AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತಂದೆಯ ಕೊನೇ ಆಸೆ ನೆರವೇರಿಸಲು ಈ ಹಿಂದು ಸೋದರಿಯರು ಮಾಡಿದ್ದೇನು?-ಇಬ್ಬರಿಗೂ ಸನ್ಮಾನ ಮಾಡುತ್ತೇವೆ ಎಂದು ಖುಷಿ ವ್ಯಕ್ತಪಡಿಸಿದ ಮುಸ್ಲಿಂ ಮುಖಂಡರು

ತಂದೆಯ ಕೊನೇ ಆಸೆಯನ್ನು ತೀರಿಸುವುದು ತುಂಬ ಮುಖ್ಯ. ನನ್ನ ಸೋದರಿಯರು ಅದಕ್ಕೆ ಮುಂದಾಗಿದ್ದಾರೆ. ಅವರ ಕೊನೇ ಆಸೆ ನೆರವೇರಿದರೆ ಅವರ ಆತ್ಮಕ್ಕೆ ಶಾಂತಿ ಸಿಗುತ್ತದೆ ಎಂದು ರಾಕೇಶ್ ಹೇಳಿದ್ದಾರೆ.

ತಂದೆಯ ಕೊನೇ ಆಸೆ ನೆರವೇರಿಸಲು ಈ ಹಿಂದು ಸೋದರಿಯರು ಮಾಡಿದ್ದೇನು?-ಇಬ್ಬರಿಗೂ ಸನ್ಮಾನ ಮಾಡುತ್ತೇವೆ ಎಂದು ಖುಷಿ ವ್ಯಕ್ತಪಡಿಸಿದ ಮುಸ್ಲಿಂ ಮುಖಂಡರು
ಪ್ರಾತಿನಿಧಿಕ ಚಿತ್ರ
TV9 Web
| Edited By: |

Updated on:May 05, 2022 | 10:35 AM

Share

ಮೃತ ತಂದೆಯ ಕೊನೇ ಆಸೆಯನ್ನು ನೆರವೇರಿಸುವ ಸಲುವಾಗಿ ಈ ಇಬ್ಬರು ಸೋದರಿಯರು ತಮ್ಮ ಕುಟುಂಬಕ್ಕೆ ಸೇರಿದ  4 ಬಿಘಾಗಳಷ್ಟು ( ಸುಮಾರು 3 ಎಕರೆ) ಭೂಮಿಯನ್ನು ಈದ್ಗಾಕ್ಕೆ ದಾನವಾಗಿ ಕೊಟ್ಟಿದ್ದಾರೆ. ಈದ್ಗಾ ಎಂದರೆ ಮುಸ್ಲಿಮರು ಈದ್​ ಹಬ್ಬದಲ್ಲಿ ಸಾಮೂಹಿಕವಾಗಿ ಪ್ರಾರ್ಥನೆ ಮಾಡುವ ತೆರೆದ ಪ್ರದೇಶ. ಅಂದಹಾಗೇ, 1.5 ಕೋಟಿ ರೂಪಾಯಿಯೂ ಅಧಿಕ ಮೌಲ್ಯದ ಭೂಮಿಯನ್ನು ದೇಣಿಗೆ ನೀಡಿದ್ದು ಹಿಂದು ಸೋದರಿಯರು. ಇಂಥದ್ದೊಂದು ಅಪರೂಪದ ಘಟನೆ ನಡೆದದ್ದು ಉತ್ತರಾಖಂಡ್​​ನ ಉಧಾಮ್​ ಸಿಂಗ್​ ನಗರದ ಕಾಶಿಪುರ ಎಂಬ ಹಳ್ಳಿಯಲ್ಲಿ. ಹೀಗೆ ನೆಲವನ್ನು ಕೊಟ್ಟಿದ್ದಕ್ಕೆ ಮುಸ್ಲಿಂ ಸಮುದಾಯದವರು ಧನ್ಯವಾದ ಸಲ್ಲಿಸಿದ್ದಾರೆ. ಇಬ್ಬರು ಯುವತಿಯರ ಮೃತ ತಂದೆಗೆ ಈದ್​ ಹಬ್ಬದಂದು ಗೌರವವನ್ನೂ ಸಮರ್ಪಿಸಿದ್ದಾರೆ.  ದೇಶಾದ್ಯಂತ ಹಲವು ಕಡೆಗಳಲ್ಲಿ ಈಗ ಕೋಮುಗಲಾಟೆ ಶುರುವಾಗಿದೆ. ವಿವಿಧ ರಾಜ್ಯಗಳಲ್ಲಿ ಹಿಂದು-ಮುಸ್ಲಿಂ ಗಲಾಟೆ ನಡೆಯುತ್ತಿದೆ. ಈ ಮಧ್ಯೆ ಹಿಂದು ಸೋದರಿಯರು ಮಾಡಿದ ಕೆಲಸ ಅಪಾರ ಮೆಚ್ಚುಗೆ ಪಡೆದಿದೆ. 

ಈ ಸೋದರಿಯರ ತಂದೆ ಬ್ರಜನಂದನ್​ ಪ್ರಸಾದ್ ರಸ್ಟೋಗಿ. ಸುಮಾರು 20ವರ್ಷಗಳ ಹಿಂದೆಯೇ ಮೃತಪಟ್ಟಿದ್ದಾರೆ. ಅದಕ್ಕೂ ಮೊದಲು ಅವರೊಮ್ಮೆ ತಮ್ಮ ಸಂಬಂಧಿಯೊಬ್ಬರ ಬಳಿ ಮಾತನಾಡುತ್ತ, ‘ನನಗೆ ನನ್ನ 4 ಬಿಘಾಗಳಷ್ಟು ಕೃಷಿ ಭೂಮಿಯನ್ನು ಈದ್ಗಾಕ್ಕೆ ದೇಣಿಗೆ ಕೊಡಬೇಕು ಎಂಬ ಇರಾದೆಯಿದೆ. ನಾನು ಇಷ್ಟು ನೆಲ ಅಲ್ಲಿಗೆ ಕೊಟ್ಟರೆ, ಈದ್ಗಾ ವಿಸ್ತರಣೆಗೆ ಸಹಾಯವಾಗುತ್ತದೆ’ ಎಂದಿದ್ದರಂತೆ.  ಆದರೆ ಅದನ್ನು ತನ್ನ ಮಕ್ಕಳ ಬಳಿ ಹೇಳಿ, ಭೂಮಿಯನ್ನು ಕೊಡುವುದಕ್ಕೂ ಮೊದಲು, 2003ರಲ್ಲಿಯೇ ತೀರಿ ಹೋಗಿದ್ದಾರೆ. ಈ ವಿಷಯ ಈಗ ಹೆಣ್ಣುಮಕ್ಕಳಾದ ಸರೋಜಾ ಮತ್ತು ಅನಿತಾಗೆ ತಿಳಿದಿದೆ. ಸರೋಜಾ ದೆಹಲಿಯಲ್ಲಿ ಮತ್ತು ಅನಿತಾ ಮೀರತ್​​ನಲ್ಲಿ ವಾಸವಾಗಿದ್ದು, ಇವರಿಗೆ ಇನ್ನೊಬ್ಬ ಸಹೋದರನೂ ಇದ್ದಾನೆ. ಆತನ ಹೆಸರು ರಾಕೇಶ್​ ರಾಸ್ಟೋಗಿ. ಅನಿತಾ ಮತ್ತು ಸರೋಜಾ ಮೊದಲು ಈ ಬಗ್ಗೆ ತಮ್ಮ ಸೋದರ ರಾಕೇಶ್​ ಜತೆ ಈ ಬಗ್ಗೆ ಚರ್ಚಿಸಿದರು. ಅದಕ್ಕೆ ಆತ ಕೂಡ ಖುಷಿಯಿಂದಲೇ ಒಪ್ಪಿಕೊಂಡಿದ್ದಾನೆ.

ತಂದೆಯ ಕೊನೇ ಆಸೆಯನ್ನು ತೀರಿಸುವುದು ತುಂಬ ಮುಖ್ಯ. ನನ್ನ ಸೋದರಿಯರು ಅದಕ್ಕೆ ಮುಂದಾಗಿದ್ದಾರೆ. ಅವರ ಕೊನೇ ಆಸೆ ನೆರವೇರಿದರೆ ಅವರ ಆತ್ಮಕ್ಕೆ ಶಾಂತಿ ಸಿಗುತ್ತದೆ ಎಂದು ರಾಕೇಶ್ ಹೇಳಿದ್ದಾರೆ. ಹಾಗೇ, ಈದ್ಗಾ ಕಮಿಟಿಯ ಹಸೀನ್ ಖಾನ್ ಮಾತನಾಡಿ, ಕೋಮು ಸೌಹಾರ್ದತೆಗೆ ಈ ಇಬ್ಬರು ಹಿಂದು ಯುವತಿಯರು ಜ್ವಲಂತ ಉದಾಹರಣೆ.  ನಾವು ಅವರಿಗೆ ಸದಾ ಕೃತಜ್ಞರಾಗಿರುತ್ತೇವೆ.  ಶೀಘ್ರದಲ್ಲೇ ಅವರಿಗೆ ಸನ್ಮಾನ ಮಾಡಲಾಗುವುದು ಎಂದು ತಿಳಿಸಿದ್ದಾರೆ.

ಇದನ್ನೂ ಓದಿ: IPL 2022: ಆರೆಂಜ್ ಕ್ಯಾಪ್ ಬಟ್ಲರ್ ಬಳಿ ಭದ್ರ; ಪರ್ಪಲ್ ಕ್ಯಾಪ್ ರೇಸ್​ನಲ್ಲಿ ಇರೋರು ಯಾರೆಲ್ಲಾ?

Published On - 10:35 am, Thu, 5 May 22

Follow Us
Web contact
Web contact

TV9 Kannada

Read More
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ
Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ
Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ
ಡಿಸಿಎಂ ಆಗಿ ಆಯ್ಕೆ ಬೆನ್ನಲ್ಲೇ ಪರಮೇಶ್ವರ್​​ ಫಸ್ಟ್​​ ರಿಯಾಕ್ಷನ್​​
ಡಿಸಿಎಂ ಆಗಿ ಆಯ್ಕೆ ಬೆನ್ನಲ್ಲೇ ಪರಮೇಶ್ವರ್​​ ಫಸ್ಟ್​​ ರಿಯಾಕ್ಷನ್​​
ಸಿಎಂ ಆಗುವ ಮುನ್ನವೇ ಡಿಕೆಶಿ ರಾಜಕೀಯ ತಂತ್ರಗಾರಿಕೆ
ಸಿಎಂ ಆಗುವ ಮುನ್ನವೇ ಡಿಕೆಶಿ ರಾಜಕೀಯ ತಂತ್ರಗಾರಿಕೆ
ಡಿಕೆಶಿ ಜೊತೆಗಿನ 25 ವರ್ಷದ ಆತ್ಮೀಯತೆ ಹಂಚಿಕೊಂಡ ಕಡಲೆಕಾಯಿ ವ್ಯಾಪಾರಿ
ಡಿಕೆಶಿ ಜೊತೆಗಿನ 25 ವರ್ಷದ ಆತ್ಮೀಯತೆ ಹಂಚಿಕೊಂಡ ಕಡಲೆಕಾಯಿ ವ್ಯಾಪಾರಿ
ಡಿಕೆಶಿ ಸಿಎಂ, ಪರಮೇಶ್ವರ್-ಡಿಸಿಎಂ: ಇಲ್ಲಿದೆ ಸಚಿವರ ಅಧಿಕೃತ ಲಿಸ್ಟ್
ಡಿಕೆಶಿ ಸಿಎಂ, ಪರಮೇಶ್ವರ್-ಡಿಸಿಎಂ: ಇಲ್ಲಿದೆ ಸಚಿವರ ಅಧಿಕೃತ ಲಿಸ್ಟ್
ಡಿಕೆಶಿ ಪ್ರಮಾಣವಚನ ಕಾರ್ಯಕ್ರಮದ ಬಗ್ಗೆ ನೊಣವಿನಕೆರೆ ಶ್ರೀಗಳು ಹೇಳಿದ್ದಿಷ್ಟು
ಡಿಕೆಶಿ ಪ್ರಮಾಣವಚನ ಕಾರ್ಯಕ್ರಮದ ಬಗ್ಗೆ ನೊಣವಿನಕೆರೆ ಶ್ರೀಗಳು ಹೇಳಿದ್ದಿಷ್ಟು
‘ಬ್ಲಾಸ್ಟ್​’ ಸಿನಿಮಾಗೆ ಬ್ಲಾಸ್ಟ್​ ಮ್ಯೂಸಿಕ್ ಕೊಟ್ಟ ರವಿ ಬಸ್ರೂರು
‘ಬ್ಲಾಸ್ಟ್​’ ಸಿನಿಮಾಗೆ ಬ್ಲಾಸ್ಟ್​ ಮ್ಯೂಸಿಕ್ ಕೊಟ್ಟ ರವಿ ಬಸ್ರೂರು
ಬೆಂಗಳೂರಿನಾದ್ಯಂತ ಡಿಕೆ ಶಿವಕುಮಾರ್ ಫ್ಲೆಕ್ಸ್, ಕಟೌಟ್​​ಗಳ ಅಬ್ಬರ!
ಬೆಂಗಳೂರಿನಾದ್ಯಂತ ಡಿಕೆ ಶಿವಕುಮಾರ್ ಫ್ಲೆಕ್ಸ್, ಕಟೌಟ್​​ಗಳ ಅಬ್ಬರ!