AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊರೊನಾ ಲಸಿಕೆ ನೀಡಿಕೆಯಲ್ಲಿ ಶೇ.100ರ ಸಾಧನೆ ಮಾಡಿದ ಹಿಮಾಚಲ ಪ್ರದೇಶ; ಎರಡೂ ಡೋಸ್​ ಪೂರ್ಣ, ಡಿ.5ಕ್ಕೆ ಸನ್ಮಾನ ಕಾರ್ಯಕ್ರಮ

ನಾಳೆಯ ಕಾರ್ಯಕ್ರಮಕ್ಕೆ ಆಗಮಿಸಲಿರುವ ಜೆ.ಪಿ.ನಡ್ಡಾ, ಏಮ್ಸ್​ನಲ್ಲಿ ಹೊರ-ರೋಗಿಗಳ ಘಟಕವನ್ನು ಕೂಡ ಉದ್ಘಾಟಿಸಲಿದ್ದಾರೆ. ಈ ಬಗ್ಗೆ ಕೆಲವೇ ದಿನಗಳ ಹಿಂದೆ ರಾಜ್ಯ ಸರ್ಕಾರ ಪ್ರಕಟಣೆ ಹೊರಡಿಸಿತ್ತು.

ಕೊರೊನಾ ಲಸಿಕೆ ನೀಡಿಕೆಯಲ್ಲಿ ಶೇ.100ರ ಸಾಧನೆ ಮಾಡಿದ ಹಿಮಾಚಲ ಪ್ರದೇಶ; ಎರಡೂ ಡೋಸ್​ ಪೂರ್ಣ, ಡಿ.5ಕ್ಕೆ ಸನ್ಮಾನ ಕಾರ್ಯಕ್ರಮ
TV9 Web
| Edited By: |

Updated on:Dec 04, 2021 | 11:07 PM

Share

ಶಿಮ್ಲಾ: ಶೇ.100ರಷ್ಟು ವಯಸ್ಕರಿಗೂ ಸಂಪೂರ್ಣವಾಗಿ (ಎರಡೂ ಡೋಸ್​ ಹಾಕಿ ಪೂರ್ಣಗೊಳಿಸಿದ) ಕೊವಿಡ್​ 19 ಲಸಿಕೆ ಹಾಕಿದ ಮೊದಲ ರಾಜ್ಯ ಹಿಮಚಾಲಯ ಪ್ರದೇಶವಾಗಿದೆ ಎಂದು ಅಲ್ಲಿನ ಸರ್ಕಾರಿ ವಕ್ತಾರರೊಬ್ಬರು ಇಂದು ತಿಳಿಸಿದ್ದಾರೆ.  ಇಲ್ಲಿನ 53,86,393 ಅರ್ಹ ವಯಸ್ಕರು ಎರಡೂ ಡೋಸ್​ ಕೊವಿಡ್​ 19 ಲಸಿಕೆ ಪಡೆದಿದ್ದಾರೆ. ಅಷ್ಟೇ ಅಲ್ಲ, ಆಗಸ್ಟ್​ ಅಂತ್ಯದ ಹೊತ್ತಿಗೆ ಶೇ.100ರಷ್ಟು ವಯಸ್ಕರಿಗೆ ಮೊದಲ ಡೋಸ್​ ಲಸಿಕೆ ನೀಡಿಕೆ ಪೂರ್ಣಗೊಳಿಸಿದ ಮೊದಲ ರಾಜ್ಯ ಎಂಬ ಹೆಗ್ಗಳಿಕೆಗೂ ಇದು ಪಾತ್ರವಾಗಿತ್ತು ಎಂದು ಅವರು ಮಾಹಿತಿ ನೀಡಿದ್ದಾರೆ. 

ವಯಸ್ಕರಿಗೆ ಅಂದರೆ 18 ವರ್ಷ ಮೇಲ್ಪಟ್ಟ ಎಲ್ಲರಿಗೂ ಸಂಪೂರ್ಣವಾಗಿ ಲಸಿಕೆ ನೀಡಿ ಮುಗಿದ ಹಿನ್ನೆಲೆಯಲ್ಲಿ ನಾಳೆ (ಭಾನುವಾರ-ಡಿಸೆಂಬರ್​5) ಬಿಲಾಸ್​ಪುರದ ಆಲ್​ ಇಂಡಿಯಾ ಇನ್​ಸ್ಟಿಟ್ಯೂಟ್​ ಆಫ್​ (ಏಮ್ಸ್​​)ನಲ್ಲಿ ಕೊವಿಡ್​ 19 ವಿರುದ್ಧ ಮುಂಚೂಣಿಯಲ್ಲಿ ನಿಂತು ಹೋರಾಟ ನಡೆಸಿದ ಕಾರ್ಯಕರ್ತರಿಗೆ ಸನ್ಮಾನ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.  ಈ ಕಾರ್ಯಕ್ರಮದಲ್ಲಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ, ಕೇಂದ್ರ ಆರೋಗ್ಯ ಸಚಿವ ಮನ್​ಸುಖ್​ ಮಾಂಡವಿಯಾ, ಮುಖ್ಯಮಂತ್ರಿ ಜೈರಾಮ್​ ಠಾಕೂರ್, ಕೇಂದ್ರ ಸಚಿವ ಅನುರಾಗ್ ಠಾಕೂರ್​, ರಾಜ್ಯದ ಆರೋಗ್ಯ ಮಂತ್ರಿ ರಾಜೀವ್ ಸೈಝಲ್​ ಇತರರು ಭಾಗವಹಿಸಲಿದ್ದಾರೆ.  ನಾಗರಿಕರಿಗೆ ಲಸಿಕೆ ಹಾಕಲು ಶ್ರಮಿಸಿದ ಎಲ್ಲ ಆರೋಗ್ಯ ಸಿಬ್ಬಂದಿಗೂ ಪ್ರಮಾಣಪತ್ರ ನೀಡಲಾಗುವುದು ಎಂದು ಹೇಳಲಾಗಿದೆ.

ಇನ್ನು ನಾಳೆಯ ಕಾರ್ಯಕ್ರಮಕ್ಕೆ ಆಗಮಿಸಲಿರುವ ಜೆ.ಪಿ.ನಡ್ಡಾ, ಏಮ್ಸ್​ನಲ್ಲಿ ಹೊರ-ರೋಗಿಗಳ ಘಟಕವನ್ನು ಕೂಡ ಉದ್ಘಾಟಿಸಲಿದ್ದಾರೆ. ಈ ಬಗ್ಗೆ ಕೆಲವೇ ದಿನಗಳ ಹಿಂದೆ ರಾಜ್ಯ ಸರ್ಕಾರ ಪ್ರಕಟಣೆ ಹೊರಡಿಸಿತ್ತು. ಸೆಪ್ಟೆಂಬರ್​ 6ರಂದು ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಹಿಮಾಚಲ ಪ್ರದೇಶದ ಲಸಿಕೆ ಅಭಿಯಾನವನ್ನು ಶ್ಲಾಘಿಸಿದ್ದರು. ಇದೀಗ ಈ ರಾಜ್ಯ ಹೊಸದೊಂದು ದಾಖಲೆ ನಿರ್ಮಿಸಿದೆ.

ಇದನ್ನೂ ಓದಿ: ಒಮಿಕ್ರಾನ್​ ಮಾರಣಾಂತಿಕವಲ್ಲ, ಆದರೆ ಭಾರತೀಯರು ಕೊರೊನಾ 3ನೇ ಅಲೆಗೆ ಸಿದ್ಧರಾಗಬೇಕು: ತಜ್ಞರ ವರದಿ

Published On - 11:07 pm, Sat, 4 December 21

ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ