ಹಿಂದೂಯಿಸಂ ಒಂದು ಧರ್ಮವಲ್ಲ, ಅದು ಜೀವನ ಕ್ರಮ: ಸುಪ್ರೀಂಕೋರ್ಟ್

ಹಿಂದೂಯಿಸಂ ಒಂದು ಧರ್ಮವಲ್ಲ ಆದರೆ ಒಂದು ಜೀವನ ಕ್ರಮವಾಗಿದೆ. ಹಿಂದೂಯಿಸಂ ಒಂದು ಜೀವನ ವಿಧಾನವಾಗಿದೆ. ಹಿಂದೂ ಧರ್ಮದಲ್ಲಿ ಯಾವುದೇ ಮತಾಂಧತೆ ಇಲ್ಲ. ಕೇವಲ ಅಸಂಗತತೆಯನ್ನು ಉಂಟುಮಾಡುವ ಹಿಂದಿನದನ್ನು ಕೆದಕಬೇಡಿ.

ಹಿಂದೂಯಿಸಂ ಒಂದು ಧರ್ಮವಲ್ಲ, ಅದು ಜೀವನ ಕ್ರಮ: ಸುಪ್ರೀಂಕೋರ್ಟ್
Supreme Court
ರಶ್ಮಿ ಕಲ್ಲಕಟ್ಟ

Updated on: Feb 27, 2023 | 3:38 PM

ದೆಹಲಿ: ಆಕ್ರಮಣಕಾರರ ಹೆಸರನ್ನು ಇಡಲಾಗಿದೆ ಎಂದು ವರದಿಯಾಗಿರುವ ಎಲ್ಲಾ ನಗರಗಳು ಮತ್ತು ಐತಿಹಾಸಿಕ ಸ್ಥಳಗಳಿಗೆ ಮರುನಾಮಕರಣ ಮಾಡುವಂತೆ ಕೋರಿ ಸಲ್ಲಿಸಲಾದ ಅರ್ಜಿಯನ್ನು ಸುಪ್ರೀಂಕೋರ್ಟ್ (Supreme Court) ಸೋಮವಾರ ವಜಾಗೊಳಿಸಿದೆ. ‘ಅನಾಗರಿಕ ವಿದೇಶಿ ಆಕ್ರಮಣಕಾರರ’ ಹೆಸರಿನ ‘ಪ್ರಾಚೀನ ಐತಿಹಾಸಿಕ ಸಾಂಸ್ಕೃತಿಕ ಧಾರ್ಮಿಕ ಸ್ಥಳಗಳ’ ಮೂಲ ಹೆಸರುಗಳನ್ನು ಕಂಡುಹಿಡಿಯಲು ‘ಮರುನಾಮಕರಣ ಆಯೋಗ’ ಬೇಕು ಎಂದು ಬಿಜೆಪಿ ನಾಯಕ ಅಶ್ವಿನಿ ಕುಮಾರ್ ಉಪಾಧ್ಯಾಯ (Ashwini Kumar Upadhyay)ಅವರು ಅರ್ಜಿ ಸಲ್ಲಿಸಿದ್ದಾರೆ. ನ್ಯಾಯಮೂರ್ತಿಗಳಾದ ಕೆ.ಎಂ.ಜೋಸೆಫ್ ಮತ್ತು ಬಿ.ವಿ.ನಾಗರತ್ನ ಅವರ ಪೀಠವು ವಕೀಲ ಅಶ್ವಿನಿ ಉಪಾಧ್ಯಾಯ ಅವರು ಸಲ್ಲಿಸಿದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯ ಉದ್ದೇಶವನ್ನು ಪ್ರಶ್ನಿಸಿ, “ದೇಶದಲ್ಲಿ ಉದ್ವಿಗ್ನವನ್ನುಂಟು ಮಾಡುವ” ಸಮಸ್ಯೆಗಳನ್ನು ಇದು ಮತ್ತೆ ಜೀವಂತಗೊಳಿಸುತ್ತದೆ ಎಂದು ಹೇಳಿದರು.

ತೀರ್ಪನ್ನು ಅಂಗೀಕರಿಸಿದ ಪೀಠ, ದೇಶದ ಇತಿಹಾಸವು ಅದರ ಪ್ರಸ್ತುತ ಮತ್ತು ಭವಿಷ್ಯದ ಪೀಳಿಗೆಯನ್ನು ಕಾಡಬಾರದು ಎಂದು ಹೇಳಿದೆ.
“ಹಿಂದೂಯಿಸಂ ಒಂದು ಧರ್ಮವಲ್ಲ ಆದರೆ ಒಂದು ಜೀವನ ಕ್ರಮವಾಗಿದೆ. ಹಿಂದೂಯಿಸಂ ಒಂದು ಜೀವನ ವಿಧಾನವಾಗಿದೆ. ಹಿಂದೂ ಧರ್ಮದಲ್ಲಿ ಯಾವುದೇ ಮತಾಂಧತೆ ಇಲ್ಲ. ಕೇವಲ ಅಸಂಗತತೆಯನ್ನು ಉಂಟುಮಾಡುವ ಹಿಂದಿನದನ್ನು ಕೆದಕಬೇಡಿ. ದೇಶವನ್ನು ಉದ್ವಿಗ್ನಗೊಳಿಸಬೇಡಿ ಎಂದು ಸುಪ್ರೀಂಕೋರ್ಟ್ ಹೇಳಿದೆ.

ಉಪಾಧ್ಯಾಯ ಅವರು ತಮ್ಮ ಅರ್ಜಿಯಲ್ಲಿ, ವಿದೇಶಿ ಆಕ್ರಮಣಕಾರರಿಂದ “ಮರುನಾಮಕರಣಗೊಂಡ” ಪ್ರಾಚೀನ ಐತಿಹಾಸಿಕ, ಸಾಂಸ್ಕೃತಿಕ ಮತ್ತು ಧಾರ್ಮಿಕ ಸ್ಥಳಗಳ “ಮೂಲ” ಹೆಸರುಗಳನ್ನು ಪುನಃಸ್ಥಾಪಿಸಲು ‘ಮರುನಾಮಕರಣ ಆಯೋಗ’ವನ್ನು ರಚಿಸುವಂತೆ ಕೇಂದ್ರಕ್ಕೆ ನಿರ್ದೇಶನವನ್ನು ಕೋರಿದ್ದರು.

ಇದನ್ನೂ ಓದಿ: Jammu & Kashmir: ಭಯೋತ್ಪಾದಕರಿಗೆ ಆಶ್ರಯ ನೀಡಿದ್ದ 4 ಮನೆ ಜಪ್ತಿ, ಮೂವರ ಬಂಧನ

ಮೊಘಲ್ ಗಾರ್ಡನ್ ಅನ್ನು ಇತ್ತೀಚೆಗೆ ಅಮೃತ್ ಉದ್ಯಾನ್ ಎಂದು ಮರುನಾಮಕರಣ ಮಾಡಲಾಗಿದ್ದು ಆಕ್ರಮಣಕಾರರ ಹೆಸರಿನ ರಸ್ತೆಗಳಿಗೆ ಮರುನಾಮಕರಣ ಮಾಡಲು ಸರ್ಕಾರ ಏನೂ ಮಾಡಲಿಲ್ಲ, ಈ ಹೆಸರುಗಳ ಮುಂದುವರಿಕೆ ಸಂವಿಧಾನದ ಅಡಿಯಲ್ಲಿ ಖಾತರಿಪಡಿಸುವ ಸಾರ್ವಭೌಮತ್ವ ಮತ್ತು ಇತರ ನಾಗರಿಕ ಹಕ್ಕುಗಳಿಗೆ ವಿರುದ್ಧವಾಗಿದೆ ಎಂದು ಅರ್ಜಿಯಲ್ಲಿ ಹೇಳಲಾಗಿದೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Rashmi Kallakatta

ಊರು ಕಾಸರಗೋಡು. ಓದಿದ್ದು ಇಂಜಿನಿಯರಿಂಗ್, ಪಬ್ಲಿಕ್ ಅಡ್ಮಿನಿಸ್ಟ್ರೇಷನ್ ಮತ್ತು ಇಂಗ್ಲಿಷ್ ಸ್ನಾತಕೋತ್ತರ ಪದವಿ. ಕನ್ನಡಪ್ರಭ, ಪ್ರಜಾವಾಣಿ ಡಿಜಿಟಲ್ ಮತ್ತು ಪ್ರಿಂಟ್ ವಿಭಾಗದಲ್ಲಿ ಕೆಲಸದ ಅನುಭವ. ಬ್ಲಾಗರ್, ಸಾಹಿತ್ಯ ಪ್ರೇಮಿ. ಇಲ್ಲಿವರೆಗೆ 2 ಪುಸ್ತಕಗಳು ಪ್ರಕಟವಾಗಿವೆ. ಕಲೆ,ಸಾಹಿತ್ಯ,ತಂತ್ರಜ್ಞಾನ,ಸಂದರ್ಶನ, ಫ್ಯಾಕ್ಟ್ ಚೆಕಿಂಗ್ ಆಸಕ್ತಿಕರ ವಿಷಯಗಳು. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷ ಅನುಭವ

Follow Us