AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಪಾರ್ಟ್‌ಮೆಂಟ್​ ಮುಂದೆ ರಂಗೋಲಿ ಹಾಕಿದ ಹಿಂದೂ ಕುಟುಂಬ, ಇಲ್ಲಿ ರಂಗೋಲಿ ಹಾಕಬೇಡಿ ಎಂದು ವಿರೋಧಿಸಿದ ಕ್ರಿಶ್ಚಿಯನ್ ಕುಟುಂಬ

ಅಪಾರ್ಟ್‌ಮೆಂಟ್​​ವೊಂದರಲ್ಲಿ ನೆರೆಹೊರೆಯ ಮನೆಯವರು (ಹಿಂದೂ ಮನೆಯವರು) ರಂಗೋಲಿ ಹಾಕಿದಕ್ಕೆ ಕ್ರಿಶ್ಚಿಯನ್ ಕುಟುಂಬವೊಂದು ವಿರೋಧ ವ್ಯಕ್ತಪಡಿಸಿರುವ ಘಟನೆ ಹೈದರಾಬಾದ್​ನಲ್ಲಿ ನಡೆದಿದೆ.

ಅಪಾರ್ಟ್‌ಮೆಂಟ್​ ಮುಂದೆ ರಂಗೋಲಿ ಹಾಕಿದ ಹಿಂದೂ ಕುಟುಂಬ, ಇಲ್ಲಿ ರಂಗೋಲಿ ಹಾಕಬೇಡಿ ಎಂದು ವಿರೋಧಿಸಿದ ಕ್ರಿಶ್ಚಿಯನ್ ಕುಟುಂಬ
TV9 Web
| Updated By: ಅಕ್ಷಯ್​ ಪಲ್ಲಮಜಲು​​|

Updated on:Oct 26, 2022 | 10:31 AM

Share

ಹೈದರಾಬಾದ್: ಅಪಾರ್ಟ್‌ಮೆಂಟ್​​ವೊಂದರಲ್ಲಿ ನೆರೆಹೊರೆಯ ಮನೆಯವರು (ಹಿಂದೂ ಮನೆಯವರು) ರಂಗೋಲಿ ಹಾಕಿದಕ್ಕೆ ಕ್ರಿಶ್ಚಿಯನ್ ಕುಟುಂಬವೊಂದು ವಿರೋಧ ವ್ಯಕ್ತಪಡಿಸಿರುವ ಘಟನೆ ಹೈದರಾಬಾದ್​ನಲ್ಲಿ ನಡೆದಿದೆ. ಅಕ್ಟೋಬರ್ 24, ಸೋಮವಾರದಂದು ದೀಪಾವಳಿಯ ಸಂದರ್ಭದಲ್ಲಿ ತಮ್ಮ ಅಪಾರ್ಟ್‌ಮೆಂಟ್​ನಲ್ಲಿರುವ ಹಿಂದೂ ಮನೆಯವರು ರಂಗೋಲಿ ಹಾಕಿದ್ದರೆ ಎಂದು ಕ್ರಿಶ್ಚಿಯನ್ ಕುಟುಂಬವೊಂದು ವಿರೋಧಿಸಿದೆ. ಈ ಘಟನೆಗೆ ಸಂಬಂಧಿಸಿದಂತೆ ಅಪಾರ್ಟ್‌ಮೆಂಟ್‌ನಲ್ಲಿರುವ ಹಿಂದೂಗಳು ಅಕ್ರೋಶ ವ್ಯಕ್ತಪಡಿಸಿದ್ದಾರೆ.

ಕ್ರಿಶ್ಚಿಯನ್ ಕುಟುಂಬದವರು ನಮ್ಮ ಮನೆಯ ಮುಂದೆ ರಂಗೋಲಿ ಹಾಕಿದ್ದಕ್ಕೆ ವಿರೋಧಿಸಿದರು. ಜೊತೆಗೆ ಈ ರಂಗೋಲಿಯನ್ನು ತೆಗೆಯುವಂತೆ ಬೆದರಿಕೆ ಹಾಕಿದ್ದು. ವೈಯಕ್ತಿವಾಗಿ ನಿಂದಿಸಿದ್ದರೆ ಎಂದು ಆರೋಪಿಸಿದ್ದಾರೆ, ಈ ಘಟನೆಯು ಹೈದರಾಬಾದ್ ನ ಚಿಕಪಲ್ಲಿ ಪ್ರದೇಶದ ಗೋಲ್ಕೊಂಡ ಕ್ರಾಸ್ ರಸ್ತೆಯಲ್ಲಿರುವ ಅರ್ಚನಾ ಅಪಾರ್ಟ್ ಮೆಂಟ್ ನಲ್ಲಿ ನಡೆದಿದೆ.

ಇದೀಗ ಹಿಂದೂ ಸಂಘಟನೆಗಳು ಅರ್ಚನಾ ಅಪಾರ್ಟ್‌ಮೆಂಟ್‌ನಲ್ಲಿ ರಂಗೋಲಿ ಹಾಕಲು ಆಕ್ಷೇಪಿಸಿದವರ ವಿರುದ್ಧ ಕ್ರಮಕ್ಕೆ ಒತ್ತಾಯಿಸಿ ಪ್ರತಿಭಟನೆ ನಡೆಸಿತು. ಅಪಾರ್ಟ್ಮೆಂಟ್ ಮುಂದೆ ಜೈ ಶ್ರೀ ರಾಮ್ ಎಂದು ಘೋಷಣೆ ಕೂಗಲು ಪ್ರಾರಂಭಿಸಿದರು. ಮಾಧ್ಯಮಗಳೊಂದಿಗೆ ಮಾತನಾಡಿದ ಚಿಕ್ಕಡಪಲ್ಲಿ ಇನ್ಸ್‌ಪೆಕ್ಟರ್ ಎನ್.ಸಂಜಯ್ ಕುಮಾರ್ ಸೋಮವಾರ ಸಂಜೆ ಈ ಘಟನೆ ನಡೆದಿದ್ದು, ದೀಪಾವಳಿ ಸಂದರ್ಭದಲ್ಲಿ ಹಿಂದೂ ಕುಟುಂಬವು ಮನೆಯ ಮುಂದೆ ರಂಗೋಲಿ ಹಾಕಿದ್ದಾರೆ. ಎದುರಿನ ಫ್ಲಾಟ್‌ನಲ್ಲಿರುವ ಕ್ರಿಶ್ಚಿಯನ್ ನಿವಾಸಿಗಳು ರಂಗೋಲಿಯ ಹಾಕಬಾರದು ಎಂದು ವಿರೋಧ ವ್ಯಕ್ತಪಡಿಸಿದ್ದರೆ ಎಂದು ಹೇಳಿದರು.

ಈ ಅಪಾರ್ಟ್ಮೆಂಟ್ ಈ ಹಿಂದೆ ನಾಯಿಗೆ ಸಂಬಂಧಿಸಿದ ಕೇಸ್ ಕೂಡ ಇತ್ತು. ಇದೀಗ ರಂಗೋಲಿ ಹಾಕಲು ಆಕ್ಷೇಪ ವ್ಯಕ್ತಪಡಿಸಿದ ಘಟನೆ ಮಂಗಳವಾರ ಬೆಳಕಿಗೆ ಬಂದಿದೆ. ಇದಕ್ಕೆ ಆಕ್ಷೇಪ ವ್ಯಕ್ತಪಡಿಸಿದ ಕುಟುಂಬದವರ ವಿರುದ್ಧ ಪ್ರಕರಣ ದಾಖಲಿಸಿದ್ದೇವೆ. ಹೆಚ್ಚಿನ ತನಿಖೆ ನಡೆಯುತ್ತಿದೆ ಎಂದರು. ರಂಗೋಲಿ ಹಾಕಿರುವುದನ್ನು ವಿರೋಧಿಸಿದ ಕುಟುಂಬದ ವಿರುದ್ಧ ಪೊಲೀಸ್ ಅಧಿಕಾರಿಗಳು ಎಫ್‌ಐಆರ್ ದಾಖಲಿಸಿದ್ದಾರೆ. ಅವರ ವಿರುದ್ಧ ಭಾರತೀಯ ದಂಡ ಸಂಹಿತೆಯ ಸೆಕ್ಷನ್ 506 (ಕ್ರಿಮಿನಲ್ ಬೆದರಿಕೆ) ಮತ್ತು 509 (ಮಹಿಳೆಯರ ನಮ್ರತೆಗೆ ಅವಮಾನ) ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.

Published On - 10:20 am, Wed, 26 October 22

ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆಶಿ ತಂಡದ ಡಿನ್ನರ್​​ ಮೀಟಿಂಗ್​​ ಬಗ್ಗೆ ಸೋಮಶೇಖರ್​​ ಬಿಗ್​​ ಅಪ್ಡೇಟ್​​
ಡಿಕೆಶಿ ತಂಡದ ಡಿನ್ನರ್​​ ಮೀಟಿಂಗ್​​ ಬಗ್ಗೆ ಸೋಮಶೇಖರ್​​ ಬಿಗ್​​ ಅಪ್ಡೇಟ್​​
ಕಾಂಗ್ರೆಸ್​ನ ನೂರಕ್ಕೂ ಹೆಚ್ಚು ಶಾಸಕರು ಡಿಕೆಶಿ ತೆಕ್ಕೆಗೆ?
ಕಾಂಗ್ರೆಸ್​ನ ನೂರಕ್ಕೂ ಹೆಚ್ಚು ಶಾಸಕರು ಡಿಕೆಶಿ ತೆಕ್ಕೆಗೆ?
ಕಷ್ಟಪಟ್ಟಿದ್ದ ಡಿಕೆಶಿಗೆ ಕೊನೆಗೂ ಫಲ, ಅಧಿವೇಶನದ ಬಳಿಕ ಶುಭಸುದ್ದಿ?
ಕಷ್ಟಪಟ್ಟಿದ್ದ ಡಿಕೆಶಿಗೆ ಕೊನೆಗೂ ಫಲ, ಅಧಿವೇಶನದ ಬಳಿಕ ಶುಭಸುದ್ದಿ?
‘ಕರ್ನಾಟಕ ಸಹೋದರನ ಮನೆ, ಕನ್ನಡವೇ ಸತ್ಯ, ಕನ್ನಡವೇ ನಿತ್ಯ: ಬಾಲಯ್ಯ
‘ಕರ್ನಾಟಕ ಸಹೋದರನ ಮನೆ, ಕನ್ನಡವೇ ಸತ್ಯ, ಕನ್ನಡವೇ ನಿತ್ಯ: ಬಾಲಯ್ಯ
ಸ್ಕೈಡೈವ್ ಮಾಡುವಾಗ ವಿಮಾನದ ರೆಕ್ಕೆಗೆ ಸಿಲುಕಿದ ಪ್ಯಾರಾಚೂಟ್
ಸ್ಕೈಡೈವ್ ಮಾಡುವಾಗ ವಿಮಾನದ ರೆಕ್ಕೆಗೆ ಸಿಲುಕಿದ ಪ್ಯಾರಾಚೂಟ್
ಡಿಕೆ ಶಿವಕುಮಾರ್ ಡಿನ್ನರ್ ಮೀಟಿಂಗ್ ರಹಸ್ಯ ಇಲ್ಲಿದೆ ನೋಡಿ
ಡಿಕೆ ಶಿವಕುಮಾರ್ ಡಿನ್ನರ್ ಮೀಟಿಂಗ್ ರಹಸ್ಯ ಇಲ್ಲಿದೆ ನೋಡಿ
ಹುಬ್ಬಳ್ಳಿ: ಮಹಿಳೆಯರ ಮುಂದೆ ಅಸಭ್ಯವಾಗಿ ವರ್ತಿಸಿದವನಿಗೆ ಧರ್ಮದೇಟು!
ಹುಬ್ಬಳ್ಳಿ: ಮಹಿಳೆಯರ ಮುಂದೆ ಅಸಭ್ಯವಾಗಿ ವರ್ತಿಸಿದವನಿಗೆ ಧರ್ಮದೇಟು!