ಹಿಮಾಚಲದಲ್ಲಿ ನಿಯಂತ್ರಣ ತಪ್ಪಿ ನದಿಗೆ ಹಾರಿದ ಕಾರು, ಚೆನ್ನೈನ ಮಾಜಿ ಮೇಯರ್ ಪುತ್ರ ನಾಪತ್ತೆ

ಚೆನ್ನೈನ ಮಾಜಿ ಮೇಯರ್ ಪುತ್ರನಿದ್ದ ಕಾರು ಹಿಮಾಚಲ ಪ್ರದೇಶದಲ್ಲಿ ಆಯತಪ್ಪಿ ನದಿಗೆ ಬಿದ್ದಿದ್ದು, ಘಟನೆ ನಂತರ ಆತ ನಾಪತ್ತೆಯಾಗಿದ್ದಾನೆ. ಅಪಘಾತದಲ್ಲಿ ಕಾರು ಚಾಲಕ ಸಾವನ್ನಪ್ಪಿದ್ದು, ವೆಟ್ರಿ ಸಹಚರ ಗಂಭೀರವಾಗಿ ಗಾಯಗೊಂಡಿದ್ದಾನೆ. ಕಾರಿನಲ್ಲಿ ಪ್ರಯಾಣಿಸುತ್ತಿದ್ದ ಚೆನ್ನೈ ಮೇಯರ್ ದುರೈಸಾಮಿ ಅವರ ಪುತ್ರ ವೆಟ್ರಿ ನಾಪತ್ತೆಯಾಗಿದ್ದಾರೆ. ಕಾರು ಚಾಲಕ ತೇಂಜಿನ್ ಮೃತಪಟ್ಟಿದ್ದಾರೆ.

ಹಿಮಾಚಲದಲ್ಲಿ ನಿಯಂತ್ರಣ ತಪ್ಪಿ ನದಿಗೆ ಹಾರಿದ ಕಾರು, ಚೆನ್ನೈನ ಮಾಜಿ ಮೇಯರ್ ಪುತ್ರ ನಾಪತ್ತೆ
Image Credit source: India Today

Updated on: Feb 06, 2024 | 2:48 PM

ಹಿಮಾಚಲ ಪ್ರದೇಶ(Himachal Pradesh)ದಲ್ಲಿ ಚೆನ್ನೈ(Chennai)ನ ಮಾಜಿ ಮೇಯರ್(Former Mayor) ಪುತ್ರನಿದ್ದ ಕಾರು(Car) ನಿಯಂತ್ರಣ ತಪ್ಪಿ  ನದಿ(River)ಗೆ ಹಾರಿದ್ದು, ಘಟನೆ ಬಳಿಕ ಮಗ ನಾಪತ್ತೆಯಾಗಿದ್ದಾರೆ. ಹಿಮಾಚಲ ಪ್ರದೇಶದ ಕಿನ್ನೌರ್ ಜಿಲ್ಲೆಯಲ್ಲಿ ಚೆನ್ನೈನ ಮಾಜಿ ಮೇಯರ್ ಸೈದೈ ದುರೈಸಾಮಿ ಅವರ ಪುತ್ರ ಹಾಗೂ ಇತರೆ ಪ್ರಯಾಣಿಕರಿದ್ದ ಕಾರು ನದಿಗೆ ಹಾರಿತ್ತು.

ಭಾನುವಾರ (ಫೆಬ್ರವರಿ 4) ಈ ಘಟನೆ ನಡೆದಿದ್ದು, ವೆಟ್ರಿ ದುರೈಸಾಮಿ (45) ಅವರು ತಮ್ಮ ಸಹ ಪ್ರಯಾಣಿಕ ಗೋಪಿನಾಥ್ ಅವರೊಂದಿಗೆ ಕಾರಿನಲ್ಲಿ ಪ್ರಯಾಣಿಸುತ್ತಿದ್ದರು. ಘಟನೆಯ ವೇಳೆ ಹಿಮಾಚಲ ಪ್ರದೇಶದ ಟಬೋ ನಿವಾಸಿ ತೆಂಜಿನ್ ಎಂಬಾತ ವಾಹನ ಚಲಾಯಿಸುತ್ತಿದ್ದ.
ದುರೈಸ್ವಾಮಿ ಮತ್ತು ಗೋಪಿನಾಥ್ ಸ್ಪಿತಿ ಕಣಿವೆಯಿಂದ ಹಿಂತಿರುಗುತ್ತಿದ್ದಾಗ ಚಾಲಕನ ನಿಯಂತ್ರಣ ತಪ್ಪಿ ಕಾರು ನದಿಗೆ ಬಿದ್ದಿದೆ.

ಅಧಿಕಾರಿಗಳು ಗೋಪಿನಾಥ್ ಅವರನ್ನು ರಕ್ಷಿಸಿದ್ದು, ಸದ್ಯ ಚಿಕಿತ್ಸೆ ಪಡೆಯುತ್ತಿದ್ದಾರೆ. ಅಪಘಾತದಲ್ಲಿ ಟೆಂಜಿನ್ ಸಾವನ್ನಪ್ಪಿದರೆ, ದುರೈಸಾಮಿಯನ್ನು ಹುಡುಕುವ ಪ್ರಯತ್ನಗಳು ನಡೆಯುತ್ತಿವೆ. ಹಿಮಾಚಲ ಪೊಲೀಸರಿಂದ ಪಡೆದ ಮಾಹಿತಿಯ ಪ್ರಕಾರ, ಇನ್ನೋವಾ ಕಾರು HP01AA-1111 NH-05 ನಲ್ಲಿ ಕಶಾಂಗ್ ಡ್ರೈನ್ ಬಳಿ ಸಟ್ಲೆಜ್ ನದಿಗೆ ಪಲ್ಟಿಯಾಗಿದೆ.

ಕಾರಿನಲ್ಲಿ ಪ್ರಯಾಣಿಸುತ್ತಿದ್ದ ತಿರುಪುರ ಮೂಲದ ಗೋಪಿನಾಥ್ ಗಂಭೀರವಾಗಿ ಗಾಯಗೊಂಡಿದ್ದು, ಚಿಕಿತ್ಸೆಗಾಗಿ ದಾಖಲಿಸಲಾಗಿದೆ. ಕಾರಿನಲ್ಲಿ ಪ್ರಯಾಣಿಸುತ್ತಿದ್ದ ಚೆನ್ನೈ ಮೇಯರ್ ದುರೈಸಾಮಿ ಅವರ ಪುತ್ರ ವೆಟ್ರಿ ನಾಪತ್ತೆಯಾಗಿದ್ದಾರೆ.

ಈ ಬಗ್ಗೆ ಮಾಹಿತಿ ಪಡೆದ ಸೈದೈ ದುರೈಸಾಮಿ ಅವರು ತಮ್ಮ ಕುಟುಂಬದೊಂದಿಗೆ ಹಿಮಾಚಲಕ್ಕೆ ತೆರಳಿದ್ದಾರೆ. ವೆಟ್ರಿ ದುರೈಸಾಮಿ ಛಾಯಾಗ್ರಾಹಕ ಮತ್ತು ಚಲನಚಿತ್ರ ನಿರ್ದೇಶಕ. ಕಾರಿನ ಚಾಲಕನನ್ನು ಹಿಮಾಚಲ ಪ್ರದೇಶದ ಥಾಬೋ ಜಿಲ್ಲೆಯ ಲಾಹೌಲ್-ಸ್ಪಿಟಿ ಪ್ರದೇಶದ ನಿವಾಸಿ ಎಂದು ಗುರುತಿಸಲಾಗಿದೆ.

ಮತ್ತಷ್ಟು ಓದಿ: ಭುವನೇಶ್ವರ: ಬೈಕ್​ಗೆ ಡಿಕ್ಕಿ ಹೊಡೆದು ಒಂದು ಕಿ.ಮೀವರೆಗೆ ಎಳೆದೊಯ್ದ ಕಾರು, ಎದೆ ಝಲ್ಲೆನಿಸುವ ವಿಡಿಯೋ

ಇದೀಗ ಚಾಲಕನ ಶವ ಪತ್ತೆಯಾಗಿದೆ. ಇದರೊಂದಿಗೆ, ಸೈದೈ ದುರೈಸಾಮಿ ಅವರ ಮಗನ ಸ್ಥಿತಿಯ ಬಗ್ಗೆ ಇನ್ನೂ ಖಚಿತವಾದ ಮಾಹಿತಿಯಿಲ್ಲ.
ಇನ್ನೋವಾ ಕಾರು ರಸ್ತೆಯಿಂದ ಸುಮಾರು 200 ಮೀಟರ್ ಕೆಳಗೆ ಸಟ್ಲೆಜ್ ನದಿಗೆ ಬಿದ್ದಿದೆ. ಈ ಕಾರು ನಿನ್ನೆ (ಫೆ.5) ಮಧ್ಯಾಹ್ನ ಹಿಮಾಚಲ ರಾಜ್ಯದ ಗಾಜಾದಿಂದ ಶಿಮ್ಲಾಕ್ಕೆ ತೆರಳಿದೆ ಎಂದು ವರದಿಯಾಗಿದೆ.

 

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Nayana Rajeev

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More
Follow Us