AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹಿಮಾಚಲ ಪ್ರದೇಶದ ಕುಲ್ಲುದಲ್ಲಿ ಭಾರೀ ಭೂಕುಸಿತ; ದೊಡ್ಡ ಮರ ಬಿದ್ದು 6 ಜನ ಸಾವು

ಹಿಮಾಚಲ ಪ್ರದೇಶದಲ್ಲಿ ಬಿರುಗಾಳಿಯಿಂದ ಬೃಹತ್ ಮರ ಉರುಳಿ ಬಿದ್ದ ಪರಿಣಾಮದಿಂದ ಭೂಕುಸಿತ ಸಂಭವಿಸಿ 6 ಜನರು ಸಾವನ್ನಪ್ಪಿದ್ದಾರೆ. ಕುಲ್ಲುವಿನ ಗುರುದ್ವಾರ ಮಣಿಕರಣ್ ಸಾಹಿಬ್ ಬಳಿ ಸಂಭವಿಸಿದ ಭೂಕುಸಿತದಲ್ಲಿ 6 ಜನರು ಸಾವನ್ನಪ್ಪಿದ್ದಾರೆ ಮತ್ತು 5 ಜನರಿಗೆ ಗಾಯಗಳಾಗಿವೆ. ಭಾರೀ ಮಳೆ ಮತ್ತು ನಂತರದ ಭೂಕುಸಿತದ ನಂತರ ಗುರುದ್ವಾರದ ಎದುರಿನ ಪರ್ವತದಿಂದ ಮರವೊಂದು ಕುಸಿದು ಬಿದ್ದು ಅಪಾರ ಹಾನಿ ಸಂಭವಿಸಿದೆ ಎಂದು ಪೊಲೀಸರು ಖಚಿತಪಡಿಸಿದ್ದಾರೆ.

ಹಿಮಾಚಲ ಪ್ರದೇಶದ ಕುಲ್ಲುದಲ್ಲಿ ಭಾರೀ ಭೂಕುಸಿತ; ದೊಡ್ಡ ಮರ ಬಿದ್ದು 6 ಜನ ಸಾವು
Himachal Pradesh Tragedy
ಸುಷ್ಮಾ ಚಕ್ರೆ
|

Updated on: Mar 30, 2025 | 9:47 PM

Share

ಶ್ರೀನಗರ, ಮಾರ್ಚ್ 30: ಹಿಮಾಚಲ ಪ್ರದೇಶದ ಕುಲ್ಲುವಿನ ಗುರುದ್ವಾರ ಮಣಿಕರಣ್ ಸಾಹಿಬ್ ಬಳಿ ಇಂದು (ಭಾನುವಾರ) ಸಂಭವಿಸಿದ ಭೂಕುಸಿತದಲ್ಲಿ 6 ಜನರು ಸಾವನ್ನಪ್ಪಿದ್ದಾರೆ ಮತ್ತು ಐದು ಜನರು ಗಾಯಗೊಂಡಿದ್ದಾರೆ. “ಕುಲ್ಲುವಿನ ಮಣಿಕರಣ್ ಗುರುದ್ವಾರ ಪಾರ್ಕಿಂಗ್ ಬಳಿ ಮರಗಳು ಉರುಳಿ ಬಿದ್ದ ನಂತರ 6 ಜನರು ಸಾವನ್ನಪ್ಪಿದ್ದಾರೆ ಮತ್ತು ಐದು ಜನರು ಗಾಯಗೊಂಡಿದ್ದಾರೆ. ಜಿಲ್ಲಾಡಳಿತದ ಪೊಲೀಸರು ಮತ್ತು ರಕ್ಷಣಾ ತಂಡಗಳು ಐವರು ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ಸೇರಿಸಿವೆ” ಎಂದು ಕುಲ್ಲುವಿನ ಹೆಚ್ಚುವರಿ ಜಿಲ್ಲಾ ಮ್ಯಾಜಿಸ್ಟ್ರೇಟ್ ಅಶ್ವನಿ ಕುಮಾರ್ ತಿಳಿಸಿದ್ದಾರೆ.

ಬಿರುಗಾಳಿ ಮತ್ತು ಭೂಕುಸಿತದ ನಂತರ ಗುರುದ್ವಾರದ ಎದುರಿನ ಪರ್ವತದ ಮೇಲಿದ್ದ ಮರವೊಂದು ಬುಡಸಮೇತ ಬಿದ್ದಿತು. ರಸ್ತೆಯಲ್ಲಿ ನಿಲ್ಲಿಸಿದ್ದ ಕೆಲವು ವಾಹನಗಳ ಮೇಲೆ ಆ ಮರ ಬಿದ್ದು 6 ಜನರು ಸಾವನ್ನಪ್ಪಿದರು ಮತ್ತು ಇತರ ಮೂವರು ಗಾಯಗೊಂಡರು ಎಂದು ಅಧಿಕಾರಿಗಳು ಪಿಟಿಐಗೆ ತಿಳಿಸಿದ್ದಾರೆ. ಗಾಯಾಳುಗಳನ್ನು ಚಿಕಿತ್ಸೆಗಾಗಿ ಜಾರಿ ಆಸ್ಪತ್ರೆಗೆ ಕಳುಹಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ವೈದ್ಯಕೀಯ ತಂಡಗಳು, ಪೊಲೀಸ್ ಮತ್ತು ಕಂದಾಯ ಅಧಿಕಾರಿಗಳು ಸ್ಥಳದಲ್ಲಿದ್ದು, ರಕ್ಷಣಾ ಮತ್ತು ಪರಿಹಾರ ಕಾರ್ಯಾಚರಣೆಗಳನ್ನು ಮುನ್ನಡೆಸುತ್ತಿದ್ದಾರೆ.

ಇದನ್ನೂ ಓದಿ
Image
ಹೊಸ ಪಾಡ್‌ಕಾಸ್ಟ್‌ನಲ್ಲಿ ಡೈವೋರ್ಸ್ ಬಗ್ಗೆ ಚರ್ಚಿಸಿದ ಮಿಚೆಲ್ ಒಬಾಮಾ
Image
ಪಾಕಿಸ್ತಾನದಲ್ಲಿ ರೈಲು ಹೈಜಾಕ್;27 ಉಗ್ರರ ಹತ್ಯೆ, 155 ಒತ್ತೆಯಾಳುಗಳ ರಕ್ಷಣೆ
Image
ಪಾಕಿಸ್ತಾನದಲ್ಲಿ ಉಗ್ರರಿಂದ ಪ್ಯಾಸೆಂಜರ್​​ ರೈಲು ಹೈಜಾಕ್; 11 ಸೈನಿಕರ ಹತ್ಯೆ
Image
ಒಡಿಶಾ ವಿಧಾನಸಭೆಯಲ್ಲಿ ಬಿಜೆಪಿ, ಕಾಂಗ್ರೆಸ್ ಶಾಸಕರಿಂದ ಪರಸ್ಪರ ಹಲ್ಲೆ

ಇದನ್ನೂ ಓದಿ: ತಪ್ಪಿದ ಭಾರೀ ದುರಂತ; ಹಿಮಾಚಲ ಪ್ರದೇಶದ ಡಿಸಿಎಂ ಪ್ರಯಾಣಿಸುತ್ತಿದ್ದ ವಿಮಾನ ತುರ್ತು ಭೂಸ್ಪರ್ಶ

ಈ ಘಟನೆಯ ಬಗ್ಗೆ ದುಃಖ ವ್ಯಕ್ತಪಡಿಸಿದ ಹಿಮಾಚಲ ಪ್ರದೇಶ ಮುಖ್ಯಮಂತ್ರಿ ಸುಖವಿಂದರ್ ಸಿಂಗ್ ಸುಖು ಅವರು ಸಂತ್ರಸ್ತರಿಗೆ ಮತ್ತು ಅವರ ಕುಟುಂಬಗಳಿಗೆ ಸಾಧ್ಯವಿರುವ ಎಲ್ಲ ಸಹಾಯವನ್ನು ನೀಡುವಂತೆ ಜಿಲ್ಲಾ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು. ವಿರೋಧ ಪಕ್ಷದ ನಾಯಕ ಜೈ ರಾಮ್ ಠಾಕೂರ್ ಕೂಡ ತಮ್ಮ ಸಂತಾಪ ಸೂಚಿಸಿದರು.

ಈ ತಿಂಗಳ ಆರಂಭದಲ್ಲಿ ಹಿಮಾಚಲ ಪ್ರದೇಶದ ಹಲವಾರು ಭಾಗಗಳಲ್ಲಿ ಭಾರೀ ಮಳೆ ಮತ್ತು ಹಿಮಪಾತವು ಸಾಮಾನ್ಯ ಜೀವನವನ್ನು ಅಸ್ತವ್ಯಸ್ತಗೊಳಿಸಿತು. ಭೂಕುಸಿತಗಳು, ರಸ್ತೆಗಳು ಬಂದ್ ಆಯಿತು.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಕಾಡಾನೆಗಳ ಹಿಂಡು ಡ್ರೋನ್ ಕ್ಯಾಮರಾದಲ್ಲಿ ಸೆರೆ
ಕಾಡಾನೆಗಳ ಹಿಂಡು ಡ್ರೋನ್ ಕ್ಯಾಮರಾದಲ್ಲಿ ಸೆರೆ
ಕೆಟ್ಟ ಪ್ರಪಂಚದಲ್ಲಿ ಸ್ವರ್ಗ ತೋರಿಸ್ತೀನಿ; ಉಪ್ಪಿ ಡೈಲಾಗ್​ ಹೇಳಿದ ಗಿಲ್ಲಿ
ಕೆಟ್ಟ ಪ್ರಪಂಚದಲ್ಲಿ ಸ್ವರ್ಗ ತೋರಿಸ್ತೀನಿ; ಉಪ್ಪಿ ಡೈಲಾಗ್​ ಹೇಳಿದ ಗಿಲ್ಲಿ
ಬಿಗ್ ಬಾಸ್ ಅಲ್ಲಿ ರಕ್ಷಿತಾ ಶೆಟ್ಟಿ ವಿರುದ್ಧ ತಿರುಗಿಬಿದ್ದ ಮನೆ ಮಂದಿ
ಬಿಗ್ ಬಾಸ್ ಅಲ್ಲಿ ರಕ್ಷಿತಾ ಶೆಟ್ಟಿ ವಿರುದ್ಧ ತಿರುಗಿಬಿದ್ದ ಮನೆ ಮಂದಿ
'ಕಣ್ಣೀರು ಸುರಿಸಬೇಡ, ನಿನ್ನ ಹಿಂದೆ ನಾನಿದ್ದೇನೆ'; ರಿಷಬ್​ಗೆ ದೈವದ ಅಭಯ
'ಕಣ್ಣೀರು ಸುರಿಸಬೇಡ, ನಿನ್ನ ಹಿಂದೆ ನಾನಿದ್ದೇನೆ'; ರಿಷಬ್​ಗೆ ದೈವದ ಅಭಯ
ದೆಹಲಿ ವಿಮಾನ ನಿಲ್ದಾಣದಿಂದ ಒಂದೇ ಕಾರಿನಲ್ಲಿ ಪ್ರಯಾಣಿಸಿದ ಮೋದಿ-ಪುಟಿನ್
ದೆಹಲಿ ವಿಮಾನ ನಿಲ್ದಾಣದಿಂದ ಒಂದೇ ಕಾರಿನಲ್ಲಿ ಪ್ರಯಾಣಿಸಿದ ಮೋದಿ-ಪುಟಿನ್