AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಸ್ಸಾಂನಲ್ಲಿ ಸುಲಭವಾಗಿ ಗೆದ್ದ ಬಿಜೆಪಿಗೆ ಮುಖ್ಯಮಂತ್ರಿ ಆಯ್ಕೆಯೇ ಕಗ್ಗಂಟು; ಇಬ್ಬರು ಪ್ರಭಾವಿ ನಾಯಕರಲ್ಲಿ ಯಾರಾಗ್ತಾರೆ ಸಿಎಂ?

ಅಸ್ಸಾಂನಲ್ಲಿ ಬಿಜೆಪಿ ಗೆದ್ದಿದೆ. ಹಾಗಿದ್ದಾಗ ಮುಖ್ಯಮಂತ್ರಿ ಹುದ್ದೆ ವಿಚಾರದಲ್ಲಿ ಆಂತರಿಕ ಕಲಹ ಏಳುವುದು ಬೇಡ. ಹಾಗೆ ಆದರೆ ಪಕ್ಷಕ್ಕೆ ತೊಂದರೆಯಾಗುತ್ತದೆ. ಮತ್ತೆ ಬಂಡಾಯ ಶುರುವಾಗಬಹುದು ಎಂಬ ಆತಂಕ ಬಿಜೆಪಿ ವರಿಷ್ಠರದ್ದು.

ಅಸ್ಸಾಂನಲ್ಲಿ ಸುಲಭವಾಗಿ ಗೆದ್ದ ಬಿಜೆಪಿಗೆ ಮುಖ್ಯಮಂತ್ರಿ ಆಯ್ಕೆಯೇ ಕಗ್ಗಂಟು; ಇಬ್ಬರು ಪ್ರಭಾವಿ ನಾಯಕರಲ್ಲಿ ಯಾರಾಗ್ತಾರೆ ಸಿಎಂ?
ಅಸ್ಸಾಂನ ಬಿಜೆಪಿಯ ಇಬ್ಬರು ಪ್ರಮುಖ ನಾಯಕರು
Lakshmi Hegde
|

Updated on: May 08, 2021 | 4:47 PM

Share

ದೆಹಲಿ: ಅದೇನೋ ಬಿಜೆಪಿ ಪಕ್ಷ ಅಸ್ಸಾಂನಲ್ಲಿ ವಿಧಾನಸಭೆ ಚುನಾವಣೆಯನ್ನು ಈ ವರ್ಷವೂ ಗೆದ್ದಿದ್ದರೂ, ಮುಖ್ಯಮಂತ್ರಿ ಅಭ್ಯರ್ಥಿ ಆಯ್ಕೆ ಕಗ್ಗಂಟಾಗುವ ಎಲ್ಲ ಲಕ್ಷಣಗಳೂ ಗೋಚರಿಸುತ್ತಿದೆ. ಪ್ರಸ್ತುತ ಮುಖ್ಯಮಂತ್ರಿ ಸರ್ಬಾನಂದ ಸೋನೋವಾಲ್​ ಮತ್ತು ಬಿಜೆಪಿಯ ಹಿರಿಯ ಮುಖಂಡ ಹಿಮಂತಾ ಬಿಸ್ವಾ ಶರ್ಮಾ ನಡುವೆ ತೀವ್ರ ಪೈಪೋಟಿ ಎದ್ದಿದ್ದು, ದೆಹಲಿ ಅಂಗಳದಲ್ಲಿ ಸಭೆ ನಡೆಯುತ್ತಿದೆ. ಮುಂದಿನ ಮುಖ್ಯಮಂತ್ರಿ ಯಾರಾಗ್ತಾರೆ ಎಂಬುದು ಇನ್ನೂ ಸಹ ಖಚಿತವಾಗಿಲ್ಲ.

ದೆಹಲಿಯಲ್ಲಿರುವ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ನಿವಾಸದಲ್ಲಿ, ಅಮಿತ್ ಶಾ ನೇತೃತ್ವದಲ್ಲಿ, ಸರ್ಬಾನಂದ ಸೋನೋವಾಲ್​ ಮತ್ತು ಬಿಜೆಪಿಯ ಹಿರಿಯ ಮುಖಂಡ ಹಿಮಂತಾ ಬಿಸ್ವಾ ಶರ್ಮಾ ಜತೆ ಸಭೆ ಮಾಡಲಾಗಿದೆ. ಅಸ್ಸಾಂನ ಮುಖ್ಯಮಂತ್ರಿ ಗಾದಿಗೇರುವ ಬಗ್ಗೆ ಆಳವಾದ ಚರ್ಚೆಯೂ ನಡೆದಿದೆ. ಅದಕ್ಕೂ ಮೊದಲು ಈ ಇಬ್ಬರು ನಾಯಕರನ್ನು ಜೆ.ಪಿ.ನಡ್ಡಾ, ಅಮಿತ್ ಶಾ ಮತ್ತು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಬಿ.ಎಲ್.ಸಂತೋಷ್​ ಪ್ರತ್ಯೇಕವಾಗಿ ಭೇಟಿಯಾಗಿ ಮಾತುಕತೆ ನಡೆಸಿದ್ದಾರೆ.

ಅಸ್ಸಾಂನಲ್ಲಿ ಕಳೆದ ವರ್ಷ ಬಿಜೆಪಿ ಸರ್ಕಾರವಿದ್ದಾಗ ಸರ್ಬಾನಂದ ಸೋನೋವಾಲ್ ಮುಖ್ಯಮಂತ್ರಿಯಾಗಿದ್ದರು. ಹಾಗೇ, ಹಿಮಂತಾ ಬಿಸ್ವಾ ಶರ್ಮಾ ಆರೋಗ್ಯ ಸಚಿವರಾಗಿದ್ದರು. ಅಸ್ಸಾಂನಲ್ಲಿ ಹಿಮಂತಾ ಬಿಸ್ವಾ ಬಿಜೆಪಿಯ ಪಾಲಿಗೆ ಟ್ವಬಲ್ ಶೂಟರ್​ ಎಂದೇ ಹೇಳಬಹುದು.

ಅಸ್ಸಾಂನಲ್ಲಿ ಬಿಜೆಪಿ ಗೆದ್ದಿದೆ. ಹಾಗಿದ್ದಾಗ ಮುಖ್ಯಮಂತ್ರಿ ಹುದ್ದೆ ವಿಚಾರದಲ್ಲಿ ಆಂತರಿಕ ಕಲಹ ಏಳುವುದು ಬೇಡ. ಹಾಗೆ ಆದರೆ ಪಕ್ಷಕ್ಕೆ ತೊಂದರೆಯಾಗುತ್ತದೆ. ಮತ್ತೆ ಬಂಡಾಯ ಶುರುವಾಗಬಹುದು ಎಂಬ ಆತಂಕ ಬಿಜೆಪಿ ವರಿಷ್ಠರದ್ದು. ಹಾಗಾಗಿ ಈ ಇಬ್ಬರೂ ನಾಯಕರನ್ನು ಮುಖಾಮುಖಿ ಮಾಡುವ ದೃಷ್ಟಿಯಿಂದ ಕರೆಸಿ ಚರ್ಚೆ ನಡೆಸುತ್ತಿದ್ದಾರೆ. ಆದರೆ ಈ ಇಬ್ಬರು ನಾಯಕರಲ್ಲಿ ಮುಖ್ಯಮಂತ್ರಿಯನ್ನು ಆಯ್ಕೆ ಮಾಡುವುದು ಬಿಜೆಪಿ ಮುಖಂಡರಿಗೂ ಕಷ್ಟವಾಗುತ್ತಿದೆ ಎಂದು ಮೂಲಗಳು ತಿಳಿಸಿವೆ. ಯಾಕೆಂದರೆ ಇವರಿಬ್ಬರೂ ಅಸ್ಸಾಂನಲ್ಲಿ ಪ್ರಭಾವಿ ನಾಯಕರೇ ಹೌದು. ಪಕ್ಷ ಸಂಘಟನೆಯಲ್ಲೂ ಪ್ರಮುಖ ಪಾತ್ರ ವಹಿಸಿರುವವರು.

2106ರ ಅಸ್ಸಾಂ ವಿಧಾನಸಭೆ ಚುನಾವಣೆಯ ವೇಳೆ ಬಿಜೆಪಿ ಮುಂಚಿತವಾಗಿಯೇ ಮುಖ್ಯಮಂತ್ರಿ ಅಭ್ಯರ್ಥಿಯನ್ನಾಗಿ ಸರ್ಬಾನಂದ್ ಸೋನೊವಾಲ್​ ಹೆಸರನ್ನು ಘೋಷಿಸಿತ್ತು. ಆದರೆ ಈ ಬಾರಿ ಚುನಾವಣೆ ಪೂರ್ವದಲ್ಲಿ ಘೋಷಣೆ ಮಾಡಿರಲಿಲ್ಲ. ಸದ್ಯಕ್ಕಂತೂ ಅಸ್ಸಾಂ ಮುಖ್ಯಮಂತ್ರಿ ಯಾರಾಗ್ತಾರೆ ಎಂಬುದು ಕುತೂಹಲವಾಗಿಯೇ ಉಳಿದಿದೆ.

ಇದನ್ನೂ ಓದಿ: ಅನುಷ್ಕಾ ಶರ್ಮಾ- ವಿರಾಟ್ ಕೊಹ್ಲಿ ದೇಣಿಗೆ ಸಂಗ್ರಹ ಅಭಿಯಾನಕ್ಕೆ ಒಂದೇ ದಿನದಲ್ಲಿ ಹರಿದು ಬಂದ ಮೊತ್ತವೆಷ್ಟು ಗೊತ್ತಾ? 

Personal finance: ಸ್ಯಾಲರಿ ಓವರ್​ಡ್ರಾಫ್ಟ್ ಅಥವಾ ಕ್ರೆಡಿಟ್​ ಕಾರ್ಡ್ ಇವೆರಡರಲ್ಲಿ ಯಾವ ಸಾಲ ಉತ್ತಮ?

ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ