AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Himachal Pradesh Snowfall: ಹಿಮಾಚಲ ಪ್ರದೇಶದಲ್ಲಿ ಭಾರೀ ಹಿಮಪಾತ; 3 ರಾಷ್ಟ್ರೀಯ ಹೆದ್ದಾರಿ ಸೇರಿ 479 ರಸ್ತೆಗಳು ಬಂದ್

ಹಿಮಾಚಲ ಪ್ರದೇಶ ರಾಜ್ಯಾದ್ಯಂತ 697 ಟ್ರಾನ್ಸ್‌ಫಾರ್ಮರ್‌ಗಳು ಸಹ ಸ್ಥಗಿತಗೊಂಡಿವೆ. ರಸ್ತೆ ಒತ್ತುವರಿ ತೆರವು ಕಾರ್ಯ ಭರದಿಂದ ಸಾಗಿದೆ.

Himachal Pradesh Snowfall: ಹಿಮಾಚಲ ಪ್ರದೇಶದಲ್ಲಿ ಭಾರೀ ಹಿಮಪಾತ; 3 ರಾಷ್ಟ್ರೀಯ ಹೆದ್ದಾರಿ ಸೇರಿ 479 ರಸ್ತೆಗಳು ಬಂದ್
ಹಿಮಾಚಲ ಪ್ರದೇಶದಲ್ಲಿ ಹಿಮಪಾತImage Credit source: Twitter
ಸುಷ್ಮಾ ಚಕ್ರೆ
|

Updated on: Jan 31, 2023 | 6:26 PM

Share

ಶಿಮ್ಲಾ: ಹಿಮಾಚಲ ಪ್ರದೇಶದ (Himachal Pradesh) ಎತ್ತರದ ಪ್ರದೇಶಗಳಲ್ಲಿ ಹಿಮಪಾತದಿಂದಾಗಿ (Snowfall) 3 ರಾಷ್ಟ್ರೀಯ ಹೆದ್ದಾರಿಗಳು ಸೇರಿದಂತೆ 479 ರಸ್ತೆಗಳಲ್ಲಿ ಸಂಚಾರವನ್ನು ನಿರ್ಬಂಧಿಸಲಾಗಿದೆ. ಪ್ರಸ್ತುತ ಶಿಮ್ಲಾದಲ್ಲಿ ಗರಿಷ್ಠ 180 ರಸ್ತೆಗಳನ್ನು ಬ್ಲಾಕ್ ಮಾಡಲಾಗಿದೆ. ಅವುಗಳಲ್ಲಿ 150 ಲಾಹೌಲ್ ಮತ್ತು ಸ್ಪಿತಿಯಲ್ಲಿದ್ದು, 72 ಕಿನ್ನೌರ್‌ನಲ್ಲಿ, 35 ಕುಲುದಲ್ಲಿ, 27 ಚಂಬಾದಲ್ಲಿ, 8 ಮಂಡಿಯಲ್ಲಿ ಮತ್ತು ಕಂಗ್ರಾ ಮತ್ತು ಸಿರ್ಮೌರ್ ಜಿಲ್ಲೆಗಳಲ್ಲಿ ತಲಾ 2 ರಸ್ತೆಗಳು ಬಂದ್ ಆಗಿವೆ.

ರಾಜ್ಯ ತುರ್ತು ಕಾರ್ಯಾಚರಣೆ ಕೇಂದ್ರದ ಅಂಕಿ-ಅಂಶಗಳ ಪ್ರಕಾರ, ಹಿಮಾಚಲ ಪ್ರದೇಶ ರಾಜ್ಯಾದ್ಯಂತ 697 ಟ್ರಾನ್ಸ್‌ಫಾರ್ಮರ್‌ಗಳು ಸಹ ಸ್ಥಗಿತಗೊಂಡಿವೆ. ರಸ್ತೆ ಒತ್ತುವರಿ ತೆರವು ಕಾರ್ಯ ಭರದಿಂದ ಸಾಗಿದೆ ಎಂದು ಲೋಕೋಪಯೋಗಿ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ. ಬುಡಕಟ್ಟು ಜನಾಂಗದ ಕಿನ್ನೌರ್‌ನ ಪೂಹ್ ಮತ್ತು ಕಲ್ಪಾದಲ್ಲಿ 11 ಸೆಂ.ಮೀ ಮತ್ತು 8.6 ಸೆಂ.ಮೀ ಹಿಮಪಾತವಾಗಿದೆ. ಆದರೆ, ಶಿಮ್ಲಾ ಜಿಲ್ಲೆಯ ಖದ್ರಾಲಾದಲ್ಲಿ 6 ಸೆಂ.ಮೀ ಮತ್ತು ಕುಕುಮ್‌ಸೇರಿ ಮತ್ತು ಲಾಹೌಲ್‌ನ ಕೀಲಾಂಗ್ ಮತ್ತು ಸ್ಪಿತಿಯಲ್ಲಿ ಕ್ರಮವಾಗಿ 4.8 ಮತ್ತು 3 ಸೆಂ.ಮೀ. ಹಿಮಪಾತವಾಗಿದೆ.

ಇದನ್ನೂ ಓದಿ: Bharat Jodo Yatra: ಭಾರತ್ ಜೋಡೋ ಯಾತ್ರೆಗೆ ಹಿಮಪಾತದ ಭೀತಿ; ಕಾಂಗ್ರೆಸ್ ಚಿಂತೆ

ಮಧ್ಯ ಮತ್ತು ತಗ್ಗು ಬೆಟ್ಟಗಳ ಭಾಗಗಳಲ್ಲಿ ವ್ಯಾಪಕವಾದ ಮಧ್ಯಂತರ ಮಳೆ ಸುರಿದಿದೆ. ಚಂಬಾದಲ್ಲಿ 55.5 ಮಿ.ಮೀ ಮಳೆಯಾಗಿದ್ದು, ಧರ್ಮಶಾಲಾದಲ್ಲಿ 25.3 ಮಿ.ಮೀ, ಕಂಗ್ರಾದಲ್ಲಿ 20.6 ಮಿ.ಮೀ, ಮನಾಲಿಯಲ್ಲಿ 9 ಮಿ.ಮೀ ಮತ್ತು ಪಾಲಂಪೂರ್‌ನಲ್ಲಿ ಕ್ರಮವಾಗಿ 6.6 ಮಿ.ಮೀ ಮಳೆಯಾಗಿದೆ. ಹಿಮಾಚಲ ಪ್ರದೇಶದಲ್ಲಿ ಸರಾಸರಿ 86.2 ಮಿ.ಮೀ ಮಳೆಯಾಗಿದೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಏನು ಗ್ಯಾರಂಟಿ? ಬಿಜೆಪಿ MLC ಕಾರು ತಡೆದು ನಿಲ್ಲಿಸಿದ ಟೋಲ್ ಸಿಬ್ಬಂದಿ
ಏನು ಗ್ಯಾರಂಟಿ? ಬಿಜೆಪಿ MLC ಕಾರು ತಡೆದು ನಿಲ್ಲಿಸಿದ ಟೋಲ್ ಸಿಬ್ಬಂದಿ
ಆತನಿಗೆ 68, ಆಕೆಗೆ 58 ವರ್ಷ: ಹಾಸನದಲ್ಲಿ ವೃದ್ದರಿಬ್ಬರ ಮದುವೆ ಸಂಘರ್ಷ
ಆತನಿಗೆ 68, ಆಕೆಗೆ 58 ವರ್ಷ: ಹಾಸನದಲ್ಲಿ ವೃದ್ದರಿಬ್ಬರ ಮದುವೆ ಸಂಘರ್ಷ
ಕೋಗಿಲು ಬಳಿ 150ಕ್ಕೂ ಹೆಚ್ಚು ಅಕ್ರಮ ಮನೆಗಳು ನೆಲಸಮ: ಭುಗಿಲೆದ್ದ ಆಕ್ರೋಶ
ಕೋಗಿಲು ಬಳಿ 150ಕ್ಕೂ ಹೆಚ್ಚು ಅಕ್ರಮ ಮನೆಗಳು ನೆಲಸಮ: ಭುಗಿಲೆದ್ದ ಆಕ್ರೋಶ
ಸಿಎಂ ಕುರ್ಚಿ ಕಿತ್ತಾಟ: ಅಂತೂ ನಾಯಕರಿಗೆ ಮಹತ್ವದ ಸಂದೇಶ ಕೊಟ್ಟ ಖರ್ಗೆ
ಸಿಎಂ ಕುರ್ಚಿ ಕಿತ್ತಾಟ: ಅಂತೂ ನಾಯಕರಿಗೆ ಮಹತ್ವದ ಸಂದೇಶ ಕೊಟ್ಟ ಖರ್ಗೆ
ಮದ್ಯದ ಅಮಲಿನಲ್ಲಿ ಲಾರಿ ಚಾಲಕ 20ಕ್ಕೂ ಹೆಚ್ಚು ವಾಹನಗಳಿಗೆ ಡಿಕ್ಕಿ
ಮದ್ಯದ ಅಮಲಿನಲ್ಲಿ ಲಾರಿ ಚಾಲಕ 20ಕ್ಕೂ ಹೆಚ್ಚು ವಾಹನಗಳಿಗೆ ಡಿಕ್ಕಿ
ಗಿಲ್ಲಿಯನ್ನೇ ಹೊರಗೆ ಕಳಿಸುವ ಭ್ರಮೆಯಲ್ಲಿ ರಕ್ಷಿತಾ: ಕಾವ್ಯಾ ಖಡಕ್ ತಿರುಗೇಟು
ಗಿಲ್ಲಿಯನ್ನೇ ಹೊರಗೆ ಕಳಿಸುವ ಭ್ರಮೆಯಲ್ಲಿ ರಕ್ಷಿತಾ: ಕಾವ್ಯಾ ಖಡಕ್ ತಿರುಗೇಟು
ಟೀಮ್ ಇಂಡಿಯಾ ವಿರುದ್ಧ ಭರ್ಜರಿ ಸೆಂಚುರಿ ಸಿಡಿಸಿದ ಸಮೀರ್
ಟೀಮ್ ಇಂಡಿಯಾ ವಿರುದ್ಧ ಭರ್ಜರಿ ಸೆಂಚುರಿ ಸಿಡಿಸಿದ ಸಮೀರ್
ಮನ್ರೇಗಾ ಯೋಜನೆ ಹೆಸ್ರು ಬದಲಾವಣೆ: ಕೇಂದ್ರದ ಕ್ರಮಕ್ಕೆ AICC ಅಧ್ಯಕ್ಷ ಕಿಡಿ
ಮನ್ರೇಗಾ ಯೋಜನೆ ಹೆಸ್ರು ಬದಲಾವಣೆ: ಕೇಂದ್ರದ ಕ್ರಮಕ್ಕೆ AICC ಅಧ್ಯಕ್ಷ ಕಿಡಿ
2026 ಸಿಂಹ ರಾಶಿಯವರಿಗೆ ಹಲವು ಮಹತ್ವದ ಬದಲಾವಣೆಗಳನ್ನು ತರುವ ವರ್ಷ
2026 ಸಿಂಹ ರಾಶಿಯವರಿಗೆ ಹಲವು ಮಹತ್ವದ ಬದಲಾವಣೆಗಳನ್ನು ತರುವ ವರ್ಷ
Pulse Polio Campaign: ಮಕ್ಕಳಿಗೆ ಪೋಲಿಯೋ ಲಸಿಕೆ ಹಾಕಿದ ಡಿಕೆ ಶಿವಕುಮಾರ್
Pulse Polio Campaign: ಮಕ್ಕಳಿಗೆ ಪೋಲಿಯೋ ಲಸಿಕೆ ಹಾಕಿದ ಡಿಕೆ ಶಿವಕುಮಾರ್