AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹಿಂದೂಯಿಸಂ ಒಂದು ಧರ್ಮವಲ್ಲ, ಅದು ಜೀವನ ಕ್ರಮ: ಸುಪ್ರೀಂಕೋರ್ಟ್

ಹಿಂದೂಯಿಸಂ ಒಂದು ಧರ್ಮವಲ್ಲ ಆದರೆ ಒಂದು ಜೀವನ ಕ್ರಮವಾಗಿದೆ. ಹಿಂದೂಯಿಸಂ ಒಂದು ಜೀವನ ವಿಧಾನವಾಗಿದೆ. ಹಿಂದೂ ಧರ್ಮದಲ್ಲಿ ಯಾವುದೇ ಮತಾಂಧತೆ ಇಲ್ಲ. ಕೇವಲ ಅಸಂಗತತೆಯನ್ನು ಉಂಟುಮಾಡುವ ಹಿಂದಿನದನ್ನು ಕೆದಕಬೇಡಿ.

ಹಿಂದೂಯಿಸಂ ಒಂದು ಧರ್ಮವಲ್ಲ, ಅದು ಜೀವನ ಕ್ರಮ: ಸುಪ್ರೀಂಕೋರ್ಟ್
Supreme Court
ರಶ್ಮಿ ಕಲ್ಲಕಟ್ಟ
ರಶ್ಮಿ ಕಲ್ಲಕಟ್ಟ|

Updated on: Feb 27, 2023 | 3:38 PM

Share

ದೆಹಲಿ: ಆಕ್ರಮಣಕಾರರ ಹೆಸರನ್ನು ಇಡಲಾಗಿದೆ ಎಂದು ವರದಿಯಾಗಿರುವ ಎಲ್ಲಾ ನಗರಗಳು ಮತ್ತು ಐತಿಹಾಸಿಕ ಸ್ಥಳಗಳಿಗೆ ಮರುನಾಮಕರಣ ಮಾಡುವಂತೆ ಕೋರಿ ಸಲ್ಲಿಸಲಾದ ಅರ್ಜಿಯನ್ನು ಸುಪ್ರೀಂಕೋರ್ಟ್ (Supreme Court) ಸೋಮವಾರ ವಜಾಗೊಳಿಸಿದೆ. ‘ಅನಾಗರಿಕ ವಿದೇಶಿ ಆಕ್ರಮಣಕಾರರ’ ಹೆಸರಿನ ‘ಪ್ರಾಚೀನ ಐತಿಹಾಸಿಕ ಸಾಂಸ್ಕೃತಿಕ ಧಾರ್ಮಿಕ ಸ್ಥಳಗಳ’ ಮೂಲ ಹೆಸರುಗಳನ್ನು ಕಂಡುಹಿಡಿಯಲು ‘ಮರುನಾಮಕರಣ ಆಯೋಗ’ ಬೇಕು ಎಂದು ಬಿಜೆಪಿ ನಾಯಕ ಅಶ್ವಿನಿ ಕುಮಾರ್ ಉಪಾಧ್ಯಾಯ (Ashwini Kumar Upadhyay)ಅವರು ಅರ್ಜಿ ಸಲ್ಲಿಸಿದ್ದಾರೆ. ನ್ಯಾಯಮೂರ್ತಿಗಳಾದ ಕೆ.ಎಂ.ಜೋಸೆಫ್ ಮತ್ತು ಬಿ.ವಿ.ನಾಗರತ್ನ ಅವರ ಪೀಠವು ವಕೀಲ ಅಶ್ವಿನಿ ಉಪಾಧ್ಯಾಯ ಅವರು ಸಲ್ಲಿಸಿದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯ ಉದ್ದೇಶವನ್ನು ಪ್ರಶ್ನಿಸಿ, “ದೇಶದಲ್ಲಿ ಉದ್ವಿಗ್ನವನ್ನುಂಟು ಮಾಡುವ” ಸಮಸ್ಯೆಗಳನ್ನು ಇದು ಮತ್ತೆ ಜೀವಂತಗೊಳಿಸುತ್ತದೆ ಎಂದು ಹೇಳಿದರು.

ತೀರ್ಪನ್ನು ಅಂಗೀಕರಿಸಿದ ಪೀಠ, ದೇಶದ ಇತಿಹಾಸವು ಅದರ ಪ್ರಸ್ತುತ ಮತ್ತು ಭವಿಷ್ಯದ ಪೀಳಿಗೆಯನ್ನು ಕಾಡಬಾರದು ಎಂದು ಹೇಳಿದೆ. “ಹಿಂದೂಯಿಸಂ ಒಂದು ಧರ್ಮವಲ್ಲ ಆದರೆ ಒಂದು ಜೀವನ ಕ್ರಮವಾಗಿದೆ. ಹಿಂದೂಯಿಸಂ ಒಂದು ಜೀವನ ವಿಧಾನವಾಗಿದೆ. ಹಿಂದೂ ಧರ್ಮದಲ್ಲಿ ಯಾವುದೇ ಮತಾಂಧತೆ ಇಲ್ಲ. ಕೇವಲ ಅಸಂಗತತೆಯನ್ನು ಉಂಟುಮಾಡುವ ಹಿಂದಿನದನ್ನು ಕೆದಕಬೇಡಿ. ದೇಶವನ್ನು ಉದ್ವಿಗ್ನಗೊಳಿಸಬೇಡಿ ಎಂದು ಸುಪ್ರೀಂಕೋರ್ಟ್ ಹೇಳಿದೆ.

ಉಪಾಧ್ಯಾಯ ಅವರು ತಮ್ಮ ಅರ್ಜಿಯಲ್ಲಿ, ವಿದೇಶಿ ಆಕ್ರಮಣಕಾರರಿಂದ “ಮರುನಾಮಕರಣಗೊಂಡ” ಪ್ರಾಚೀನ ಐತಿಹಾಸಿಕ, ಸಾಂಸ್ಕೃತಿಕ ಮತ್ತು ಧಾರ್ಮಿಕ ಸ್ಥಳಗಳ “ಮೂಲ” ಹೆಸರುಗಳನ್ನು ಪುನಃಸ್ಥಾಪಿಸಲು ‘ಮರುನಾಮಕರಣ ಆಯೋಗ’ವನ್ನು ರಚಿಸುವಂತೆ ಕೇಂದ್ರಕ್ಕೆ ನಿರ್ದೇಶನವನ್ನು ಕೋರಿದ್ದರು.

ಇದನ್ನೂ ಓದಿ: Jammu & Kashmir: ಭಯೋತ್ಪಾದಕರಿಗೆ ಆಶ್ರಯ ನೀಡಿದ್ದ 4 ಮನೆ ಜಪ್ತಿ, ಮೂವರ ಬಂಧನ

ಮೊಘಲ್ ಗಾರ್ಡನ್ ಅನ್ನು ಇತ್ತೀಚೆಗೆ ಅಮೃತ್ ಉದ್ಯಾನ್ ಎಂದು ಮರುನಾಮಕರಣ ಮಾಡಲಾಗಿದ್ದು ಆಕ್ರಮಣಕಾರರ ಹೆಸರಿನ ರಸ್ತೆಗಳಿಗೆ ಮರುನಾಮಕರಣ ಮಾಡಲು ಸರ್ಕಾರ ಏನೂ ಮಾಡಲಿಲ್ಲ, ಈ ಹೆಸರುಗಳ ಮುಂದುವರಿಕೆ ಸಂವಿಧಾನದ ಅಡಿಯಲ್ಲಿ ಖಾತರಿಪಡಿಸುವ ಸಾರ್ವಭೌಮತ್ವ ಮತ್ತು ಇತರ ನಾಗರಿಕ ಹಕ್ಕುಗಳಿಗೆ ವಿರುದ್ಧವಾಗಿದೆ ಎಂದು ಅರ್ಜಿಯಲ್ಲಿ ಹೇಳಲಾಗಿದೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ