AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹಿಮಂತ ಬಿಸ್ವ ಶರ್ಮಾ ಅಸ್ಸಾಂ ನೂತನ ಮುಖ್ಯಮಂತ್ರಿ, ನಾಳೆ ಪ್ರಮಾಣ ವಚನ ಸ್ವೀಕಾರ

Himanta Biswa Sarma: ಅಸ್ಸಾಂನ ನೂತನ ಮುಖ್ಯಮಂತ್ರಿಯಾಗಿ ಹಿಮಂತ ಬಿಸ್ವ ಶರ್ಮಾ ಅವರನ್ನು ಬಿಜೆಪಿ ಹೈಕಮಾಂಡ್ ಆಯ್ಕೆ ಮಾಡಿದೆ. ಭಾನುವಾರ ಮಧ್ಯಾಹ್ನ ಕೇಂದ್ರ ಸಚಿವ ನರೇಂದ್ರಸಿಂಗ್ ತೋಮರ್ ನೂತನ ಮುಖ್ಯಮಂತ್ರಿಯ ಹೆಸರು ಘೋಷಣೆ ಮಾಡಿದ್ದಾರೆ.

ಹಿಮಂತ ಬಿಸ್ವ ಶರ್ಮಾ ಅಸ್ಸಾಂ ನೂತನ ಮುಖ್ಯಮಂತ್ರಿ, ನಾಳೆ ಪ್ರಮಾಣ ವಚನ ಸ್ವೀಕಾರ
ಹಿಮಂತ ಬಿಸ್ವ ಶರ್ಮಾ
ರಶ್ಮಿ ಕಲ್ಲಕಟ್ಟ
|

Updated on:May 09, 2021 | 5:27 PM

Share

ಗುವಾಹಟಿ: ಅಸ್ಸಾಂನ ನೂತನ ಮುಖ್ಯಮಂತ್ರಿಯಾಗಿ ಹಿಮಂತ ಬಿಸ್ವ ಶರ್ಮಾ ಅವರನ್ನು ಬಿಜೆಪಿ ಹೈಕಮಾಂಡ್ ಆಯ್ಕೆ ಮಾಡಿದೆ. ಭಾನುವಾರ ಮಧ್ಯಾಹ್ನ ಕೇಂದ್ರ ಸಚಿವ ನರೇಂದ್ರಸಿಂಗ್ ತೋಮರ್ ನೂತನ ಮುಖ್ಯಮಂತ್ರಿಯ ಹೆಸರು ಘೋಷಣೆ ಮಾಡಿದ್ದಾರೆ. ಇಂದು ಗುವಾಹಟಿಯಲ್ಲಿ ಶಾಸಕಾಂಗದ ಪಕ್ಷ ಸಭೆ ನಡೆದ ನಂತರ ಮುಖ್ಯಮಂತ್ರಿಯಾಗಿ ಶರ್ಮಾ ಅವರನ್ನು ಆಯ್ಕೆ ಮಾಡಲಾಗಿದೆ.  ನಾಳೆ  ಪ್ರಮಾಣ ವಚನ ಸ್ವೀಕಾರ ಸಮಾರಂಭ ನಡೆಯಲಿದೆ.

2014 ರ ಚುನಾನಣೆಗೆ ಮುನ್ನ ಬಿಜೆಪಿ ಸೇರಿದವರಾಗಿದ್ದಾರೆ ಶರ್ಮಾ. ಈಶಾನ್ಯ ಪ್ರದೇಶಗಳಲ್ಲಿ ಪಕ್ಷದ ಮುಖ್ಯ ಟ್ರಬಲ್ ಶೂಟರ್ ಆಗಿದ್ದಾರೆ ಇವರು. ಕಳೆದ ತಿಂಗಳು ಹಿಂದೂಸ್ತಾನ್ ಟೈಮ್ಸ್ ನಡೆಸಿದ ಸಂದರ್ಶನದಲ್ಲಿ ನೀವು ಮುಖ್ಯಮಂತ್ರಿಯಾಗುತ್ತಿದ್ದೀರಾ ಎಂದು ಕೇಳಿದಾಗ ಅಂತಿಮ ನಿರ್ಧಾರ ಪ್ರಧಾನಿ ನರೇಂದ್ರ ಮೋದಿ ಮತ್ತು ಕೇಂದ್ರ ಗೃಹ ಸಚಿವರದ್ದಾಗಿರುತ್ತದೆ ಎಂದು ಹೇಳಿದ್ದರು.

ಅಸ್ಸಾಂನ ಮುಖ್ಯಮಂತ್ರಿಯಾಗಿದ್ದ ಸರ್ಬಾನಂದ ಸೋನೊವಾಲ್ ನಂತರ ಈಶಾನ್ಯ ರಾಜ್ಯದಲ್ಲಿ ಮುಖ್ಯಮಂತ್ರಿ ಗಾದಿಯೇರಿದ ಎರಡನೇ ಬಿಜೆಪಿ ನಾಯಕರಾಗಿದ್ದಾರೆ ಶರ್ಮಾ.

ಈ ಹಿಂದೆ ಕಾಂಗ್ರೆಸ್ ನಾಯಕರಾಗಿದ್ದ ಶರ್ಮಾ ಅಸ್ಸಾಂನಲ್ಲಿ ಬಿಜೆಪಿ ಎರಡನೇ ಬಾರಿ ಅಧಿಕಾರಕ್ಕೇರಲು ಶ್ರಮವಹಿಸಿದರು. ಚುನಾವಣಾ ಆಯೋಗದ ಮಾಹಿತಿ ಪ್ರಕಾರ ಅಸ್ಸಾಂ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ 60 ಸೀಟುಗಳನ್ನು ಗಳಿಸಿದೆ. 126 ಸೀಟುಗಳಿರುವ ವಿಧಾನಸಭೆಯಲ್ಲಿ ಮೈತ್ರಿ ಪಕ್ಷಗೊಳೊಂದಿಗೆ ಬಿಜೆಪಿ 75 ಸೀಟುಗಳನ್ನು ಗಳಿಸಿ ಎರಡನೇ ಬಾರಿ ಅಧಿಕಾರಕ್ಕೇರಿದೆ.  ಬಿಜೆಪಿ ಮೈತ್ರಿ ಪಕ್ಷಗಳಾದ ಅಸೋಮ್ ಗಣ ಪರಿಷತ್ (ಎಜಿಪಿ) ಮತ್ತು ಯುನೈಟೆಡ್ ಪೀಪಲ್ಸ್ ಪಾರ್ಟಿ ಲಿಬರಲ್ (ಯುಪಿಪಿಎಲ್) ಕ್ರಮವಾಗಿ 9 ಮತ್ತು 6 ಸ್ಥಾನಗಳನ್ನು ಗೆದ್ದಿವೆ .

ಶನಿವಾರ ಹಾಲಿ ಮುಖ್ಯಮಂತ್ರಿ ಸರ್ಬಾನಂದ ಸೋನೊವಾಲ್ ಮತ್ತು ಹಿಮಂತ ಬಿಸ್ವ ಶರ್ಮಾ ಅವರು ಕೇಂದ್ರ ಗೃಹ ಸಚಿವ ಅಮಿತ್ ಶಾ, ಬಿಜೆಪಿ ಅಧ್ಯಕ್ಷ ಜೆ.ಪಿ. ನಡ್ಡಾ ಮತ್ತು ಪಕ್ಷದ ಪ್ರಧಾನ ಕಾರ್ಯದರ್ಶಿ ಬಿ.ಎಲ್.ಸಂತೋಷ್ ಅವರನ್ನು ಭೇಟಿ ಮಾಡಿದ್ದರು. ನಡ್ಡಾ ಅವರ ಮನೆಯಲ್ಲಿ ಎರಡು ಸುತ್ತಿನ ಸಭೆ ನಡೆದಿದೆ. ಸಭೆ ಮುಗಿದ ನಂತರ ಸೋನೊವಾಲ್ ಮತ್ತು ಶರ್ಮಾ ವಿಶೇಷ ವಿಮಾನ ಮೂಲಕ ರಾತ್ರಿ ಗುವಾಹಟಿಗೆ ತಲುಪಿದ್ದರು.

(Himanta Biswa Sarma chosen as next chief minister of Assam announcement made by Union minister Narendra Singh Tomar)

ಇದನ್ನೂ ಓದಿ: ಸರ್ಬಾನಂದ ಸೋನೊವಾಲ್ ಅಥವಾ ಹಿಮಾಂತ ಬಿಸ್ವ ಶರ್ಮಾ: ಅಸ್ಸಾಂ ಮುಖ್ಯಮಂತ್ರಿ ಸ್ಥಾನ ಯಾರಿಗೆ?

ಕೊರೊನಾ-ಕೊವಿಡ್​ 19 ಸ್ಪೆಲ್ಲಿಂಗ್ ಬದಲಿಸಿದರೆ ಸೋಂಕು ನಿರ್ಮೂಲನ ಖಚಿತ; ವೈರಲ್ ಆಗುತ್ತಿದೆ ಸಂಖ್ಯಾಶಾಸ್ತ್ರಜ್ಞನ ಜಾಹೀರಾತು

Published On - 2:07 pm, Sun, 9 May 21

Follow Us
ಕೇದಾರನಾಥಕ್ಕೆ ಹೊರಟಿದ್ದೀರಾ? ಮೊದಲ ದಿನವೇ ಭಕ್ತಸಾಗರದಿಂದ ಕಾಲ್ತುಳಿತ
ಕೇದಾರನಾಥಕ್ಕೆ ಹೊರಟಿದ್ದೀರಾ? ಮೊದಲ ದಿನವೇ ಭಕ್ತಸಾಗರದಿಂದ ಕಾಲ್ತುಳಿತ
20 ಎಸೆತಗಳಲ್ಲಿ ಅರ್ಧಶತಕ ಚಚ್ಚಿದ ದೇವದತ್ ಪಡಿಕ್ಕಲ್
20 ಎಸೆತಗಳಲ್ಲಿ ಅರ್ಧಶತಕ ಚಚ್ಚಿದ ದೇವದತ್ ಪಡಿಕ್ಕಲ್
ಬಿಸಿಲಿಗೆ ಕೆಂಗಟ್ಟ ಚಿಕ್ಕಮಗಳೂರು ಜನರಿಗೆ ತಂಪೆರೆದ ವರುಣ
ಬಿಸಿಲಿಗೆ ಕೆಂಗಟ್ಟ ಚಿಕ್ಕಮಗಳೂರು ಜನರಿಗೆ ತಂಪೆರೆದ ವರುಣ
ಅತ್ತೆಯ ಸಪೋರ್ಟ್ ಜತೆಗೆ ಎರಡು ಮಕ್ಕಳನ್ನ ಕಟ್ಟಿಕೊಂಡು ಚಿನ್ನದ ಗೆದ್ದ ಅಯಿಷಾ
ಅತ್ತೆಯ ಸಪೋರ್ಟ್ ಜತೆಗೆ ಎರಡು ಮಕ್ಕಳನ್ನ ಕಟ್ಟಿಕೊಂಡು ಚಿನ್ನದ ಗೆದ್ದ ಅಯಿಷಾ
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಬಾಗಲಕೋಟೆ ವಿವಿ ಘಟಿಕೋತ್ಸವ: ರೈತನ ಮಗಳಿಗೆ ಗೋಲ್ಡ್​​ ಮೆಡಲ್
ಬಾಗಲಕೋಟೆ ವಿವಿ ಘಟಿಕೋತ್ಸವ: ರೈತನ ಮಗಳಿಗೆ ಗೋಲ್ಡ್​​ ಮೆಡಲ್