AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Himachal Pradesh Rain: ಹಿಮಾಚಲ ಪ್ರದೇಶದಲ್ಲಿ ಪ್ರವಾಹ, ಭೂಕುಸಿತದಿಂದ 6 ಜನ ಸಾವು; ಇನ್ನೂ 13 ಮಂದಿ ನಾಪತ್ತೆ

ಹಿಮಾಚಲ ಪ್ರದೇಶದ ವಿಪತ್ತು ನಿರ್ವಹಣಾ ಇಲಾಖೆಯು ರಾಜ್ಯದಲ್ಲಿ ಆಗಸ್ಟ್ 25ರವರೆಗೆ ಭಾರೀ ಮಳೆಯ ಮುನ್ಸೂಚನೆಯಿಂದಾಗಿ ಭೂಕುಸಿತದ ಎಚ್ಚರಿಕೆಯನ್ನು ನೀಡಿದೆ.

Himachal Pradesh Rain: ಹಿಮಾಚಲ ಪ್ರದೇಶದಲ್ಲಿ ಪ್ರವಾಹ, ಭೂಕುಸಿತದಿಂದ 6 ಜನ ಸಾವು; ಇನ್ನೂ 13 ಮಂದಿ ನಾಪತ್ತೆ
ಹಿಮಾಚಲ ಪ್ರದೇಶದಲ್ಲಿ ಭಾರೀ ಮಳೆ
TV9 Web
| Edited By: |

Updated on: Aug 20, 2022 | 4:41 PM

Share

ಶಿಮ್ಲಾ: ಹಿಮಾಚಲ ಪ್ರದೇಶದಲ್ಲಿ (Himachal Pradesh) ಭಾರೀ ಮಳೆಯಿಂದ ಉಂಟಾದ ಪ್ರವಾಹ (Flood) ಮತ್ತು ಭೂಕುಸಿತದ (Landslide)  ಘಟನೆಗಳಲ್ಲಿ 6 ಜನರು ಸಾವನ್ನಪ್ಪಿದ್ದಾರೆ. ಇನ್ನೂ 13 ಮಂದಿ ಸಾವನ್ನಪ್ಪಿರುವ ಸಾಧ್ಯತೆಯಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಹಿಮಾಚಲ ಪ್ರದೇಶದ ಹಮೀರ್‌ಪುರ ಜಿಲ್ಲೆಯಲ್ಲಿ ಹಠಾತ್ ಪ್ರವಾಹದ ನಂತರ ಸಿಲುಕಿಕೊಂಡಿದ್ದ 22 ಜನರನ್ನು ಸುರಕ್ಷಿತವಾಗಿ ಸ್ಥಳಾಂತರಿಸಲಾಗಿದೆ.

ಮುಖ್ಯಮಂತ್ರಿ ಜೈ ರಾಮ್ ಠಾಕೂರ್ ಪ್ರವಾಹದಿಂದ ಸಾವನ್ನಪ್ಪಿದವರಿಗೆ ಸಂತಾಪ ವ್ಯಕ್ತಪಡಿಸಿದ್ದಾರೆ. ಪ್ರವಾಹ ಪೀಡಿತ ಜಿಲ್ಲೆಗಳಲ್ಲಿ ಆಡಳಿತವು ರಕ್ಷಣಾ ಕಾರ್ಯಾಚರಣೆಯನ್ನು ನಡೆಸುತ್ತಿದೆ ಎಂದು ಹೇಳಿದ್ದಾರೆ. ಅಧಿಕಾರಿಗಳ ಪ್ರಕಾರ, ಚಂಬಾ ಜಿಲ್ಲೆಯಲ್ಲಿ ಮಳೆಯಿಂದ ಉಂಟಾದ ಭೂಕುಸಿತದ ನಂತರ ಮನೆ ಕುಸಿದು ಮೂವರು ಸಾವನ್ನಪ್ಪಿದ್ದಾರೆ. ಇಂದು ಬೆಳಿಗ್ಗೆ 4.30ರ ಸುಮಾರಿಗೆ ಚೌವರಿ ತೆಹಸಿಲ್‌ನ ಬಾನೆಟ್ ಗ್ರಾಮದಲ್ಲಿ ಭೂಕುಸಿತ ಸಂಭವಿಸಿದೆ. ನಂತರ ಮನೆ ಕುಸಿದು 3 ಜನರು ಸಾವನ್ನಪ್ಪಿದ್ದಾರೆ.

ಇದನ್ನೂ ಓದಿ: Kullu Cloudburst: ಹಿಮಾಚಲದ ಕುಲುವಿನಲ್ಲಿ ಮೇಘಸ್ಫೋಟ; ಪ್ರವಾಹದಲ್ಲಿ ಕೊಚ್ಚಿ ಹೋಯ್ತು ಅಂಗಡಿ, ವಾಹನಗಳು

ಮಂಡಿಯಲ್ಲಿ, ಭಾರೀ ಮಳೆಯಿಂದ ಉಂಟಾದ ಭೂಕುಸಿತ ಮತ್ತು ಪ್ರವಾಹದಲ್ಲಿ ಬಾಲಕಿಯೊಬ್ಬರು ಸಾವನ್ನಪ್ಪಿದ್ದಾರೆ. ಶುಕ್ರವಾರ ರಾತ್ರಿ ಮಂಡಿ-ಕಟೋಲಾ-ಪ್ರಶಾರ್ ರಸ್ತೆಯ ಬಾಘಿ ನುಲ್ಲಾ ಎಂಬಲ್ಲಿನ ಮನೆಯಿಂದ ಸುಮಾರು ಅರ್ಧ ಕಿಮೀ ದೂರದಲ್ಲಿ ಬಾಲಕಿಯ ಶವ ಪತ್ತೆಯಾಗಿದ್ದು, ಆಕೆಯ ಕುಟುಂಬದ ಐವರು ಕೊಚ್ಚಿಕೊಂಡು ಹೋಗಿದ್ದಾರೆ ಎಂದು ರಾಜ್ಯ ವಿಪತ್ತು ನಿರ್ವಹಣಾ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ.

ಇದಲ್ಲದೆ, ಗೋಹರ್ ಡೆವಲಪ್‌ಮೆಂಟ್ ಬ್ಲಾಕ್‌ನ ಕಶನ್ ಗ್ರಾಮದಲ್ಲಿ ಭೂಕುಸಿತದ ನಂತರ ಮತ್ತೊಂದು ಕುಟುಂಬದ 8 ಸದಸ್ಯರು ತಮ್ಮ ಮನೆಯ ಅವಶೇಷಗಳ ಅಡಿಯಲ್ಲಿ ಹೂತುಹೋಗಿದ್ದಾರೆ. ಆದರೆ, ಮೃತದೇಹಗಳನ್ನು ಇನ್ನೂ ಪತ್ತೆಹಚ್ಚಲು ಸಾಧ್ಯವಾಗಿಲ್ಲ. ಪ್ರವಾಹ ಮತ್ತು ಭೂಕುಸಿತದ ನಂತರ ಮಂಡಿ ಜಿಲ್ಲೆಯ ಹಲವಾರು ರಸ್ತೆಗಳನ್ನು ಸಹ ನಿರ್ಬಂಧಿಸಲಾಗಿದೆ. ಹಿಮಾಚಲ ಪ್ರದೇಶದ ವಿಪತ್ತು ನಿರ್ವಹಣಾ ಇಲಾಖೆಯು ರಾಜ್ಯದಲ್ಲಿ ಆಗಸ್ಟ್ 25ರವರೆಗೆ ಭಾರೀ ಮಳೆಯ ಮುನ್ಸೂಚನೆಯಿಂದಾಗಿ ಭೂಕುಸಿತದ ಎಚ್ಚರಿಕೆಯನ್ನು ನೀಡಿದೆ. ಕಂಗ್ರಾ, ಚಂಬಾ, ಮಂಡಿ, ಕುಲು, ಶಿಮ್ಲಾ, ಸಿರ್ಮೌರ್, ಸೋಲನ್, ಹಮೀರ್‌ಪುರ್, ಉನಾ ಮತ್ತು ಬಿಲಾಸ್‌ಪುರ ಜಿಲ್ಲೆಗಳ ಕೆಲವು ಭಾಗಗಳಲ್ಲಿ ಮುಂದಿನ ಮೂರು-ನಾಲ್ಕು ದಿನಗಳಲ್ಲಿ ಮಳೆಯ ಪ್ರಮಾಣವು ಹೆಚ್ಚಾಗುವ ಸಾಧ್ಯತೆಯಿದೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಗಾಯಕಿ ಆಶಾ ಭೋಸ್ಲೆ ಕನ್ನಡದಲ್ಲಿ 4ನೇ ಗೀತೆ ಹಾಡಲು ಒಪ್ಪಿಕೊಂಡಿದ್ದು ಹೇಗೆ?
ಗಾಯಕಿ ಆಶಾ ಭೋಸ್ಲೆ ಕನ್ನಡದಲ್ಲಿ 4ನೇ ಗೀತೆ ಹಾಡಲು ಒಪ್ಪಿಕೊಂಡಿದ್ದು ಹೇಗೆ?
ಸಂಪುಟ ಪುನಾರಚನೆಗೆ ಎಐಸಿಸಿ ಅಧ್ಯಕ್ಷ ಖರ್ಗೆ ಮಹತ್ವದ ಭರವಸೆ: ಶಾಸಕರು ಖುಷ್​
ಸಂಪುಟ ಪುನಾರಚನೆಗೆ ಎಐಸಿಸಿ ಅಧ್ಯಕ್ಷ ಖರ್ಗೆ ಮಹತ್ವದ ಭರವಸೆ: ಶಾಸಕರು ಖುಷ್​
ಚೊಚ್ಚಲ ಪಂದ್ಯದಲ್ಲೇ ಮೂವರನ್ನು ಶೂನ್ಯಕ್ಕೆ ಔಟ್ ಮಾಡಿದ ಪ್ರಫುಲ್
ಚೊಚ್ಚಲ ಪಂದ್ಯದಲ್ಲೇ ಮೂವರನ್ನು ಶೂನ್ಯಕ್ಕೆ ಔಟ್ ಮಾಡಿದ ಪ್ರಫುಲ್
ಅತ್ಯಧಿಕ ಸೊನ್ನೆ.. ಅನಗತ್ಯ ದಾಖಲೆ ಬರೆದ ಅಭಿಷೇಕ್ ಶರ್ಮಾ
ಅತ್ಯಧಿಕ ಸೊನ್ನೆ.. ಅನಗತ್ಯ ದಾಖಲೆ ಬರೆದ ಅಭಿಷೇಕ್ ಶರ್ಮಾ
ವಚನಾನಂದ ಸ್ವಾಮೀಜಿ ಉಚ್ಚಾಟನೆ ಮಠದಲ್ಲಿ ತಳ್ಳಾಟ, ನೂಕಾಟ: ಶ್ರೀಗಳಿಗೆ ಗಾಯ
ವಚನಾನಂದ ಸ್ವಾಮೀಜಿ ಉಚ್ಚಾಟನೆ ಮಠದಲ್ಲಿ ತಳ್ಳಾಟ, ನೂಕಾಟ: ಶ್ರೀಗಳಿಗೆ ಗಾಯ
ಹೇಗಿದೆ ನೋಡಿ ಕುಂದಾಪುರದ ವಂಡ್ಸೆ ಶಾಲೆಯ ರೋಬೋಟ್​​ ಟೀಚರ್​​ ಪಾಠ
ಹೇಗಿದೆ ನೋಡಿ ಕುಂದಾಪುರದ ವಂಡ್ಸೆ ಶಾಲೆಯ ರೋಬೋಟ್​​ ಟೀಚರ್​​ ಪಾಠ
ಪತ್ನಿ ಗರ್ಭಿಣಿಯಾಗುತ್ತಿದ್ದಂತೆ ಪತಿಯ ರಂಗೀನಾಟ: ಹೆರಿಗೆಗೆ ಹೋದಾಗ ಮತ್ತೊಂದು
ಪತ್ನಿ ಗರ್ಭಿಣಿಯಾಗುತ್ತಿದ್ದಂತೆ ಪತಿಯ ರಂಗೀನಾಟ: ಹೆರಿಗೆಗೆ ಹೋದಾಗ ಮತ್ತೊಂದು
ಪಂಚಮಸಾಲಿ ಗುರುಪೀಠದಿಂದ ಉಚ್ಛಾಟನೆ ಮಾಡಿರುವ ಬಗ್ಗೆ ವಚನಾನಂದ ಸ್ವಾಮೀಜಿ ಮಾತು
ಪಂಚಮಸಾಲಿ ಗುರುಪೀಠದಿಂದ ಉಚ್ಛಾಟನೆ ಮಾಡಿರುವ ಬಗ್ಗೆ ವಚನಾನಂದ ಸ್ವಾಮೀಜಿ ಮಾತು
ಪಾದಚಾರಿಗಳ ಮೇಲೆ ಎರಗಿದ ಕಾರು; ಸಿಸಿಟಿವಿಯಲ್ಲಿ ಸೆರೆಯಾಯ್ತು ಭೀಕರ ದೃಶ್ಯ
ಪಾದಚಾರಿಗಳ ಮೇಲೆ ಎರಗಿದ ಕಾರು; ಸಿಸಿಟಿವಿಯಲ್ಲಿ ಸೆರೆಯಾಯ್ತು ಭೀಕರ ದೃಶ್ಯ
ಬಸವಜಯ ಮೃತ್ಯುಂಜಯಶ್ರೀ ಲೈಂಗಿಕ ಕಿರುಕುಳ ಪ್ರಕರಣಕ್ಕೆ ಬಿಗ್​​ ಟ್ವಿಸ್ಟ್
ಬಸವಜಯ ಮೃತ್ಯುಂಜಯಶ್ರೀ ಲೈಂಗಿಕ ಕಿರುಕುಳ ಪ್ರಕರಣಕ್ಕೆ ಬಿಗ್​​ ಟ್ವಿಸ್ಟ್