AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Himachal Pradesh Political Crisis: ಚಂಡೀಗಢದಲ್ಲಿ ಕಾಂಗ್ರೆಸ್​ನ ಅನರ್ಹ ಶಾಸಕರನ್ನು ಭೇಟಿಯಾದ ವಿಕ್ರಮಾದಿತ್ಯ ಸಿಂಗ್

ಹಿಮಾಚಲ ಪ್ರದೇಶದಲ್ಲಿ ಉದ್ಭವಾಗಿರುವ ಬಿಕ್ಕಟ್ಟನ್ನು ಶಮನಗೊಳಿಸಲು ಮುಖ್ಯಮಂತ್ರಿ ಸುಖು ಸೇರಿದಂತೆ ಹಲವು ಪ್ರಯತ್ನಿಸುತ್ತಿದ್ದಾರೆ. ಇದರ ನಡುವೆ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿ ಹೊರಬಂದಿರುವ ಕಾಂಗ್ರೆಸ್​ ನಾಯಕ ವಿಕ್ರಮಾದಿತ್ಯ ಕಾಂಗ್ರೆಸ್​ನ 6 ಅನರ್ಹ ಶಾಸಕರ ಬಳಿ ಮಾತುಕತೆ ನಡೆಸಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ.

Himachal Pradesh Political Crisis: ಚಂಡೀಗಢದಲ್ಲಿ ಕಾಂಗ್ರೆಸ್​ನ ಅನರ್ಹ ಶಾಸಕರನ್ನು ಭೇಟಿಯಾದ ವಿಕ್ರಮಾದಿತ್ಯ ಸಿಂಗ್
ವಿಕ್ರಮಾದಿತ್ಯ
ನಯನಾ ರಾಜೀವ್
|

Updated on: Mar 01, 2024 | 11:12 AM

Share

ಹಿಮಾಚಲ ಪ್ರದೇಶ(Himachal Pradesh)ದ ಸಚಿವ ಸ್ಥಾನದಿಂದ ಕೆಳಗಿಳಿದು ಪಕ್ಷದೊಳಗಿನ ಅಸಮಾಧಾನದ ಬಗ್ಗೆ ಮಾತನಾಡಿದ್ದ ಕಾಂಗ್ರೆಸ್ ನಾಯಕ ವಿಕ್ರಮಾದಿತ್ಯ ಸಿಂಗ್(Vikramaditya Singh), ರಾಜ್ಯಸಭಾ ಚುನಾವಣೆಯಲ್ಲಿ ಬಿಜೆಪಿ ಪರವಾಗಿ ಅಡ್ಡ ಮತದಾನ ಮಾಡಿ ಅನರ್ಹಗೊಂಡ ಆರು ಬಂಡಾಯ ಶಾಸಕರನ್ನು ಭೇಟಿಯಾಗಿದ್ದಾರೆ.

ಕಾಂಗ್ರೆಸ್ ಅಭ್ಯರ್ಥಿ ಅಭಿಷೇಕ್ ಮನು ಸಿಂಘ್ವಿ ಅವರ ಸೋಲಿಗೆ ಅಡ್ಡ ಮತದಾನ ಮಾಡಿದ ಬಂಡಾಯ ಶಾಸಕರನ್ನು ಗುರುವಾರ ಅನರ್ಹಗೊಳಿಸಲಾಗಿದೆ. ಇದೀಗ ತಮ್ಮ ಅನರ್ಹತೆಯನ್ನು ಪ್ರಶ್ನಿಸಿ ಹೈಕೋರ್ಟ್ ಮೆಟ್ಟಿಲೇರಲು ಮುಂದಾಗಿದ್ದಾರೆ. ರಾಜ್ಯ ಕಾಂಗ್ರೆಸ್ ಮುಖ್ಯಸ್ಥೆ ಮತ್ತು ವಿಕ್ರಮಾದಿತ್ಯ ಸಿಂಗ್ ಅವರ ತಾಯಿ ಪ್ರತಿಭಾ ಸಿಂಗ್ ಅವರು ಇಂಡಿಯಾ ಟುಡೇ ಟಿವಿಗೆ ನೀಡಿದ ವಿಶೇಷ ಸಂದರ್ಶನದಲ್ಲಿ ಬೇಗ ಬಿಕ್ಕಟ್ಟು ಮುಗಿಯಲಿದೆ ಎಂದಿದ್ದಾರೆ.

ಕಾಂಗ್ರೆಸ್‌ನ ಕೇಂದ್ರ ವೀಕ್ಷಕರಾದ ಡಿಕೆ ಶಿವಕುಮಾರ್, ಭೂಪಿಂದರ್ ಸಿಂಗ್ ಹೂಡಾ ಮತ್ತು ಭೂಪೇಶ್ ಬಾಘೇಲ್ ಅವರು ಪಕ್ಷದ ಶಾಸಕರೊಂದಿಗೆ ಪ್ರತ್ಯೇಕವಾಗಿ ಮಾತನಾಡಿದ ನಂತರ ಎಲ್ಲಾ ಭಿನ್ನಾಭಿಪ್ರಾಯಗಳನ್ನು ನಿವಾರಿಸಲಾಗಿದೆ ಮತ್ತು ಸುಖವಿಂದರ್ ಸಿಂಗ್ ಸುಖು ಹಿಮಾಚಲ ಪ್ರದೇಶ ಮುಖ್ಯಮಂತ್ರಿಯಾಗಿ ಉಳಿಯುತ್ತಾರೆ ಎಂದು ಹೇಳಿದ್ದಾರೆ.

ಬಿಜೆಪಿ ಅಭ್ಯರ್ಥಿ ಹರ್ಷ್ ಮಹಾಜನ್ ಪರ ಅಡ್ಡ ಮತದಾನ ಮಾಡಿದ ಆರು ಕಾಂಗ್ರೆಸ್ ಶಾಸಕರನ್ನು ಅನರ್ಹಗೊಳಿಸಲಾಗಿದೆ. ಇವರಲ್ಲಿ ಇಂದರ್ ದತ್ ಲಖನ್‌ಪಾಲ್, ರವಿ ಠಾಕೂರ್, ಚೆತನ್ಯ ಶರ್ಮಾ, ದೇವಿಂದರ್ ಕುಮಾರ್ ಭೂಟೂ, ರಾಜಿಂದರ್ ರಾಣಾ ಮತ್ತು ಸುಧೀರ್ ಶರ್ಮಾ ಸೇರಿದ್ದಾರೆ. ಹಿಮಾಚಲ ಪ್ರದೇಶ ವಿಧಾನಸಭೆ ಸ್ಪೀಕರ್ ಕುಲದೀಪ್ ಸಿಂಗ್ ಪಠಾನಿಯಾ ಅವರು ಪಕ್ಷಾಂತರ ನಿಷೇಧ ಕಾನೂನಿನ ಅಡಿಯಲ್ಲಿ ಅವರನ್ನು ಅನರ್ಹಗೊಳಿಸಿದ್ದಾರೆ.

ಮತ್ತಷ್ಟು ಓದಿ: ‘ಕೆಲವು ವೈಫಲ್ಯ’ವನ್ನು ಸಿಎಂ ಸುಖು ಒಪ್ಪಿಕೊಂಡಿದ್ದಾರೆ, ಹಿಮಾಚಲ ಕಾಂಗ್ರೆಸ್ ಬಿಕ್ಕಟ್ಟು ಮುಗಿದಿದೆ: ಡಿಕೆ ಶಿವಕುಮಾರ್

ಗುರುವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಕಾಂಗ್ರೆಸ್‌ನ ಕೇಂದ್ರ ವೀಕ್ಷಕ ಮತ್ತು ಕರ್ನಾಟಕ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್, ರಾಜ್ಯಸಭಾ ಚುನಾವಣೆಯಲ್ಲಿ ತಮ್ಮ ಅಭ್ಯರ್ಥಿ ಅಭಿಷೇಕ್ ಮನು ಸಿಂಘ್ವಿ ಅವರ ಸೋಲಿನ ಹೊಣೆಯನ್ನು ಸುಖವಿಂದರ್ ಸಿಂಗ್ ಸುಖು ಅವರು ವಹಿಸಿಕೊಂಡಿದ್ದಾರೆ ಎಂದಿದ್ದಾರೆ.

ಕಾಂಗ್ರೆಸ್ ಮತ್ತು ಮೂವರು ಸ್ವತಂತ್ರ ಶಾಸಕರು ಹರಿಯಾಣದ ಪಂಚಕುಲದಲ್ಲಿರುವ ಅತಿಥಿ ಗೃಹದಲ್ಲಿ ಬೀಡು ಬಿಟ್ಟಿದ್ದಾರೆ ಎಂದು ವರದಿಯಾಗಿದೆ. ಬಹುಮತ ಹೊಂದಿದ್ದರೂ ರಾಜ್ಯಸಭಾ ಚುನಾವಣೆಯಲ್ಲಿ ಬಿಜೆಪಿಗೆ ಕಾಂಗ್ರೆಸ್ ಆಘಾತಕಾರಿ ಸೋಲು ಕಂಡಿದೆ. ಬಿಜೆಪಿಯ ಹರ್ಷ್ ಮಹಾಜನ್ ಅವರು ಕಾಂಗ್ರೆಸ್‌ನ ಅಭಿಷೇಕ್ ಮನು ಸಿಂಘ್ವಿ ಅವರನ್ನು ಸೋಲಿಸಿದ್ದರು.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
ಗ್ಯಾರಂಟಿ ಪ್ರಾಧಿಕಾರದ ಸಭೆಯಲ್ಲಿ ಮಹತ್ವದ ತೀರ್ಮಾನ: ಚುನಾವಣೆಗೆ ತಯಾರಿ?
ಗ್ಯಾರಂಟಿ ಪ್ರಾಧಿಕಾರದ ಸಭೆಯಲ್ಲಿ ಮಹತ್ವದ ತೀರ್ಮಾನ: ಚುನಾವಣೆಗೆ ತಯಾರಿ?
ಗೃಹಜ್ಯೋತಿ ಫಲಾನುಭವಿಗಳಿಗೆ ಬಿಗ್​ ಅಪ್ಡೇಟ್​:ಪರಿಷ್ಕರಣೆಗೆ ಗಡುವು ವಿಸ್ತರಣೆ
ಗೃಹಜ್ಯೋತಿ ಫಲಾನುಭವಿಗಳಿಗೆ ಬಿಗ್​ ಅಪ್ಡೇಟ್​:ಪರಿಷ್ಕರಣೆಗೆ ಗಡುವು ವಿಸ್ತರಣೆ
BMTC,KSRTC ನಿಲ್ದಾಣಗಳಿಗೆ ದಿಢೀರ್ ಭೇಟಿ, ಪ್ರಯಾಣಿಕರ ಸಮಸ್ಯೆ ಆಲಿಸಿದ ಸಚಿವ
BMTC,KSRTC ನಿಲ್ದಾಣಗಳಿಗೆ ದಿಢೀರ್ ಭೇಟಿ, ಪ್ರಯಾಣಿಕರ ಸಮಸ್ಯೆ ಆಲಿಸಿದ ಸಚಿವ
ಬೆಂಗಳೂರಿನಲ್ಲಿ ಕಳಪೆ ಸಿಹಿ ತಿನಿಸುಗಳ ಮಾರಾಟಕ್ಕೆ ಲಗಾಮು
ಬೆಂಗಳೂರಿನಲ್ಲಿ ಕಳಪೆ ಸಿಹಿ ತಿನಿಸುಗಳ ಮಾರಾಟಕ್ಕೆ ಲಗಾಮು
ಕೆಪಿಎಸ್‌ಸಿ ಅಕ್ರಮದ ಮತ್ತಷ್ಟು ಸ್ಫೋಟಕ ವಿಚಾರಗಳನ್ನ ಬಹಿರಂಗಪಡಿಸಿದ HDK
ಕೆಪಿಎಸ್‌ಸಿ ಅಕ್ರಮದ ಮತ್ತಷ್ಟು ಸ್ಫೋಟಕ ವಿಚಾರಗಳನ್ನ ಬಹಿರಂಗಪಡಿಸಿದ HDK
ಕಿರ್ಗಿಸ್ತಾನದಲ್ಲಿ ಅರ್ಮೇನಿಯಾ ಪ್ರಧಾನಿ ಜೊತೆ ಪಿಎಂ ಮೋದಿ ದ್ವಿಪಕ್ಷೀಯ ಸಭೆ
ಕಿರ್ಗಿಸ್ತಾನದಲ್ಲಿ ಅರ್ಮೇನಿಯಾ ಪ್ರಧಾನಿ ಜೊತೆ ಪಿಎಂ ಮೋದಿ ದ್ವಿಪಕ್ಷೀಯ ಸಭೆ
ನೇಪಾಳ ಪ್ರವಾಹ: ತುಮಕೂರಿನ ರಂಗು ಸುಧೀರ್, ಕೀರ್ತಿ ಆಚಾರ್ಯ ನಾಪತ್ತೆ
ನೇಪಾಳ ಪ್ರವಾಹ: ತುಮಕೂರಿನ ರಂಗು ಸುಧೀರ್, ಕೀರ್ತಿ ಆಚಾರ್ಯ ನಾಪತ್ತೆ
ನೇಪಾಳ ಪ್ರವಾಹ: ಸಂಪರ್ಕಕ್ಕೆ ಸಿಗದ 13 ಕನ್ನಡಿಗರು, ಸಿಎಂ ಹೇಳಿದ್ದೇನು ನೋಡಿ
ನೇಪಾಳ ಪ್ರವಾಹ: ಸಂಪರ್ಕಕ್ಕೆ ಸಿಗದ 13 ಕನ್ನಡಿಗರು, ಸಿಎಂ ಹೇಳಿದ್ದೇನು ನೋಡಿ
ಉಜ್ಬೇಕಿಸ್ತಾನದಲ್ಲಿ ಭಾರತೀಯ ಸಂಸ್ಕೃತಿಯ ಕಂಪು ಪಸರಿಸಿದ ಪಿಎಂ ಮೋದಿ
ಉಜ್ಬೇಕಿಸ್ತಾನದಲ್ಲಿ ಭಾರತೀಯ ಸಂಸ್ಕೃತಿಯ ಕಂಪು ಪಸರಿಸಿದ ಪಿಎಂ ಮೋದಿ
CID ತನಿಖೆ ವೇಳೆ ಹಲವು ಸ್ಫೋಟಕ ಅಂಶಗಳು ಪತ್ತೆ
CID ತನಿಖೆ ವೇಳೆ ಹಲವು ಸ್ಫೋಟಕ ಅಂಶಗಳು ಪತ್ತೆ