Himachal Pradesh Snowfall: ಹಿಮಾಚಲ ಪ್ರದೇಶದಲ್ಲಿ ಭಾರೀ ಹಿಮಪಾತ; 3 ರಾಷ್ಟ್ರೀಯ ಹೆದ್ದಾರಿ ಸೇರಿ 479 ರಸ್ತೆಗಳು ಬಂದ್

ಹಿಮಾಚಲ ಪ್ರದೇಶ ರಾಜ್ಯಾದ್ಯಂತ 697 ಟ್ರಾನ್ಸ್‌ಫಾರ್ಮರ್‌ಗಳು ಸಹ ಸ್ಥಗಿತಗೊಂಡಿವೆ. ರಸ್ತೆ ಒತ್ತುವರಿ ತೆರವು ಕಾರ್ಯ ಭರದಿಂದ ಸಾಗಿದೆ.

Himachal Pradesh Snowfall: ಹಿಮಾಚಲ ಪ್ರದೇಶದಲ್ಲಿ ಭಾರೀ ಹಿಮಪಾತ; 3 ರಾಷ್ಟ್ರೀಯ ಹೆದ್ದಾರಿ ಸೇರಿ 479 ರಸ್ತೆಗಳು ಬಂದ್
ಹಿಮಾಚಲ ಪ್ರದೇಶದಲ್ಲಿ ಹಿಮಪಾತImage Credit source: Twitter
Follow us
|

Updated on: Jan 31, 2023 | 6:26 PM

ಶಿಮ್ಲಾ: ಹಿಮಾಚಲ ಪ್ರದೇಶದ (Himachal Pradesh) ಎತ್ತರದ ಪ್ರದೇಶಗಳಲ್ಲಿ ಹಿಮಪಾತದಿಂದಾಗಿ (Snowfall) 3 ರಾಷ್ಟ್ರೀಯ ಹೆದ್ದಾರಿಗಳು ಸೇರಿದಂತೆ 479 ರಸ್ತೆಗಳಲ್ಲಿ ಸಂಚಾರವನ್ನು ನಿರ್ಬಂಧಿಸಲಾಗಿದೆ. ಪ್ರಸ್ತುತ ಶಿಮ್ಲಾದಲ್ಲಿ ಗರಿಷ್ಠ 180 ರಸ್ತೆಗಳನ್ನು ಬ್ಲಾಕ್ ಮಾಡಲಾಗಿದೆ. ಅವುಗಳಲ್ಲಿ 150 ಲಾಹೌಲ್ ಮತ್ತು ಸ್ಪಿತಿಯಲ್ಲಿದ್ದು, 72 ಕಿನ್ನೌರ್‌ನಲ್ಲಿ, 35 ಕುಲುದಲ್ಲಿ, 27 ಚಂಬಾದಲ್ಲಿ, 8 ಮಂಡಿಯಲ್ಲಿ ಮತ್ತು ಕಂಗ್ರಾ ಮತ್ತು ಸಿರ್ಮೌರ್ ಜಿಲ್ಲೆಗಳಲ್ಲಿ ತಲಾ 2 ರಸ್ತೆಗಳು ಬಂದ್ ಆಗಿವೆ.

ರಾಜ್ಯ ತುರ್ತು ಕಾರ್ಯಾಚರಣೆ ಕೇಂದ್ರದ ಅಂಕಿ-ಅಂಶಗಳ ಪ್ರಕಾರ, ಹಿಮಾಚಲ ಪ್ರದೇಶ ರಾಜ್ಯಾದ್ಯಂತ 697 ಟ್ರಾನ್ಸ್‌ಫಾರ್ಮರ್‌ಗಳು ಸಹ ಸ್ಥಗಿತಗೊಂಡಿವೆ. ರಸ್ತೆ ಒತ್ತುವರಿ ತೆರವು ಕಾರ್ಯ ಭರದಿಂದ ಸಾಗಿದೆ ಎಂದು ಲೋಕೋಪಯೋಗಿ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ. ಬುಡಕಟ್ಟು ಜನಾಂಗದ ಕಿನ್ನೌರ್‌ನ ಪೂಹ್ ಮತ್ತು ಕಲ್ಪಾದಲ್ಲಿ 11 ಸೆಂ.ಮೀ ಮತ್ತು 8.6 ಸೆಂ.ಮೀ ಹಿಮಪಾತವಾಗಿದೆ. ಆದರೆ, ಶಿಮ್ಲಾ ಜಿಲ್ಲೆಯ ಖದ್ರಾಲಾದಲ್ಲಿ 6 ಸೆಂ.ಮೀ ಮತ್ತು ಕುಕುಮ್‌ಸೇರಿ ಮತ್ತು ಲಾಹೌಲ್‌ನ ಕೀಲಾಂಗ್ ಮತ್ತು ಸ್ಪಿತಿಯಲ್ಲಿ ಕ್ರಮವಾಗಿ 4.8 ಮತ್ತು 3 ಸೆಂ.ಮೀ. ಹಿಮಪಾತವಾಗಿದೆ.

ಇದನ್ನೂ ಓದಿ: Bharat Jodo Yatra: ಭಾರತ್ ಜೋಡೋ ಯಾತ್ರೆಗೆ ಹಿಮಪಾತದ ಭೀತಿ; ಕಾಂಗ್ರೆಸ್ ಚಿಂತೆ

ಮಧ್ಯ ಮತ್ತು ತಗ್ಗು ಬೆಟ್ಟಗಳ ಭಾಗಗಳಲ್ಲಿ ವ್ಯಾಪಕವಾದ ಮಧ್ಯಂತರ ಮಳೆ ಸುರಿದಿದೆ. ಚಂಬಾದಲ್ಲಿ 55.5 ಮಿ.ಮೀ ಮಳೆಯಾಗಿದ್ದು, ಧರ್ಮಶಾಲಾದಲ್ಲಿ 25.3 ಮಿ.ಮೀ, ಕಂಗ್ರಾದಲ್ಲಿ 20.6 ಮಿ.ಮೀ, ಮನಾಲಿಯಲ್ಲಿ 9 ಮಿ.ಮೀ ಮತ್ತು ಪಾಲಂಪೂರ್‌ನಲ್ಲಿ ಕ್ರಮವಾಗಿ 6.6 ಮಿ.ಮೀ ಮಳೆಯಾಗಿದೆ. ಹಿಮಾಚಲ ಪ್ರದೇಶದಲ್ಲಿ ಸರಾಸರಿ 86.2 ಮಿ.ಮೀ ಮಳೆಯಾಗಿದೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ
ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ
ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ
ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ
ಬಯೋಲಾಜಿಕಲ್ ವಾರ್ ರೀತಿ ಏಡ್ಸ್ ಇರುವವರನ್ನು ಬಳಸಿದ್ದಾರೆ: ಡಿಕೆ ಸುರೇಶ್​
ಬಯೋಲಾಜಿಕಲ್ ವಾರ್ ರೀತಿ ಏಡ್ಸ್ ಇರುವವರನ್ನು ಬಳಸಿದ್ದಾರೆ: ಡಿಕೆ ಸುರೇಶ್​
ಹೆಚ್​ಡಿ ಕುಮಾರಸ್ವಾಮಿ ಸುದ್ದಿಗೋಷ್ಠಿ
ಹೆಚ್​ಡಿ ಕುಮಾರಸ್ವಾಮಿ ಸುದ್ದಿಗೋಷ್ಠಿ
ನಕ್ಸಲರ ದಾಳಿಗೆ ತುತ್ತಾದ ಜನರ ಸಂಕಟ ತೆರೆದಿಡುವ ಸಾಕ್ಷ್ಯಚಿತ್ರವಿದು
ನಕ್ಸಲರ ದಾಳಿಗೆ ತುತ್ತಾದ ಜನರ ಸಂಕಟ ತೆರೆದಿಡುವ ಸಾಕ್ಷ್ಯಚಿತ್ರವಿದು
ಅಡ್ಡಲಾಗಿ ಬಿದ್ದ 10 ಚಕ್ರದ ಲಾರಿ, ರಿಂಗ್‌ ರೋಡಲ್ಲಿ ಫುಲ್ ಟ್ರಾಫಿಕ್ ಜಾಮ್
ಅಡ್ಡಲಾಗಿ ಬಿದ್ದ 10 ಚಕ್ರದ ಲಾರಿ, ರಿಂಗ್‌ ರೋಡಲ್ಲಿ ಫುಲ್ ಟ್ರಾಫಿಕ್ ಜಾಮ್
ಹೊಸ ಹಾನರ್ ಸ್ಮಾರ್ಟ್​ಫೋನ್​ನಲ್ಲಿದೆ 108 ಮೆಗಾಪಿಕ್ಸೆಲ್ ಸಖತ್ ಎಐ ಕ್ಯಾಮೆರಾ
ಹೊಸ ಹಾನರ್ ಸ್ಮಾರ್ಟ್​ಫೋನ್​ನಲ್ಲಿದೆ 108 ಮೆಗಾಪಿಕ್ಸೆಲ್ ಸಖತ್ ಎಐ ಕ್ಯಾಮೆರಾ
ಮುನಿರತ್ನ ವಿರುದ್ಧದ ಪ್ರಕರಣಗಳ ತನಿಖೆಗೆ SIT ರಚಿಸಿ: ಸಿಎಂಗೆ ಮನವಿ
ಮುನಿರತ್ನ ವಿರುದ್ಧದ ಪ್ರಕರಣಗಳ ತನಿಖೆಗೆ SIT ರಚಿಸಿ: ಸಿಎಂಗೆ ಮನವಿ
ಕಾಡಿಗೆ ಹೋಗುವ ದಾರಿ ಗೊತ್ತು ಅಂತ ಅರಣ್ಯ ಸಿಬ್ಬಂದಿ ಮೇಲೆ ತಿರುಗಿ ಬಿದ್ದ ಆನೆ
ಕಾಡಿಗೆ ಹೋಗುವ ದಾರಿ ಗೊತ್ತು ಅಂತ ಅರಣ್ಯ ಸಿಬ್ಬಂದಿ ಮೇಲೆ ತಿರುಗಿ ಬಿದ್ದ ಆನೆ
ರೈಲಿನಡಿ ಬೀಳಲಿದ್ದ ಮಹಿಳೆ ಸ್ವಲ್ಪದರಲ್ಲೇ ಬಚಾವ್
ರೈಲಿನಡಿ ಬೀಳಲಿದ್ದ ಮಹಿಳೆ ಸ್ವಲ್ಪದರಲ್ಲೇ ಬಚಾವ್