AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಪಾರ್ಟ್‌ಮೆಂಟ್​ ಮುಂದೆ ರಂಗೋಲಿ ಹಾಕಿದ ಹಿಂದೂ ಕುಟುಂಬ, ಇಲ್ಲಿ ರಂಗೋಲಿ ಹಾಕಬೇಡಿ ಎಂದು ವಿರೋಧಿಸಿದ ಕ್ರಿಶ್ಚಿಯನ್ ಕುಟುಂಬ

ಅಪಾರ್ಟ್‌ಮೆಂಟ್​​ವೊಂದರಲ್ಲಿ ನೆರೆಹೊರೆಯ ಮನೆಯವರು (ಹಿಂದೂ ಮನೆಯವರು) ರಂಗೋಲಿ ಹಾಕಿದಕ್ಕೆ ಕ್ರಿಶ್ಚಿಯನ್ ಕುಟುಂಬವೊಂದು ವಿರೋಧ ವ್ಯಕ್ತಪಡಿಸಿರುವ ಘಟನೆ ಹೈದರಾಬಾದ್​ನಲ್ಲಿ ನಡೆದಿದೆ.

ಅಪಾರ್ಟ್‌ಮೆಂಟ್​ ಮುಂದೆ ರಂಗೋಲಿ ಹಾಕಿದ ಹಿಂದೂ ಕುಟುಂಬ, ಇಲ್ಲಿ ರಂಗೋಲಿ ಹಾಕಬೇಡಿ ಎಂದು ವಿರೋಧಿಸಿದ ಕ್ರಿಶ್ಚಿಯನ್ ಕುಟುಂಬ
TV9 Web
| Edited By: |

Updated on:Oct 26, 2022 | 10:31 AM

Share

ಹೈದರಾಬಾದ್: ಅಪಾರ್ಟ್‌ಮೆಂಟ್​​ವೊಂದರಲ್ಲಿ ನೆರೆಹೊರೆಯ ಮನೆಯವರು (ಹಿಂದೂ ಮನೆಯವರು) ರಂಗೋಲಿ ಹಾಕಿದಕ್ಕೆ ಕ್ರಿಶ್ಚಿಯನ್ ಕುಟುಂಬವೊಂದು ವಿರೋಧ ವ್ಯಕ್ತಪಡಿಸಿರುವ ಘಟನೆ ಹೈದರಾಬಾದ್​ನಲ್ಲಿ ನಡೆದಿದೆ. ಅಕ್ಟೋಬರ್ 24, ಸೋಮವಾರದಂದು ದೀಪಾವಳಿಯ ಸಂದರ್ಭದಲ್ಲಿ ತಮ್ಮ ಅಪಾರ್ಟ್‌ಮೆಂಟ್​ನಲ್ಲಿರುವ ಹಿಂದೂ ಮನೆಯವರು ರಂಗೋಲಿ ಹಾಕಿದ್ದರೆ ಎಂದು ಕ್ರಿಶ್ಚಿಯನ್ ಕುಟುಂಬವೊಂದು ವಿರೋಧಿಸಿದೆ. ಈ ಘಟನೆಗೆ ಸಂಬಂಧಿಸಿದಂತೆ ಅಪಾರ್ಟ್‌ಮೆಂಟ್‌ನಲ್ಲಿರುವ ಹಿಂದೂಗಳು ಅಕ್ರೋಶ ವ್ಯಕ್ತಪಡಿಸಿದ್ದಾರೆ.

ಕ್ರಿಶ್ಚಿಯನ್ ಕುಟುಂಬದವರು ನಮ್ಮ ಮನೆಯ ಮುಂದೆ ರಂಗೋಲಿ ಹಾಕಿದ್ದಕ್ಕೆ ವಿರೋಧಿಸಿದರು. ಜೊತೆಗೆ ಈ ರಂಗೋಲಿಯನ್ನು ತೆಗೆಯುವಂತೆ ಬೆದರಿಕೆ ಹಾಕಿದ್ದು. ವೈಯಕ್ತಿವಾಗಿ ನಿಂದಿಸಿದ್ದರೆ ಎಂದು ಆರೋಪಿಸಿದ್ದಾರೆ, ಈ ಘಟನೆಯು ಹೈದರಾಬಾದ್ ನ ಚಿಕಪಲ್ಲಿ ಪ್ರದೇಶದ ಗೋಲ್ಕೊಂಡ ಕ್ರಾಸ್ ರಸ್ತೆಯಲ್ಲಿರುವ ಅರ್ಚನಾ ಅಪಾರ್ಟ್ ಮೆಂಟ್ ನಲ್ಲಿ ನಡೆದಿದೆ.

ಇದೀಗ ಹಿಂದೂ ಸಂಘಟನೆಗಳು ಅರ್ಚನಾ ಅಪಾರ್ಟ್‌ಮೆಂಟ್‌ನಲ್ಲಿ ರಂಗೋಲಿ ಹಾಕಲು ಆಕ್ಷೇಪಿಸಿದವರ ವಿರುದ್ಧ ಕ್ರಮಕ್ಕೆ ಒತ್ತಾಯಿಸಿ ಪ್ರತಿಭಟನೆ ನಡೆಸಿತು. ಅಪಾರ್ಟ್ಮೆಂಟ್ ಮುಂದೆ ಜೈ ಶ್ರೀ ರಾಮ್ ಎಂದು ಘೋಷಣೆ ಕೂಗಲು ಪ್ರಾರಂಭಿಸಿದರು. ಮಾಧ್ಯಮಗಳೊಂದಿಗೆ ಮಾತನಾಡಿದ ಚಿಕ್ಕಡಪಲ್ಲಿ ಇನ್ಸ್‌ಪೆಕ್ಟರ್ ಎನ್.ಸಂಜಯ್ ಕುಮಾರ್ ಸೋಮವಾರ ಸಂಜೆ ಈ ಘಟನೆ ನಡೆದಿದ್ದು, ದೀಪಾವಳಿ ಸಂದರ್ಭದಲ್ಲಿ ಹಿಂದೂ ಕುಟುಂಬವು ಮನೆಯ ಮುಂದೆ ರಂಗೋಲಿ ಹಾಕಿದ್ದಾರೆ. ಎದುರಿನ ಫ್ಲಾಟ್‌ನಲ್ಲಿರುವ ಕ್ರಿಶ್ಚಿಯನ್ ನಿವಾಸಿಗಳು ರಂಗೋಲಿಯ ಹಾಕಬಾರದು ಎಂದು ವಿರೋಧ ವ್ಯಕ್ತಪಡಿಸಿದ್ದರೆ ಎಂದು ಹೇಳಿದರು.

ಈ ಅಪಾರ್ಟ್ಮೆಂಟ್ ಈ ಹಿಂದೆ ನಾಯಿಗೆ ಸಂಬಂಧಿಸಿದ ಕೇಸ್ ಕೂಡ ಇತ್ತು. ಇದೀಗ ರಂಗೋಲಿ ಹಾಕಲು ಆಕ್ಷೇಪ ವ್ಯಕ್ತಪಡಿಸಿದ ಘಟನೆ ಮಂಗಳವಾರ ಬೆಳಕಿಗೆ ಬಂದಿದೆ. ಇದಕ್ಕೆ ಆಕ್ಷೇಪ ವ್ಯಕ್ತಪಡಿಸಿದ ಕುಟುಂಬದವರ ವಿರುದ್ಧ ಪ್ರಕರಣ ದಾಖಲಿಸಿದ್ದೇವೆ. ಹೆಚ್ಚಿನ ತನಿಖೆ ನಡೆಯುತ್ತಿದೆ ಎಂದರು. ರಂಗೋಲಿ ಹಾಕಿರುವುದನ್ನು ವಿರೋಧಿಸಿದ ಕುಟುಂಬದ ವಿರುದ್ಧ ಪೊಲೀಸ್ ಅಧಿಕಾರಿಗಳು ಎಫ್‌ಐಆರ್ ದಾಖಲಿಸಿದ್ದಾರೆ. ಅವರ ವಿರುದ್ಧ ಭಾರತೀಯ ದಂಡ ಸಂಹಿತೆಯ ಸೆಕ್ಷನ್ 506 (ಕ್ರಿಮಿನಲ್ ಬೆದರಿಕೆ) ಮತ್ತು 509 (ಮಹಿಳೆಯರ ನಮ್ರತೆಗೆ ಅವಮಾನ) ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.

Published On - 10:20 am, Wed, 26 October 22

Follow Us
ರೈಲ್ವೆ ನಿಲ್ದಾಣಗಳಲ್ಲಿ ಆಹಾರ ಸೇವಿಸುವವರೇ ಹುಷಾರ್: ವಿಡಿಯೋ ನೋಡಿ
ರೈಲ್ವೆ ನಿಲ್ದಾಣಗಳಲ್ಲಿ ಆಹಾರ ಸೇವಿಸುವವರೇ ಹುಷಾರ್: ವಿಡಿಯೋ ನೋಡಿ
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ