AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹಿಂದೂ-ಮುಸ್ಲಿಂ ಡಿಎನ್​ಎ ಒಂದೇ ಎಂದಮೇಲೆ ಅಸಮತೋಲನ ಎಲ್ಲಿದೆ?; ಮೋಹನ್ ಭಾಗವತ್​ಗೆ ಓವೈಸಿ ತಿರುಗೇಟು

ಹಿಂದೂ- ಮುಸ್ಲಿಮರಲ್ಲಿ ಒಂದೇ ಡಿಎನ್​ಎ ಇರುವುದು ನಿಜವಾದರೆ ಅಸಮತೋಲನದ ಪ್ರಶ್ನೆಯೇ ಬರುವುದಿಲ್ಲ. ಆಗ ಜನಸಂಖ್ಯೆ ನಿಯಂತ್ರಣದ ಅಗತ್ಯವೂ ಇರುವುದಿಲ್ಲ ಎಂದು ಅಸಾದುದ್ದೀನ್ ಓವೈಸಿ

ಹಿಂದೂ-ಮುಸ್ಲಿಂ ಡಿಎನ್​ಎ ಒಂದೇ ಎಂದಮೇಲೆ ಅಸಮತೋಲನ ಎಲ್ಲಿದೆ?; ಮೋಹನ್ ಭಾಗವತ್​ಗೆ ಓವೈಸಿ ತಿರುಗೇಟು
ಅಸಾದುದ್ದೀನ್ ಓವೈಸಿ- ಮೋಹನ್ ಭಾಗವತ್
Follow us
TV9 Web
| Updated By: ಸುಷ್ಮಾ ಚಕ್ರೆ

Updated on:Oct 05, 2022 | 4:37 PM

ನವದೆಹಲಿ: ಮತಾಂತರ, ಧರ್ಮಾಧಾರಿತ ಜನಸಂಖ್ಯೆಯ ಅಸಮತೋಲನದ ಬಗ್ಗೆ ಆರ್​ಎಸ್​​ಎಸ್​ ಮುಖ್ಯಸ್ಥ ಮೋಹನ್ ಭಾಗವತ್ ಮಾತನಾಡಿದ್ದರು. ಎಲ್ಲರಿಗೂ ಸಮಾನವಾಗಿ ಅನ್ವಯವಾಗುವ ಪರಿಣಾಮಕಾರಿ ಜನಸಂಖ್ಯಾ ನಿಯಂತ್ರಣ ನೀತಿ ಬೇಕಿದೆ. ಅದು ಒಮ್ಮೆ ಅಸ್ತಿತ್ವಕ್ಕೆ ಬಂದರೆ, ಯಾರಿಗೂ ವಿನಾಯಿತಿ ಸಿಗಬಾರದು ಎಂದು ಮೋಹನ್ ಭಾಗವತ್ ತಿಳಿಸಿದ್ದರು. ಈ ಹಿನ್ನೆಲೆಯಲ್ಲಿ ಪ್ರತಿಕ್ರಿಯೆ ನೀಡಿರುವ ಎಐಎಂಐಎಂ ಮುಖ್ಯಸ್ಥ ಹಾಗೂ ಸಂಸದ ಅಸಾದುದ್ದೀನ್ ಓವೈಸಿ, ದೇಶದಲ್ಲಿ ಜನಸಂಖ್ಯೆ ನಿಯಂತ್ರಣದ ಅವಶ್ಯಕತೆ ಇಲ್ಲ. ಹಿಂದೂ- ಮುಸ್ಲಿಮರಲ್ಲಿ ಒಂದೇ ಡಿಎನ್​ಎ ಇರುವುದು ನಿಜವಾದರೆ ಅಸಮತೋಲನದ ಪ್ರಶ್ನೆಯೇ ಬರುವುದಿಲ್ಲ. ಆಗ ಜನಸಂಖ್ಯೆ ನಿಯಂತ್ರಣದ ಅಗತ್ಯವೂ ಇರುವುದಿಲ್ಲ. ನಾವೀಗ ತಲೆಕೆಡಿಸಿಕೊಳ್ಳಬೇಕಾಗಿರುವುದು ವೃದ್ಧರ ಜನಸಂಖ್ಯೆ ಹೆಚ್ಚಳವಾಗುತ್ತಿರುವುದರ ಬಗ್ಗೆ ಮತ್ತು ನಿರುದ್ಯೋಗಿ ಯುವಕರು ತಮ್ಮ ಹಿರಿಯರಿಗೆ ಸಹಾಯ ನೀಡಲು ಆಗದಿರುವುದರ ಬಗ್ಗೆ. ಮುಸ್ಲಿಮರ ಫಲವತ್ತತೆ ದರದಲ್ಲಿ ಅತ್ಯಂತ ಶೀಘ್ರ ಕುಸಿತವಾಗುತ್ತಿದೆ ಎಂದು ತಿರುಗೇಟು ನೀಡಿದ್ದಾರೆ.

ಜನಸಂಖ್ಯಾ ನೀತಿಯ ಕುರಿತಾದ ಭಾಗವತ್ ಅವರ ಹೇಳಿಕೆಯನ್ನು ಟೀಕಿಸಿದ ಆಲ್ ಇಂಡಿಯಾ ಮಜ್ಲಿಸ್-ಎ-ಇತ್ತೆಹಾದುಲ್ ಮುಸ್ಲಿಮೀನ್ (ಎಐಎಂಐಎಂ) ಮುಖ್ಯಸ್ಥ ಮತ್ತು ಹೈದರಾಬಾದ್ ಸಂಸದ ಅಸಾದುದ್ದೀನ್ ಓವೈಸಿ, “ಮೋಹನ್ ಭಾಗವತ್ ಅವರಿಗೆ ಇದು ದ್ವೇಷ ಭಾಷಣದ ದಿನವಾಗಿದೆ. ಜನಸಂಖ್ಯಾ ಅಸಮತೋಲದ ಭಯವು ನರಮೇಧಕ್ಕೆ ಕಾರಣವಾಗಿದೆ. “ಹಿಂದೂಗಳು ಮತ್ತು ಮುಸ್ಲಿಮರು ಒಂದೇ ಡಿಎನ್‌ಎ ಹೊಂದಿದ್ದರೆ, “ಅಸಮತೋಲನ” ಎಲ್ಲಿದೆ? ವಿನಾಕಾರಣ ಏನೇನೋ ಹೇಳಿಕೆ ನೀಡಿ ಜನರ ಹಾದಿ ತಪ್ಪಿಸಬಾರದು ಎಂದಿದ್ದಾರೆ.

ಇದನ್ನೂ ಓದಿ: Mohan Bhagwat: ಅಖಂಡ ಭಾರತ ನಿರ್ಮಾಣ, ಹಿಂದೂರಾಷ್ಟ್ರದ ನಿಲುವು, ನೂತನ ಜನಸಂಖ್ಯಾ ನೀತಿಯ ಬಗ್ಗೆ ಮೋಹನ್ ಭಾಗವತ್ ಪ್ರಸ್ತಾಪ

ಇದಕ್ಕೂ ಮುನ್ನ ಮೋಹನ್ ಭಾಗವತ್ ಅವರು ಭಾರತದ ಜನಸಂಖ್ಯಾ ಸ್ಫೋಟದ ಸಾಧಕ-ಬಾಧಕಗಳನ್ನು ಎತ್ತಿ ತೋರಿಸಿದರು. ಉದಾಹರಣೆಗೆ, ಒಂದು ಮಗುವಿನ ನೀತಿಯನ್ನು ಅಳವಡಿಸಿಕೊಂಡ ಚೀನಾಕ್ಕೆ ಹೋಲಿಸಿದರೆ ಭಾರತವು ಜನಸಂಖ್ಯಾ ಲಾಭಾಂಶವನ್ನು ಹೊಂದಿದೆ. ದೇಶದ ಒಟ್ಟು ಫಲವತ್ತತೆ ದರ (ಟಿಎಫ್‌ಆರ್) ಪ್ರತಿ ಮಹಿಳೆಗೆ ಎರಡು ಮಕ್ಕಳಿಗೆ ಇಳಿಕೆಯಾಗಿದೆ. ಜನಸಂಖ್ಯೆಯನ್ನು ಕಡಿಮೆ ಮಾಡದ ಹೊರತು ಏನೂ ಆಗುವುದಿಲ್ಲ ಎಂದು ಕೆಲವರು ಹೇಳುತ್ತಾರೆ. ಈ ಮಾತು ಸಂಪೂರ್ಣವಾಗಿ ನಿಜವಲ್ಲ. ಜನಸಂಖ್ಯೆ ಹೆಚ್ಚಾದಷ್ಟೂ ಹೊರೆ ಹೆಚ್ಚಾಗುತ್ತದೆ ಎಂಬುದು ನಿಜ. ಜನಸಂಖ್ಯೆಯನ್ನು ಹೊರೆಯಾಗಿ ನೋಡಿದಾಗ ಅದು ಆಗಬಹುದು. ಸರಿಯಾಗಿ ಬಳಸಿಕೊಂಡರೆ ಜನಸಂಖ್ಯೆ ನಮ್ಮ ಆಸ್ತಿಯಾಗುತ್ತದೆ. ನಮ್ಮಲ್ಲಿ ಅಪಾರ ಜನಸಂಖ್ಯೆ ಇದೆ. ಅದನ್ನು ಹೊರೆ ಎಂದು ಹೇಳಬಹುದು. ಆದರೆ ನಾವು ಇಂದು ಜನಸಂಖ್ಯಾ ಲಾಭಾಂಶದ ಸ್ಥಾನದಲ್ಲಿ ಇದ್ದೇವೆ. ಯಾವುದೇ ದೇಶವು 57 ಕೋಟಿ ಯುವಕರನ್ನು ಹೊಂದಿಲ್ಲ. ನಮ್ಮ ನೆರೆಯ ಚೀನಾದಲ್ಲಿ ವೃದ್ಧರ ಸಂಖ್ಯೆ ಹೆಚ್ಚಾಗಿದೆ. ಆದರೆ, ಭಾರತದಲ್ಲಿ ಯುವಕರ ಸಂಖ್ಯೆ ಹೆಚ್ಚಿದೆ ಎಂದಿದ್ದರು.

ಇದನ್ನೂ ಓದಿ:Mohan Bhagwat: ಅಸ್ಪೃಶ್ಯತೆ, ಜಾತಿ ತಾರತಮ್ಯ ಅಧರ್ಮ; ವಿಜಯದಶಮಿ ಭಾಷಣದಲ್ಲಿ ಮೋಹನ್ ಭಾಗವತ್ 

ಜನಸಂಖ್ಯೆಯ ಅಸಮತೋಲನವು ಭೌಗೋಳಿಕ ಗಡಿಗಳಲ್ಲಿ ಬದಲಾವಣೆಗಳಿಗೆ ಕಾರಣವಾಗುತ್ತದೆ. ಜನನ ದರದಲ್ಲಿನ ವ್ಯತ್ಯಾಸಗಳ ಜೊತೆಗೆ, ಬಲ, ಆಮಿಷ ಅಥವಾ ದುರಾಸೆ ಮತ್ತು ಧಾರ್ಮಿಕ ಒಳನುಸುಳುವಿಕೆಯಿಂದ ಮತಾಂತರಗಳು ಸಹ ದೊಡ್ಡ ಕಾರಣವಾಗುತ್ತವೆ. ರಾಷ್ಟ್ರೀಯ ಹಿತಾಸಕ್ತಿಯನ್ನು ಗಮನದಲ್ಲಿ ಇರಿಸಿಕೊಂಡು ಎಲ್ಲರಿಗೂ ಸಮಾನವಾಗಿ ಅನ್ವಯವಾಗುವ ಪರಿಣಾಮಕಾರಿ ಜನಸಂಖ್ಯಾ ನಿಯಂತ್ರಣ ನೀತಿಯನ್ನು ಜಾರಿಗೆ ತರುವ ಅಗತ್ಯವಿದೆ ಎಂದು ಮೋಹನ್ ಭಾಗವತ್ ಹೇಳಿದ್ದರು.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 4:36 pm, Wed, 5 October 22

ಜಯಂತಿ ಬಸುರಿ ಮತ್ತು ಸೀಮಂತದ ದಿನಾಂಕ ಫಿಕ್ಸ್ ಆಗಿತ್ತು: ನೆರೆಮನೆ ಮಹಿಳೆ
ಜಯಂತಿ ಬಸುರಿ ಮತ್ತು ಸೀಮಂತದ ದಿನಾಂಕ ಫಿಕ್ಸ್ ಆಗಿತ್ತು: ನೆರೆಮನೆ ಮಹಿಳೆ
ಅಸಿಮ್ ಮುನೀರ್​​ಗೆ ಔತಣ ನೀಡಿದ ಟ್ರಂಪ್ ವಿರುದ್ಧ ಶಶಿ ತರೂರ್ ಲೇವಡಿ
ಅಸಿಮ್ ಮುನೀರ್​​ಗೆ ಔತಣ ನೀಡಿದ ಟ್ರಂಪ್ ವಿರುದ್ಧ ಶಶಿ ತರೂರ್ ಲೇವಡಿ
ಒನ್​ ವೇನಲ್ಲಿ ಬಂದು ಡಿಸಿಗೆ ಅವಾಜ್ ಹಾಕಿದ ಬೈಕ್ ಸವಾರ: ಮುಂದೇನಾಯ್ತು?
ಒನ್​ ವೇನಲ್ಲಿ ಬಂದು ಡಿಸಿಗೆ ಅವಾಜ್ ಹಾಕಿದ ಬೈಕ್ ಸವಾರ: ಮುಂದೇನಾಯ್ತು?
ಪಕ್ಷ ಅಧಿಕಾರಕ್ಕೆ ಬರಬೇಕಾದರೆ ಸಾಮೂಹಿಕ ನಾಯಕತ್ವ ಬೇಕಾಗುತ್ತದೆ: ರಾಜಣ್ಣ
ಪಕ್ಷ ಅಧಿಕಾರಕ್ಕೆ ಬರಬೇಕಾದರೆ ಸಾಮೂಹಿಕ ನಾಯಕತ್ವ ಬೇಕಾಗುತ್ತದೆ: ರಾಜಣ್ಣ
ಜನಪ್ರಿಯ ಗೆಟ್ಟೋ ಕಿಡ್ಸ್​ಗೆ ಪ್ರೀತಿಯ ವಿದಾಯ ಹೇಳಿದ ಅರ್ಜುನ್ ಜನ್ಯ
ಜನಪ್ರಿಯ ಗೆಟ್ಟೋ ಕಿಡ್ಸ್​ಗೆ ಪ್ರೀತಿಯ ವಿದಾಯ ಹೇಳಿದ ಅರ್ಜುನ್ ಜನ್ಯ
ಕಚೇರಿಗೆ ಗೈರುಹಾಜರಾದರೂ ಸಿಬ್ಬಂದಿಯಿಂದ ಸಿಎಲ್ ಅರ್ಜಿ ಇಲ್ಲ!
ಕಚೇರಿಗೆ ಗೈರುಹಾಜರಾದರೂ ಸಿಬ್ಬಂದಿಯಿಂದ ಸಿಎಲ್ ಅರ್ಜಿ ಇಲ್ಲ!
‘ಎಕ್ಕ’ ಸಿನಿಮಾ ಸುದ್ದಿಗೋಷ್ಠಿಯಲ್ಲಿ ಅಶ್ವಿನಿ ಪುನೀತ್​ ರಾಜ್​​ಕುಮಾರ್
‘ಎಕ್ಕ’ ಸಿನಿಮಾ ಸುದ್ದಿಗೋಷ್ಠಿಯಲ್ಲಿ ಅಶ್ವಿನಿ ಪುನೀತ್​ ರಾಜ್​​ಕುಮಾರ್
ತಾಲೂಕು ಕಚೇರಿಯ ಗ್ರೇಡ್ 2 ತಹಸೀಲ್ದಾರ್​ಗೆ ನೀರಿಳಿಸಿದ ಸಚಿವ ಭೈರೇಗೌಡ
ತಾಲೂಕು ಕಚೇರಿಯ ಗ್ರೇಡ್ 2 ತಹಸೀಲ್ದಾರ್​ಗೆ ನೀರಿಳಿಸಿದ ಸಚಿವ ಭೈರೇಗೌಡ
ಯಾವ್ಯಾವುದಕ್ಕೆ ಎಷ್ಟೆಷ್ಟು ಲಂಚ ಅಂತ ಕಚೇರಿಯಲ್ಲಿ ದರಪಟ್ಟಿ ಲಗತ್ತಿಸಿ! ಸಚಿವ
ಯಾವ್ಯಾವುದಕ್ಕೆ ಎಷ್ಟೆಷ್ಟು ಲಂಚ ಅಂತ ಕಚೇರಿಯಲ್ಲಿ ದರಪಟ್ಟಿ ಲಗತ್ತಿಸಿ! ಸಚಿವ
ಕಚೇರಿಗೆ ದಿಢೀರ್ ಭೇಟಿ: ಅಧಿಕಾರಿಗಳು, ನೌಕರರಿಗೆ ಕೃಷ್ಣಭೈರೇಗೌಡ ಕ್ಲಾಸ್
ಕಚೇರಿಗೆ ದಿಢೀರ್ ಭೇಟಿ: ಅಧಿಕಾರಿಗಳು, ನೌಕರರಿಗೆ ಕೃಷ್ಣಭೈರೇಗೌಡ ಕ್ಲಾಸ್