AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹಿಮಾಚಲ ಪ್ರದೇಶ: ರೋಪ್​ ವೇಯಲ್ಲಿ ತಾಂತ್ರಿಕ ದೋಷ, ಅತಂತ್ರ ಸ್ಥಿತಿಯಲ್ಲಿ ಸಹಾಯ ಬೇಡುತ್ತಿರುವ ಪ್ರವಾಸಿಗರು

ಆಗಸದಲ್ಲಿ ತೂಗಾಡುತ್ತಿರುವ ಕೇಬಲ್​ ಕಾರ್​ನ ಒಳಗಿರುವ ಜನರು ಸಹಾಯಕ್ಕಾಗಿ ಮೊರೆಯಿಡುತ್ತಿರುವ ವಿಡಿಯೊಗಳು ವೈರಲ್ ಆಗಿವೆ.

ಹಿಮಾಚಲ ಪ್ರದೇಶ: ರೋಪ್​ ವೇಯಲ್ಲಿ ತಾಂತ್ರಿಕ ದೋಷ, ಅತಂತ್ರ ಸ್ಥಿತಿಯಲ್ಲಿ ಸಹಾಯ ಬೇಡುತ್ತಿರುವ ಪ್ರವಾಸಿಗರು
ತಾಂತ್ರಿಕ ದೋಷದಿಂದ ಸ್ಥಗಿತಗೊಂಡಿರುವ ಕೇಬಲ್ ಕಾರ್
TV9 Web
| Edited By: |

Updated on:Jun 20, 2022 | 3:30 PM

Share

ಶಿಮ್ಲಾ: ಹಿಮಾಚಲ ಪ್ರದೇಶದ ಶಿವಾಲಿಕ್ ಪರ್ವತ ಶ್ರೇಣಿಯಲ್ಲಿರುವ ಪಾರ್​ವನೂ ಟಿಂಬರ್ ಮಾರ್ಗದ ರೋಪ್​ ವೇ (Ropeway) ವ್ಯವಸ್ಥೆಯಲ್ಲಿ ತಾಂತ್ರಿಕ ಸಮಸ್ಯೆ ಎದುರಾದ ಕಾರಣ ಕೇಬಲ್ ಕಾರ್ (Cable Car) ಒಂದು ಆಗಸದಲ್ಲಿಯೇ ತೇಲಾಡುತ್ತಿದೆ. ಈ ಕೇಬಲ್ ಕಾರ್​ನಲ್ಲಿ ಸುಮಾರು 7 ಪ್ರವಾಸಿಗರು ಇರಬಹುದು ಎಂದು ಅಂದಾಜಿಸಲಾಗಿದೆ. ತಂತ್ರಜ್ಞರೊಂದಿಗೆ ಮತ್ತೊಂದು ಕೇಬಲ್ ಕಾರ್ ಅನ್ನು ಸ್ಥಳಕ್ಕೆ ಕಳಿಸಲಾಗಿದ್ದು, ವಸ್ತುಸ್ಥಿತಿ ಪರಿಶೀಲನೆ ಮತ್ತು ರಿಪೇರಿ ಪ್ರಯತ್ನಗಳು ಆರಂಭವಾಗಿವೆ.

ಘಟನೆ ಕುರಿತು ಪ್ರತಿಕ್ರಿಯಿಸಿರುವ ಸೊಲನ್ ಜಿಲ್ಲೆಯ ಎಸ್​ಪಿ, ‘ಟಿಂಬರ್ ಟ್ರೈಲ್ ಸಂಸ್ಥೆಯು ತಾಂತ್ರಿಕ ತಂಡವನ್ನು ಕಳಿಸಿದೆ. ಪೊಲೀಸ್ ತಂಡವೊಂದು ಸ್ಥಳಕ್ಕೆ ಧಾವಿಸಿದ್ದು, ರಕ್ಷಣಾ ಕಾರ್ಯಾಚರಣೆ ಆರಂಭಿಸಲಾಗಿದೆ’ ಎಂದು ಹೇಳಿದ್ದಾರೆ.

ರೋಪ್​ ವೇಯಲ್ಲಿ ಕೇಬಲ್ ಕಾರ್ ಸಿಲುಕಿರುವ ಹಲವು ವಿಡಿಯೊಗಳು ಸಾಮಾಜಿಕ ಮಾಧ್ಯಮಗಳಲ್ಲಿ ಹರಿದಾಡುತ್ತಿವೆ. ಪ್ರವಾಸಿಗರು ಹಂಚಿಕೊಂಡಿರುವ ಇಂಥದ್ದೊಂದು ವಿಡಿಯೊದಲ್ಲಿ ಕೇಬಲ್ ಕಾರ್ ತೂಗಾಡುತ್ತಿರುವ ಮತ್ತು ಅದರೊಳಗಿರುವ ಜನರು ಸಹಾಯಕ್ಕಾಗಿ ಕೂಗುತ್ತಿರುವ ದೃಶ್ಯವಿದೆ. ಸುಮಾರು ಒಂದು ತಾಸಿನಿಂದ ಈ ಕೇಬಲ್ ಕಾರ್​ನಲ್ಲಿ ಸಿಲುಕಿದ್ದೇವೆ. ನಮ್ಮ ರಕ್ಷಣೆಗೆ ಯಾರೂ ಬಂದಿಲ್ಲ ಎಂದು ಪ್ರವಾಸಿಗರೊಬ್ಬರು ಹೇಳಿಕೊಂಡಿದ್ದಾರೆ.

ಕರ್ನಾಟಕದ ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ. ದೇಶದ ಇತರ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ ಪ್ರಮುಖ  ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 3:30 pm, Mon, 20 June 22

Follow Us
ಕೋಲಾರ: ಸೆಷನ್ಸ್ ಕೋರ್ಟ್ ಒಳ ಸೇರಿಕೊಂಡಿದ್ದ ಹಾವು! ಆಮೇಲೇನಾಯ್ತು ನೋಡಿ
ಕೋಲಾರ: ಸೆಷನ್ಸ್ ಕೋರ್ಟ್ ಒಳ ಸೇರಿಕೊಂಡಿದ್ದ ಹಾವು! ಆಮೇಲೇನಾಯ್ತು ನೋಡಿ
ಮೈಮೇಲೆ ಹರಿದು ಕಾರು, ಕೆಲವೇ ಕ್ಷಣಗಳಲ್ಲಿ ಪವಾಡವೆಂಬಂತೆ ಎದ್ದು ನಿಂತ ಬಾಲಕ
ಮೈಮೇಲೆ ಹರಿದು ಕಾರು, ಕೆಲವೇ ಕ್ಷಣಗಳಲ್ಲಿ ಪವಾಡವೆಂಬಂತೆ ಎದ್ದು ನಿಂತ ಬಾಲಕ
‘ರಾಶಿಕಾಗಿಂತ ನನಗೆ ಅವರೇ ಹೆಚ್ಚು ಇಷ್ಟ’; ಓಪನ್ ಆಗಿ ಹೇಳಿದ ಸೂರಜ್ 
‘ರಾಶಿಕಾಗಿಂತ ನನಗೆ ಅವರೇ ಹೆಚ್ಚು ಇಷ್ಟ’; ಓಪನ್ ಆಗಿ ಹೇಳಿದ ಸೂರಜ್ 
ಮೈ ರೋಮಾಂಚನಗೊಳಿಸುವ ಕುಮಾರ - ಸಿರಿ ಭೇಟಿ
ಮೈ ರೋಮಾಂಚನಗೊಳಿಸುವ ಕುಮಾರ - ಸಿರಿ ಭೇಟಿ
ಆನೇಕಲ್: ಗ್ರಾಮಕ್ಕೆ ನುಗ್ಗಿ ಕಾಡಾನೆಗಳ ನೈಟ್ ರೌಂಡ್ಸ್! ವಿಡಿಯೋ ವೈರಲ್
ಆನೇಕಲ್: ಗ್ರಾಮಕ್ಕೆ ನುಗ್ಗಿ ಕಾಡಾನೆಗಳ ನೈಟ್ ರೌಂಡ್ಸ್! ವಿಡಿಯೋ ವೈರಲ್
ನಾನು ಸಿಎಂ ಆದ್ರೆ ಮಹಿಳೆಯರಿಗೆ 3,000 ರೂ. ಪುರುಷರಿಗೆ 2,000 ರೂ.: ಯತ್ನಾಳ್
ನಾನು ಸಿಎಂ ಆದ್ರೆ ಮಹಿಳೆಯರಿಗೆ 3,000 ರೂ. ಪುರುಷರಿಗೆ 2,000 ರೂ.: ಯತ್ನಾಳ್
ಬೆಂಕಿ ಹಚ್ಚುವ ಮುಲ್ಲಾಗಳಿಗೆ 6 ಸಾವಿರ ಕೊಡತ್ತೆ ಕಾಂಗ್ರೆಸ್ ಸರ್ಕಾರ: ಯತ್ನಾಳ
ಬೆಂಕಿ ಹಚ್ಚುವ ಮುಲ್ಲಾಗಳಿಗೆ 6 ಸಾವಿರ ಕೊಡತ್ತೆ ಕಾಂಗ್ರೆಸ್ ಸರ್ಕಾರ: ಯತ್ನಾಳ
ತರಕಾರಿ ಮಾರುವ ಹುಡುಗನಿಗೆ ಹಾಡಲು ಅವಕಾಶ; ಟ್ರೋಲರ್​​ಗಳಿಗೆ ಸರಿಗಮಪ ಉತ್ತರ
ತರಕಾರಿ ಮಾರುವ ಹುಡುಗನಿಗೆ ಹಾಡಲು ಅವಕಾಶ; ಟ್ರೋಲರ್​​ಗಳಿಗೆ ಸರಿಗಮಪ ಉತ್ತರ
ಗದಗ: ಮುಸುಕುಧಾರಿಗಳ ಅಟ್ಟಹಾಸ: ಮಾರಕಾಸ್ತ್ರ ಹಿಡಿದು ನಡುರಾತ್ರಿ ಎಂಟ್ರಿ
ಗದಗ: ಮುಸುಕುಧಾರಿಗಳ ಅಟ್ಟಹಾಸ: ಮಾರಕಾಸ್ತ್ರ ಹಿಡಿದು ನಡುರಾತ್ರಿ ಎಂಟ್ರಿ
ಬಿಸಿಲಲ್ಲಿ ಕುಸಿದುಬಿದ್ದ ತಾಯಿ, ಯಾರ್ಯಾರನ್ನೋ ಬೇಡಿ ನೀರು ತಂದ ಮಗ
ಬಿಸಿಲಲ್ಲಿ ಕುಸಿದುಬಿದ್ದ ತಾಯಿ, ಯಾರ್ಯಾರನ್ನೋ ಬೇಡಿ ನೀರು ತಂದ ಮಗ