AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Himachal Pradesh Snowfall: ಹಿಮಾಚಲ ಪ್ರದೇಶದಲ್ಲಿ ಭಾರೀ ಹಿಮಪಾತ; 3 ರಾಷ್ಟ್ರೀಯ ಹೆದ್ದಾರಿ ಸೇರಿ 479 ರಸ್ತೆಗಳು ಬಂದ್

ಹಿಮಾಚಲ ಪ್ರದೇಶ ರಾಜ್ಯಾದ್ಯಂತ 697 ಟ್ರಾನ್ಸ್‌ಫಾರ್ಮರ್‌ಗಳು ಸಹ ಸ್ಥಗಿತಗೊಂಡಿವೆ. ರಸ್ತೆ ಒತ್ತುವರಿ ತೆರವು ಕಾರ್ಯ ಭರದಿಂದ ಸಾಗಿದೆ.

Himachal Pradesh Snowfall: ಹಿಮಾಚಲ ಪ್ರದೇಶದಲ್ಲಿ ಭಾರೀ ಹಿಮಪಾತ; 3 ರಾಷ್ಟ್ರೀಯ ಹೆದ್ದಾರಿ ಸೇರಿ 479 ರಸ್ತೆಗಳು ಬಂದ್
ಹಿಮಾಚಲ ಪ್ರದೇಶದಲ್ಲಿ ಹಿಮಪಾತImage Credit source: Twitter
ಸುಷ್ಮಾ ಚಕ್ರೆ
|

Updated on: Jan 31, 2023 | 6:26 PM

Share

ಶಿಮ್ಲಾ: ಹಿಮಾಚಲ ಪ್ರದೇಶದ (Himachal Pradesh) ಎತ್ತರದ ಪ್ರದೇಶಗಳಲ್ಲಿ ಹಿಮಪಾತದಿಂದಾಗಿ (Snowfall) 3 ರಾಷ್ಟ್ರೀಯ ಹೆದ್ದಾರಿಗಳು ಸೇರಿದಂತೆ 479 ರಸ್ತೆಗಳಲ್ಲಿ ಸಂಚಾರವನ್ನು ನಿರ್ಬಂಧಿಸಲಾಗಿದೆ. ಪ್ರಸ್ತುತ ಶಿಮ್ಲಾದಲ್ಲಿ ಗರಿಷ್ಠ 180 ರಸ್ತೆಗಳನ್ನು ಬ್ಲಾಕ್ ಮಾಡಲಾಗಿದೆ. ಅವುಗಳಲ್ಲಿ 150 ಲಾಹೌಲ್ ಮತ್ತು ಸ್ಪಿತಿಯಲ್ಲಿದ್ದು, 72 ಕಿನ್ನೌರ್‌ನಲ್ಲಿ, 35 ಕುಲುದಲ್ಲಿ, 27 ಚಂಬಾದಲ್ಲಿ, 8 ಮಂಡಿಯಲ್ಲಿ ಮತ್ತು ಕಂಗ್ರಾ ಮತ್ತು ಸಿರ್ಮೌರ್ ಜಿಲ್ಲೆಗಳಲ್ಲಿ ತಲಾ 2 ರಸ್ತೆಗಳು ಬಂದ್ ಆಗಿವೆ.

ರಾಜ್ಯ ತುರ್ತು ಕಾರ್ಯಾಚರಣೆ ಕೇಂದ್ರದ ಅಂಕಿ-ಅಂಶಗಳ ಪ್ರಕಾರ, ಹಿಮಾಚಲ ಪ್ರದೇಶ ರಾಜ್ಯಾದ್ಯಂತ 697 ಟ್ರಾನ್ಸ್‌ಫಾರ್ಮರ್‌ಗಳು ಸಹ ಸ್ಥಗಿತಗೊಂಡಿವೆ. ರಸ್ತೆ ಒತ್ತುವರಿ ತೆರವು ಕಾರ್ಯ ಭರದಿಂದ ಸಾಗಿದೆ ಎಂದು ಲೋಕೋಪಯೋಗಿ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ. ಬುಡಕಟ್ಟು ಜನಾಂಗದ ಕಿನ್ನೌರ್‌ನ ಪೂಹ್ ಮತ್ತು ಕಲ್ಪಾದಲ್ಲಿ 11 ಸೆಂ.ಮೀ ಮತ್ತು 8.6 ಸೆಂ.ಮೀ ಹಿಮಪಾತವಾಗಿದೆ. ಆದರೆ, ಶಿಮ್ಲಾ ಜಿಲ್ಲೆಯ ಖದ್ರಾಲಾದಲ್ಲಿ 6 ಸೆಂ.ಮೀ ಮತ್ತು ಕುಕುಮ್‌ಸೇರಿ ಮತ್ತು ಲಾಹೌಲ್‌ನ ಕೀಲಾಂಗ್ ಮತ್ತು ಸ್ಪಿತಿಯಲ್ಲಿ ಕ್ರಮವಾಗಿ 4.8 ಮತ್ತು 3 ಸೆಂ.ಮೀ. ಹಿಮಪಾತವಾಗಿದೆ.

ಇದನ್ನೂ ಓದಿ: Bharat Jodo Yatra: ಭಾರತ್ ಜೋಡೋ ಯಾತ್ರೆಗೆ ಹಿಮಪಾತದ ಭೀತಿ; ಕಾಂಗ್ರೆಸ್ ಚಿಂತೆ

ಮಧ್ಯ ಮತ್ತು ತಗ್ಗು ಬೆಟ್ಟಗಳ ಭಾಗಗಳಲ್ಲಿ ವ್ಯಾಪಕವಾದ ಮಧ್ಯಂತರ ಮಳೆ ಸುರಿದಿದೆ. ಚಂಬಾದಲ್ಲಿ 55.5 ಮಿ.ಮೀ ಮಳೆಯಾಗಿದ್ದು, ಧರ್ಮಶಾಲಾದಲ್ಲಿ 25.3 ಮಿ.ಮೀ, ಕಂಗ್ರಾದಲ್ಲಿ 20.6 ಮಿ.ಮೀ, ಮನಾಲಿಯಲ್ಲಿ 9 ಮಿ.ಮೀ ಮತ್ತು ಪಾಲಂಪೂರ್‌ನಲ್ಲಿ ಕ್ರಮವಾಗಿ 6.6 ಮಿ.ಮೀ ಮಳೆಯಾಗಿದೆ. ಹಿಮಾಚಲ ಪ್ರದೇಶದಲ್ಲಿ ಸರಾಸರಿ 86.2 ಮಿ.ಮೀ ಮಳೆಯಾಗಿದೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!