AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹಿಂದಿ ಓದಿದರೆ ಉದ್ಯೋಗ ಸಿಗುತ್ತದೆ ಅಂತಿದ್ರು, ಕೊಯಮತ್ತೂರಿನಲ್ಲಿ ಈಗ ಯಾರು ಪಾನಿಪುರಿ ಮಾರುತ್ತಿದ್ದಾರೆಂದು ನೋಡಿದ್ದೀರಾ?: ತಮಿಳುನಾಡು ಸಚಿವ

ಹಿಂದಿ ಓದಿದರೆ ಉದ್ಯೋಗ ಸಿಗುತ್ತದೆ ಎಂದು ಅವರು ಹೇಳುತ್ತಿದ್ದರು. ಕೊಯಮತ್ತೂರಿನಲ್ಲಿ ಈಗ ಯಾರು ಪಾನಿಪುರಿ ಮಾರುತ್ತಿದ್ದಾರೆಂದು ನೋಡಿದ್ದೀರಾ? ಅದು ಒಂದು ಕಾಲದಲ್ಲಿ ಆಗಿತ್ತು. ಈಗ ಇಂಗ್ಲಿಷ್ ಅಂತಾರಾಷ್ಟ್ರೀಯ ಭಾಷೆಯಾಗಿದೆ ಎಂದು ಪೊನ್ಮುಡಿ ಹೇಳಿದ್ದಾರೆ.

ಹಿಂದಿ ಓದಿದರೆ ಉದ್ಯೋಗ ಸಿಗುತ್ತದೆ ಅಂತಿದ್ರು, ಕೊಯಮತ್ತೂರಿನಲ್ಲಿ ಈಗ ಯಾರು ಪಾನಿಪುರಿ ಮಾರುತ್ತಿದ್ದಾರೆಂದು ನೋಡಿದ್ದೀರಾ?: ತಮಿಳುನಾಡು ಸಚಿವ
ಸಚಿವ ಕೆ.ಪೊನ್ಮುಡಿ
TV9 Web
| Edited By: ರಶ್ಮಿ ಕಲ್ಲಕಟ್ಟ|

Updated on:May 13, 2022 | 4:37 PM

Share

ಚೆನ್ನೈ: ಕೊಯಮತ್ತೂರಿನ ಭಾರತಿಯಾರ್ ವಿಶ್ವವಿದ್ಯಾನಿಲಯದಲ್ಲಿ ನಡೆದ ಘಟಿಕೋತ್ಸವ ಸಮಾರಂಭದಲ್ಲಿ ಮಾತನಾಡಿದ ತಮಿಳುನಾಡಿನ (Tamil Nadu) ಉನ್ನತ ಶಿಕ್ಷಣ ಸಚಿವ ಕೆ. ಪೊನ್ಮುಡಿ (Ponmudy) ಹಿಂದಿ ಮಾತನಾಡುವವರು ಚಾಕರಿ ಕೆಲಸಗಳಲ್ಲಿ ತೊಡಗಿಸಿಕೊಂಡಿದ್ದಾರೆ ಹಿಂದಿಗಿಂತ (Hindi) ಇಂಗ್ಲಿಷ್ ಹೆಚ್ಚು ಮೌಲ್ಯಯುತವಾಗಿದೆ ಎಂದು ಹೇಳಿದ್ದಾರೆ. ಹಿಂದಿ ಮಾತನಾಡುವವರು ಕೊಯಮತ್ತೂರಿನಲ್ಲಿ ಪಾನಿಪುರಿ ಮಾರುತ್ತಿದ್ದಾರೆ ಎಂದು ಸಚಿವರು ಹೇಳಿದ್ದಾರೆ. ತಮಿಳು ವಿದ್ಯಾರ್ಥಿಗಳು ಯಾವುದೇ ಭಾಷೆಯನ್ನು ಕಲಿಯಲು ಸಿದ್ಧರಿದ್ದಾರೆ. ಹಿಂದಿ ಐಚ್ಛಿಕವಾಗಿರಬೇಕು ಮತ್ತು ಕಡ್ಡಾಯವಾಗಿರಬಾರದು ಎಂದು ಅವರು ಹೇಳಿದರು. ಕೊಯಮತ್ತೂರಿನ ಭಾರತಿಯಾರ್ ವಿಶ್ವವಿದ್ಯಾನಿಲಯದ ವಿದ್ಯಾರ್ಥಿಗಳನ್ನು ಉದ್ದೇಶಿಸಿ ಮಾತನಾಡಿದ ತಮಿಳುನಾಡು ಉನ್ನತ ಶಿಕ್ಷಣ ಸಚಿವ ಪೊನ್ಮುಡಿ, ರಾಷ್ಟ್ರೀಯ ಶಿಕ್ಷಣ ನೀತಿ 2020 ರ ಪ್ರಯೋಜನಕಾರಿ ಅಂಶಗಳನ್ನು ಜಾರಿಗೆ ತರುವುದಾಗಿ ಭರವಸೆ ನೀಡಿದರು, ಆದರೆ ರಾಜ್ಯ ಸರ್ಕಾರವು ಕೇವಲ ದ್ವಿಭಾಷಾ ವ್ಯವಸ್ಥೆಯನ್ನು ಜಾರಿಗೆ ತರಲು ನಿರ್ಧರಿಸಿದೆ ಎಂದು ಹೇಳಿದರು.  ತಮಿಳುನಾಡು ರಾಜ್ಯಪಾಲ ಆರ್.ಎನ್.ರವಿ ಅವರೊಂದಿಗೆ ಘಟಿಕೋತ್ಸವ ಸಮಾರಂಭದಲ್ಲಿ ವೇದಿಕೆ ಹಂಚಿಕೊಂಡ ಅವರು, ಈಗಾಗಲೇ ಅಂತಾರಾಷ್ಟ್ರೀಯ ಭಾಷೆಯಾದ ಇಂಗ್ಲಿಷ್ ಕಲಿಸುತ್ತಿರುವಾಗ ಹಿಂದಿಯನ್ನು ಏಕೆ ಕಲಿಯಬೇಕು ಎಂದು ಪ್ರಶ್ನಿಸಿದರು.

ಭಾರತದಲ್ಲಿ ಶಿಕ್ಷಣ ವ್ಯವಸ್ಥೆಯಲ್ಲಿ ತಮಿಳುನಾಡು ಮುಂಚೂಣಿಯಲ್ಲಿದೆ. ತಮಿಳು ವಿದ್ಯಾರ್ಥಿಗಳು ಯಾವುದೇ ಭಾಷೆಯನ್ನು ಕಲಿಯಲು ಸಿದ್ಧರಿದ್ದಾರೆ. ಆದರೆ, ಹಿಂದಿ ಐಚ್ಛಿಕ ಭಾಷೆಯಾಗಿರಬೇಕೇ ಹೊರತು ಕಡ್ಡಾಯವಲ್ಲ ಎಂದು ಸಚಿವರು ಹೇಳಿದರು. ಹಿಂದಿಗಿಂತ ಇಂಗ್ಲಿಷ್ ಹೆಚ್ಚು ಮೌಲ್ಯಯುತವಾಗಿದೆ ಎಂದು ವ್ಯಂಗ್ಯವಾಡಿದ ಪೊನ್ಮುಡಿ, ಹಿಂದಿ ಭಾಷಿಕರು ಚಾಕರಿ ಕೆಲಸ ಮಾಡುತ್ತಿದ್ದಾರೆ ಎಂದಿದ್ದಾರೆ.

“ಹಿಂದಿ ಓದಿದರೆ ಉದ್ಯೋಗ ಸಿಗುತ್ತದೆ ಎಂದು ಅವರು ಹೇಳುತ್ತಿದ್ದರು. ಕೊಯಮತ್ತೂರಿನಲ್ಲಿ ಈಗ ಯಾರು ಪಾನಿಪುರಿ ಮಾರುತ್ತಿದ್ದಾರೆಂದು ನೋಡಿದ್ದೀರಾ? ಅದು ಒಂದು ಕಾಲದಲ್ಲಿ ಆಗಿತ್ತು. ಈಗ ಇಂಗ್ಲಿಷ್ ಅಂತಾರಾಷ್ಟ್ರೀಯ ಭಾಷೆಯಾಗಿದೆ ಎಂದು ಪೊನ್ಮುಡಿ ಹೇಳಿದ್ದಾರೆ.

ಇದನ್ನೂ ಓದಿ
Image
Viral Video: ಫ್ಯಾನ್​ಗೆ ದುಪಟ್ಟಾ ಸಿಲುಕಿಕೊಂಡು ಉಸಿರುಗಟ್ಟಿದ ನಾಯಕಿ; ಮತ್ತೆ ಟ್ರೋಲ್ ಆಯ್ತು ಹಿಂದಿ ಸೀರಿಯಲ್
Image
ಕನ್ನಡಾಭಿಮಾನಿ ಸಿದ್ದರಾಮಯ್ಯ ರಾಜಸ್ತಾನದಲ್ಲಿ ‘ಮುಝೆ ಹಿಂದಿ ನಹೀಂ ಆತಾ’ ಅಂದಿದ್ದು!
Image
ಬಾಲಿವುಡ್ ಬಗ್ಗೆ ಮಹೇಶ್ ಬಾಬು ಹೇಳಿಕೆ; ಹಿಂದಿಯ ಖ್ಯಾತ ನಿರ್ಮಾಪಕ ಕೊಟ್ರು ಉತ್ತರ

ದೇಶದ ಇತರ ಸುದ್ದಿಗಳಿಗಾಗಿಇಲ್ಲಿ ಕ್ಲಿಕ್ ಮಾಡಿ ಪ್ರಮುಖ  ಸುದ್ದಿಗಳಿಗಾಗಿಇಲ್ಲಿ ಕ್ಲಿಕ್ ಮಾಡಿ

Published On - 4:35 pm, Fri, 13 May 22

Follow Us
TV9 Web
TV9 Web

TV9 Kannada

Read More
ಗೊರಗುಂಟೆಪಾಳ್ಯ ಭೀಕರ ರಸ್ತೆ ಅಪಘಾತ: ಸ್ಫೋಟಕ ಮಾಹಿತಿ ನೀಡಿದ ಡಿಸಿಪಿ
ಗೊರಗುಂಟೆಪಾಳ್ಯ ಭೀಕರ ರಸ್ತೆ ಅಪಘಾತ: ಸ್ಫೋಟಕ ಮಾಹಿತಿ ನೀಡಿದ ಡಿಸಿಪಿ
ಗೃಹಲಕ್ಷ್ಮೀ ಯೋಜನೆ ಪರಿಷ್ಕರಣೆ: 3.89 ಲಕ್ಷ ಜನ ಸ್ಕೀಂನಿಂದ ಔಟ್!
ಗೃಹಲಕ್ಷ್ಮೀ ಯೋಜನೆ ಪರಿಷ್ಕರಣೆ: 3.89 ಲಕ್ಷ ಜನ ಸ್ಕೀಂನಿಂದ ಔಟ್!
ವಿಡಿಯೋ: ಸಿನಿಮಾಗಳಲ್ಲಿ ಆಕ್ಷನ್ ದೃಶ್ಯ ಎಷ್ಟು ಕಷ್ಟವಾಗಿರುತ್ತೆ ನೋಡಿ
ವಿಡಿಯೋ: ಸಿನಿಮಾಗಳಲ್ಲಿ ಆಕ್ಷನ್ ದೃಶ್ಯ ಎಷ್ಟು ಕಷ್ಟವಾಗಿರುತ್ತೆ ನೋಡಿ
ಬೈಕ್​​​ಗೆ ಗುದ್ದಿ ನೇರವಾಗಿ ಅಡಿಕೆ ತೋಟಕ್ಕೆ ನುಗ್ಗಿದ KSRTC ಬಸ್
ಬೈಕ್​​​ಗೆ ಗುದ್ದಿ ನೇರವಾಗಿ ಅಡಿಕೆ ತೋಟಕ್ಕೆ ನುಗ್ಗಿದ KSRTC ಬಸ್
ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ
ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ
‘ಬಾಯ್ಸ್ ನೆವರ್ ಕಾಂಪ್ರಮೈಸ್’: ಸಿನಿಮಾ ಬಗ್ಗೆ ನಿರ್ದೇಶಕರ ಮಾತು
‘ಬಾಯ್ಸ್ ನೆವರ್ ಕಾಂಪ್ರಮೈಸ್’: ಸಿನಿಮಾ ಬಗ್ಗೆ ನಿರ್ದೇಶಕರ ಮಾತು
'ಅವನು ನನ್ನ ವಿರುದ್ಧವೇ ಕೆಲಸ ಮಾಡಿದ್ದಾನೆ': ಜಮಿರ್ ವಿರುದ್ಧ ಸಿದ್ದು ಗರಂ
'ಅವನು ನನ್ನ ವಿರುದ್ಧವೇ ಕೆಲಸ ಮಾಡಿದ್ದಾನೆ': ಜಮಿರ್ ವಿರುದ್ಧ ಸಿದ್ದು ಗರಂ
ಹಿಂದುಳಿದ ವರ್ಗಗಳ ಇಲಾಖೆಯಲ್ಲಿ ಅನುದಾನ ತಾರತಮ್ಯದ ಆರೋಪ
ಹಿಂದುಳಿದ ವರ್ಗಗಳ ಇಲಾಖೆಯಲ್ಲಿ ಅನುದಾನ ತಾರತಮ್ಯದ ಆರೋಪ
ಸಿಎಂ ಡಿಕೆಶಿಗೆ ಯಾವುದೇ ಕಂಟಕವಿಲ್ಲ: ನೊಣವಿನಕೆರೆ ಸ್ವಾಮೀಜಿ ಭವಿಷ್ಯ
ಸಿಎಂ ಡಿಕೆಶಿಗೆ ಯಾವುದೇ ಕಂಟಕವಿಲ್ಲ: ನೊಣವಿನಕೆರೆ ಸ್ವಾಮೀಜಿ ಭವಿಷ್ಯ
26 ವರ್ಷಗಳ ಬಳಿಕ ಮನೆಗೆ ಮರಳಿದ ಮಗ: ಭಾವುಕ ಕ್ಷಣಕ್ಕೆ ಸಾಕ್ಷಿಯಾದ ಧರ್ಮಸ್ಥಳ
26 ವರ್ಷಗಳ ಬಳಿಕ ಮನೆಗೆ ಮರಳಿದ ಮಗ: ಭಾವುಕ ಕ್ಷಣಕ್ಕೆ ಸಾಕ್ಷಿಯಾದ ಧರ್ಮಸ್ಥಳ