ಚಂಪೈ ಸೊರೇನ್ ಜಾರ್ಖಂಡ್ ಪೊಲೀಸರ ಕಣ್ಗಾವಲಿನಲ್ಲಿದ್ದರು: ಹಿಮಂತ ಬಿಸ್ವಾ ಶರ್ಮಾ

ಚಂಪೈ ಸೊರೇನ್ ಅವರು ಇಂದು(ಶುಕ್ರವಾರ) ರಾಂಚಿಯಲ್ಲಿ ಬಿಜೆಪಿಗೆ ಸೇರ್ಪಡೆಯಾಗಿದ್ದಾರೆ. ಚಂಪೈ ಸೊರೇನ್ ಅವರನ್ನು ಜಾರ್ಖಂಡ್ ಪೊಲೀಸರು ಆರು ತಿಂಗಳ ಕಾಲ ನಿಗಾ ಇರಿಸಿದ್ದರು. ನಾನು ಯಾವ ಮುಖ್ಯಮಂತ್ರಿಯಿಂದಲೂ ಇಂತಹ ಉದಾಹರಣೆ ಕೇಳಿಲ್ಲ. ನಾನು ನಿಮಗೆ (ಮುಖ್ಯಮಂತ್ರಿ ಹೇಮಂತ್ ಸೊರೇನ್) ಎಚ್ಚರಿಕೆ ನೀಡುತ್ತೇನೆ, ನಾವು ಎರಡು ತಿಂಗಳ ನಂತರ ಸೂಕ್ತ ಉತ್ತರವನ್ನು ನೀಡುತ್ತೇವೆ ಎಂದ್ದಿದ್ದಾರೆ ಶರ್ಮಾ.

ಚಂಪೈ ಸೊರೇನ್ ಜಾರ್ಖಂಡ್ ಪೊಲೀಸರ ಕಣ್ಗಾವಲಿನಲ್ಲಿದ್ದರು: ಹಿಮಂತ ಬಿಸ್ವಾ ಶರ್ಮಾ
ಹಿಮಂತ ಬಿಸ್ವಾ ಶರ್ಮಾ
Follow us
|

Updated on: Aug 30, 2024 | 7:21 PM

ರಾಂಚಿ ಆಗಸ್ಟ್ 30: ಜಾರ್ಖಂಡ್ ಮುಖ್ಯಮಂತ್ರಿ ಹೇಮಂತ್ ಸೊರೇನ್ (Hemant Soren), ಚಂಪೈ ಸೊರೇನ್ (Champai Soren) ಮೇಲೆ ಬೇಹುಗಾರಿಕೆ ನಡೆಸಲು ಪ್ರಯತ್ನಿಸಿದ್ದಾರೆ ಎಂದು ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ (Himanta Biswa Sarma) ಆರೋಪಿಸಿದ್ದಾರೆ. “ನಾನು ಕೂಡ ಒಂದು ರಾಜ್ಯದ ಸಿಎಂ. ನಮ್ಮ ದೇಶದ ಯಾವುದೇ ಸಿಎಂ ತನ್ನ ರಾಜ್ಯದ ಮಂತ್ರಿಗಳ ಮೇಲೆ ಕಣ್ಣಿಡಲು ಪ್ರಯತ್ನಿಸುವುದಿಲ್ಲ, ಆದರೆ ಅದನ್ನು ಹೇಮಂತ್ ಸೊರೇನ್ ಮಾಡಿದ್ದಾರೆ. ದೆಹಲಿ ಪೊಲೀಸರು ಇಬ್ಬರು ವ್ಯಕ್ತಿಗಳನ್ನು ಚಂಪೈ ಸೊರೇನ್ ಮೇಲೆ ಬೇಹುಗಾರಿಕೆ ಮಾಡಿದ್ದಕ್ಕೆ ಬಂಧಿಸಿದ್ದಾರೆ, ಆದರೆ ಹೇಮಂತ್ ಸೊರೇನ್ ಅವರನ್ನು ಭದ್ರತೆಗಾಗಿ ಕಳುಹಿಸಲಾಗಿದೆ ಎಂದು ಹೇಳಿದರು. ಹಾಗಿದ್ದಲ್ಲಿ, ಅವರ ಬಳಿ ಶಸ್ತ್ರಾಸ್ತ್ರಗಳು ಏಕೆ ಇರಲಿಲ್ಲ, ”ಎಂದು ಚಂಪೈ ಸೊರೇನ್ ಅವರು ಬಿಜೆಪಿಗೆ ಸೇರಿದ ಕಾರ್ಯಕ್ರಮವೊಂದರಲ್ಲಿ ಶರ್ಮಾ ಹೇಳಿದ್ದಾರೆ ಎಂದು ಪಿಟಿಐ ಉಲ್ಲೇಖಿಸಿದೆ.

ಚಂಪೈ ಸೊರೇನ್ ಅವರು ಇಂದು(ಶುಕ್ರವಾರ) ರಾಂಚಿಯಲ್ಲಿ ಬಿಜೆಪಿಗೆ ಸೇರ್ಪಡೆಯಾಗಿದ್ದಾರೆ. ಚಂಪೈ ಸೊರೇನ್ ಅವರನ್ನು ಜಾರ್ಖಂಡ್ ಪೊಲೀಸರು ಆರು ತಿಂಗಳ ಕಾಲ ನಿಗಾ ಇರಿಸಿದ್ದರು. ನಾನು ಯಾವ ಮುಖ್ಯಮಂತ್ರಿಯಿಂದಲೂ ಇಂತಹ ಉದಾಹರಣೆ ಕೇಳಿಲ್ಲ. ನಾನು ನಿಮಗೆ (ಮುಖ್ಯಮಂತ್ರಿ ಹೇಮಂತ್ ಸೊರೇನ್) ಎಚ್ಚರಿಕೆ ನೀಡುತ್ತೇನೆ, ನಾವು ಎರಡು ತಿಂಗಳ ನಂತರ ಸೂಕ್ತ ಉತ್ತರವನ್ನು ನೀಡುತ್ತೇವೆ ಎಂದು ಜಾರ್ಖಂಡ್‌ನ ಬಿಜೆಪಿಯ ಸಹ-ಪ್ರಭಾರಿ ಶರ್ಮಾ ಹೇಳಿದರು.

ನಾಲ್ಕು ತಿಂಗಳ ಕಾಲ ಸಿಎಂ ಆಗಿದ್ದರು ಚಂಪೈ ಸೊರೇನ್

ಹೇಮಂತ್ ಸೊರೇನ್ ಅವರ ಅನುಪಸ್ಥಿತಿಯಲ್ಲಿ ನಾಲ್ಕು ತಿಂಗಳ ಕಾಲ ಜಾರ್ಖಂಡ್‌ನ ಮುಖ್ಯಮಂತ್ರಿಯಾಗಿ ಸೊರೇನ್ ಸೇವೆ ಸಲ್ಲಿಸಿದರು, ಅವರು ಜನವರಿ 31 ರಂದು ಜಾರಿ ನಿರ್ದೇಶನಾಲಯದಿಂದ (ಇಡಿ) ಬಂಧಿಸುವ ಮೊದಲು ರಾಜೀನಾಮೆ ನೀಡಿದ್ದರು. 67 ವರ್ಷದ ನಾಯಕ, ಜೆಎಂಎಂ ಸಂಸ್ಥಾಪಕ ಶಿಬು ಸೊರೇನ್ ಅವರ ನಿಕಟವರ್ತಿ ಎಂದು ಹೇಳಲಾಗಿದ್ದು, ಜೂನ್‌ನಲ್ಲಿ ಜಾರ್ಖಂಡ್ ಹೈಕೋರ್ಟ್‌ನಿಂದ ಹೇಮಂತ್ ಸೊರೇನ್ ಅವರಿಗೆ ಜಾಮೀನು ನೀಡಿದ ನಂತರ ಸಿಎಂ ಸ್ಥಾನದಿಂದ ಕೆಳಗಿಳಿಯುವಂತೆ ಕೇಳಲಾಯಿತು.

“ನನಗೆ ಕುಟುಂಬದಂತಿರುವ ಜೆಎಂಎಂ ಪಕ್ಷವನ್ನು ನಾನು ತೊರೆಯುತ್ತೇನೆ ಎಂದು ನಾನು ಎಂದಿಗೂ ಊಹಿಸಿರಲಿಲ್ಲ. ಹಿಂದಿನ ಘಟನೆಗಳ ತಿರುವು ನನ್ನನ್ನು ಬಹಳ ನೋವಿನಿಂದ ಈ ನಿರ್ಧಾರವನ್ನು ತೆಗೆದುಕೊಳ್ಳುವಂತೆ ಒತ್ತಾಯಿಸಿತು. ಪಕ್ಷ ತನ್ನ ತತ್ವದಿಂದ ಹೊರಗುಳಿದಿದೆ ಎಂದು ಹೇಳಲು ನನಗೆ ನೋವಾಗಿದೆ ”ಎಂದು ಸೊರೇನ್ ಬುಧವಾರ ಬರೆದಿದ್ದಾರೆ.

ಇದನ್ನೂ ಓದಿ: ಛತ್ರಪತಿ ಶಿವಾಜಿ ಪ್ರತಿಮೆ ಕುಸಿತ: ಮಹಾರಾಷ್ಟ್ರ ಜನತೆಯ ಕ್ಷಮೆ ಕೋರಿದ ಪ್ರಧಾನಿ ಮೋದಿ

ಬಿಜೆಪಿ ಸೇರುವ ತಮ್ಮ ನಿರ್ಧಾರವನ್ನು ಸಮರ್ಥಿಸಿಕೊಂಡ ಚಂಪೈ ಸೊರೇನ್, “ಬಾಂಗ್ಲಾದೇಶದಿಂದ ಅತಿರೇಕದ” ಒಳನುಸುಳುವಿಕೆಯಿಂದಾಗಿ ರಾಜ್ಯದ ಸಂತಾಲ್ ಪರಗಣ ಪ್ರದೇಶದಲ್ಲಿ ಬುಡಕಟ್ಟು ಜನಾಂಗದ ಗುರುತು ಮತ್ತು ಅಸ್ತಿತ್ವವು ಅಪಾಯದಲ್ಲಿದೆ ಎಂದು ಆರೋಪಿಸಿದ್ದಾರೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಚಾಮುಂಡೇಶ್ವರಿ ತಾಯಿಗೆ ವಿಶೇಷ ಪೂಜೆ ಸಲ್ಲಿಸಿದ ನಿಖಿಲ್ ಕುಮಾರಸ್ವಾಮಿ
ಚಾಮುಂಡೇಶ್ವರಿ ತಾಯಿಗೆ ವಿಶೇಷ ಪೂಜೆ ಸಲ್ಲಿಸಿದ ನಿಖಿಲ್ ಕುಮಾರಸ್ವಾಮಿ
ಫ್ಲಿಪ್​ಕಾರ್ಟ್ ಬಿಗ್ ಬಿಲಿಯನ್ ಡೇ ಆಫರ್ ಸೇಲ್ 26ಕ್ಕೆ ಸ್ಟಾರ್ಟ್​!
ಫ್ಲಿಪ್​ಕಾರ್ಟ್ ಬಿಗ್ ಬಿಲಿಯನ್ ಡೇ ಆಫರ್ ಸೇಲ್ 26ಕ್ಕೆ ಸ್ಟಾರ್ಟ್​!
CM Siddaramaiah Press Meet Live: ಸಿಎಂ ಸಿದ್ದರಾಮಯ್ಯ ಸುದ್ದಿಗೋಷ್ಠಿ
CM Siddaramaiah Press Meet Live: ಸಿಎಂ ಸಿದ್ದರಾಮಯ್ಯ ಸುದ್ದಿಗೋಷ್ಠಿ
ಬೆಂಗಳೂರಿನ ಅನೇಕ ಕೆರೆಗಳಲ್ಲಿ ಕರಗದೇ ತೇಲುತ್ತಿವೆ ಗಣೇಶ ಮೂರ್ತಿಗಳು
ಬೆಂಗಳೂರಿನ ಅನೇಕ ಕೆರೆಗಳಲ್ಲಿ ಕರಗದೇ ತೇಲುತ್ತಿವೆ ಗಣೇಶ ಮೂರ್ತಿಗಳು
‘ಯುಐ’ ಕುರಿತು ಉಪೇಂದ್ರ ವಿಶೇಷ ಸುದ್ದಿಗೋಷ್ಠಿ; ಇಲ್ಲಿದೆ ಲೈವ್ ವಿಡಿಯೋ
‘ಯುಐ’ ಕುರಿತು ಉಪೇಂದ್ರ ವಿಶೇಷ ಸುದ್ದಿಗೋಷ್ಠಿ; ಇಲ್ಲಿದೆ ಲೈವ್ ವಿಡಿಯೋ
ಮೆಡಿಕಲ್​ಗಳಲ್ಲೂ ಸಿಂಥೆಟಿಕ್ ಡ್ರಗ್ಸ್: ಗೃಹ ಸಚಿವ ಪರಮೇಶ್ವರ್ ಹೇಳಿದ್ದೇನು?
ಮೆಡಿಕಲ್​ಗಳಲ್ಲೂ ಸಿಂಥೆಟಿಕ್ ಡ್ರಗ್ಸ್: ಗೃಹ ಸಚಿವ ಪರಮೇಶ್ವರ್ ಹೇಳಿದ್ದೇನು?
VIDEO: ಎಲ್ಲಾ ಮಸಾಲೆಗೆ ವಿರಾಟ್ ಕೊಹ್ಲಿ-ಗೌತಮ್ ಗಂಭೀರ್ ಬ್ರೇಕ್..!
VIDEO: ಎಲ್ಲಾ ಮಸಾಲೆಗೆ ವಿರಾಟ್ ಕೊಹ್ಲಿ-ಗೌತಮ್ ಗಂಭೀರ್ ಬ್ರೇಕ್..!
ಜನ್ಮದಿನದಂದು ಹೇಗಿತ್ತು ನೋಡಿ ಉಪೇಂದ್ರ ಮನೆ ಮುಂದೆ ಫ್ಯಾನ್ಸ್​ ಸಂಭ್ರಮ
ಜನ್ಮದಿನದಂದು ಹೇಗಿತ್ತು ನೋಡಿ ಉಪೇಂದ್ರ ಮನೆ ಮುಂದೆ ಫ್ಯಾನ್ಸ್​ ಸಂಭ್ರಮ
CPL 2024: ಕಾರ್ನ್​ವಾಲ್ ಕಮಾಲ್: ರಾಯಲ್ಸ್​ಗೆ ಭರ್ಜರಿ ತಂದುಕೊಟ್ಟ ರಹ್​ಕೀಮ್
CPL 2024: ಕಾರ್ನ್​ವಾಲ್ ಕಮಾಲ್: ರಾಯಲ್ಸ್​ಗೆ ಭರ್ಜರಿ ತಂದುಕೊಟ್ಟ ರಹ್​ಕೀಮ್
‘ಬೇಸರ ಆಗೇ ಆಗುತ್ತದೆ’; ದರ್ಶನ್ ಕೇಸ್ ಬಗ್ಗೆ ಉಪೇಂದ್ರ ಮಾತು  
‘ಬೇಸರ ಆಗೇ ಆಗುತ್ತದೆ’; ದರ್ಶನ್ ಕೇಸ್ ಬಗ್ಗೆ ಉಪೇಂದ್ರ ಮಾತು