AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹಿಮಾಚಲ ಪ್ರದೇಶದಲ್ಲಿ ಟಾಯ್ಲೆಟ್ ಸೀಟ್ ಟ್ಯಾಕ್ಸ್?; ಇದೆಲ್ಲ ಆಧಾರರಹಿತ ಎಂದ ಸಿಎಂ ಸುಖವಿಂದರ್ ಸಿಂಗ್ ಸುಖು

ಹರ್ಯಾಣದಲ್ಲಿ ಚುನಾವಣೆ ಇರುವುದರಿಂದ ಅವರು (ಬಿಜೆಪಿ) ಹಿಂದೂ-ಮುಸ್ಲಿಂ ಮತ್ತು ಒಳಚರಂಡಿ ಬಗ್ಗೆ ಮಾತನಾಡುತ್ತಾರೆ ಆದರೆ ಅಂತಹದ್ದೇನೂ ಇಲ್ಲ. ಇದು ಸಂಪೂರ್ಣ ಸುಳ್ಳು ಎಂದು ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿದ ಸುಖವಿಂದರ್ ಸಿಂಗ್ ಸುಖು ಹೇಳಿದ್ದಾರೆ.

ಹಿಮಾಚಲ ಪ್ರದೇಶದಲ್ಲಿ ಟಾಯ್ಲೆಟ್ ಸೀಟ್ ಟ್ಯಾಕ್ಸ್?; ಇದೆಲ್ಲ ಆಧಾರರಹಿತ ಎಂದ ಸಿಎಂ ಸುಖವಿಂದರ್ ಸಿಂಗ್ ಸುಖು
ಸುಖವಿಂದರ್ ಸಿಂಗ್ ಸುಖು
ರಶ್ಮಿ ಕಲ್ಲಕಟ್ಟ
|

Updated on: Oct 04, 2024 | 3:30 PM

Share

ಶಿಮ್ಲಾ ಅಕ್ಟೋಬರ್ 04: ಹಿಮಾಚಲ ಪ್ರದೇಶದಲ್ಲಿ (Himachal Pradesh) ರಾಜ್ಯ ಸರ್ಕಾರವು ಹೊಸ “ಟಾಯ್ಲೆಟ್ ಸೀಟ್ ಟ್ಯಾಕ್ಸ್”  (toilet seat tax) ವಿಧಿಸುತ್ತಿದೆ ಎಂಬ ವರದಿಗಳನ್ನು ಮುಖ್ಯಮಂತ್ರಿ ಸುಖವಿಂದರ್ ಸಿಂಗ್ ಸುಖು (Sukhvinder Singh Sukhu) ಅವರು  “ಆಧಾರರಹಿತ” ಎಂದು ಕರೆದಿದ್ದಾರೆ.ಇದು ಸತ್ಯಗಳಿಂದ ದೂರವಾದುದು. ಹರ್ಯಾಣದಲ್ಲಿ ಚುನಾವಣೆ ಇರುವುದರಿಂದ ಅವರು (ಬಿಜೆಪಿ) ಹಿಂದೂ-ಮುಸ್ಲಿಂ ಮತ್ತು ಒಳಚರಂಡಿ ಬಗ್ಗೆ ಮಾತನಾಡುತ್ತಾರೆ ಆದರೆ ಅಂತಹದ್ದೇನೂ ಇಲ್ಲ. ಇದು ಸಂಪೂರ್ಣ ಸುಳ್ಳು ಎಂದು ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿದ ಸುಖವಿಂದರ್ ಸಿಂಗ್ ಸುಖು ಹೇಳಿದ್ದಾರೆ.

ಈ ಹಿಂದೆ, ಹಿಮಾಚಲ ಪ್ರದೇಶ ಸರ್ಕಾರವು ನಗರ ಪ್ರದೇಶಗಳಲ್ಲಿ ವಾಸಿಸುವವರ ಮನೆಗಳಲ್ಲಿ ನಿರ್ಮಿಸಲಾದ ಟಾಯ್ಲೆಟ್ ಸೀಟ್‌ಗೆ ₹ 25 ಶುಲ್ಕವನ್ನು ಸಂಗ್ರಹಿಸುತ್ತದೆ ಎಂದು ಮಾಧ್ಯಮ ವರದಿಗಳು ಹೇಳಿಕೊಂಡಿವೆ. ನಗದು ಕೊರತೆಯಿರುವ ರಾಜ್ಯವು ಜಲ ಶಕ್ತಿ ಮಂಡಳಿಗೆ ಪಾವತಿಸುವ ಸಾಮಾನ್ಯ ಒಳಚರಂಡಿ ಮತ್ತು ನೀರಿನ ಬಿಲ್‌ನ ಭಾಗವಾಗಿ ನಗರ ಮನೆಯೊಂದರಲ್ಲಿ ಟಾಯ್ಲೆಟ್ ಸೀಟಿಗೆ ₹ 25 ಶುಲ್ಕವನ್ನು ವಿಧಿಸಲು ನಿರ್ಧರಿಸಿದೆ ಎಂದು ನ್ಯೂಸ್ 18 ವರದಿ ಮಾಡಿದೆ.

ಒಳಚರಂಡಿ ಬಿಲ್ ನೀರಿನ ಬಿಲ್‌ನ ಶೇಕಡಾ 30 ರಷ್ಟಿರುತ್ತದೆ. ಸ್ವಂತ ಮೂಲದಿಂದ ನೀರು ಬಳಸುವವರು ಮತ್ತು ಸರ್ಕಾರಿ ಇಲಾಖೆಯಿಂದ ಒಳಚರಂಡಿ ಸಂಪರ್ಕವನ್ನು ಮಾತ್ರ ಬಳಸುವವರು ಪ್ರತಿ ತಿಂಗಳು ಟಾಯ್ಲೆಟ್ ಸೀಟಿಗೆ ₹ 25 ಶುಲ್ಕವನ್ನು ಪಾವತಿಸಬೇಕು ಎಂದು ಸರ್ಕಾರದ ಆದೇಶದಲ್ಲಿ ವರದಿಯಾಗಿದೆ. ಈ ಸಂಬಂಧ ಎಲ್ಲಾ ವಿಭಾಗೀಯ ಅಧಿಕಾರಿಗಳಿಗೆ ಇಲಾಖೆ ಆದೇಶ ಹೊರಡಿಸಿದೆ.

ಈ ಕ್ರಮಕ್ಕೆ ಬಿಜೆಪಿಯಿಂದ ತೀವ್ರವಾದ ಟೀಕೆ ವ್ಯಕ್ತವಾಗಿದೆ. ಬಿಜೆಪಿ ಐಟಿ ಸೆಲ್ ಮುಖ್ಯಸ್ಥ ಅಮಿತ್ ಮಾಳವಿಯಾ, ಇದು ಕಾಂಗ್ರೆಸ್ ಸರ್ಕಾರದ “ಕಪ್ಪು ನಾಯಕತ್ವ” ದ ಶ್ರೇಷ್ಠ ಸಂಕೇತ ಎಂದು ಕರೆದಿದ್ದಾರೆ.

ಇದನ್ನೂ ಓದಿ: ವಾಸ್ತವಿಕ ನಿಯಂತ್ರಣ ರೇಖೆಯ ಉದ್ದಕ್ಕೂ ಚೀನಾ ವೇಗವಾಗಿ ಮೂಲಸೌಕರ್ಯಗಳನ್ನು ನಿರ್ಮಿಸುತ್ತಿದೆ: ಐಎಎಫ್ ಮುಖ್ಯಸ್ಥ ಎಪಿ ಸಿಂಗ್

ಎಕ್ಸ್‌ನಲ್ಲಿನ ಹೇಳಿಕೆಯಲ್ಲಿ, ಅಮಿತ್ ಮಾಳವಿಯಾ, “ ಹಿಮಾಚಲ ಪ್ರದೇಶದ ಕಾಂಗ್ರೆಸ್ ಸರ್ಕಾರವು ಈಗ ನಾಗರಿಕರು ಮನೆಯಲ್ಲಿ ಹೊಂದಿರುವ ಶೌಚಾಲಯದ ಆಸನಗಳ ಸಂಖ್ಯೆಯನ್ನು ಆಧರಿಸಿ ತೆರಿಗೆ ವಿಧಿಸುತ್ತದೆ. ನೀವು ಅದನ್ನು ಸರಿಯಾಗಿ ಓದಿದ್ದೀರಿ – ಟಾಯ್ಲೆಟ್ ಸೀಟ್‌ಗಳ ಸಂಖ್ಯೆ! ಪ್ರಧಾನಿ ಮೋದಿ ಶೌಚಾಲಯ ಕಟ್ಟುತ್ತಿದ್ದಾರೆ, ಕಾಂಗ್ರೆಸ್ ಅದಕ್ಕೆ ತೆರಿಗೆ ವಿಧಿಸುತ್ತಿದೆ ಎಂದು ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದರು. ” ಬಿಜೆಪಿ ವಕ್ತಾರ ಶೆಹಜಾದ್ ಪೂನವಾಲಾ ಅವರು ಎಕ್ಸ್‌ನಲ್ಲಿ ವಿಡಿಯೊ ಶೇರ್ ಮಾಡಿ ಇದುಕಾಂಗ್ರೆಸ್ ಪಕ್ಷದ “ಖಟಾಖತ್” ಮಾದರಿ ಎಂದು ಕರೆದರು.

ಪೂನಾವಾಲಾ ಟ್ವೀಟ್ 

ಇದು ಕಾಂಗ್ರೆಸ್ ಪಕ್ಷ ಮತ್ತು ರಾಹುಲ್ ಗಾಂಧಿಯವರ ಖಟಾಖಟ್ ಮಾದರಿಯ ಉತ್ತುಂಗವಾಗಿದೆ, ಈಗ ಶೌಚಾಲಯಗಳು ಸಹ ಈ ಪಕ್ಷದ ವ್ಯಾಪ್ತಿಯಿಂದ ಹೊರಗಿಲ್ಲ. ಹಿಮಾಚಲ ಪ್ರದೇಶ ಮತ್ತು ಕರ್ನಾಟಕದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದ ನಂತರ ಪೆಟ್ರೋಲ್, ಡೀಸೆಲ್, ಹಾಲು, ನೀರು, ಬಸ್ ದರಗಳು ಮತ್ತು ಮುದ್ರಾಂಕ ಶುಲ್ಕದ ನಂತರ ಎಲ್ಲದಕ್ಕೂ ತೆರಿಗೆ ವಿಧಿಸಲಾಗಿದೆ.

ಹಿಮಾಚಲ ಪ್ರದೇಶದ ಕಾಂಗ್ರೆಸ್ ನಾಯಕತ್ವವನ್ನು “ಹೊರಹಾಕಿ” ಎಂದು ಕೇಳುವ ಮೂಲಕ ಸಿಎಂ ಸುಖು ನೇತೃತ್ವದ ಸರ್ಕಾರದ ವಿರುದ್ಧ ಕಿಡಿ ಕಾರಿದ್ದಾರೆ.

ಬಿಜೆಪಿ ರಾಷ್ಟ್ರೀಯ ಕಾರ್ಯದರ್ಶಿ ಮಂಜಿಂದರ್ ಸಿಂಗ್ ಸಿರ್ಸಾ ಅವರು “ವಿಫಲ ಮತ್ತು ಅಸಮರ್ಥ ಕಾಂಗ್ರೆಸ್ ಸರ್ಕಾರದ ಮತ್ತೊಂದು ಉದಾಹರಣೆ!!” ಎಂದು ಇದನ್ನು ಹೇಳಿದ್ದಾರೆ. ಕಾಂಗ್ರೆಸ್ ಸರ್ಕಾರ ಕೂಡ ಅಕ್ಟೋಬರ್‌ನಿಂದ ಪ್ರತಿ ಸಂಪರ್ಕಕ್ಕೆ ತಿಂಗಳಿಗೆ ₹100 ನೀರಿನ ಬಿಲ್ ನೀಡಿದೆ. ರಾಜ್ಯದಲ್ಲಿ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದರೆ ಉಚಿತ ನೀರು ನೀಡುವುದಾಗಿ ಹೇಳಿತ್ತು

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
Rashmi Kallakatta
Rashmi Kallakatta

ಊರು ಕಾಸರಗೋಡು. ಓದಿದ್ದು ಇಂಜಿನಿಯರಿಂಗ್, ಪಬ್ಲಿಕ್ ಅಡ್ಮಿನಿಸ್ಟ್ರೇಷನ್ ಮತ್ತು ಇಂಗ್ಲಿಷ್ ಸ್ನಾತಕೋತ್ತರ ಪದವಿ. ಕನ್ನಡಪ್ರಭ, ಪ್ರಜಾವಾಣಿ ಡಿಜಿಟಲ್ ಮತ್ತು ಪ್ರಿಂಟ್ ವಿಭಾಗದಲ್ಲಿ ಕೆಲಸದ ಅನುಭವ. ಬ್ಲಾಗರ್, ಸಾಹಿತ್ಯ ಪ್ರೇಮಿ. ಇಲ್ಲಿವರೆಗೆ 2 ಪುಸ್ತಕಗಳು ಪ್ರಕಟವಾಗಿವೆ. ಕಲೆ,ಸಾಹಿತ್ಯ,ತಂತ್ರಜ್ಞಾನ,ಸಂದರ್ಶನ, ಫ್ಯಾಕ್ಟ್ ಚೆಕಿಂಗ್ ಆಸಕ್ತಿಕರ ವಿಷಯಗಳು. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷ ಅನುಭವ

Read More
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
‘ಪೆದ್ದಿ’ ಚಿತ್ರದಲ್ಲಿ ಶಿವರಾಜ್​ಕುಮಾರ್ ಗತ್ತು ನೋಡಿ; ಮೇಕಿಂಗ್ ವಿಡಿಯೋ
‘ಪೆದ್ದಿ’ ಚಿತ್ರದಲ್ಲಿ ಶಿವರಾಜ್​ಕುಮಾರ್ ಗತ್ತು ನೋಡಿ; ಮೇಕಿಂಗ್ ವಿಡಿಯೋ
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ