AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹಿಂದಿ ಓದಿದರೆ ಉದ್ಯೋಗ ಸಿಗುತ್ತದೆ ಅಂತಿದ್ರು, ಕೊಯಮತ್ತೂರಿನಲ್ಲಿ ಈಗ ಯಾರು ಪಾನಿಪುರಿ ಮಾರುತ್ತಿದ್ದಾರೆಂದು ನೋಡಿದ್ದೀರಾ?: ತಮಿಳುನಾಡು ಸಚಿವ

ಹಿಂದಿ ಓದಿದರೆ ಉದ್ಯೋಗ ಸಿಗುತ್ತದೆ ಎಂದು ಅವರು ಹೇಳುತ್ತಿದ್ದರು. ಕೊಯಮತ್ತೂರಿನಲ್ಲಿ ಈಗ ಯಾರು ಪಾನಿಪುರಿ ಮಾರುತ್ತಿದ್ದಾರೆಂದು ನೋಡಿದ್ದೀರಾ? ಅದು ಒಂದು ಕಾಲದಲ್ಲಿ ಆಗಿತ್ತು. ಈಗ ಇಂಗ್ಲಿಷ್ ಅಂತಾರಾಷ್ಟ್ರೀಯ ಭಾಷೆಯಾಗಿದೆ ಎಂದು ಪೊನ್ಮುಡಿ ಹೇಳಿದ್ದಾರೆ.

ಹಿಂದಿ ಓದಿದರೆ ಉದ್ಯೋಗ ಸಿಗುತ್ತದೆ ಅಂತಿದ್ರು, ಕೊಯಮತ್ತೂರಿನಲ್ಲಿ ಈಗ ಯಾರು ಪಾನಿಪುರಿ ಮಾರುತ್ತಿದ್ದಾರೆಂದು ನೋಡಿದ್ದೀರಾ?: ತಮಿಳುನಾಡು ಸಚಿವ
ಸಚಿವ ಕೆ.ಪೊನ್ಮುಡಿ
TV9 Web
| Updated By: ರಶ್ಮಿ ಕಲ್ಲಕಟ್ಟ|

Updated on:May 13, 2022 | 4:37 PM

Share

ಚೆನ್ನೈ: ಕೊಯಮತ್ತೂರಿನ ಭಾರತಿಯಾರ್ ವಿಶ್ವವಿದ್ಯಾನಿಲಯದಲ್ಲಿ ನಡೆದ ಘಟಿಕೋತ್ಸವ ಸಮಾರಂಭದಲ್ಲಿ ಮಾತನಾಡಿದ ತಮಿಳುನಾಡಿನ (Tamil Nadu) ಉನ್ನತ ಶಿಕ್ಷಣ ಸಚಿವ ಕೆ. ಪೊನ್ಮುಡಿ (Ponmudy) ಹಿಂದಿ ಮಾತನಾಡುವವರು ಚಾಕರಿ ಕೆಲಸಗಳಲ್ಲಿ ತೊಡಗಿಸಿಕೊಂಡಿದ್ದಾರೆ ಹಿಂದಿಗಿಂತ (Hindi) ಇಂಗ್ಲಿಷ್ ಹೆಚ್ಚು ಮೌಲ್ಯಯುತವಾಗಿದೆ ಎಂದು ಹೇಳಿದ್ದಾರೆ. ಹಿಂದಿ ಮಾತನಾಡುವವರು ಕೊಯಮತ್ತೂರಿನಲ್ಲಿ ಪಾನಿಪುರಿ ಮಾರುತ್ತಿದ್ದಾರೆ ಎಂದು ಸಚಿವರು ಹೇಳಿದ್ದಾರೆ. ತಮಿಳು ವಿದ್ಯಾರ್ಥಿಗಳು ಯಾವುದೇ ಭಾಷೆಯನ್ನು ಕಲಿಯಲು ಸಿದ್ಧರಿದ್ದಾರೆ. ಹಿಂದಿ ಐಚ್ಛಿಕವಾಗಿರಬೇಕು ಮತ್ತು ಕಡ್ಡಾಯವಾಗಿರಬಾರದು ಎಂದು ಅವರು ಹೇಳಿದರು. ಕೊಯಮತ್ತೂರಿನ ಭಾರತಿಯಾರ್ ವಿಶ್ವವಿದ್ಯಾನಿಲಯದ ವಿದ್ಯಾರ್ಥಿಗಳನ್ನು ಉದ್ದೇಶಿಸಿ ಮಾತನಾಡಿದ ತಮಿಳುನಾಡು ಉನ್ನತ ಶಿಕ್ಷಣ ಸಚಿವ ಪೊನ್ಮುಡಿ, ರಾಷ್ಟ್ರೀಯ ಶಿಕ್ಷಣ ನೀತಿ 2020 ರ ಪ್ರಯೋಜನಕಾರಿ ಅಂಶಗಳನ್ನು ಜಾರಿಗೆ ತರುವುದಾಗಿ ಭರವಸೆ ನೀಡಿದರು, ಆದರೆ ರಾಜ್ಯ ಸರ್ಕಾರವು ಕೇವಲ ದ್ವಿಭಾಷಾ ವ್ಯವಸ್ಥೆಯನ್ನು ಜಾರಿಗೆ ತರಲು ನಿರ್ಧರಿಸಿದೆ ಎಂದು ಹೇಳಿದರು.  ತಮಿಳುನಾಡು ರಾಜ್ಯಪಾಲ ಆರ್.ಎನ್.ರವಿ ಅವರೊಂದಿಗೆ ಘಟಿಕೋತ್ಸವ ಸಮಾರಂಭದಲ್ಲಿ ವೇದಿಕೆ ಹಂಚಿಕೊಂಡ ಅವರು, ಈಗಾಗಲೇ ಅಂತಾರಾಷ್ಟ್ರೀಯ ಭಾಷೆಯಾದ ಇಂಗ್ಲಿಷ್ ಕಲಿಸುತ್ತಿರುವಾಗ ಹಿಂದಿಯನ್ನು ಏಕೆ ಕಲಿಯಬೇಕು ಎಂದು ಪ್ರಶ್ನಿಸಿದರು.

ಭಾರತದಲ್ಲಿ ಶಿಕ್ಷಣ ವ್ಯವಸ್ಥೆಯಲ್ಲಿ ತಮಿಳುನಾಡು ಮುಂಚೂಣಿಯಲ್ಲಿದೆ. ತಮಿಳು ವಿದ್ಯಾರ್ಥಿಗಳು ಯಾವುದೇ ಭಾಷೆಯನ್ನು ಕಲಿಯಲು ಸಿದ್ಧರಿದ್ದಾರೆ. ಆದರೆ, ಹಿಂದಿ ಐಚ್ಛಿಕ ಭಾಷೆಯಾಗಿರಬೇಕೇ ಹೊರತು ಕಡ್ಡಾಯವಲ್ಲ ಎಂದು ಸಚಿವರು ಹೇಳಿದರು. ಹಿಂದಿಗಿಂತ ಇಂಗ್ಲಿಷ್ ಹೆಚ್ಚು ಮೌಲ್ಯಯುತವಾಗಿದೆ ಎಂದು ವ್ಯಂಗ್ಯವಾಡಿದ ಪೊನ್ಮುಡಿ, ಹಿಂದಿ ಭಾಷಿಕರು ಚಾಕರಿ ಕೆಲಸ ಮಾಡುತ್ತಿದ್ದಾರೆ ಎಂದಿದ್ದಾರೆ.

“ಹಿಂದಿ ಓದಿದರೆ ಉದ್ಯೋಗ ಸಿಗುತ್ತದೆ ಎಂದು ಅವರು ಹೇಳುತ್ತಿದ್ದರು. ಕೊಯಮತ್ತೂರಿನಲ್ಲಿ ಈಗ ಯಾರು ಪಾನಿಪುರಿ ಮಾರುತ್ತಿದ್ದಾರೆಂದು ನೋಡಿದ್ದೀರಾ? ಅದು ಒಂದು ಕಾಲದಲ್ಲಿ ಆಗಿತ್ತು. ಈಗ ಇಂಗ್ಲಿಷ್ ಅಂತಾರಾಷ್ಟ್ರೀಯ ಭಾಷೆಯಾಗಿದೆ ಎಂದು ಪೊನ್ಮುಡಿ ಹೇಳಿದ್ದಾರೆ.

ಇದನ್ನೂ ಓದಿ
Image
Viral Video: ಫ್ಯಾನ್​ಗೆ ದುಪಟ್ಟಾ ಸಿಲುಕಿಕೊಂಡು ಉಸಿರುಗಟ್ಟಿದ ನಾಯಕಿ; ಮತ್ತೆ ಟ್ರೋಲ್ ಆಯ್ತು ಹಿಂದಿ ಸೀರಿಯಲ್
Image
ಕನ್ನಡಾಭಿಮಾನಿ ಸಿದ್ದರಾಮಯ್ಯ ರಾಜಸ್ತಾನದಲ್ಲಿ ‘ಮುಝೆ ಹಿಂದಿ ನಹೀಂ ಆತಾ’ ಅಂದಿದ್ದು!
Image
ಬಾಲಿವುಡ್ ಬಗ್ಗೆ ಮಹೇಶ್ ಬಾಬು ಹೇಳಿಕೆ; ಹಿಂದಿಯ ಖ್ಯಾತ ನಿರ್ಮಾಪಕ ಕೊಟ್ರು ಉತ್ತರ

ದೇಶದ ಇತರ ಸುದ್ದಿಗಳಿಗಾಗಿಇಲ್ಲಿ ಕ್ಲಿಕ್ ಮಾಡಿ ಪ್ರಮುಖ  ಸುದ್ದಿಗಳಿಗಾಗಿಇಲ್ಲಿ ಕ್ಲಿಕ್ ಮಾಡಿ

Published On - 4:35 pm, Fri, 13 May 22

ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆಶಿ ತಂಡದ ಡಿನ್ನರ್​​ ಮೀಟಿಂಗ್​​ ಬಗ್ಗೆ ಸೋಮಶೇಖರ್​​ ಬಿಗ್​​ ಅಪ್ಡೇಟ್​​
ಡಿಕೆಶಿ ತಂಡದ ಡಿನ್ನರ್​​ ಮೀಟಿಂಗ್​​ ಬಗ್ಗೆ ಸೋಮಶೇಖರ್​​ ಬಿಗ್​​ ಅಪ್ಡೇಟ್​​
ಕಾಂಗ್ರೆಸ್​ನ ನೂರಕ್ಕೂ ಹೆಚ್ಚು ಶಾಸಕರು ಡಿಕೆಶಿ ತೆಕ್ಕೆಗೆ?
ಕಾಂಗ್ರೆಸ್​ನ ನೂರಕ್ಕೂ ಹೆಚ್ಚು ಶಾಸಕರು ಡಿಕೆಶಿ ತೆಕ್ಕೆಗೆ?
ಕಷ್ಟಪಟ್ಟಿದ್ದ ಡಿಕೆಶಿಗೆ ಕೊನೆಗೂ ಫಲ, ಅಧಿವೇಶನದ ಬಳಿಕ ಶುಭಸುದ್ದಿ?
ಕಷ್ಟಪಟ್ಟಿದ್ದ ಡಿಕೆಶಿಗೆ ಕೊನೆಗೂ ಫಲ, ಅಧಿವೇಶನದ ಬಳಿಕ ಶುಭಸುದ್ದಿ?
‘ಕರ್ನಾಟಕ ಸಹೋದರನ ಮನೆ, ಕನ್ನಡವೇ ಸತ್ಯ, ಕನ್ನಡವೇ ನಿತ್ಯ: ಬಾಲಯ್ಯ
‘ಕರ್ನಾಟಕ ಸಹೋದರನ ಮನೆ, ಕನ್ನಡವೇ ಸತ್ಯ, ಕನ್ನಡವೇ ನಿತ್ಯ: ಬಾಲಯ್ಯ
ಸ್ಕೈಡೈವ್ ಮಾಡುವಾಗ ವಿಮಾನದ ರೆಕ್ಕೆಗೆ ಸಿಲುಕಿದ ಪ್ಯಾರಾಚೂಟ್
ಸ್ಕೈಡೈವ್ ಮಾಡುವಾಗ ವಿಮಾನದ ರೆಕ್ಕೆಗೆ ಸಿಲುಕಿದ ಪ್ಯಾರಾಚೂಟ್