AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಾಂಗ್ರೆಸ್ ಪಕ್ಷವನ್ನು ಶುದ್ಧೀಕರಿಸಿ: ಹಿಮಾಚಲದಲ್ಲಿ ಅಡ್ಡ ಮತದಾನ ವಿರುದ್ಧ ನವಜೋತ್ ಸಿಂಗ್ ಸಿಧು ಗುಡುಗು

ನಷ್ಟವು ಮನು ಸಿಂಘ್ವಿ ಅವರದ್ದಲ್ಲ.  ಆದರೆ ಸಾಮೂಹಿಕ ಒಳಿತಿಗಿಂತ ವೈಯಕ್ತಿಕ ಲಾಭಕ್ಕೆ ಆದ್ಯತೆ ನೀಡುವವರ ಪಕ್ಷವನ್ನು ಶುದ್ಧೀಕರಿಸುವುದು ಅತ್ಯಗತ್ಯ, ಅವರ ಕಾರ್ಯಗಳು ಪಕ್ಷದ ಅಸ್ತಿತ್ವದ ಮೇಲೆ ಆಳವಾದ ಗಾಯಗಳನ್ನು ಉಂಟುಮಾಡುತ್ತವೆ. ಗಾಯಗಳು ವಾಸಿಯಾಗಬಹುದು. ಮಾನಸಿಕ ಕಲೆಗಳು ಉಳಿಯುತ್ತವೆ. ಅವರ ಲಾಭವೇ ಕಾಂಗ್ರೆಸ್ ಕಾರ್ಯಕರ್ತರ ದೊಡ್ಡ ನೋವು ಎಂದು ನವಜೋತ್ ಸಿಂಗ್ ಎಕ್ಸ್​​ನಲ್ಲಿ ಪೋಸ್ಟ್ ಮಾಡಿದ್ದಾರೆ.

ಕಾಂಗ್ರೆಸ್ ಪಕ್ಷವನ್ನು ಶುದ್ಧೀಕರಿಸಿ: ಹಿಮಾಚಲದಲ್ಲಿ ಅಡ್ಡ ಮತದಾನ ವಿರುದ್ಧ ನವಜೋತ್ ಸಿಂಗ್ ಸಿಧು ಗುಡುಗು
ನವಜೋತ್ ಸಿಂಗ್ ಸಿಧು
ರಶ್ಮಿ ಕಲ್ಲಕಟ್ಟ
|

Updated on:Feb 28, 2024 | 4:25 PM

Share

ದೆಹಲಿ ಫೆಬ್ರವರಿ 28: ಹಿಮಾಚಲ ಪ್ರದೇಶದಲ್ಲಿ (Himachal Pradesh) ಮಂಗಳವಾರ ನಡೆದ ರಾಜ್ಯಸಭಾ ಚುನಾವಣೆಯಲ್ಲಿ (Rajya Sabha Election) ಅಡ್ಡ ಮತದಾನ ಮಾಡಿದ ಆರು ಪಕ್ಷದ ಶಾಸಕರ ಮೇಲೆ ಕಾಂಗ್ರೆಸ್‌ನ (Congress) ಪಂಜಾಬ್ ನಾಯಕ ನವಜೋತ್ ಸಿಂಗ್ ಸಿಧು (Navjot Singh Sidhu) ತೀವ್ರವಾಗಿ ವಾಗ್ದಾಳಿ ನಡೆಸಿದ್ದಾರೆ. ಪಕ್ಷವು ಸುಲಭವಾಗಿ ಗೆಲ್ಲಬೇಕಿದ್ದಲ್ಲಿ ಅಡ್ಡ ಮತದಾನದಿಂದಾಗಿ ಕಾಂಗ್ರೆಸ್ ಪರಾಭವಗೊಂಡಿತ್ತು. ಅಡ್ಡ ಮತದಾನ ವಿರುದ್ಧ ಗುಡುಗಿದ ಮಾಜಿ ಪಂಜಾಬ್ ಪ್ರದೇಶ ಕಾಂಗ್ರೆಸ್ ಸಮಿತಿ (PPCC) ಮುಖ್ಯಸ್ಥ ಸಿಧು ಪಕ್ಷದ ‘ಆಸ್ತಿ ಮತ್ತು ಹೊಣೆಗಾರಿಕೆಗಳ ಮೌಲ್ಯಮಾಪನ’ಕ್ಕೆ ಕರೆ ನೀಡಿದರು.

“ಕಾಂಗ್ರೆಸ್ ಪಕ್ಷಕ್ಕೆಹಿಮಾಚಲ ವೈಫಲ್ಯವು ಸ್ವತ್ತುಗಳು ಮತ್ತು ಹೊಣೆಗಾರಿಕೆಗಳ ಮೌಲ್ಯಮಾಪನಕ್ಕೆ ಕರೆ ನೀಡುತ್ತದೆ. ಸಿಬಿಐ, ಇಡಿ ಮತ್ತು ಐಟಿಯಂತಹ ಏಜೆನ್ಸಿಗಳ ಟ್ಯೂನ್‌ಗಳಿಗೆ ರಹಸ್ಯವಾಗಿ ನೃತ್ಯ ಮಾಡುವ ಉನ್ನತ ಸ್ಥಾನದಲ್ಲಿರುವವವರ ಮೇಲೆ ವೇಷಧಾರಿಗಳು ಅನೇಕ ಬಾರಿ ಅಂತಿಮ ತೀರ್ಪುಕೊಟ್ಟಿದ್ದಾರೆ!” ಎಂದು ನವಜೋತ್ ಸಿಂಗ್ ಸಿಧು ಎಕ್ಸ್‌ನಲ್ಲಿನ ಪೋಸ್ಟ್‌ನಲ್ಲಿ ಹೇಳಿದ್ದಾರೆ.

ಸಾಮೂಹಿಕ ಒಳಿತಿಗಿಂತ ವೈಯಕ್ತಿಕ ಲಾಭಕ್ಕೆ ಆದ್ಯತೆ ನೀಡುವವರನ್ನು ದೂರವಿರಿಸಲು ಪಕ್ಷವನ್ನು ಶುದ್ಧೀಕರಿಸುವುದು ಅತ್ಯಗತ್ಯ ಎಂದು ಹಿರಿಯ ಕಾಂಗ್ರೆಸ್ ನಾಯಕರು ಒತ್ತಿ ಹೇಳಿದರು.

ಸಿಧು ಟ್ವೀಟ್

“ನಷ್ಟವು ಮನು ಸಿಂಘ್ವಿ ಅವರದ್ದಲ್ಲ.  ಆದರೆ ಸಾಮೂಹಿಕ ಒಳಿತಿಗಿಂತ ವೈಯಕ್ತಿಕ ಲಾಭಕ್ಕೆ ಆದ್ಯತೆ ನೀಡುವವರ ಪಕ್ಷವನ್ನು ಶುದ್ಧೀಕರಿಸುವುದು ಅತ್ಯಗತ್ಯ, ಅವರ ಕಾರ್ಯಗಳು ಪಕ್ಷದ ಅಸ್ತಿತ್ವದ ಮೇಲೆ ಆಳವಾದ ಗಾಯಗಳನ್ನು ಉಂಟುಮಾಡುತ್ತವೆ. ಗಾಯಗಳು ವಾಸಿಯಾಗಬಹುದು. ಮಾನಸಿಕ ಕಲೆಗಳು ಉಳಿಯುತ್ತವೆ. ಅವರ ಲಾಭವೇ ಕಾಂಗ್ರೆಸ್ ಕಾರ್ಯಕರ್ತರ ದೊಡ್ಡ ನೋವು. ನಿಷ್ಠೆಯೇ ಎಲ್ಲವಲ್ಲ ಆದರೆ ಅದು ಇರಲೇಬೇಕು ಎಂದು ಸಿಧು ಹೇಳಿದ್ದಾರೆ.

ಹಿಮಾಚಲ ಪ್ರದೇಶದ 68 ಸದಸ್ಯ ಬಲದ ಅಸೆಂಬ್ಲಿಯಲ್ಲಿ 40 ಸ್ಥಾನಗಳನ್ನು ಹೊಂದಿದ್ದರೂ, ರಾಜ್ಯಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸೋಲು ಅನುಭವಿಸಿದೆ.

ಶಿಮ್ಲಾಗೆ ತೆರಳಿದ ಕಾಂಗ್ರೆಸ್ ವೀಕ್ಷಕರು

ಕಾಂಗ್ರೆಸ್‌ನ ಹಿರಿಯ ನಾಯಕ ಜೈರಾಮ್ ರಮೇಶ್ ಬುಧವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಕಾಂಗ್ರೆಸ್ ಮೂವರು ಹಿರಿಯ ನಾಯಕರನ್ನು ಶಿಮ್ಲಾಗೆ ಕಳುಹಿಸಲಾಗಿದೆ ಎಂದಿದ್ದಾರೆ. ಛತ್ತೀಸ್‌ಗಢದ ಮಾಜಿ ಮುಖ್ಯಮಂತ್ರಿ ಭೂಪೇಶ್ ಬಾಘೇಲ್, ಕರ್ನಾಟಕದ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಮತ್ತು ಹರ್ಯಾಣದ ಮಾಜಿ ಮುಖ್ಯಮಂತ್ರಿ ಭೂಪಿಂದರ್ ಸಿಂಗ್ ಹೂಡಾ ಅವರು ಪಕ್ಷದ ಶಾಸಕರೊಂದಿಗೆ ಮಾತನಾಡಲು ಶಿಮ್ಲಾಗೆ ತೆರಳಿದ್ದಾರೆ.

ವೀಕ್ಷಕರು ತಮ್ಮ ವರದಿಯನ್ನು ಸಲ್ಲಿಸಿದ ನಂತರ ಮುಂದಿನ ಹಾದಿಯ ಬಗ್ಗೆ ಎಲ್ಲಾ ನಿರ್ಧಾರಗಳನ್ನು ತೆಗೆದುಕೊಳ್ಳಲಾಗುವುದು. ಎಲ್ಲಾ ವ್ಯಕ್ತಿಗಳಿಗಿಂತ ಪಕ್ಷದ ಹಿತಾಸಕ್ತಿ ಮತ್ತು ಜನಾದೇಶಕ್ಕೆ ಹೆಚ್ಚಿನ ಸ್ಥಾನವನ್ನು ನೀಡಲಾಗುವುದು ಎಂದು ರಮೇಶ್ ಹೇಳಿದರು. ಮುಖ್ಯಮಂತ್ರಿ ಸುಖವಿಂದರ್ ಸುಖು ಅವರನ್ನು ಬದಲಾಯಿಸಲಾಗುತ್ತದೆಯೇ ಅಥವಾ ಇಲ್ಲವೇ ಎಂಬುದರ ಕುರಿತು ಪ್ರತಿಕ್ರಿಯಿಸಲು ಅವರು ನಿರಾಕರಿಸಿದ್ದು ಯಾವುದೇ ನಿರ್ಧಾರಗಳನ್ನ ವರದಿ ನಂತರವೇ ತೆಗೆದುಕೊಳ್ಳಲಾಗುವುದು ಎಂದಿದ್ದಾರೆ.

ಇದನ್ನೂ ಓದಿ: ಜಯಪ್ರದಾ ತಲೆಮರೆಸಿಕೊಂಡಿದ್ದಾರೆ ಎಂದು ಘೋಷಿಸಿದ ಕೋರ್ಟ್; ಬಂಧಿಸಲು ಸೂಚನೆ 

ವೀಕ್ಷಕರು ಇಂದು ಬೆಳಿಗ್ಗೆ ಕಾಂಗ್ರೆಸ್ ಅಧ್ಯಕ್ಷರೊಂದಿಗೆ ಮಾತನಾಡಿದ್ದಾರೆ. ಕಾಂಗ್ರೆಸ್ ಅಧ್ಯಕ್ಷರು ಎಲ್ಲಾ ಶಾಸಕರನ್ನು ಭೇಟಿ ಮಾಡಿ, ಅವರ ದೂರುಗಳು ಮತ್ತು ಬೇಡಿಕೆಗಳನ್ನು ಆಲಿಸಿ ಮತ್ತು ಸಾಧ್ಯವಾದಷ್ಟು ಬೇಗ ನನಗೆ ವರದಿಯನ್ನು ಸಲ್ಲಿಸುವಂತೆ ಹೇಳಿದ್ದಾರೆ.ಅಡ್ಡ ಮತದಾನ ನಡೆದಿದೆ, ಆದರೆ ಮುಂದೆ ಏನಾಗುತ್ತದೆ ಎಂಬುದಕ್ಕೆ ಈಗ ನಾವು ವಿಚಾರಿಸಬೇಕಾಗಿದೆ ಎಂದು ರಮೇಶ್ ಹೇಳಿದ್ದಾರೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 4:23 pm, Wed, 28 February 24

ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್