AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮುಸ್ಲಿಮರೇ ಆಗಲಿ, ಯಾರೇ ಆಗಲಿ ಬಂಗಾಳಿಗಳಿಗೆ ಹಿಂದೂ ಸಂಸ್ಕೃತಿಯೇ ಅಡಿಪಾಯ: ತಸ್ಲಿಮಾ ನಸ್ರೀನ್

Taslima Nasreen writes on Bengali culture: ಪಶ್ಚಿಮ ಬಂಗಾಳ ಮತ್ತು ಬಾಂಗ್ಲಾದೇಶದಲ್ಲಿರುವ ಬಂಗಾಳಿಗಳಿಗೆ ಹಿಂದು ಸಂಸ್ಕೃತಿಯೇ ಮೂಲವಾಗಿದೆ. ಹಾಗಂತ ಬರಹಗಾರ್ತಿ ತಸ್ಲಿಮಾ ನಸ್ರೀನ್ ಹೇಳಿದ್ದಾರೆ. ಬಂಗಾಳದ ಹಿಂದೂ, ಮುಸ್ಲಿಮ್, ಕ್ರೈಸ್ತರು, ನಾಸ್ತಿಕರು ಯಾರೇ ಆಗಲೀ ಬಹುತೇಕ ಎಲ್ಲರ ಪೂರ್ವಿಕರು ಭಾರತೀಯ ಹಿಂದುವೇ ಎಂದಿದ್ದಾರೆ. ಚಿತ್ರ ಸಾಹಿತಿ ಜಾವೇದ್ ಅಖ್ತರ್ ಅವರು ಉತ್ತರಪ್ರದೇಶದ ಅವಧ್​ನಲ್ಲಿರುವ ಗಂಗಾ ಜುಮುನಿ ತೆಹಜೀಬ್ ಸಂಸ್ಕೃತಿಯನ್ನೂ ಉಲ್ಲೇಖಿಸಿದ್ದಾರೆ.

ಮುಸ್ಲಿಮರೇ ಆಗಲಿ, ಯಾರೇ ಆಗಲಿ ಬಂಗಾಳಿಗಳಿಗೆ ಹಿಂದೂ ಸಂಸ್ಕೃತಿಯೇ ಅಡಿಪಾಯ: ತಸ್ಲಿಮಾ ನಸ್ರೀನ್
ತಸ್ಲಿಮಾ ನಸ್ರೀನ್
ಸುಗ್ಗನಹಳ್ಳಿ ವಿಜಯಸಾರಥಿ
|

Updated on: Sep 30, 2025 | 7:45 PM

Share

ನವದೆಹಲಿ, ಸೆಪ್ಟೆಂಬರ್ 30: ಹಿಂದೂ ಸಂಸ್ಕೃತಿಯೇ ಬಂಗಾಳಿಗಳ ಗುರುತು ಎಂದು ಬಾಂಗ್ಲಾದೇಶ ಮೂಲದ ಬರಹಗಾರ್ತಿ ತಸ್ಲಿಮಾ ನಸ್ರೀನ್ (Taslima Nasreen) ಹೇಳಿದ್ದಾರೆ. ಬಾಂಗ್ಲಾದೇಶದಲ್ಲಿರುವ ಮುಸ್ಲಿಮರನ್ನೂ ಒಳಗೊಂಡಂತೆ ಬಂಗಾಳಿಗಳ ಗುರುತಿಗೆ ಹಿಂದೂ ಸಂಸ್ಕೃತಿಯೇ ಮೂಲವಾಗಿದೆ ಎಂಬುದು ತಸ್ರೀನ್ ಅವರ ಅಭಿಪ್ರಾಯ.

‘ಬಂಗಾಳ ಸಂಸ್ಕೃತಿಗೆ ಮೂಲವಾಗಿರುವುದು ಹಿಂದೂ ಸಂಸ್ಕೃತಿಯೇ. ಇದನ್ನು ಮುಚ್ಚಿಡುವಂಥದ್ದು ಏನೂ ಇಲ್ಲ. ಇತಿಹಾಸದ ವಿವಿಧ ಹಂತದಲ್ಲಿ ನಾವು ಬಂಗಾಳಿಗಳು ಯಾವುದೇ ಧರ್ಮ ಅಥವಾ ತತ್ವವನ್ನು ಅಪ್ಪಿಕೊಂಡರೂ ನಮ್ಮ ರಾಷ್ಟ್ರೀಯ ಗುರುತು ಭಾರತವೇ ಆಗಿದೆ. ಭಾರತದ ಹಿಂದೂಗಳು, ಬೌದ್ಧರು, ಕ್ರೈಸ್ತರು, ಮುಸ್ಲಿಮರು, ಅಥವಾ ನಾಸ್ತಿಕರು, ಬಹುತೇಕ ಎಲ್ಲರ ಪೂರ್ವಿಕರು ಭಾರತೀಯ ಹಿಂದೂಗಳೇ ಆಗಿದ್ದಾರೆ’ ಎಂದು ಬಾಂಗ್ಲಾದೇಶದಿಂದ ಗಡೀಪಾರಾಗಿ ಭಾರತದ ಆಶ್ರಯದಲ್ಲಿರುವ ತಸ್ಲಿಮಾ ನಸ್ರೀನ್ ವಿವರಿಸಿದ್ದಾರೆ.

ಇದನ್ನೂ ಓದಿ: ಟಿಸಿಎಸ್​ನಲ್ಲಿ ಕೆಲಸ ಕಳೆದುಕೊಳ್ಳುವ ಉದ್ಯೋಗಿಗಳ ಸಂಖ್ಯೆ 12 ಸಾವಿರವಾ, 30 ಸಾವಿರವಾ?

‘ಒಬ್ಬ ಬಂಗಾಳಿಯು ಮುಸ್ಲಿಮನೇ ಆಗಿರಲಿ, ಆದರೆ ಅವನ ಸಂಸ್ಕೃತಿಯು ಅರೇಬಿಕ್ ಆಗಿರುವುದಿಲ್ಲ. ಆತನದ್ದು ಬಂಗಾಳಿ ಸಂಸ್ಕೃತಿ ಆಗಿರುತ್ತದೆ. ಆ ಸಂಸ್ಕೃತಿಗೆ ಮೂಲವಾಗಿರುವುದು ಹಿಂದೂ ಸಂಪ್ರದಾಯ. ಡೋಲು, ಸಂಗೀತ, ನೃತ್ಯ ಇವೆಲ್ಲವೂ ಬಂಗಾಳೀ ಸಂಸ್ಕೃತಿಯನ್ನು ಅಭಿವ್ಯಕ್ತಪಡಿಸುತ್ತವೆ. ಇದನ್ನೇ ಬಂಗಾಳಿ ಎನ್ನುವುದು. ಇದನ್ನು ನಿರಾಕರಿಸುವುದು ತನ್ನ ಅಸ್ತಿತ್ವ ನಿರಾಕರಿಸಿಕೊಂಡಂತೆ’ ಎಂದು ಲಜ್ಜಾ ಕಾದಂಬರಿಯ ಕರ್ತೃವೂ ಆದ ತಸ್ಲಿಮಾ ತಿಳಿಸಿದ್ದಾರೆ.

ಗಂಗಾ ಜಮುನಿ ತೆಹಜೀಬ್ ಸಂಸ್ಕೃತಿ ಮುಂದಿಟ್ಟ ಜಾವೇದ್ ಅಖ್ತರ್

ತಸ್ಲಿಮಾ ನಸ್ರೀನ್ ಅವರ ಬಂಗಾಳಿ ಸಂಸ್ಕೃತಿ ವಿಚಾರಕ್ಕೆ ಖ್ಯಾತ ಚಿತ್ರ ಸಾಹಿತಿ ಜಾವೇದ್ ಅಖ್ತರ್ ಸ್ಪಂದಿಸಿದ್ದಾರೆ. ಭಾರತೀಯ ಪರಂಪರೆಗಳ ಮೇಲೆ ಪರ್ಷಿಯನ್ ಮತ್ತು ಮಧ್ಯ ಏಷ್ಯನ್ ಸಂಸ್ಕೃತಿಗಳ ಪ್ರಭಾವ ಇರುವುದನ್ನು ಎತ್ತಿ ತೋರಿಸಿದ್ದಾರೆ.

ಇದನ್ನೂ ಓದಿ: ಸಮಗ್ರ ಪರಿಷ್ಕರಣೆ ನಂತರ ಬಿಹಾರ ಮತದಾರರ ಅಂತಿಮ ಪಟ್ಟಿ ಬಿಡುಗಡೆ ಮಾಡಿದ ಚುನಾವಣಾ ಆಯೋಗ

‘ಪಾಶ್ಚಿಮಾತ್ಯ ಸಂಸ್ಕೃತಿ ರೀತಿಯಲ್ಲಿ ಪರ್ಷಿಯನ್ ಮತ್ತು ಮಧ್ಯ ಏಷ್ಯನ್ ಸಂಸ್ಕೃತಿಗಳು ಹಾಗೂ ಭಾಷೆಗಳು ನಮ್ಮ ಅಗತ್ಯಕ್ಕೆ ತಕ್ಕಂತೆ ನಮ್ಮ ಸಂಸ್ಕೃತಿ ಮತ್ತು ಭಾಷೆಗಳ ಮೇಲೆ ಪ್ರಭಾವ ಬೀರಿವೆ’ ಎಂದ ಅವರು, ಬಂಗಾಳಿಗಳ ಉಪನಾಮಗಳು ಪರ್ಷಿಯನ್ ಮೂಲದ್ದವೆಂಬ ಸಂಗತಿಯನ್ನು ಉಲ್ಲೇಖಿಸಿದ್ದಾರೆ.

ಹಾಗೆಯೇ, ಉತ್ತರಪ್ರದೇಶದ ಅವಧ್ ಪ್ರದೇಶದಲ್ಲಿರುವ ಗಂಗಾ ಜಮುನಿ ತೆಹಜೀಬ್ ಸಂಸ್ಕೃತಿಯನ್ನು ಎತ್ತಿ ತೋರಿಸಿದ್ದಾರೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Follow Us
Vijaya Sarathy SN
Vijaya Sarathy SN

ಹುಟ್ಟೂರು ಹಾಸನ ಜಿಲ್ಲೆಯ ಶ್ರವಣಬೆಳಗೊಳ ಸಮೀಪದ ಒಂದು ಪುಟ್ಟ ಹಳ್ಳಿ. ಬೆಳದದ್ದು ಬೆಂಗಳೂರು ನಗರದಲ್ಲಿ. ಹಲವು ವರ್ಷಗಳಿಂದ ಪತ್ರಿಕಾ ರಂಗದಲ್ಲಿ ನೆಲೆ. ಬರವಣಿಗೆಯ ಆಸಕ್ತಿ ಮತ್ತು ಪರಿಣಿತಿಯ ಕ್ಷೇತ್ರಗಳು ಆರ್ಥಿಕತೆ, ಹಣಕಾಸು, ಅಂತರರಾಷ್ಟ್ರೀಯ ವಿದ್ಯಮಾನ, ಜನಕ್ರಾಂತಿ, ರಾಷ್ಟ್ರೀಯತೆ, ಸಂಸ್ಕೃತಿ, ಮಾನವ ಸಂಬಂಧ, ಕ್ರೀಡೆ ಮೊದಲಾದವು ಇವೆ. ಓದುಗರಿಗೆ ಸುಲಭವಾಗಿ ಅರ್ಥವಾಗುವಂತೆ ಸಾಧ್ಯವಾದಷ್ಟೂ ಸ್ಫುಟವಾಗಿ, ಸರಳವಾಗಿ ಬರೆಯುವ ಇಚ್ಛೆ.

Read More
ಬಿಸಿಸಿಐನ ರೋಬೋ ಶ್ವಾನ ಚಂಪಕ್ ಮೇಲೆ ಕೊಹ್ಲಿ ಅಸಮಾಧಾನ
ಬಿಸಿಸಿಐನ ರೋಬೋ ಶ್ವಾನ ಚಂಪಕ್ ಮೇಲೆ ಕೊಹ್ಲಿ ಅಸಮಾಧಾನ
ಲಕ್ಕುಂಡಿಯಲ್ಲಿ ಪತ್ತೆಯಾಗಿದ್ದ ನಿಧಿ ಮೌಲ್ಯ 8 ಕೋಟಿ ರೂ
ಲಕ್ಕುಂಡಿಯಲ್ಲಿ ಪತ್ತೆಯಾಗಿದ್ದ ನಿಧಿ ಮೌಲ್ಯ 8 ಕೋಟಿ ರೂ
ತಮಿಳು ನಟ ಜಯಂ ರವಿ ಕಣ್ಣೀರು, ಆಕ್ರೋಶ: ಆಗಿದ್ದೇನು? ವಿಡಿಯೋ ನೋಡಿ
ತಮಿಳು ನಟ ಜಯಂ ರವಿ ಕಣ್ಣೀರು, ಆಕ್ರೋಶ: ಆಗಿದ್ದೇನು? ವಿಡಿಯೋ ನೋಡಿ
ಝಲ್ಮುರಿ ಇಲ್ಲಿಗೂ ತಲುಪಿತೇ? ಮೋದಿ ಪ್ರಶ್ನೆಗೆ ಭಾರತೀಯ ವಲಸಿಗರ ಕರತಾಡನ
ಝಲ್ಮುರಿ ಇಲ್ಲಿಗೂ ತಲುಪಿತೇ? ಮೋದಿ ಪ್ರಶ್ನೆಗೆ ಭಾರತೀಯ ವಲಸಿಗರ ಕರತಾಡನ
ಹಾವೇರಿ: ಸಿನಿಮೀಯ ಶೈಲಿಯಲ್ಲಿ ಕಳ್ಳತನ; ಲಕ್ಷಾಂತರ ಮೌಲ್ಯದ ಚಿನ್ನಾಭರಣ ಲೂಟಿ
ಹಾವೇರಿ: ಸಿನಿಮೀಯ ಶೈಲಿಯಲ್ಲಿ ಕಳ್ಳತನ; ಲಕ್ಷಾಂತರ ಮೌಲ್ಯದ ಚಿನ್ನಾಭರಣ ಲೂಟಿ
ಪ್ರಧಾನಿ ಮೋದಿಗೆ ಹೇಗ್‌ನಲ್ಲಿ ಯುವ ಕಲಾವಿದರಿಂದ ಸಂಗೀತ, ನೃತ್ಯದ ಸ್ವಾಗತ
ಪ್ರಧಾನಿ ಮೋದಿಗೆ ಹೇಗ್‌ನಲ್ಲಿ ಯುವ ಕಲಾವಿದರಿಂದ ಸಂಗೀತ, ನೃತ್ಯದ ಸ್ವಾಗತ
ಭೀಕರ ಅಪಘಾತ; ಫುಟ್‌ಪಾತ್‌ಗೆ ನುಗ್ಗಿದ ಕಾರು, ಮಗು ಸೇರಿ ಮೂವರಿಗೆ ಗಂಭೀರ ಗಾಯ
ಭೀಕರ ಅಪಘಾತ; ಫುಟ್‌ಪಾತ್‌ಗೆ ನುಗ್ಗಿದ ಕಾರು, ಮಗು ಸೇರಿ ಮೂವರಿಗೆ ಗಂಭೀರ ಗಾಯ
ಜೆ.ಪಿ. ಪಾರ್ಕ್ ಫ್ಲೈಓವರ್ ಕೆಳಗೆ ಕಸದ ರಾಶಿ! GBA ನಿದ್ದೆ ಜಾರಿದೆಯೇ?
ಜೆ.ಪಿ. ಪಾರ್ಕ್ ಫ್ಲೈಓವರ್ ಕೆಳಗೆ ಕಸದ ರಾಶಿ! GBA ನಿದ್ದೆ ಜಾರಿದೆಯೇ?
ಸಿದ್ದರಾಮಯ್ಯ ಬಿಟ್ರೆ CM ಆಗುವ ಅರ್ಹತೆ ಖರ್ಗೆಗೆ ಮಾತ್ರ: ರಾಯರೆಡ್ಡಿ
ಸಿದ್ದರಾಮಯ್ಯ ಬಿಟ್ರೆ CM ಆಗುವ ಅರ್ಹತೆ ಖರ್ಗೆಗೆ ಮಾತ್ರ: ರಾಯರೆಡ್ಡಿ
ಕ್ಷಮೆ ಕೇಳಿದ ಮೇಲೂ ಕೆನ್ನೆಗೆ ಬಾರಿಸಿದ ಯುವತಿಗೆ ಮನಬಂದಂತೆ ಥಳಿಸಿದ ಯುವಕ!
ಕ್ಷಮೆ ಕೇಳಿದ ಮೇಲೂ ಕೆನ್ನೆಗೆ ಬಾರಿಸಿದ ಯುವತಿಗೆ ಮನಬಂದಂತೆ ಥಳಿಸಿದ ಯುವಕ!