AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Himachal Pradesh Snowfall: ಹಿಮಾಚಲ ಪ್ರದೇಶದಲ್ಲಿ ಭಾರೀ ಹಿಮಪಾತ; 3 ರಾಷ್ಟ್ರೀಯ ಹೆದ್ದಾರಿ ಸೇರಿ 479 ರಸ್ತೆಗಳು ಬಂದ್

ಹಿಮಾಚಲ ಪ್ರದೇಶ ರಾಜ್ಯಾದ್ಯಂತ 697 ಟ್ರಾನ್ಸ್‌ಫಾರ್ಮರ್‌ಗಳು ಸಹ ಸ್ಥಗಿತಗೊಂಡಿವೆ. ರಸ್ತೆ ಒತ್ತುವರಿ ತೆರವು ಕಾರ್ಯ ಭರದಿಂದ ಸಾಗಿದೆ.

Himachal Pradesh Snowfall: ಹಿಮಾಚಲ ಪ್ರದೇಶದಲ್ಲಿ ಭಾರೀ ಹಿಮಪಾತ; 3 ರಾಷ್ಟ್ರೀಯ ಹೆದ್ದಾರಿ ಸೇರಿ 479 ರಸ್ತೆಗಳು ಬಂದ್
ಹಿಮಾಚಲ ಪ್ರದೇಶದಲ್ಲಿ ಹಿಮಪಾತImage Credit source: Twitter
Follow us
ಸುಷ್ಮಾ ಚಕ್ರೆ
|

Updated on: Jan 31, 2023 | 6:26 PM

ಶಿಮ್ಲಾ: ಹಿಮಾಚಲ ಪ್ರದೇಶದ (Himachal Pradesh) ಎತ್ತರದ ಪ್ರದೇಶಗಳಲ್ಲಿ ಹಿಮಪಾತದಿಂದಾಗಿ (Snowfall) 3 ರಾಷ್ಟ್ರೀಯ ಹೆದ್ದಾರಿಗಳು ಸೇರಿದಂತೆ 479 ರಸ್ತೆಗಳಲ್ಲಿ ಸಂಚಾರವನ್ನು ನಿರ್ಬಂಧಿಸಲಾಗಿದೆ. ಪ್ರಸ್ತುತ ಶಿಮ್ಲಾದಲ್ಲಿ ಗರಿಷ್ಠ 180 ರಸ್ತೆಗಳನ್ನು ಬ್ಲಾಕ್ ಮಾಡಲಾಗಿದೆ. ಅವುಗಳಲ್ಲಿ 150 ಲಾಹೌಲ್ ಮತ್ತು ಸ್ಪಿತಿಯಲ್ಲಿದ್ದು, 72 ಕಿನ್ನೌರ್‌ನಲ್ಲಿ, 35 ಕುಲುದಲ್ಲಿ, 27 ಚಂಬಾದಲ್ಲಿ, 8 ಮಂಡಿಯಲ್ಲಿ ಮತ್ತು ಕಂಗ್ರಾ ಮತ್ತು ಸಿರ್ಮೌರ್ ಜಿಲ್ಲೆಗಳಲ್ಲಿ ತಲಾ 2 ರಸ್ತೆಗಳು ಬಂದ್ ಆಗಿವೆ.

ರಾಜ್ಯ ತುರ್ತು ಕಾರ್ಯಾಚರಣೆ ಕೇಂದ್ರದ ಅಂಕಿ-ಅಂಶಗಳ ಪ್ರಕಾರ, ಹಿಮಾಚಲ ಪ್ರದೇಶ ರಾಜ್ಯಾದ್ಯಂತ 697 ಟ್ರಾನ್ಸ್‌ಫಾರ್ಮರ್‌ಗಳು ಸಹ ಸ್ಥಗಿತಗೊಂಡಿವೆ. ರಸ್ತೆ ಒತ್ತುವರಿ ತೆರವು ಕಾರ್ಯ ಭರದಿಂದ ಸಾಗಿದೆ ಎಂದು ಲೋಕೋಪಯೋಗಿ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ. ಬುಡಕಟ್ಟು ಜನಾಂಗದ ಕಿನ್ನೌರ್‌ನ ಪೂಹ್ ಮತ್ತು ಕಲ್ಪಾದಲ್ಲಿ 11 ಸೆಂ.ಮೀ ಮತ್ತು 8.6 ಸೆಂ.ಮೀ ಹಿಮಪಾತವಾಗಿದೆ. ಆದರೆ, ಶಿಮ್ಲಾ ಜಿಲ್ಲೆಯ ಖದ್ರಾಲಾದಲ್ಲಿ 6 ಸೆಂ.ಮೀ ಮತ್ತು ಕುಕುಮ್‌ಸೇರಿ ಮತ್ತು ಲಾಹೌಲ್‌ನ ಕೀಲಾಂಗ್ ಮತ್ತು ಸ್ಪಿತಿಯಲ್ಲಿ ಕ್ರಮವಾಗಿ 4.8 ಮತ್ತು 3 ಸೆಂ.ಮೀ. ಹಿಮಪಾತವಾಗಿದೆ.

ಇದನ್ನೂ ಓದಿ: Bharat Jodo Yatra: ಭಾರತ್ ಜೋಡೋ ಯಾತ್ರೆಗೆ ಹಿಮಪಾತದ ಭೀತಿ; ಕಾಂಗ್ರೆಸ್ ಚಿಂತೆ

ಮಧ್ಯ ಮತ್ತು ತಗ್ಗು ಬೆಟ್ಟಗಳ ಭಾಗಗಳಲ್ಲಿ ವ್ಯಾಪಕವಾದ ಮಧ್ಯಂತರ ಮಳೆ ಸುರಿದಿದೆ. ಚಂಬಾದಲ್ಲಿ 55.5 ಮಿ.ಮೀ ಮಳೆಯಾಗಿದ್ದು, ಧರ್ಮಶಾಲಾದಲ್ಲಿ 25.3 ಮಿ.ಮೀ, ಕಂಗ್ರಾದಲ್ಲಿ 20.6 ಮಿ.ಮೀ, ಮನಾಲಿಯಲ್ಲಿ 9 ಮಿ.ಮೀ ಮತ್ತು ಪಾಲಂಪೂರ್‌ನಲ್ಲಿ ಕ್ರಮವಾಗಿ 6.6 ಮಿ.ಮೀ ಮಳೆಯಾಗಿದೆ. ಹಿಮಾಚಲ ಪ್ರದೇಶದಲ್ಲಿ ಸರಾಸರಿ 86.2 ಮಿ.ಮೀ ಮಳೆಯಾಗಿದೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ವಿಮಾನ ದುರಂತ ಸಂಭವಿಸಿದ ಸ್ಥಳಕ್ಕೆ ಭೇಟಿ ನೀಡಿ ಮಾಹಿತಿ ಪಡೆದ ಪ್ರಧಾನಿ ಮೋದಿ
ವಿಮಾನ ದುರಂತ ಸಂಭವಿಸಿದ ಸ್ಥಳಕ್ಕೆ ಭೇಟಿ ನೀಡಿ ಮಾಹಿತಿ ಪಡೆದ ಪ್ರಧಾನಿ ಮೋದಿ
ಸಿದ್ದರಾಮಯ್ಯ ಮನೆ ಸಮೀಪವೇ ಕಳ್ಳತನ: ಕಳ್ಳನ ಕೈಚಳಕ ಸಿಸಿಟಿವಿಯಲ್ಲಿ ಸೆರೆ
ಸಿದ್ದರಾಮಯ್ಯ ಮನೆ ಸಮೀಪವೇ ಕಳ್ಳತನ: ಕಳ್ಳನ ಕೈಚಳಕ ಸಿಸಿಟಿವಿಯಲ್ಲಿ ಸೆರೆ
Daily Devotional: ಅಕ್ಷತೆ ಇಲ್ಲದ ಮನೆಯಲ್ಲಿ ಐಶ್ವರ್ಯ ಇರೋದಿಲ್ಲ ಯಾಕೆ?
Daily Devotional: ಅಕ್ಷತೆ ಇಲ್ಲದ ಮನೆಯಲ್ಲಿ ಐಶ್ವರ್ಯ ಇರೋದಿಲ್ಲ ಯಾಕೆ?
Daily Horoscope: ಈ ರಾಶಿಯವರ ವೈವಾಹಿಕ ಜೀವನದಲ್ಲಿ ಏರಿಳಿತ ಸಾಧ್ಯತೆ
Daily Horoscope: ಈ ರಾಶಿಯವರ ವೈವಾಹಿಕ ಜೀವನದಲ್ಲಿ ಏರಿಳಿತ ಸಾಧ್ಯತೆ
‘ಎಡಗೈಯೇ ಅಪಘಾತಕ್ಕೆ ಕಾರಣ’ ಸಿನಿಮಾ ಡಿಫರೆಂಟ್ ಹೇಗೆ? ವಿವರಿಸಿದ ದಿಗಂತ್
‘ಎಡಗೈಯೇ ಅಪಘಾತಕ್ಕೆ ಕಾರಣ’ ಸಿನಿಮಾ ಡಿಫರೆಂಟ್ ಹೇಗೆ? ವಿವರಿಸಿದ ದಿಗಂತ್
ಟೇಕಾಫ್​​ನಿಂದ ಪತನದವರೆಗೆ; ಏರ್ ಇಂಡಿಯಾ ವಿಮಾನದ ಕೊನೆಯ ಕ್ಷಣಗಳಿವು
ಟೇಕಾಫ್​​ನಿಂದ ಪತನದವರೆಗೆ; ಏರ್ ಇಂಡಿಯಾ ವಿಮಾನದ ಕೊನೆಯ ಕ್ಷಣಗಳಿವು
ಊಟಕ್ಕೆ ಕುಳಿತ ವೈದ್ಯಕೀಯ ವಿದ್ಯಾರ್ಥಿಗಳ ಪ್ರಾಣವನ್ನೇ ಬಲಿ ಪಡೆದ ವಿಮಾನ
ಊಟಕ್ಕೆ ಕುಳಿತ ವೈದ್ಯಕೀಯ ವಿದ್ಯಾರ್ಥಿಗಳ ಪ್ರಾಣವನ್ನೇ ಬಲಿ ಪಡೆದ ವಿಮಾನ
ತಕ್ಷಣ ಆಸ್ಪತ್ರೆಗೆ ಕರೆದುಕೊಂಡ ಹೋದ್ರೂ ಕಾಂತಾರ ಸಿನಿಮಾದ ನಟ ಬದುಕಲಿಲ್ಲ
ತಕ್ಷಣ ಆಸ್ಪತ್ರೆಗೆ ಕರೆದುಕೊಂಡ ಹೋದ್ರೂ ಕಾಂತಾರ ಸಿನಿಮಾದ ನಟ ಬದುಕಲಿಲ್ಲ
ವಿಮಾನ ಅಪಘಾತದಲ್ಲಿ ಪವಾಡದಂತೆ ಬದುಕುಳಿದ ಒಬ್ಬ ವ್ಯಕ್ತಿ!
ವಿಮಾನ ಅಪಘಾತದಲ್ಲಿ ಪವಾಡದಂತೆ ಬದುಕುಳಿದ ಒಬ್ಬ ವ್ಯಕ್ತಿ!
ಕಲ್ಯಾಣ ಕರ್ನಾಟಕಕ್ಕೆ ನಿಮ್ಮ ಕೊಡುಗೆಯೇನು ಅಂದಾಗ ಶೆಟ್ಟರ್ ಅವಕ್ಕಾದರು!
ಕಲ್ಯಾಣ ಕರ್ನಾಟಕಕ್ಕೆ ನಿಮ್ಮ ಕೊಡುಗೆಯೇನು ಅಂದಾಗ ಶೆಟ್ಟರ್ ಅವಕ್ಕಾದರು!