AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Cow Cess: ಮದ್ಯ ಪ್ರಿಯರಿಗೆ ಹಿಮಾಚಲ ಪ್ರದೇಶ ಶಾಕ್; ಪ್ರತಿ ಬಾಟಲ್ ಮೇಲೆ 10 ರೂ. ಗೋ ತೆರಿಗೆ

ಮದ್ಯಪಾನ ಪ್ರಿಯರಿಗೆ ಶಾಕ್ ನೀಡಿರುವ ಹಿಮಾಚಲ ಪ್ರದೇಶ (Himachal Pradesh) ಸರ್ಕಾರ ಪ್ರತಿ ಬಾಟಲ್ ಮದ್ಯದ ಮೇಲೆ 10 ರೂ. ‘ಗೋ ತೆರಿಗೆ (Cow Cess)’ ವಿಧಿಸುವ ಬಗ್ಗೆ ಬಜೆಟ್​​ನಲ್ಲಿ ಘೋಷಣೆ ಮಾಡಿದೆ.

Cow Cess: ಮದ್ಯ ಪ್ರಿಯರಿಗೆ ಹಿಮಾಚಲ ಪ್ರದೇಶ ಶಾಕ್; ಪ್ರತಿ ಬಾಟಲ್ ಮೇಲೆ 10 ರೂ. ಗೋ ತೆರಿಗೆ
ಸಾಂದರ್ಭಿಕ ಚಿತ್ರ
ಗಣಪತಿ ಶರ್ಮಾ
|

Updated on:Mar 18, 2023 | 6:41 PM

Share

ಶಿಮ್ಲಾ: ಮದ್ಯಪಾನ ಪ್ರಿಯರಿಗೆ ಶಾಕ್ ನೀಡಿರುವ ಹಿಮಾಚಲ ಪ್ರದೇಶ (Himachal Pradesh) ಸರ್ಕಾರ ಪ್ರತಿ ಬಾಟಲ್ ಮದ್ಯದ ಮೇಲೆ 10 ರೂ. ‘ಗೋ ತೆರಿಗೆ (Cow Cess)’ ವಿಧಿಸುವ ಬಗ್ಗೆ ಬಜೆಟ್​​ನಲ್ಲಿ ಘೋಷಣೆ ಮಾಡಿದೆ. ಹಣಕಾಸು ಸಚಿವರೂ ಆಗಿರುವ ಮುಖ್ಯಮಂತ್ರಿ ಸುರೇಶ್ ಕುಮಾರ್ ಸುಖು ಮಾರ್ಚ್ 15ರಂದು ರಾಜ್ಯ ಬಜೆಟ್ ಮಂಡನೆ ಮಾಡಿದ್ದರು. ಇದರಲ್ಲಿ ‘ಗೋ ತೆರಿಗೆ’ ವಿಧಿಸುವ ನಿರ್ಧಾರ ಪ್ರಕಟಿಸಿದ್ದಾರೆ. ರಾಜ್ಯದ ಆರ್ಥಿಕ ಚಟುವಟಿಕೆಯಲ್ಲಿ ಜಾನುವಾರುಗಳ ಪಾತ್ರ ಮಹತ್ವದ್ದಾಗಿದೆ. ಹೀಗಾಗಿ ಹಸು ಸಾಕಾಣಿಕೆಯನ್ನು ಉತ್ತೇಜಿಸುವ ದೃಷ್ಟಿಯಿಂದ ಈ ನಿರ್ಧಾರ ಕೈಗೊಳ್ಳಲಾಗಿದೆ ಎಂದು ವರದಿಯಾಗಿದೆ. ಇದರಿಂದ ವಾರ್ಷಿಕ ನೂರು ಕೋಟಿ ರೂಪಾಯಿ ಆದಾಯ ಸಂಗ್ರಹಿಸುವ ಗುರಿಯನ್ನು ಹಿಮಾಚಲ ಪ್ರದೇಶ ಸರ್ಕಾರ ಹೊಂದಿದೆ ಎನ್ನಲಾಗಿದೆ.

ಬಜೆಟ್ ಭಾಷಣ ಮಾಡಿದ ಸುಖು, ಈ ಮೊದಲು ಹಲವು ರಾಜ್ಯಗಳಲ್ಲಿ ಗೋ ಸಂಬಂಧಿ ತೆರಿಗೆ ಸಂಗ್ರಹಿಸಲಾಗುತ್ತದೆ. ಪಂಜಾಬ್, ಉತ್ತರ ಪ್ರದೇಶ, ರಾಜಸ್ಥಾನ ಮತ್ತು ಚಂಡೀಗಢಗಳಲ್ಲಿ ಗೋ ತೆರಿಗೆ ಸಂಗ್ರಹಿಸಲಾಗುತ್ತಿದೆ. ಈ ರಾಜ್ಯಗಳಲ್ಲಿ ಮದ್ಯದ ಹೊರತಾಗಿ ಬೇರೆ ವಸ್ತುಗಳ ಮೇಲೆ ತೆರಿಗೆ ವಿಧಿಸಲಾಗುತ್ತಿದೆ. ನಮ್ಮ ರಾಜ್ಯದಲ್ಲಿ ಈ ತೆರಿಗೆಯನ್ನು ಮದ್ಯದ ಮೇಲೆ ವಿಧಿಸಲಾಗುವುದು ಎಂದು ತಿಳಿಸಿದ್ದಾರೆ.

ಇದನ್ನೂ ಓದಿ: Rajasthan: ಕೈ ಇಲ್ಲದ ಅಂಗವಿಕಲನಿಗೆ ಎರಡೂ ತೋಳುಗಳ ಕಸಿ; ಏಷ್ಯಾದಲ್ಲೇ ಇದು ಮೊದಲು!

ಈ ಬಜೆಟ್ ಔಪಚಾರಿಕವಾಗಿರದೆ ರಾಜ್ಯಕ್ಕೆ ಹೊಸ ದಿಕ್ಕು ನೀಡುವ ಬಜೆಟ್ ಆಗಿದೆ. ಚಾರ್ಜಿಂಗ್ ಸ್ಟೇಷನ್ ಗಳನ್ನು ಸ್ಥಾಪಿಸಲು ಶೇ 50ರಷ್ಟು ಸಬ್ಸಿಡಿ ನೀಡಲಾಗುವುದು ಎಂದೂ ಅವರು ತಿಳಿಸಿದ್ದಾರೆ.

ಹಿಮಾಚಲ ಪ್ರದೇಶ ರಸ್ತೆ ಸಾರಿಗೆ ನಿಗಮದ ಬಸ್​ಗಳಲ್ಲಿ ವಿದ್ಯಾರ್ಥಿಗಳಿಗೆ ನೀಡಲಾಗುವ ಉಚಿತ ಪ್ರಯಾಣದ ಕೊಡುಗೆಯನ್ನು 12ನೇ ತರಗತಿಯ ವರೆಗಿನ ಎಲ್ಲ ವಿದ್ಯಾರ್ಥಿಗಳಿಗೆ ವಿಸ್ತರಣೆ ಮಾಡಲಾಗಿದೆ ಎಂದು ಬಜೆಟ್​​ನಲ್ಲಿ ಘೋಷಿಸಲಾಗಿದೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಾಗಿ ಇಲ್ಲಿ ಕ್ಲಿಕ್​​ ಮಾಡಿ

Published On - 6:37 pm, Sat, 18 March 23

Follow Us
ದಿ ರೈಸ್ ಆಫ್ ಅಶೋಕ: ಇಂಗ್ಲಿಷ್ ಟೈಟಲ್ ಇಟ್ಟಿದ್ದಕ್ಕೆ ಕಾರಣ ತಿಳಿಸಿದ ಸತೀಶ್
ದಿ ರೈಸ್ ಆಫ್ ಅಶೋಕ: ಇಂಗ್ಲಿಷ್ ಟೈಟಲ್ ಇಟ್ಟಿದ್ದಕ್ಕೆ ಕಾರಣ ತಿಳಿಸಿದ ಸತೀಶ್
ಕರ್ನಾಟಕ ವಿರುದ್ಧ 5 ವಿಕೆಟ್ ಉರುಳಿಸಿದ ಆಕಿಬ್ ನಬಿ
ಕರ್ನಾಟಕ ವಿರುದ್ಧ 5 ವಿಕೆಟ್ ಉರುಳಿಸಿದ ಆಕಿಬ್ ನಬಿ
ತಂಡಕ್ಕೆ ಚಿಯರ್ ಅಪ್ ಮಾಡಲು ಹುಬ್ಬಳ್ಳಿಗೆ ಬಂದ ಜಮ್ಮು-ಕಾಶ್ಮೀರ ಸಿಎಂ
ತಂಡಕ್ಕೆ ಚಿಯರ್ ಅಪ್ ಮಾಡಲು ಹುಬ್ಬಳ್ಳಿಗೆ ಬಂದ ಜಮ್ಮು-ಕಾಶ್ಮೀರ ಸಿಎಂ
ಬಾಗಲಕೋಟೆ ಬೆನ್ನಲ್ಲೇ ಮಡಿಕೇರಿ ಹಿಂದೂ ಸಂಗಮದಲ್ಲಿ ಗಲಾಟೆ: ವಿಡಿಯೋ ನೋಡಿ
ಬಾಗಲಕೋಟೆ ಬೆನ್ನಲ್ಲೇ ಮಡಿಕೇರಿ ಹಿಂದೂ ಸಂಗಮದಲ್ಲಿ ಗಲಾಟೆ: ವಿಡಿಯೋ ನೋಡಿ
ವಿರೋಶ್ ಮದುವೆ: ರಾಯಲ್ ಉಡುಗೆಯ ಹಿಂದಿನ ಅಚ್ಚರಿಯ ವಿಷಯ ಕೇಳಿ..
ವಿರೋಶ್ ಮದುವೆ: ರಾಯಲ್ ಉಡುಗೆಯ ಹಿಂದಿನ ಅಚ್ಚರಿಯ ವಿಷಯ ಕೇಳಿ..
ಏರ್ ಇಂಡಿಯಾ ಅವಾಂತರ: 2 ದಿನಗಳಿಂದ ಪ್ಲೈಟ್ ನಲ್ಲೇ ಉಳಿದ ಕನ್ನಡಿಗರು!
ಏರ್ ಇಂಡಿಯಾ ಅವಾಂತರ: 2 ದಿನಗಳಿಂದ ಪ್ಲೈಟ್ ನಲ್ಲೇ ಉಳಿದ ಕನ್ನಡಿಗರು!
ಕರ್ನಾಟಕ ಕಾಂಗ್ರೆಸ್​​ನಲ್ಲಿ ನಾಯಕತ್ವ ಬದಲಾವಣೆ? ರಾಬರ್ಟ್ ವಾದ್ರಾ ಏನಂದ್ರು?
ಕರ್ನಾಟಕ ಕಾಂಗ್ರೆಸ್​​ನಲ್ಲಿ ನಾಯಕತ್ವ ಬದಲಾವಣೆ? ರಾಬರ್ಟ್ ವಾದ್ರಾ ಏನಂದ್ರು?
ಚೌಟ್ರಿವರೆಗೂ ಬಂದು ಮದುವೆ ಬೇಡ ಎಂದ ವಧು!
ಚೌಟ್ರಿವರೆಗೂ ಬಂದು ಮದುವೆ ಬೇಡ ಎಂದ ವಧು!
ಪೆಟ್ರೋಲ್​​ಗೆ ಎಥನಾಲ್ ಮಿಕ್ಸ್: ಯಾರಿಗೆ ಲಾಭ? ಪೆಟ್ರೋಲ್ ಬೆಲೆ ಇಳಿಯುತ್ತಾ?
ಪೆಟ್ರೋಲ್​​ಗೆ ಎಥನಾಲ್ ಮಿಕ್ಸ್: ಯಾರಿಗೆ ಲಾಭ? ಪೆಟ್ರೋಲ್ ಬೆಲೆ ಇಳಿಯುತ್ತಾ?
ಅಪಘಾತಕ್ಕೀಡಾಗಿ ರಸ್ತೆಯಲ್ಲಿ ಬಿದ್ದಿದ್ದ ಯುವಕನಿಗೆ ಕೇಂದ್ರ ಸಚಿವ ಸಹಾಯ
ಅಪಘಾತಕ್ಕೀಡಾಗಿ ರಸ್ತೆಯಲ್ಲಿ ಬಿದ್ದಿದ್ದ ಯುವಕನಿಗೆ ಕೇಂದ್ರ ಸಚಿವ ಸಹಾಯ