AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹೆಣ್ಣುಮಕ್ಕಳ ಮದುವೆ ವಯಸ್ಸಿನ ಮಿತಿ 18 ರಿಂದ 21ಕ್ಕೆ ಏರಿಕೆ

ಹೆಣ್ಣುಮಕ್ಕಳು ಸ್ವಂತ ಆಲೋಚನಾಶಕ್ತಿ ಬೆಳೆಸಿಕೊಂಡು ಉತ್ತಮ ನಿರ್ಧಾರ ತೆಗೆದುಕೊಳ್ಳುವಂತಾಗಲು ಕನಿಷ್ಠ 21 ವರ್ಷವಾದರೂ ಆಗಬೇಕು ಹೀಗಾಗಿ ಹೆಣ್ಣುಮಕ್ಕಳ ಮದುವೆ ವಯಸ್ಸು 18 ರಿಂದ 21ಕ್ಕೆ ಏರಿಕೆ ಮಾಡಿ ಮಂಡಿಸಿರುವ ಮಸೂದೆಗೆ ಹಿಮಾಚಲ ಪ್ರದೇಶ ವಿಧಾನಸಭೆಯಲ್ಲಿ ಅಂಗೀಕಾರ ದೊರೆತಿದೆ.

ಹೆಣ್ಣುಮಕ್ಕಳ ಮದುವೆ ವಯಸ್ಸಿನ ಮಿತಿ 18 ರಿಂದ 21ಕ್ಕೆ ಏರಿಕೆ
ಮದುವೆ
ನಯನಾ ರಾಜೀವ್
|

Updated on:Aug 28, 2024 | 9:54 AM

Share

ಹೆಣ್ಣುಮಕ್ಕಳ ಮದುವೆ ವಯಸ್ಸು 18ರಿಂದ 21ಕ್ಕೆ ವರ್ಷಕ್ಕೆ ಹೆಚ್ಚಿಸುವ ಮಸೂದೆಯನ್ನು ಹಿಮಾಚಲ ಪ್ರದೇಶದ ವಿಧಾನಸಭೆ ಅಂಗೀಕರಿಸಿದೆ. ಹಿಮಾಚಲ ಪ್ರದೇಶ ಬಾಲ್ಯ ವಿವಾಹ ನಿಷೇಧ ಮಸೂದೆ-2024 ಅನ್ನು ಮಂಗಳವಾರ ವಿಧಾನಸಭೆಯ ಮುಂಗಾರು ಅಧಿವೇಶನದಲ್ಲಿ ಸರ್ವಾನುಮತದಿಂದ ಅಂಗೀಕರಿಸಲಾಯಿತು. ತಿದ್ದುಪಡಿಯು ಹೆಣ್ಣುಮಕ್ಕಳ ಕಾನೂನುಬದ್ಧ ವಿವಾಹ ವಯಸ್ಸನ್ನು ಮೂರು ವರ್ಷಗಳವರೆಗೆ ಹೆಚ್ಚಿಸುತ್ತದೆ. ಇದೀಗ ಅಂತಿಮ ಅನುಮೋದನೆಗಾಗಿ ಮಸೂದೆಯನ್ನು ರಾಜ್ಯಪಾಲರಿಗೆ ರವಾನಿಸಲಾಗಿದೆ.

ಲಿಂಗ ಸಮಾನತೆಯನ್ನು ಒದಗಿಸಲು ಹೆಣ್ಣುಮಕ್ಕಳ ಕನಿಷ್ಠ ವಿವಾಹದ ವಯಸ್ಸನ್ನು ಹೆಚ್ಚಿಸುವುದು ಅಗತ್ಯವಾಗಿದೆ ಎಂದು ಸಚಿವ ಧನಿ ರಾಮ್ ಹೇಳಿದ್ದಾರೆ. ಗರ್ಭಧಾರಣೆಯು ಹುಡುಗಿಯರ ಆರೋಗ್ಯದ ಮೇಲೆ ಪ್ರತಿಕೂಲ ಪರಿಣಾಮಗಳನ್ನು ಬೀರುತ್ತದೆ ಎಂದು ಸಚಿವರು ಹೇಳಿದರು.

ಹಿಮಾಚಲ ಪ್ರದೇಶದಲ್ಲಿ ಹೆಣ್ಣುಮಕ್ಕಳ ಮದುವೆ ವಯಸ್ಸನ್ನು ಹೆಚ್ಚಿಸುವ ಪ್ರಯತ್ನ ಕೆಲ ಸಮಯದಿಂದ ನಡೆಯುತ್ತಿದೆ. ಹಿಮಾಚಲ ಪ್ರದೇಶದಲ್ಲಿ ಹೆಣ್ಣುಮಕ್ಕಳ ಕಾನೂನುಬದ್ಧ ವಿವಾಹ ವಯಸ್ಸು 18 ವರ್ಷಗಳು, ಇದು ಭಾರತದ ಹೆಚ್ಚಿನ ಭಾಗಗಳಲ್ಲಿದೆ.

ಮತ್ತಷ್ಟು ಓದಿ: Video: 12 ವರ್ಷದ ಬಾಲಕಿಗೆ 62ರ ವೃದ್ಧನ ಜೊತೆ ಬಲವಂತವಾಗಿ ಮದುವೆ ಮಾಡಿಸಲು ಮುಂದಾದ ಕುಟುಂಸ್ಥರು

ಆದರೆ, ಈ ಮಸೂದೆ ಅಂಗೀಕಾರದೊಂದಿಗೆ, ರಾಜ್ಯ ಸರ್ಕಾರವು ಹೆಣ್ಣುಮಕ್ಕಳಿಗೆ ಮದುವೆಗೆ ಮುನ್ನ ಶಿಕ್ಷಣ ಮತ್ತು ವೈಯಕ್ತಿಕ ಬೆಳವಣಿಗೆಗೆ ಹೆಚ್ಚಿನ ಸಮಯವನ್ನು ಒದಗಿಸುವ ಗುರಿಯನ್ನು ಹೊಂದಿದೆ. ರಾಜ್ಯಪಾಲರು ಅಂಕಿತ ಹಾಕಿದರೆ ಹೊಸ ಕಾನೂನು ಜಾರಿಗೆ ಬರಲಿದೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 9:52 am, Wed, 28 August 24

ಯಶ್ ಹುಟ್ಟುಹಬ್ಬಕ್ಕೆ ಮನೆ ಮುಂದೆ ಬ್ಯಾನರ್ ಹಾಕಿದ್ದಕ್ಕೆ ಎಫ್​ಐಆರ್ ದಾಖಲು
ಯಶ್ ಹುಟ್ಟುಹಬ್ಬಕ್ಕೆ ಮನೆ ಮುಂದೆ ಬ್ಯಾನರ್ ಹಾಕಿದ್ದಕ್ಕೆ ಎಫ್​ಐಆರ್ ದಾಖಲು
ಬಿಗ್​​ಬಾಸ್ ಕನ್ನಡ: ಗಿಲ್ಲಿ ಪರವಾಗಿ ಮತ ಕೇಳಿದ ಮಳವಳ್ಳಿ ಶಾಸಕ
ಬಿಗ್​​ಬಾಸ್ ಕನ್ನಡ: ಗಿಲ್ಲಿ ಪರವಾಗಿ ಮತ ಕೇಳಿದ ಮಳವಳ್ಳಿ ಶಾಸಕ
ಚಿಕ್ಕಮಗಳೂರಲ್ಲಿ ವರುಣನ ಅಬ್ಬರ: ಅಕಾಲಿಕ ಮಳೆಗೆ ಕೊಚ್ಚಿಹೋದ ಕಾಫಿ
ಚಿಕ್ಕಮಗಳೂರಲ್ಲಿ ವರುಣನ ಅಬ್ಬರ: ಅಕಾಲಿಕ ಮಳೆಗೆ ಕೊಚ್ಚಿಹೋದ ಕಾಫಿ
ಕಾಂಗ್ರೆಸ್​​​ನಲ್ಲಿ ಮಹತ್ವದ ಬೆಳವಣಿಗೆ: ಡಿಕೆಶಿಗೆ ರಾಹುಲ್ ಮಹತ್ವದ ಸಂದೇಶ
ಕಾಂಗ್ರೆಸ್​​​ನಲ್ಲಿ ಮಹತ್ವದ ಬೆಳವಣಿಗೆ: ಡಿಕೆಶಿಗೆ ರಾಹುಲ್ ಮಹತ್ವದ ಸಂದೇಶ
ಡಿಕೆಶಿ, ಸಿದ್ದರಾಮಯ್ಯ ಜತೆ ಪ್ರತ್ಯೇಕವಾಗ ರಾಹುಲ್ ರಹಸ್ಯ ಮಾತು
ಡಿಕೆಶಿ, ಸಿದ್ದರಾಮಯ್ಯ ಜತೆ ಪ್ರತ್ಯೇಕವಾಗ ರಾಹುಲ್ ರಹಸ್ಯ ಮಾತು
ಕಾರು ಅಪಘಾತಕ್ಕೆ 1 ವರ್ಷ: ಅಂದಿನ ಕಹಿ ಘಟನೆಯನ್ನು ಮೆಲುಕು ಹಾಕಿದ ಸಚಿವೆ
ಕಾರು ಅಪಘಾತಕ್ಕೆ 1 ವರ್ಷ: ಅಂದಿನ ಕಹಿ ಘಟನೆಯನ್ನು ಮೆಲುಕು ಹಾಕಿದ ಸಚಿವೆ
ಕೇರಳದಲ್ಲಿ ಕರ್ನಾಟಕ ಅಯ್ಯಪ್ಪ ಮಾಲಾಧಾರಿಗಳ ವಾಹನಗಳಿಗೆ ನಿರ್ಬಂಧ
ಕೇರಳದಲ್ಲಿ ಕರ್ನಾಟಕ ಅಯ್ಯಪ್ಪ ಮಾಲಾಧಾರಿಗಳ ವಾಹನಗಳಿಗೆ ನಿರ್ಬಂಧ
ರಾಹುಲ್ ಗಾಂಧಿ ಭೇಟಿ ಬಳಿಕ ಸಿದ್ರಾಮಯ್ಯ ಕೊಟ್ಟ ಸುಳಿವು ಏನು?
ರಾಹುಲ್ ಗಾಂಧಿ ಭೇಟಿ ಬಳಿಕ ಸಿದ್ರಾಮಯ್ಯ ಕೊಟ್ಟ ಸುಳಿವು ಏನು?
24 ತಲೆಗಳ 6 ತಲೆಗೆ ಇಳಿಸಿದ್ದೀನಿ, ನಾನು ಒನ್ ಮ್ಯಾನ್ ಆರ್ಮಿ: ಧ್ರುವಂತ್
24 ತಲೆಗಳ 6 ತಲೆಗೆ ಇಳಿಸಿದ್ದೀನಿ, ನಾನು ಒನ್ ಮ್ಯಾನ್ ಆರ್ಮಿ: ಧ್ರುವಂತ್
ಡಾನ್​​ ರೀತಿ ಗನ್​​ ಹಿಡಿದು ಆವಾಜ್​​ ಹಾಕಿದ್ದಾತ ತಂದಿದ್ದು ನಕಲಿ ಬಂದೂಕು!
ಡಾನ್​​ ರೀತಿ ಗನ್​​ ಹಿಡಿದು ಆವಾಜ್​​ ಹಾಕಿದ್ದಾತ ತಂದಿದ್ದು ನಕಲಿ ಬಂದೂಕು!