AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚಂಪೈ ಸೊರೇನ್ ಜಾರ್ಖಂಡ್ ಪೊಲೀಸರ ಕಣ್ಗಾವಲಿನಲ್ಲಿದ್ದರು: ಹಿಮಂತ ಬಿಸ್ವಾ ಶರ್ಮಾ

ಚಂಪೈ ಸೊರೇನ್ ಅವರು ಇಂದು(ಶುಕ್ರವಾರ) ರಾಂಚಿಯಲ್ಲಿ ಬಿಜೆಪಿಗೆ ಸೇರ್ಪಡೆಯಾಗಿದ್ದಾರೆ. ಚಂಪೈ ಸೊರೇನ್ ಅವರನ್ನು ಜಾರ್ಖಂಡ್ ಪೊಲೀಸರು ಆರು ತಿಂಗಳ ಕಾಲ ನಿಗಾ ಇರಿಸಿದ್ದರು. ನಾನು ಯಾವ ಮುಖ್ಯಮಂತ್ರಿಯಿಂದಲೂ ಇಂತಹ ಉದಾಹರಣೆ ಕೇಳಿಲ್ಲ. ನಾನು ನಿಮಗೆ (ಮುಖ್ಯಮಂತ್ರಿ ಹೇಮಂತ್ ಸೊರೇನ್) ಎಚ್ಚರಿಕೆ ನೀಡುತ್ತೇನೆ, ನಾವು ಎರಡು ತಿಂಗಳ ನಂತರ ಸೂಕ್ತ ಉತ್ತರವನ್ನು ನೀಡುತ್ತೇವೆ ಎಂದ್ದಿದ್ದಾರೆ ಶರ್ಮಾ.

ಚಂಪೈ ಸೊರೇನ್ ಜಾರ್ಖಂಡ್ ಪೊಲೀಸರ ಕಣ್ಗಾವಲಿನಲ್ಲಿದ್ದರು: ಹಿಮಂತ ಬಿಸ್ವಾ ಶರ್ಮಾ
ಹಿಮಂತ ಬಿಸ್ವಾ ಶರ್ಮಾ
ರಶ್ಮಿ ಕಲ್ಲಕಟ್ಟ
|

Updated on: Aug 30, 2024 | 7:21 PM

Share

ರಾಂಚಿ ಆಗಸ್ಟ್ 30: ಜಾರ್ಖಂಡ್ ಮುಖ್ಯಮಂತ್ರಿ ಹೇಮಂತ್ ಸೊರೇನ್ (Hemant Soren), ಚಂಪೈ ಸೊರೇನ್ (Champai Soren) ಮೇಲೆ ಬೇಹುಗಾರಿಕೆ ನಡೆಸಲು ಪ್ರಯತ್ನಿಸಿದ್ದಾರೆ ಎಂದು ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ (Himanta Biswa Sarma) ಆರೋಪಿಸಿದ್ದಾರೆ. “ನಾನು ಕೂಡ ಒಂದು ರಾಜ್ಯದ ಸಿಎಂ. ನಮ್ಮ ದೇಶದ ಯಾವುದೇ ಸಿಎಂ ತನ್ನ ರಾಜ್ಯದ ಮಂತ್ರಿಗಳ ಮೇಲೆ ಕಣ್ಣಿಡಲು ಪ್ರಯತ್ನಿಸುವುದಿಲ್ಲ, ಆದರೆ ಅದನ್ನು ಹೇಮಂತ್ ಸೊರೇನ್ ಮಾಡಿದ್ದಾರೆ. ದೆಹಲಿ ಪೊಲೀಸರು ಇಬ್ಬರು ವ್ಯಕ್ತಿಗಳನ್ನು ಚಂಪೈ ಸೊರೇನ್ ಮೇಲೆ ಬೇಹುಗಾರಿಕೆ ಮಾಡಿದ್ದಕ್ಕೆ ಬಂಧಿಸಿದ್ದಾರೆ, ಆದರೆ ಹೇಮಂತ್ ಸೊರೇನ್ ಅವರನ್ನು ಭದ್ರತೆಗಾಗಿ ಕಳುಹಿಸಲಾಗಿದೆ ಎಂದು ಹೇಳಿದರು. ಹಾಗಿದ್ದಲ್ಲಿ, ಅವರ ಬಳಿ ಶಸ್ತ್ರಾಸ್ತ್ರಗಳು ಏಕೆ ಇರಲಿಲ್ಲ, ”ಎಂದು ಚಂಪೈ ಸೊರೇನ್ ಅವರು ಬಿಜೆಪಿಗೆ ಸೇರಿದ ಕಾರ್ಯಕ್ರಮವೊಂದರಲ್ಲಿ ಶರ್ಮಾ ಹೇಳಿದ್ದಾರೆ ಎಂದು ಪಿಟಿಐ ಉಲ್ಲೇಖಿಸಿದೆ.

ಚಂಪೈ ಸೊರೇನ್ ಅವರು ಇಂದು(ಶುಕ್ರವಾರ) ರಾಂಚಿಯಲ್ಲಿ ಬಿಜೆಪಿಗೆ ಸೇರ್ಪಡೆಯಾಗಿದ್ದಾರೆ. ಚಂಪೈ ಸೊರೇನ್ ಅವರನ್ನು ಜಾರ್ಖಂಡ್ ಪೊಲೀಸರು ಆರು ತಿಂಗಳ ಕಾಲ ನಿಗಾ ಇರಿಸಿದ್ದರು. ನಾನು ಯಾವ ಮುಖ್ಯಮಂತ್ರಿಯಿಂದಲೂ ಇಂತಹ ಉದಾಹರಣೆ ಕೇಳಿಲ್ಲ. ನಾನು ನಿಮಗೆ (ಮುಖ್ಯಮಂತ್ರಿ ಹೇಮಂತ್ ಸೊರೇನ್) ಎಚ್ಚರಿಕೆ ನೀಡುತ್ತೇನೆ, ನಾವು ಎರಡು ತಿಂಗಳ ನಂತರ ಸೂಕ್ತ ಉತ್ತರವನ್ನು ನೀಡುತ್ತೇವೆ ಎಂದು ಜಾರ್ಖಂಡ್‌ನ ಬಿಜೆಪಿಯ ಸಹ-ಪ್ರಭಾರಿ ಶರ್ಮಾ ಹೇಳಿದರು.

ನಾಲ್ಕು ತಿಂಗಳ ಕಾಲ ಸಿಎಂ ಆಗಿದ್ದರು ಚಂಪೈ ಸೊರೇನ್

ಹೇಮಂತ್ ಸೊರೇನ್ ಅವರ ಅನುಪಸ್ಥಿತಿಯಲ್ಲಿ ನಾಲ್ಕು ತಿಂಗಳ ಕಾಲ ಜಾರ್ಖಂಡ್‌ನ ಮುಖ್ಯಮಂತ್ರಿಯಾಗಿ ಸೊರೇನ್ ಸೇವೆ ಸಲ್ಲಿಸಿದರು, ಅವರು ಜನವರಿ 31 ರಂದು ಜಾರಿ ನಿರ್ದೇಶನಾಲಯದಿಂದ (ಇಡಿ) ಬಂಧಿಸುವ ಮೊದಲು ರಾಜೀನಾಮೆ ನೀಡಿದ್ದರು. 67 ವರ್ಷದ ನಾಯಕ, ಜೆಎಂಎಂ ಸಂಸ್ಥಾಪಕ ಶಿಬು ಸೊರೇನ್ ಅವರ ನಿಕಟವರ್ತಿ ಎಂದು ಹೇಳಲಾಗಿದ್ದು, ಜೂನ್‌ನಲ್ಲಿ ಜಾರ್ಖಂಡ್ ಹೈಕೋರ್ಟ್‌ನಿಂದ ಹೇಮಂತ್ ಸೊರೇನ್ ಅವರಿಗೆ ಜಾಮೀನು ನೀಡಿದ ನಂತರ ಸಿಎಂ ಸ್ಥಾನದಿಂದ ಕೆಳಗಿಳಿಯುವಂತೆ ಕೇಳಲಾಯಿತು.

“ನನಗೆ ಕುಟುಂಬದಂತಿರುವ ಜೆಎಂಎಂ ಪಕ್ಷವನ್ನು ನಾನು ತೊರೆಯುತ್ತೇನೆ ಎಂದು ನಾನು ಎಂದಿಗೂ ಊಹಿಸಿರಲಿಲ್ಲ. ಹಿಂದಿನ ಘಟನೆಗಳ ತಿರುವು ನನ್ನನ್ನು ಬಹಳ ನೋವಿನಿಂದ ಈ ನಿರ್ಧಾರವನ್ನು ತೆಗೆದುಕೊಳ್ಳುವಂತೆ ಒತ್ತಾಯಿಸಿತು. ಪಕ್ಷ ತನ್ನ ತತ್ವದಿಂದ ಹೊರಗುಳಿದಿದೆ ಎಂದು ಹೇಳಲು ನನಗೆ ನೋವಾಗಿದೆ ”ಎಂದು ಸೊರೇನ್ ಬುಧವಾರ ಬರೆದಿದ್ದಾರೆ.

ಇದನ್ನೂ ಓದಿ: ಛತ್ರಪತಿ ಶಿವಾಜಿ ಪ್ರತಿಮೆ ಕುಸಿತ: ಮಹಾರಾಷ್ಟ್ರ ಜನತೆಯ ಕ್ಷಮೆ ಕೋರಿದ ಪ್ರಧಾನಿ ಮೋದಿ

ಬಿಜೆಪಿ ಸೇರುವ ತಮ್ಮ ನಿರ್ಧಾರವನ್ನು ಸಮರ್ಥಿಸಿಕೊಂಡ ಚಂಪೈ ಸೊರೇನ್, “ಬಾಂಗ್ಲಾದೇಶದಿಂದ ಅತಿರೇಕದ” ಒಳನುಸುಳುವಿಕೆಯಿಂದಾಗಿ ರಾಜ್ಯದ ಸಂತಾಲ್ ಪರಗಣ ಪ್ರದೇಶದಲ್ಲಿ ಬುಡಕಟ್ಟು ಜನಾಂಗದ ಗುರುತು ಮತ್ತು ಅಸ್ತಿತ್ವವು ಅಪಾಯದಲ್ಲಿದೆ ಎಂದು ಆರೋಪಿಸಿದ್ದಾರೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ದೂರುದಾರರಿಂದ ಪೇಪರ್ ಬಂಡಲ್ ತರಿಸಿದ್ದ ಪಿಸಿ ಅಮಾನತು
ದೂರುದಾರರಿಂದ ಪೇಪರ್ ಬಂಡಲ್ ತರಿಸಿದ್ದ ಪಿಸಿ ಅಮಾನತು
ದಾವಣಗೆರೆ: ಗಾಂಜಾ ಕೇಸ್​ನಲ್ಲಿ ರಿಯಲ್​ ಎಸ್ಟೇಟ್​ ಉದ್ಯಮಿ ಅರೆಸ್ಟ್
ದಾವಣಗೆರೆ: ಗಾಂಜಾ ಕೇಸ್​ನಲ್ಲಿ ರಿಯಲ್​ ಎಸ್ಟೇಟ್​ ಉದ್ಯಮಿ ಅರೆಸ್ಟ್
ಮದುವೆಯಲ್ಲಿ ಕನ್ಯಾದಾನದ ವೇಳೆ ಮಂಗನಿಂದ ಮದುಮಗಳಿಗೆ ಶಾಕ್
ಮದುವೆಯಲ್ಲಿ ಕನ್ಯಾದಾನದ ವೇಳೆ ಮಂಗನಿಂದ ಮದುಮಗಳಿಗೆ ಶಾಕ್
ಧನುಶ್ ಅನ್ನು ಇಕ್ಕಟ್ಟಿಗೆ ಸಿಲುಕಿಸಿದ ಬಿಗ್​​ಬಾಸ್: ಕಣ್ಣೀರಾದ ಮನೆ ಮಂದಿ
ಧನುಶ್ ಅನ್ನು ಇಕ್ಕಟ್ಟಿಗೆ ಸಿಲುಕಿಸಿದ ಬಿಗ್​​ಬಾಸ್: ಕಣ್ಣೀರಾದ ಮನೆ ಮಂದಿ
ಹುಬ್ಬಳ್ಳಿ ಮರ್ಯಾದೆ ಹತ್ಯೆ: ಆಸ್ಪತ್ರೆ ಬಿಲ್​ ಭರಿಸಲಾಗದೆ ಕುಟುಂಬ ಕಂಗಾಲು
ಹುಬ್ಬಳ್ಳಿ ಮರ್ಯಾದೆ ಹತ್ಯೆ: ಆಸ್ಪತ್ರೆ ಬಿಲ್​ ಭರಿಸಲಾಗದೆ ಕುಟುಂಬ ಕಂಗಾಲು
ಮನೆಗಳಲ್ಲಿ ಕಳುವು ಮಾಡಿದ್ದಲ್ಲದೆ, ಚಹಾ ಮಾಡಿ ಕುಡಿದು ಹೋದ ಕಳ್ಳರು!
ಮನೆಗಳಲ್ಲಿ ಕಳುವು ಮಾಡಿದ್ದಲ್ಲದೆ, ಚಹಾ ಮಾಡಿ ಕುಡಿದು ಹೋದ ಕಳ್ಳರು!
CM ಕುರ್ಚಿ ಕದನ:ಡಿಕೆಶಿ ಹಿಂದೆನೇ ದೆಹಲಿಗೆ ತೆರಳಿದ ಸ್ವಾಮೀಜಿ ಹೇಳಿದ್ದಿಷ್ಟು
CM ಕುರ್ಚಿ ಕದನ:ಡಿಕೆಶಿ ಹಿಂದೆನೇ ದೆಹಲಿಗೆ ತೆರಳಿದ ಸ್ವಾಮೀಜಿ ಹೇಳಿದ್ದಿಷ್ಟು
ಡಿಕೆಶಿ ದಿಲ್ಲಿಗೆ ಹೋಗುತ್ತಿದ್ದಂತೆಯೇ ಇತ್ತ ಅಹಿಂದ ಸಮಾವೇಶಕ್ಕೆ ಸಿದ್ಧತೆ
ಡಿಕೆಶಿ ದಿಲ್ಲಿಗೆ ಹೋಗುತ್ತಿದ್ದಂತೆಯೇ ಇತ್ತ ಅಹಿಂದ ಸಮಾವೇಶಕ್ಕೆ ಸಿದ್ಧತೆ
ಹುಬ್ಬಳ್ಳಿ ಮರ್ಯಾದಾ ಹತ್ಯೆ​​: ಗರ್ಭಿಣಿ ಕೊಂದ 24 ಗಂಟೆಯಲ್ಲೇ ಅರೆಸ್ಟ್​
ಹುಬ್ಬಳ್ಳಿ ಮರ್ಯಾದಾ ಹತ್ಯೆ​​: ಗರ್ಭಿಣಿ ಕೊಂದ 24 ಗಂಟೆಯಲ್ಲೇ ಅರೆಸ್ಟ್​
ಧರ್ಮದ ಸಂರಕ್ಷಕರಾಗಲು ಆರ್‌ಎಸ್‌ಎಸ್‌ಗೆ ಯಾರು ಅಧಿಕಾರ ನೀಡಿದ್ದು
ಧರ್ಮದ ಸಂರಕ್ಷಕರಾಗಲು ಆರ್‌ಎಸ್‌ಎಸ್‌ಗೆ ಯಾರು ಅಧಿಕಾರ ನೀಡಿದ್ದು