗಳ ಬಳಿಕ ಪತ್ನಿ-ಮಗನ ಮುಖಾ-ಮುಖಿ ಭೇಟಿಯಾದ ದರ್ಶನ್
ಹತ್ತು ತಿಂಗಳ ಬಳಿಕ ಪತ್ನಿ-ಮಗನ ಮುಖಾ-ಮುಖಿ ಭೇಟಿಯಾದ ದರ್ಶನ್
ಕಾದಾಟದಲ್ಲಿ ಗಾಯಗೊಂಡಿದ್ದ ಮಾರ್ತಾಂಡ ಆನೆ ಸಾವು, ತಪ್ಪು ಯಾರದ್ದು?
ಕಾದಾಟದಲ್ಲಿ ಗಾಯಗೊಂಡಿದ್ದ ಮಾರ್ತಾಂಡ ಆನೆ ಸಾವು, ತಪ್ಪು ಯಾರದ್ದು?
ವಿವಾಹ ವಾರ್ಷಿಕೋತ್ಸವ: ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಿವಾಹ ವಾರ್ಷಿಕೋತ್ಸವ: ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಲಿಫ್ಟ್‌ನಲ್ಲಿ ಸಿಲುಕಿದ್ದ 9 ಜನರನ್ನ ರಕ್ಷಿಸಿದ ಅಗ್ನಿಶಾಮಕ ಸಿಬ್ಬಂದಿ
ಲಿಫ್ಟ್‌ನಲ್ಲಿ ಸಿಲುಕಿದ್ದ 9 ಜನರನ್ನ ರಕ್ಷಿಸಿದ ಅಗ್ನಿಶಾಮಕ ಸಿಬ್ಬಂದಿ
ಯತ್ನಾಳ್​​ ಹೇಳಿಕೆ ಬೆಂಬಲಿಸಿದ ಗಂಗಾವತಿ ಶಾಸಕ ಜನಾರ್ದನ ರೆಡ್ಡಿ!
ಯತ್ನಾಳ್​​ ಹೇಳಿಕೆ ಬೆಂಬಲಿಸಿದ ಗಂಗಾವತಿ ಶಾಸಕ ಜನಾರ್ದನ ರೆಡ್ಡಿ!
ಏಕಾಏಕಿ ಕಳಚಿ ಬಿತ್ತು ವೇಗವಾಗಿ ಚಲಿಸುತ್ತಿದ್ದ ಬಸ್ಸಿನ ಟೈರ್
ಏಕಾಏಕಿ ಕಳಚಿ ಬಿತ್ತು ವೇಗವಾಗಿ ಚಲಿಸುತ್ತಿದ್ದ ಬಸ್ಸಿನ ಟೈರ್
ಇಡೀ ವಿಶ್ವಕ್ಕೆ ಇಂಟರ್ನೆಟ್ ಆಘಾತ ನೀಡುತ್ತಾ ಇರಾನ್?
ಇಡೀ ವಿಶ್ವಕ್ಕೆ ಇಂಟರ್ನೆಟ್ ಆಘಾತ ನೀಡುತ್ತಾ ಇರಾನ್?
ಗಿನ್ನಿಸ್​​ ದಾಖಲೆ ಬರೆದ ತುಮಕೂರು: ಪ್ರಮಾಣಪತ್ರ ಸ್ವೀಕರಿಸಿದ ಸಿದ್ದರಾಮಯ್ಯ
ಗಿನ್ನಿಸ್​​ ದಾಖಲೆ ಬರೆದ ತುಮಕೂರು: ಪ್ರಮಾಣಪತ್ರ ಸ್ವೀಕರಿಸಿದ ಸಿದ್ದರಾಮಯ್ಯ