AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊರೊನಾ ಲಸಿಕೆ ನೀಡಿಕೆಯಲ್ಲಿ ಶೇ.100ರ ಸಾಧನೆ ಮಾಡಿದ ಹಿಮಾಚಲ ಪ್ರದೇಶ; ಎರಡೂ ಡೋಸ್​ ಪೂರ್ಣ, ಡಿ.5ಕ್ಕೆ ಸನ್ಮಾನ ಕಾರ್ಯಕ್ರಮ

ನಾಳೆಯ ಕಾರ್ಯಕ್ರಮಕ್ಕೆ ಆಗಮಿಸಲಿರುವ ಜೆ.ಪಿ.ನಡ್ಡಾ, ಏಮ್ಸ್​ನಲ್ಲಿ ಹೊರ-ರೋಗಿಗಳ ಘಟಕವನ್ನು ಕೂಡ ಉದ್ಘಾಟಿಸಲಿದ್ದಾರೆ. ಈ ಬಗ್ಗೆ ಕೆಲವೇ ದಿನಗಳ ಹಿಂದೆ ರಾಜ್ಯ ಸರ್ಕಾರ ಪ್ರಕಟಣೆ ಹೊರಡಿಸಿತ್ತು.

ಕೊರೊನಾ ಲಸಿಕೆ ನೀಡಿಕೆಯಲ್ಲಿ ಶೇ.100ರ ಸಾಧನೆ ಮಾಡಿದ ಹಿಮಾಚಲ ಪ್ರದೇಶ; ಎರಡೂ ಡೋಸ್​ ಪೂರ್ಣ, ಡಿ.5ಕ್ಕೆ ಸನ್ಮಾನ ಕಾರ್ಯಕ್ರಮ
TV9 Web
| Edited By: |

Updated on:Dec 04, 2021 | 11:07 PM

Share

ಶಿಮ್ಲಾ: ಶೇ.100ರಷ್ಟು ವಯಸ್ಕರಿಗೂ ಸಂಪೂರ್ಣವಾಗಿ (ಎರಡೂ ಡೋಸ್​ ಹಾಕಿ ಪೂರ್ಣಗೊಳಿಸಿದ) ಕೊವಿಡ್​ 19 ಲಸಿಕೆ ಹಾಕಿದ ಮೊದಲ ರಾಜ್ಯ ಹಿಮಚಾಲಯ ಪ್ರದೇಶವಾಗಿದೆ ಎಂದು ಅಲ್ಲಿನ ಸರ್ಕಾರಿ ವಕ್ತಾರರೊಬ್ಬರು ಇಂದು ತಿಳಿಸಿದ್ದಾರೆ.  ಇಲ್ಲಿನ 53,86,393 ಅರ್ಹ ವಯಸ್ಕರು ಎರಡೂ ಡೋಸ್​ ಕೊವಿಡ್​ 19 ಲಸಿಕೆ ಪಡೆದಿದ್ದಾರೆ. ಅಷ್ಟೇ ಅಲ್ಲ, ಆಗಸ್ಟ್​ ಅಂತ್ಯದ ಹೊತ್ತಿಗೆ ಶೇ.100ರಷ್ಟು ವಯಸ್ಕರಿಗೆ ಮೊದಲ ಡೋಸ್​ ಲಸಿಕೆ ನೀಡಿಕೆ ಪೂರ್ಣಗೊಳಿಸಿದ ಮೊದಲ ರಾಜ್ಯ ಎಂಬ ಹೆಗ್ಗಳಿಕೆಗೂ ಇದು ಪಾತ್ರವಾಗಿತ್ತು ಎಂದು ಅವರು ಮಾಹಿತಿ ನೀಡಿದ್ದಾರೆ. 

ವಯಸ್ಕರಿಗೆ ಅಂದರೆ 18 ವರ್ಷ ಮೇಲ್ಪಟ್ಟ ಎಲ್ಲರಿಗೂ ಸಂಪೂರ್ಣವಾಗಿ ಲಸಿಕೆ ನೀಡಿ ಮುಗಿದ ಹಿನ್ನೆಲೆಯಲ್ಲಿ ನಾಳೆ (ಭಾನುವಾರ-ಡಿಸೆಂಬರ್​5) ಬಿಲಾಸ್​ಪುರದ ಆಲ್​ ಇಂಡಿಯಾ ಇನ್​ಸ್ಟಿಟ್ಯೂಟ್​ ಆಫ್​ (ಏಮ್ಸ್​​)ನಲ್ಲಿ ಕೊವಿಡ್​ 19 ವಿರುದ್ಧ ಮುಂಚೂಣಿಯಲ್ಲಿ ನಿಂತು ಹೋರಾಟ ನಡೆಸಿದ ಕಾರ್ಯಕರ್ತರಿಗೆ ಸನ್ಮಾನ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.  ಈ ಕಾರ್ಯಕ್ರಮದಲ್ಲಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ, ಕೇಂದ್ರ ಆರೋಗ್ಯ ಸಚಿವ ಮನ್​ಸುಖ್​ ಮಾಂಡವಿಯಾ, ಮುಖ್ಯಮಂತ್ರಿ ಜೈರಾಮ್​ ಠಾಕೂರ್, ಕೇಂದ್ರ ಸಚಿವ ಅನುರಾಗ್ ಠಾಕೂರ್​, ರಾಜ್ಯದ ಆರೋಗ್ಯ ಮಂತ್ರಿ ರಾಜೀವ್ ಸೈಝಲ್​ ಇತರರು ಭಾಗವಹಿಸಲಿದ್ದಾರೆ.  ನಾಗರಿಕರಿಗೆ ಲಸಿಕೆ ಹಾಕಲು ಶ್ರಮಿಸಿದ ಎಲ್ಲ ಆರೋಗ್ಯ ಸಿಬ್ಬಂದಿಗೂ ಪ್ರಮಾಣಪತ್ರ ನೀಡಲಾಗುವುದು ಎಂದು ಹೇಳಲಾಗಿದೆ.

ಇನ್ನು ನಾಳೆಯ ಕಾರ್ಯಕ್ರಮಕ್ಕೆ ಆಗಮಿಸಲಿರುವ ಜೆ.ಪಿ.ನಡ್ಡಾ, ಏಮ್ಸ್​ನಲ್ಲಿ ಹೊರ-ರೋಗಿಗಳ ಘಟಕವನ್ನು ಕೂಡ ಉದ್ಘಾಟಿಸಲಿದ್ದಾರೆ. ಈ ಬಗ್ಗೆ ಕೆಲವೇ ದಿನಗಳ ಹಿಂದೆ ರಾಜ್ಯ ಸರ್ಕಾರ ಪ್ರಕಟಣೆ ಹೊರಡಿಸಿತ್ತು. ಸೆಪ್ಟೆಂಬರ್​ 6ರಂದು ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಹಿಮಾಚಲ ಪ್ರದೇಶದ ಲಸಿಕೆ ಅಭಿಯಾನವನ್ನು ಶ್ಲಾಘಿಸಿದ್ದರು. ಇದೀಗ ಈ ರಾಜ್ಯ ಹೊಸದೊಂದು ದಾಖಲೆ ನಿರ್ಮಿಸಿದೆ.

ಇದನ್ನೂ ಓದಿ: ಒಮಿಕ್ರಾನ್​ ಮಾರಣಾಂತಿಕವಲ್ಲ, ಆದರೆ ಭಾರತೀಯರು ಕೊರೊನಾ 3ನೇ ಅಲೆಗೆ ಸಿದ್ಧರಾಗಬೇಕು: ತಜ್ಞರ ವರದಿ

Published On - 11:07 pm, Sat, 4 December 21

Follow Us
ಹೈದರಾಬಾದ್​​ನಲ್ಲಿ ‘ಟಾಕ್ಸಿಕ್’ ಇವೆಂಟ್​​, ಯಶ್ ನೋಡಲು ಬಂದ ಜನಸಾಗರ
ಹೈದರಾಬಾದ್​​ನಲ್ಲಿ ‘ಟಾಕ್ಸಿಕ್’ ಇವೆಂಟ್​​, ಯಶ್ ನೋಡಲು ಬಂದ ಜನಸಾಗರ
ನಾಪತ್ತೆಯಾಗಿದ್ದ IAS ಅಧಿಕಾರಿಯ ಸುಳಿವು ಪತ್ತೆ: ಸ್ಥಳದ ಮಾಹಿತಿ ಲಭ್ಯ!
ನಾಪತ್ತೆಯಾಗಿದ್ದ IAS ಅಧಿಕಾರಿಯ ಸುಳಿವು ಪತ್ತೆ: ಸ್ಥಳದ ಮಾಹಿತಿ ಲಭ್ಯ!
ಬರ, ರೈತರ ಸಾಲಮನ್ನಾ ಬಗ್ಗೆ ಕೃಷಿ ಸಚಿವ ನರೇಂದ್ರಸ್ವಾಮಿ ಹೇಳಿದ್ದಿಷ್ಟು
ಬರ, ರೈತರ ಸಾಲಮನ್ನಾ ಬಗ್ಗೆ ಕೃಷಿ ಸಚಿವ ನರೇಂದ್ರಸ್ವಾಮಿ ಹೇಳಿದ್ದಿಷ್ಟು
ವಂಚನೆ ಆರೋಪ, ಸ್ಪಷ್ಟನೆ ನೀಡಿದ ನಿರ್ದೇಶಕ ಓಂ ಪ್ರಕಾಶ್ ರಾವ್
ವಂಚನೆ ಆರೋಪ, ಸ್ಪಷ್ಟನೆ ನೀಡಿದ ನಿರ್ದೇಶಕ ಓಂ ಪ್ರಕಾಶ್ ರಾವ್
ತಹಶೀಲ್ದಾರ್ ಕಚೇರಿಯ ಶೌಚಾಲಯ ಸ್ವಚ್ಛಗೊಳಿಸಿದ ಸಚಿವ
ತಹಶೀಲ್ದಾರ್ ಕಚೇರಿಯ ಶೌಚಾಲಯ ಸ್ವಚ್ಛಗೊಳಿಸಿದ ಸಚಿವ
'ಜೈಲಿನಲ್ಲಿ ಹಣ ಕೊಟ್ಟರೆ ಅದು ಸಿಗುತ್ತೆ': ಆತ ಬಿಚ್ಚಿಟ್ಟ ಸ್ಫೋಟಕ ಸತ್ಯ
'ಜೈಲಿನಲ್ಲಿ ಹಣ ಕೊಟ್ಟರೆ ಅದು ಸಿಗುತ್ತೆ': ಆತ ಬಿಚ್ಚಿಟ್ಟ ಸ್ಫೋಟಕ ಸತ್ಯ
ಅವೈಜ್ಞಾನಿಕ ಪಾರ್ಕಿಂಗ್‌ಗೆ 3 ದಿನಗಳಲ್ಲಿ ಮೂರು ಬಲಿ
ಅವೈಜ್ಞಾನಿಕ ಪಾರ್ಕಿಂಗ್‌ಗೆ 3 ದಿನಗಳಲ್ಲಿ ಮೂರು ಬಲಿ
ಸಕ್ಕರೆ ಬೆಲೆ ಏರಿಕೆ ಕಡಿವಾಣಕ್ಕೆ ಸರ್ಕಾರ ಪ್ಲಾನ್; ಸೆ. 1ರಿಂದ ಹೊಸ ನಿಯಮ
ಸಕ್ಕರೆ ಬೆಲೆ ಏರಿಕೆ ಕಡಿವಾಣಕ್ಕೆ ಸರ್ಕಾರ ಪ್ಲಾನ್; ಸೆ. 1ರಿಂದ ಹೊಸ ನಿಯಮ
ಮೈಸೂರಿನಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋ.. ಸ್ಪೆಷಾಲಿಟಿ ಏನ್ಗೊತ್ತಾ?
ಮೈಸೂರಿನಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋ.. ಸ್ಪೆಷಾಲಿಟಿ ಏನ್ಗೊತ್ತಾ?
TV9 ರಿಯಲ್ ಎಸ್ಟೇಟ್ ಎಕ್ಸ್​ಪೋ ಬಗ್ಗೆ ಅರುಣ್ ಯೋಗಿರಾಜ್ ಹೇಳಿದ್ದಿಷ್ಟು!
TV9 ರಿಯಲ್ ಎಸ್ಟೇಟ್ ಎಕ್ಸ್​ಪೋ ಬಗ್ಗೆ ಅರುಣ್ ಯೋಗಿರಾಜ್ ಹೇಳಿದ್ದಿಷ್ಟು!