AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೇರಳ: ಹಿರಿಯ ಮುಸ್ಲಿಂ ವ್ಯಕ್ತಿಯ ನಿಧನಕ್ಕೆ ಶೋಕ ವ್ಯಕ್ತಪಡಿಸಿ ವಾರ್ಷಿಕ ಮಹೋತ್ಸವ ರದ್ದು ಮಾಡಿದ ಹಿಂದೂ ದೇವಾಲಯ

ಹೈದರ್ ನಮಗೆ ಹಾಗೂ ಹಳ್ಳಿಯಲ್ಲಿದ್ದ ಹಿಂದೂ ಸಮಾಜಕ್ಕೆ ತುಂಬಾ ಹತ್ತಿರವಾಗಿದ್ದರು. ಒಂದಾನೊಂದು ಕಾಲದಲ್ಲಿ ಮರದ ವ್ಯಾಪಾರಿಯಾಗಿದ್ದ ಅವರು ದೇವಸ್ಥಾನದ ಎದುರುಗಡೆಯೇ ವಾಸಿಸುತ್ತಿದ್ದರು. ಶುಕ್ರವಾರ ರಾತ್ರಿ 9 ಗಂಟೆ ಸುಮಾರಿಗೆ ಹೈದರ್ ಮೃತಪಟ್ಟಿದ್ದಾರೆ

ಕೇರಳ: ಹಿರಿಯ ಮುಸ್ಲಿಂ ವ್ಯಕ್ತಿಯ ನಿಧನಕ್ಕೆ ಶೋಕ ವ್ಯಕ್ತಪಡಿಸಿ ವಾರ್ಷಿಕ ಮಹೋತ್ಸವ ರದ್ದು ಮಾಡಿದ ಹಿಂದೂ ದೇವಾಲಯ
ಪ್ರಾತಿನಿಧಿಕ ಚಿತ್ರ
TV9 Web
| Edited By: |

Updated on: Feb 17, 2022 | 8:27 PM

Share

ತಿರೂರ್: ಕೇರಳದ (Kerala) ಮಲಪ್ಪುರಂ ಜಿಲ್ಲೆಯ ಹಿಂದೂ ದೇವಾಲಯವೊಂದು ಕಳೆದ ವಾರ ಫೆಬ್ರವರಿ 11 ರ ರಾತ್ರಿ ಸಾವನ್ನಪ್ಪಿದ ಮುಸ್ಲಿಂ ವ್ಯಕ್ತಿಗೆ ಗೌರವ ಸೂಚಕವಾಗಿ ಮಹೋತ್ಸವವನ್ನು ರದ್ದು ಮಾಡಿದೆ. ಮುಸ್ಲಿಂ ಪ್ರಾಬಲ್ಯವಿರುವ ಜಿಲ್ಲೆಯಾದ ಮಲಪ್ಪುರಂನ (Malappuram) ಬೀರಂಚಿರಾ ಗ್ರಾಮದ ಪುನ್ನಶ್ಶೇರಿ ಭಗವತಿ ದೇವಸ್ಥಾನದಲ್ಲಿ ವಾರ್ಷಿಕ ಉತ್ಸವವನ್ನು ಆಚರಿಸುತ್ತಿದ್ದಾಗ, ಅದೇ ಊರಿನ ನಿವಾಸಿ ಚೆರತ್ತಿಲ್ ಹೈದರ್ ಎಂಬ 72 ವರ್ಷದ ವ್ಯಕ್ತಿ ಕಳೆದ ಶುಕ್ರವಾರ ನಿಧನರಾದರು. ಶನಿವಾರದವರೆಗೆ ನಡೆಯಬೇಕಿದ್ದ ದೇವಾಲಯದ ಮೆರವಣಿಗೆ ಮತ್ತು ಇತರ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ರದ್ದುಗೊಳಿಸಲು ದೇವಾಲಯದ ಅಧಿಕಾರಿಗಳು ನಿರ್ಧರಿಸಿದರು. ದೇವಾಲಯದಲ್ಲಿ ಸೀಮಿತ ಆಚರಣೆಗಳನ್ನು ಮಾತ್ರ ನಡೆಸಲಾಗಿತ್ತು. ಹೈದರ್ ನಮಗೆ ಹಾಗೂ ಹಳ್ಳಿಯಲ್ಲಿದ್ದ ಹಿಂದೂ ಸಮಾಜಕ್ಕೆ ತುಂಬಾ ಹತ್ತಿರವಾಗಿದ್ದರು. ಒಂದಾನೊಂದು ಕಾಲದಲ್ಲಿ ಮರದ ವ್ಯಾಪಾರಿಯಾಗಿದ್ದ ಅವರು ದೇವಸ್ಥಾನದ ಎದುರುಗಡೆಯೇ ವಾಸಿಸುತ್ತಿದ್ದರು. ಶುಕ್ರವಾರ ರಾತ್ರಿ 9 ಗಂಟೆ ಸುಮಾರಿಗೆ ಹೈದರ್ ಮೃತಪಟ್ಟಿದ್ದಾರೆ ಎಂದು ನಮಗೆ ತಿಳಿಸಲಾಯಿತು. ಕೊವಿಡ್-19 ನಿಯಮಾವಳಿಗಳನ್ನು ಸಡಿಲಿಸಿದ ನಂತರ ದೇವಸ್ಥಾನವು ಆಚರಣೆಗಳನ್ನು ಆರಂಭ ಮಾಡಿದ್ದೆವು. ಹಲವಾರು ಮೆರವಣಿಗೆಗಳು ದೇವಸ್ಥಾನಕ್ಕೆ ಹೋಗುತ್ತಿದ್ದವು. ನಾವು ಮೆರವಣಿಗೆಗಳನ್ನು ಸ್ಥಗಿತಗೊಳಿಸಿದ್ದೇವೆ ಎಂದು ದೇವಸ್ಥಾನ ಸಮಿತಿ ಉಪಾಧ್ಯಕ್ಷ ಎಂ ವಿ ವಾಸು ಸೋಮವಾರ ಹೇಳಿದ್ದಾರೆ.

ದೇವಸ್ಥಾನದ ನಿರ್ಧಾರ ಎಲ್ಲರ ಮೆಚ್ಚುಗೆಗೆ ಪಾತ್ರವಾಗಿದೆ ಎಂದು ಸ್ಥಳೀಯ ಪಂಚಾಯಿತಿ ಸದಸ್ಯ ಪಿ.ಮುಸ್ತಫಾ ಹೇಳಿದರು. “ಜನಾಝಾ (ಅಂತ್ಯಕ್ರಿಯೆಯ ಪ್ರಾರ್ಥನೆ) ಸಮಯದಲ್ಲಿ,ದೇವಸ್ಥಾನದ ಪದಾಧಿಕಾರಿಗಳು ಮತ್ತು ಹಿಂದೂ ಸಮುದಾಯದ ಪ್ರೀತಿಯನ್ನು ಪ್ರಶಂಸಿಸಲಾಯಿತು. ಹೈದರ್ ಹಳ್ಳಿಯ ಹಿರಿಯ ವ್ಯಕ್ತಿಗಳಲ್ಲಿ ಒಬ್ಬರು, ”ಎಂದು ಅವರು ಹೇಳಿದರು.

ದೇಗುಲ ಸಮಿತಿ ಪದಾಧಿಕಾರಿಗಳಾದ ಟಿ.ಪಿ.ವೇಲಾಯುಧನ್, ಎ.ವಿ.ವಾಸು, ಟಿ.ಪಿ.ಅನಿಲ್ ಕುಮಾರ್, ಕೆ.ಪಿ.ಸುರೇಶ್, ಬಾಬು ಪುನ್ನಶ್ಶೇರಿ, ಪ್ರೇಮನ್ ಪುನ್ನಶ್ಶೇರಿ, ಕೆ.ಇ.ಸುರೇಶ್ ಮಾತನಾಡಿ, ಊರಿನ ಹಿರಿಯರ ನಿಧನದಿಂದಾಗಿತ್ಸವ ಕೈಬಿಡಲು ನಿರ್ಧರಿಸಲಾಗಿದೆ. ಕುಟುಂಬ ಸದಸ್ಯರು ಮತ್ತು ಸ್ಥಳೀಯ ಜನರು ದುಃಖಿತರಾಗಿದ್ದಾರೆ ಎಂದು ಹೇಳಿದ್ದಾರೆ.

ಇದನ್ನೂ ಓದಿ: ‘ಇದು ಅಸಂಬದ್ಧ’: ಪಂಜಾಬ್ ಸಿಎಂ ಭಯ್ಯಾಸ್ ಹೇಳಿಕೆಗೆ ಬಿಹಾರ ಸಿಎಂ ನಿತೀಶ್ ಪ್ರತಿಕ್ರಿಯೆ

ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಕೋಗಿಲು ಆಯ್ತು ಈಗ ಥಣಿಸಂದ್ರದಲ್ಲಿ ಆಪರೇಷನ್ ಒತ್ತುವರಿ
ಕೋಗಿಲು ಆಯ್ತು ಈಗ ಥಣಿಸಂದ್ರದಲ್ಲಿ ಆಪರೇಷನ್ ಒತ್ತುವರಿ
ಬಿಜೆಪಿ ಕಾರ್ಯಕರ್ತೆ ವಿವಸ್ತ್ರ ಕೇಸ್​: ಸಿಎಂ ವಿರುದ್ಧ ಜೋಶಿ ವಾಗ್ದಾಳಿ
ಬಿಜೆಪಿ ಕಾರ್ಯಕರ್ತೆ ವಿವಸ್ತ್ರ ಕೇಸ್​: ಸಿಎಂ ವಿರುದ್ಧ ಜೋಶಿ ವಾಗ್ದಾಳಿ
ಕೆಪಿಸಿಸಿ ಕಚೇರಿಯಲ್ಲೇ ಮೊಳಗಿತು ‘ಮುಂದಿನ ಸಿಎಂ ಡಿಕೆ ಶಿವಕುಮಾರ್’ ಘೋಷಣೆ
ಕೆಪಿಸಿಸಿ ಕಚೇರಿಯಲ್ಲೇ ಮೊಳಗಿತು ‘ಮುಂದಿನ ಸಿಎಂ ಡಿಕೆ ಶಿವಕುಮಾರ್’ ಘೋಷಣೆ
ಹಳೆ ದ್ವೇಷಕ್ಕೆ ರೌಡಿಶೀಟರ್ ಅಪಹರಿಸಿ ಚಿತ್ರಹಿಂಸೆ: ಬೆರಳು ಕತ್ತರಿಸಿ ವಿಕೃತಿ
ಹಳೆ ದ್ವೇಷಕ್ಕೆ ರೌಡಿಶೀಟರ್ ಅಪಹರಿಸಿ ಚಿತ್ರಹಿಂಸೆ: ಬೆರಳು ಕತ್ತರಿಸಿ ವಿಕೃತಿ