AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿಕ್ರಮಾದಿತ್ಯ ಸಿಂಗ್ ನನ್ನ ಸಹೋದರ, ರಾಜೀನಾಮೆ ಅಂಗೀಕರಿಸುವ ಪ್ರಶ್ನೆಯೇ ಇಲ್ಲ: ಹಿಮಾಚಲ ಸಿಎಂ

ಸದನ ಕಲಾಪವನ್ನು ಅನಿರ್ದಿಷ್ಟಾವಧಿವರೆಗೆ ಮುಂದೂಡುವ ಮುನ್ನ  ಹಿಮಾಚಲ ಪ್ರದೇಶ ವಿಧಾನ ಸಭೆಯು 2024-25ರ ಬಜೆಟ್ ಮತ್ತು ಸಂಬಂಧಿತ ವಿನಿಯೋಗ ಮಸೂದೆಯನ್ನು ಅಂಗೀಕರಿಸಿತು.ಹಣಕಾಸು ಖಾತೆಯನ್ನು ಹೊಂದಿರುವ ಮುಖ್ಯಮಂತ್ರಿ ಸುಖವಿಂದರ್ ಸಿಂಗ್ ಸುಖು ಅವರು ಫೆಬ್ರವರಿ 17, 2024 ರಂದು ಬಜೆಟ್ ಮಂಡಿಸಿದರು. ಫೆಬ್ರವರಿ 19 ರಿಂದ 22 ರವರೆಗೆ ನಾಲ್ಕು ದಿನಗಳ ಕಾಲ ಬಜೆಟ್ ಮೇಲಿನ ಚರ್ಚೆಗಳು ನಡೆದಿವೆ.

ವಿಕ್ರಮಾದಿತ್ಯ ಸಿಂಗ್ ನನ್ನ ಸಹೋದರ, ರಾಜೀನಾಮೆ ಅಂಗೀಕರಿಸುವ ಪ್ರಶ್ನೆಯೇ ಇಲ್ಲ: ಹಿಮಾಚಲ ಸಿಎಂ
ಸುಖವಿಂದರ್ ಸಿಂಗ್ ಸುಖು
ರಶ್ಮಿ ಕಲ್ಲಕಟ್ಟ
|

Updated on:Feb 28, 2024 | 5:11 PM

Share

ಶಿಮ್ಲಾ (ಫೆಬ್ರುವರಿ 28): ಹಿಮಾಚಲ ಪ್ರದೇಶದ (Himachal Pradesh) ಮುಖ್ಯಮಂತ್ರಿ ಸುಖವಿಂದರ್ ಸಿಂಗ್ ಸುಖು (Sukhvinder Singh Sukhu) ಅವರು ಬುಧವಾರ ಕೆಲವು ಬಂಡಾಯ ಶಾಸಕರ ಮೂಲಕ ಸರ್ಕಾರಕ್ಕೆ ಸನ್ನಿಹಿತ ಬೆದರಿಕೆಯ ಬಗ್ಗೆ ಹೇಳಿಕೊಂಡಿದ್ದು ಸರ್ಕಾರವನ್ನು ಉರುಳಿಸಲು ಬಿಜೆಪಿಯ (BJP) ಪಿತೂರಿ ವಿಫಲವಾಗಿದೆ ಎಂದು ಹೇಳಿದರು. ಅದೇ ವೇಳೆ ದಿವಂಗತ ವೀರಭದ್ರ ಸಿಂಗ್ ಅವರ ಪುತ್ರ ಹಿಮಾಚಲ ಪ್ರದೇಶದ ಸಚಿವ ವಿಕ್ರಮಾದಿತ್ಯ ಸಿಂಗ್ (Vikramaditya Singh) ಅವರ ರಾಜೀನಾಮೆಯನ್ನು ಅಂಗೀಕರಿಸುವ ಪ್ರಶ್ನೆಯೇ ಇಲ್ಲ ಎಂದು ಸುಖು ಹೇಳಿದರು. ವಿಕ್ರಮಾದಿತ್ಯ ಸಿಂಗ್ ನನ್ನ ಕಿರಿಯ ಸಹೋದರನಿದ್ದಂತೆ. ಅವರ ಎಲ್ಲಾ ಸಮಸ್ಯೆಗಳನ್ನು ಪರಿಹರಿಸಲಾಗುವುದು ಎಂದು ಸುಖು ಹೇಳಿದ್ದಾರೆ.

ಸದನ ಕಲಾಪವನ್ನು ಅನಿರ್ದಿಷ್ಟಾವಧಿವರೆಗೆ ಮುಂದೂಡುವ ಮುನ್ನ  ಹಿಮಾಚಲ ಪ್ರದೇಶ ವಿಧಾನ ಸಭೆಯು 2024-25ರ ಬಜೆಟ್ ಮತ್ತು ಸಂಬಂಧಿತ ವಿನಿಯೋಗ ಮಸೂದೆಯನ್ನು ಅಂಗೀಕರಿಸಿತು. ಮಂಗಳವಾರ ನಡೆದ ರಾಜ್ಯಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಅಭಿಷೇಕ್ ಮನು ಸಿಂಘ್ವಿ ಅವರ ಸೋಲು ಮತ್ತು ಸುಖು ಸಂಪುಟದಿಂದ ಲೋಕೋಪಯೋಗಿ ಸಚಿವ ವಿಕ್ರಮಾದಿತ್ಯ ಸಿಂಗ್ ರಾಜೀನಾಮೆ ಘೋಷಿಸಿದ ನಂತರ ರಾಜಕೀಯ ಸನ್ನಿವೇಶವು ನಾಟಕೀಯವಾಗಿ ಬದಲಾದ ಕಾರಣ ವಿಧಾನಸಭೆಯನ್ನು ನಿಗದಿತ ದಿನಕ್ಕಿಂತ ಒಂದು ದಿನ ಮುಂಚಿತವಾಗಿ ಮುಂದೂಡಲಾಯಿತು.

ಹಣಕಾಸು ಖಾತೆಯನ್ನು ಹೊಂದಿರುವ ಮುಖ್ಯಮಂತ್ರಿ ಸುಖವಿಂದರ್ ಸಿಂಗ್ ಸುಖು ಅವರು ಫೆಬ್ರವರಿ 17, 2024 ರಂದು ಬಜೆಟ್ ಮಂಡಿಸಿದರು. ಫೆಬ್ರವರಿ 19 ರಿಂದ 22 ರವರೆಗೆ ನಾಲ್ಕು ದಿನಗಳ ಕಾಲ ಬಜೆಟ್ ಮೇಲಿನ ಚರ್ಚೆಗಳು ನಡೆದಿವೆ.

ಇದನ್ನೂ ಓದಿ: ಯಾರೂ ನನಗೆ ರಾಜೀನಾಮೆ ನೀಡುವಂತೆ ಕೇಳಿಲ್ಲ, ನಾನೂ ಕೊಟ್ಟಿಲ್ಲ: ಹಿಮಾಚಲ ಸಿಎಂ ಸುಖು

ಹಿಮಾಚಲ ಪ್ರದೇಶದ ಬಿಕ್ಕಟ್ಟು: ಕಳೆದ 24 ಗಂಟೆಗಳಲ್ಲಿ ಏನೇನಾಯ್ತು?

  1. ಮಂಗಳವಾರ ನಡೆದ ರಾಜ್ಯಸಭಾ ಚುನಾವಣೆಯಲ್ಲಿ ಆರು ಕಾಂಗ್ರೆಸ್ ಶಾಸಕರು ಅಡ್ಡ ಮತದಾನ ಮಾಡಿದರು. ಮಂಗಳವಾರ ಹರ್ಯಾಣದ ಹೋಟೆಲ್‌ನಲ್ಲಿ ತಂಗಿದ್ದ ಅವರು ಬಜೆಟ್ ಅಧಿವೇಶನದಲ್ಲಿ ಭಾಗವಹಿಸಲು ಬುಧವಾರ ಶಿಮ್ಲಾಕ್ಕೆ ಮರಳಿದರು.
  2.  ಹಿಮಾಚಲ ಪ್ರದೇಶದ ಕಾಂಗ್ರೆಸ್ ಸರ್ಕಾರಕ್ಕೆ ಅಡ್ಡ ಮತದಾನವು ಸವಾಲನ್ನು ಎಸೆದಿದೆ, ಏಕೆಂದರೆ ಪಕ್ಷದ ಶಾಸಕರ ಬಂಡಾಯವು ವಿಧಾನಸಭೆಯಲ್ಲಿ ಪಕ್ಷವು ತನ್ನ ಬಹುಮತವನ್ನು ಕಳೆದುಕೊಂಡಿತು.
  3. ವಿಕ್ರಮಾದಿತ್ಯ ಸಿಂಗ್ ಬುಧವಾರ ಸುಖು ಅವರ ಸಂಪುಟಕ್ಕೆ ರಾಜೀನಾಮೆ ನೀಡಿದ್ದು, ಸರ್ಕಾರವು ತನ್ನ ದಿವಂಗತ ತಂದೆಗೆ ಅಗೌರವ ತೋರಿಸಿದೆ ಎಂದು ದೂರಿದ್ದಾರೆ.
  4. 2022 ರ ಚುನಾವಣೆಯಲ್ಲಿ ಕಾಂಗ್ರೆಸ್ ತನ್ನ ತಂದೆಯ ಹೆಸರಿನಲ್ಲಿ ಗೆದ್ದಿದೆ ಆದರೆ ವೀರಭದ್ರ ಸಿಂಗ್ ಅವರ ಪ್ರತಿಮೆಯನ್ನು ಸ್ಥಾಪಿಸಲು ಭೂಮಿಯನ್ನು ಹುಡುಕಲು ಸಾಧ್ಯವಾಗಲಿಲ್ಲ ಎಂದು ವಿಕ್ರಮಾದಿತ್ಯ ಸಿಂಗ್ ಹೇಳಿದರು.
  5. ಕಲಾಪಕ್ಕೆ ಅಡ್ಡಿಪಡಿಸಿದ ಆರೋಪದ ಮೇಲೆ 15 ಶಾಸಕರನ್ನು ಸ್ಪೀಕರ್ ಅಮಾನತು ಮಾಡಿದ ನಂತರ ವಿಧಾನಸಭೆಯ ಕಲಾಪ ಗೊಂದಲಕ್ಕೆ ತೆರೆಬಿದ್ದಿದೆ. ಅವರು ಸದನದಿಂದ ಹೊರಬರಲು ನಿರಾಕರಿಸಿದರು ಮತ್ತು ಬಲವಂತವಾಗಿ ವಿಧಾನಸಭೆಯಿಂದ ಹೊರಹಾಕಲಾಯಿತು.
  6. ಸುಖು ಅವರು ತಮ್ಮ ರಾಜೀನಾಮೆಯನ್ನು ಸಲ್ಲಿಸಿದ್ದಾರೆ ಎಂಬ ಊಹಾಪೋಹಗಳು ಹರಿದಾಡಿದ್ದವು, ಅದನ್ನು ಸುಖು ಅವರು ನಾನು ರಾಜೀನಾಮೆ ನೀಡಿಲ್ಲ ಅಥವಾ ರಾಜೀನಾಮೆ ಕೇಳಿಲ್ಲ ಎಂದು ಹೇಳಿದರು.
  7. ಕಾಂಗ್ರೆಸ್ ಭೂಪೇಶ್ ಬಘೇಲ್, ಡಿಕೆ ಶಿವಕುಮಾರ್ ಮತ್ತು ಭೂಪಿಂದರ್ ಹೂಡಾ ಅವರನ್ನು ವೀಕ್ಷಕರಾಗಿ ಶಿಮ್ಲಾಕ್ಕೆ ಕಳುಹಿಸಿದೆ. ಪಕ್ಷದ ಎಲ್ಲ ಶಾಸಕರೊಂದಿಗೆ ಮಾತನಾಡಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರಿಗೆ ವರದಿ ಸಲ್ಲಿಸಲಾಗುವುದು.
  8. ಸಂಸ್ಥೆಯು ವ್ಯಕ್ತಿಗಳಿಗಿಂತ ಮೇಲಿರುವ ಕಾರಣ ಅಗತ್ಯವಿದ್ದಲ್ಲಿ ಕೆಲವು ಕಠಿಣ ನಿರ್ಧಾರಗಳನ್ನು ತೆಗೆದುಕೊಳ್ಳಲು ಪಕ್ಷವು ಹಿಂಜರಿಯುವುದಿಲ್ಲ ಎಂದು ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್ ಹೇಳಿದ್ದಾರೆ. ಅಡ್ಡ ಮತದಾನ ದುರದೃಷ್ಟಕರವಾಗಿದ್ದು, ಪಕ್ಷವು ಅದನ್ನು ಹೊರತುಪಡಿಸಿ ನೋಡುತ್ತಿಲ್ಲ ಎಂದು ಜೈರಾಮ್ ರಮೇಶ್ ಹೇಳಿದ್ದಾರೆ.
  9. ರಾಜ್ಯಸಭಾ ಚುನಾವಣೆಯಲ್ಲಿ ಅಭಿಷೇಕ್ ಮನು ಸಿಂಘ್ವಿ ಸೋಲಿಗೆ ಕಾರಣವಾದ ಅಡ್ಡ ಮತದಾನ ಮಾಡಿದ ಆರು ಶಾಸಕರನ್ನು ಅನರ್ಹಗೊಳಿಸುವ ವಿಚಾರಣೆ ನಡೆಯುತ್ತಿದೆ.
  10. ಅಡ್ಡ ಮತದಾನ ಮಾಡಿದ ಶಾಸಕರೊಬ್ಬರು ತಮ್ಮ ಬಳಿ ಕ್ಷಮೆ ಯಾಚಿಸಿದ್ದಾರೆ ಎಂದು ಸುಖು ಹೇಳಿದ್ದಾರೆ. “ನಾನು ಅವರ ಹೆಸರನ್ನು ಬಹಿರಂಗಪಡಿಸುವುದಿಲ್ಲ. ಆದರೆ ಸರ್ಕಾರವನ್ನು ಉರುಳಿಸುವ ಪಿತೂರಿ ವಿಫಲವಾಗಿದೆ,” ಸುಖು ಹೇಳಿದರು.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 5:10 pm, Wed, 28 February 24

ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಕಾಡಾನೆಗಳ ಹಿಂಡು ಡ್ರೋನ್ ಕ್ಯಾಮರಾದಲ್ಲಿ ಸೆರೆ
ಕಾಡಾನೆಗಳ ಹಿಂಡು ಡ್ರೋನ್ ಕ್ಯಾಮರಾದಲ್ಲಿ ಸೆರೆ
Video: ಹಾಸ್ಟೆಲ್​ನಲ್ಲಿ ಮಗನ ಕಾಲಿಗೆ ಸರಪಳಿ ಹಾಕಿ ಕೂರಿಸಿದ ತಂದೆ
Video: ಹಾಸ್ಟೆಲ್​ನಲ್ಲಿ ಮಗನ ಕಾಲಿಗೆ ಸರಪಳಿ ಹಾಕಿ ಕೂರಿಸಿದ ತಂದೆ