AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹಿಮಾಚಲ ಪ್ರದೇಶ: ರೋಪ್​ ವೇಯಲ್ಲಿ ತಾಂತ್ರಿಕ ದೋಷ, ಅತಂತ್ರ ಸ್ಥಿತಿಯಲ್ಲಿ ಸಹಾಯ ಬೇಡುತ್ತಿರುವ ಪ್ರವಾಸಿಗರು

ಆಗಸದಲ್ಲಿ ತೂಗಾಡುತ್ತಿರುವ ಕೇಬಲ್​ ಕಾರ್​ನ ಒಳಗಿರುವ ಜನರು ಸಹಾಯಕ್ಕಾಗಿ ಮೊರೆಯಿಡುತ್ತಿರುವ ವಿಡಿಯೊಗಳು ವೈರಲ್ ಆಗಿವೆ.

ಹಿಮಾಚಲ ಪ್ರದೇಶ: ರೋಪ್​ ವೇಯಲ್ಲಿ ತಾಂತ್ರಿಕ ದೋಷ, ಅತಂತ್ರ ಸ್ಥಿತಿಯಲ್ಲಿ ಸಹಾಯ ಬೇಡುತ್ತಿರುವ ಪ್ರವಾಸಿಗರು
ತಾಂತ್ರಿಕ ದೋಷದಿಂದ ಸ್ಥಗಿತಗೊಂಡಿರುವ ಕೇಬಲ್ ಕಾರ್
TV9 Web
| Edited By: |

Updated on:Jun 20, 2022 | 3:30 PM

Share

ಶಿಮ್ಲಾ: ಹಿಮಾಚಲ ಪ್ರದೇಶದ ಶಿವಾಲಿಕ್ ಪರ್ವತ ಶ್ರೇಣಿಯಲ್ಲಿರುವ ಪಾರ್​ವನೂ ಟಿಂಬರ್ ಮಾರ್ಗದ ರೋಪ್​ ವೇ (Ropeway) ವ್ಯವಸ್ಥೆಯಲ್ಲಿ ತಾಂತ್ರಿಕ ಸಮಸ್ಯೆ ಎದುರಾದ ಕಾರಣ ಕೇಬಲ್ ಕಾರ್ (Cable Car) ಒಂದು ಆಗಸದಲ್ಲಿಯೇ ತೇಲಾಡುತ್ತಿದೆ. ಈ ಕೇಬಲ್ ಕಾರ್​ನಲ್ಲಿ ಸುಮಾರು 7 ಪ್ರವಾಸಿಗರು ಇರಬಹುದು ಎಂದು ಅಂದಾಜಿಸಲಾಗಿದೆ. ತಂತ್ರಜ್ಞರೊಂದಿಗೆ ಮತ್ತೊಂದು ಕೇಬಲ್ ಕಾರ್ ಅನ್ನು ಸ್ಥಳಕ್ಕೆ ಕಳಿಸಲಾಗಿದ್ದು, ವಸ್ತುಸ್ಥಿತಿ ಪರಿಶೀಲನೆ ಮತ್ತು ರಿಪೇರಿ ಪ್ರಯತ್ನಗಳು ಆರಂಭವಾಗಿವೆ.

ಘಟನೆ ಕುರಿತು ಪ್ರತಿಕ್ರಿಯಿಸಿರುವ ಸೊಲನ್ ಜಿಲ್ಲೆಯ ಎಸ್​ಪಿ, ‘ಟಿಂಬರ್ ಟ್ರೈಲ್ ಸಂಸ್ಥೆಯು ತಾಂತ್ರಿಕ ತಂಡವನ್ನು ಕಳಿಸಿದೆ. ಪೊಲೀಸ್ ತಂಡವೊಂದು ಸ್ಥಳಕ್ಕೆ ಧಾವಿಸಿದ್ದು, ರಕ್ಷಣಾ ಕಾರ್ಯಾಚರಣೆ ಆರಂಭಿಸಲಾಗಿದೆ’ ಎಂದು ಹೇಳಿದ್ದಾರೆ.

ರೋಪ್​ ವೇಯಲ್ಲಿ ಕೇಬಲ್ ಕಾರ್ ಸಿಲುಕಿರುವ ಹಲವು ವಿಡಿಯೊಗಳು ಸಾಮಾಜಿಕ ಮಾಧ್ಯಮಗಳಲ್ಲಿ ಹರಿದಾಡುತ್ತಿವೆ. ಪ್ರವಾಸಿಗರು ಹಂಚಿಕೊಂಡಿರುವ ಇಂಥದ್ದೊಂದು ವಿಡಿಯೊದಲ್ಲಿ ಕೇಬಲ್ ಕಾರ್ ತೂಗಾಡುತ್ತಿರುವ ಮತ್ತು ಅದರೊಳಗಿರುವ ಜನರು ಸಹಾಯಕ್ಕಾಗಿ ಕೂಗುತ್ತಿರುವ ದೃಶ್ಯವಿದೆ. ಸುಮಾರು ಒಂದು ತಾಸಿನಿಂದ ಈ ಕೇಬಲ್ ಕಾರ್​ನಲ್ಲಿ ಸಿಲುಕಿದ್ದೇವೆ. ನಮ್ಮ ರಕ್ಷಣೆಗೆ ಯಾರೂ ಬಂದಿಲ್ಲ ಎಂದು ಪ್ರವಾಸಿಗರೊಬ್ಬರು ಹೇಳಿಕೊಂಡಿದ್ದಾರೆ.

ಕರ್ನಾಟಕದ ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ. ದೇಶದ ಇತರ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ ಪ್ರಮುಖ  ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 3:30 pm, Mon, 20 June 22

Follow Us
ಬಾಲ್ಯದಲ್ಲೇ ನಟಿಸುವ ಆಸೆಯಿತ್ತು, ಅಪ್ಪ ಬೇಡ ಅಂದಿದ್ರು: ಮೋನಿಷಾ ವಿಜಯ್
ಬಾಲ್ಯದಲ್ಲೇ ನಟಿಸುವ ಆಸೆಯಿತ್ತು, ಅಪ್ಪ ಬೇಡ ಅಂದಿದ್ರು: ಮೋನಿಷಾ ವಿಜಯ್
ಬೆಂಗಳೂರಿಗೆ ಬಂದ ಇಡಿ ನಿರ್ದೇಶಕ ರಾಹುಲ್ ನವೀನ್
ಬೆಂಗಳೂರಿಗೆ ಬಂದ ಇಡಿ ನಿರ್ದೇಶಕ ರಾಹುಲ್ ನವೀನ್
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ