AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಂಬಾಲ ಜೈಲಿನ ಮಣ್ಣಿನಿಂದ ನಾಥೂರಾಂ ಗೋಡ್ಸೆ ಪ್ರತಿಮೆ ನಿರ್ಮಾಣಕ್ಕೆ ಮುಂದಾದ ಹಿಂದೂ ಮಹಾಸಭಾ

ನಾಥೂರಾಮ್ ಗೋಡ್ಸೆ ಮತ್ತು ನಾರಾಯಣ ಆಪ್ಟೆ ಅವರನ್ನು ಗಲ್ಲಿಗೇರಿಸಿದ ಅಂಬಾಲಾ ಜೈಲಿನಿಂದ ಕಳೆದ ವಾರ ಹಿಂದೂ ಮಹಾಸಭಾದ ಕಾರ್ಯಕರ್ತರು ಮಣ್ಣನ್ನು ತಂದಿದ್ದಾರೆ. ಈ ಮಣ್ಣನ್ನು ಗೋಡ್ಸೆ ಮತ್ತು ಆಪ್ಟೆ ಅವರ ಪ್ರತಿಮೆಗಳನ್ನು ತಯಾರಿಸಲು ಬಳಸಲಾಗುವುದು

ಅಂಬಾಲ ಜೈಲಿನ ಮಣ್ಣಿನಿಂದ ನಾಥೂರಾಂ ಗೋಡ್ಸೆ ಪ್ರತಿಮೆ ನಿರ್ಮಾಣಕ್ಕೆ ಮುಂದಾದ ಹಿಂದೂ ಮಹಾಸಭಾ
ನಾಥೂರಾಂ ಗೋಡ್ಸೆ
TV9 Web
| Edited By: |

Updated on:Nov 16, 2021 | 1:13 PM

Share

ಗ್ವಾಲಿಯರ್: ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯನ್ನು ಕೊಂದಿದ್ದ ನಾತೂರಾಮ್ ಗೋಡ್ಸೆಯನ್ನು 1949ರಲ್ಲಿ ಗಲ್ಲಿಗೇರಿಸಿದ್ದ ಹರಿಯಾಣದ ಅಂಬಾಲ ಸೆಂಟ್ರಲ್ ಜೈಲಿನಿಂದ ತಂದ ಮಣ್ಣಿನಿಂದ ನಾಥೂರಾಮ್ ಗೋಡ್ಸೆ ಪ್ರತಿಮೆಯನ್ನು ನಿರ್ಮಿಸುವುದಾಗಿ ಹಿಂದೂ ಮಹಾಸಭಾ ಹೇಳಿದೆ. ಸೋಮವಾರ ನಾಥೂರಾಮ್ ಗೋಡ್ಸೆಯ ಪುಣ್ಯತಿಥಿಯನ್ನು ಆಚರಿಸಿದ ಬಲಪಂಥೀಯ ಸಂಘಟನೆಗಳು ಈ ಬಗ್ಗೆ ಮಾಹಿತಿ ನೀಡಿವೆ.

“ನಾಥೂರಾಮ್ ಗೋಡ್ಸೆ ಮತ್ತು ನಾರಾಯಣ ಆಪ್ಟೆ ಅವರನ್ನು ಗಲ್ಲಿಗೇರಿಸಿದ ಅಂಬಾಲಾ ಜೈಲಿನಿಂದ ಕಳೆದ ವಾರ ಹಿಂದೂ ಮಹಾಸಭಾದ ಕಾರ್ಯಕರ್ತರು ಮಣ್ಣನ್ನು ತಂದಿದ್ದಾರೆ. ಈ ಮಣ್ಣನ್ನು ಗೋಡ್ಸೆ ಮತ್ತು ಆಪ್ಟೆ ಅವರ ಪ್ರತಿಮೆಗಳನ್ನು ತಯಾರಿಸಲು ಬಳಸಲಾಗುವುದು. ಹಾಗೇ, ಆ ಪ್ರತಿಮೆಗಳನ್ನು ಗ್ವಾಲಿಯರ್‌ನಲ್ಲಿರುವ ಹಿಂದೂ ಮಹಾಸಭಾದ ಕಚೇರಿಯಲ್ಲಿ ಸ್ಥಾಪಿಸಲಾಗುವುದು ಎಂದು ಹಿಂದೂ ಮಹಾಸಭಾದ ರಾಷ್ಟ್ರೀಯ ಉಪಾಧ್ಯಕ್ಷ ಜೈವೀರ್ ಭಾರದ್ವಾಜ್ ತಿಳಿಸಿದ್ದಾರೆ.

ಹಿಂದೂ ಮಹಾಸಭಾ ಕಾರ್ಯಕರ್ತರು ಸೋಮವಾರ ಮೀರತ್‌ನ (ಉತ್ತರ ಪ್ರದೇಶ) ‘ಬಲಿಧಾನ್ ಧಾಮ್’ನಲ್ಲಿ ಗೋಡ್ಸೆ ಮತ್ತು ಆಪ್ಟೆ ಅವರ ಪ್ರತಿಮೆಗಳನ್ನು ಸ್ಥಾಪಿಸಿದ್ದಾರೆ ಎಂದು ಅವರು ಹೇಳಿದ್ದಾರೆ. ನಾವು ಪ್ರತಿ ರಾಜ್ಯದಲ್ಲೂ ಅಂತಹ ಬಲಿದಾನ್ ಧಾಮವನ್ನು ನಿರ್ಮಿಸುತ್ತೇವೆ ಎಂದು ಅವರು ಹೇಳಿದ್ದಾರೆ.

ಗ್ವಾಲಿಯರ್ ಜಿಲ್ಲಾಡಳಿತವು 2017ರಲ್ಲಿ ನಾಥೂರಾಮ್ ಗೋಡ್ಸೆಯ ಪ್ರತಿಮೆಯನ್ನು (ಇಲ್ಲಿನ ಮಹಾಸಭಾದ ಕಚೇರಿಯಲ್ಲಿ ಸ್ಥಾಪಿಸಲಾಗಿದೆ) ವಶಪಡಿಸಿಕೊಂಡಿದೆ. ಆದರೆ, ಅದನ್ನು ಇಲ್ಲಿಯವರೆಗೆ ಹಿಂತಿರುಗಿಸಿಲ್ಲ ಎಂದು ಅವರು ಹೇಳಿದ್ದಾರೆ. ದೇಶದ ವಿಭಜನೆಗೆ (1947ರಲ್ಲಿ) ಕಾಂಗ್ರೆಸ್ ಕಾರಣ ಎಂದು ಭಾರದ್ವಾಜ್ ಆರೋಪಿಸಿದರು, ಇದು ದೊಡ್ಡ ಪ್ರಮಾಣದಲ್ಲಿ ಜನರ ಹತ್ಯೆಗೆ ಕಾರಣವಾಯಿತು.

ಸೋಮವಾರ ಇಲ್ಲಿ ಹಿಂದೂ ಮಹಾಸಭಾದ ಯಾವುದೇ ಸಾರ್ವಜನಿಕ ಕಾರ್ಯಕ್ರಮವಿಲ್ಲ ಎಂದು ಗ್ವಾಲಿಯರ್‌ನ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಸತ್ಯೇಂದ್ರ ಸಿಂಗ್ ತೋಮರ್ ಹೇಳಿದ್ದಾರೆ.

ಇದನ್ನೂ ಓದಿ: Gandhi Jayanti: ಮಹಾತ್ಮ ಗಾಂಧೀಜಿಯ 10 ಅಪರೂಪದ ಚಿತ್ರಣಗಳು ನಿಮಗಾಗಿ

ನಾಥೂರಾಮ್ ಗೋಡ್ಸೆ ಸ್ವತಂತ್ರ ಭಾರತದ ಮೊದಲ ಉಗ್ರಗಾಮಿ -ಅಸಾದುದ್ದೀನ್ ಒವೈಸಿ

Published On - 1:13 pm, Tue, 16 November 21

Follow Us
Web contact
Web contact

TV9 Kannada

Read More
ಸುದೀಪ್ ರೀತಿಯೇ ಸಂಜಿತ್ ಇದ್ದಾರೆ; ಕಾರಣ ಕೊಟ್ಟ ಪ್ರಿಯಾ
ಸುದೀಪ್ ರೀತಿಯೇ ಸಂಜಿತ್ ಇದ್ದಾರೆ; ಕಾರಣ ಕೊಟ್ಟ ಪ್ರಿಯಾ
ಕಬಿನಿ ಹಿನ್ನೀರಿನಲ್ಲಿ ಆಹಾರ ಸಿಗದೆ ಆನೆಗಳ ಪರದಾಟ: ಮಳೆ ಕೊರತೆಯಿಂದ ಸಮಸ್ಯೆ
ಕಬಿನಿ ಹಿನ್ನೀರಿನಲ್ಲಿ ಆಹಾರ ಸಿಗದೆ ಆನೆಗಳ ಪರದಾಟ: ಮಳೆ ಕೊರತೆಯಿಂದ ಸಮಸ್ಯೆ
ಹೊಸಕೋಟೆ: ಕಣ್ಣೂರಹಳ್ಳಿ ರಸ್ತೆಯಲ್ಲಿ 23 ನಾಗರಹಾವು ಮರಿಗಳ ಪತ್ತೆ!
ಹೊಸಕೋಟೆ: ಕಣ್ಣೂರಹಳ್ಳಿ ರಸ್ತೆಯಲ್ಲಿ 23 ನಾಗರಹಾವು ಮರಿಗಳ ಪತ್ತೆ!
ಕರ್ಕಾಟಕ ರಾಶಿಗೆ ಗುರು ಪ್ರವೇಶ; 12ರಾಶಿಗಳ ಮೇಲೆ ಇದರ ಪ್ರಭಾವ ಹೇಗಿರಲಿದೆ?
ಕರ್ಕಾಟಕ ರಾಶಿಗೆ ಗುರು ಪ್ರವೇಶ; 12ರಾಶಿಗಳ ಮೇಲೆ ಇದರ ಪ್ರಭಾವ ಹೇಗಿರಲಿದೆ?
ವಿಶ್ವ ದಾಖಲೆ... ಒಂದೇ ಓವರ್‌ನಲ್ಲಿ ೬ ಸಿಕ್ಸ್ ಸಿಡಿಸಿದ ಕುಶಾಲ್!
ವಿಶ್ವ ದಾಖಲೆ... ಒಂದೇ ಓವರ್‌ನಲ್ಲಿ ೬ ಸಿಕ್ಸ್ ಸಿಡಿಸಿದ ಕುಶಾಲ್!
ಕೈಯಿಂದ ಪದೇ ಪದೇ ಎಣ್ಣೆ, ಹಾಲು ಜಾರಿಬಿದ್ರೆ ಏನರ್ಥ?
ಕೈಯಿಂದ ಪದೇ ಪದೇ ಎಣ್ಣೆ, ಹಾಲು ಜಾರಿಬಿದ್ರೆ ಏನರ್ಥ?
ಇಂದು ಈ ರಾಶಿಯವರು ಆರ್ಥಿಕ ವಿಷಯಗಳಲ್ಲಿ ಎಚ್ಚರಿಕೆ ವಹಿಸಬೇಕು
ಇಂದು ಈ ರಾಶಿಯವರು ಆರ್ಥಿಕ ವಿಷಯಗಳಲ್ಲಿ ಎಚ್ಚರಿಕೆ ವಹಿಸಬೇಕು
ಡಿಕೆ ಶಿವಕುಮಾರ್ ಜತೆ ಸಂಪುಟ ಸೇರೋ ಸಂಭಾವ್ಯ ಸಚಿವರ ಪಟ್ಟಿ ಇಲ್ಲಿದೆ
ಡಿಕೆ ಶಿವಕುಮಾರ್ ಜತೆ ಸಂಪುಟ ಸೇರೋ ಸಂಭಾವ್ಯ ಸಚಿವರ ಪಟ್ಟಿ ಇಲ್ಲಿದೆ
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ