AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹಿಂದೂ ಧರ್ಮ ಇಸ್ಲಾಂಗಿಂತ ಹಳೆಯದು, ಮೊದಲು ಮುಸ್ಲಿಮರು ಹಿಂದೂಗಳಾಗಿದ್ದರು: ಗುಲಾಂ ನಬಿ ಆಜಾದ್

ಹಿಂದೂ ಧರ್ಮ ಇಸ್ಲಾಂಗಿಂತ ಹಳೆಯದು, ಮೊದಲು ಮುಸ್ಲಿಮರು ಹಿಂದೂಗಳಾಗಿದ್ದರು ಎಂಬ ಹೇಳಿಕೆಯನ್ನು ಜಮ್ಮು ಮತ್ತು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಗುಲಾಂ ನಬಿ ಆಜಾದ್ ಹೇಳಿದ್ದಾರೆ. ಇಸ್ಲಾಂ ಹುಟ್ಟಿದ್ದು 1500 ವರ್ಷಗಳ ಹಿಂದೆ, ಭಾರತದ ಯಾರೂ ಹೊರಗಿನವರಲ್ಲ, ನಾವೆಲ್ಲರೂ ಈ ದೇಶಕ್ಕೆ ಸೇರಿದವರು, ಭಾರತದ ಮುಸ್ಲಿಮರು ಮೂಲತಃ ಹಿಂದೂಗಳು, ನಂತರ ಇಸ್ಲಾಂ ಧರ್ಮಕ್ಕೆ ಮತಾಂತರಗೊಂಡರು ಎಂದಿದ್ದಾರೆ.

ಹಿಂದೂ ಧರ್ಮ ಇಸ್ಲಾಂಗಿಂತ ಹಳೆಯದು, ಮೊದಲು ಮುಸ್ಲಿಮರು ಹಿಂದೂಗಳಾಗಿದ್ದರು: ಗುಲಾಂ ನಬಿ ಆಜಾದ್
ಗುಲಾಂ ನಬಿ ಆಜಾದ್Image Credit source: Bangalore Mirror
ನಯನಾ ರಾಜೀವ್
|

Updated on: Aug 17, 2023 | 9:49 AM

Share

ಹಿಂದೂ ಧರ್ಮ ಇಸ್ಲಾಂಗಿಂತ ಹಳೆಯದು, ಮೊದಲು ಮುಸ್ಲಿಮರು ಹಿಂದೂಗಳಾಗಿದ್ದರು ಎಂಬ ಹೇಳಿಕೆಯನ್ನು ಜಮ್ಮು ಮತ್ತು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಗುಲಾಂ ನಬಿ ಆಜಾದ್(Ghulam Nabi Azad) ಹೇಳಿದ್ದಾರೆ. ಇಸ್ಲಾಂ ಹುಟ್ಟಿದ್ದು 1500 ವರ್ಷಗಳ ಹಿಂದೆ, ಭಾರತದ ಯಾರೂ ಹೊರಗಿನವರಲ್ಲ, ನಾವೆಲ್ಲರೂ ಈ ದೇಶಕ್ಕೆ ಸೇರಿದವರು, ಭಾರತದ ಮುಸ್ಲಿಮರು ಮೂಲತಃ ಹಿಂದೂಗಳು, ನಂತರ ಇಸ್ಲಾಂ ಧರ್ಮಕ್ಕೆ ಮತಾಂತರಗೊಂಡರು ಎಂದಿದ್ದಾರೆ.

600 ವರ್ಷಗಳ ಹಿಂದೆ ಕಾಶ್ಮೀರದಲ್ಲಿ ಕಾಶ್ಮೀರಿ ಪಂಡಿತರು ಮಾತ್ರ ಇದ್ದರು ಎಂದು ಹೇಳುತ್ತಾರೆ, ನಂತರ ಜನರು ಮತಾಂತರಗೊಂಡು ಮುಸ್ಲಿಮರಾದರು. ಜನರು ಸಹೋದರತೆ, ಶಾಂತಿ, ಐಕ್ಯತೆಯನ್ನು ಕಾಪಾಡುವಂತೆ ಮನವಿ ಮಾಡಿದ ಆಜಾದ್, ರಾಜಕೀಯದೊಂದಿಗೆ ಧರ್ಮವನ್ನು ಬೆರೆಸಬಾರದು, ಜನರು ಧರ್ಮದ ಹೆಸರಿನಲ್ಲಿ ಮತ ಹಾಕಬಾರದು ಎಂದು ಹೇಳಿದರು.

ಮತ್ತಷ್ಟು ಓದಿ: Ghulam Nabi Azad: ಪ್ರಧಾನಿ ಮೋದಿ ‘ರಾಜ್ಯಾಧಿಕಾರಿ’, ಎಂದಿಗೂ ಸೇಡು ತೀರಿಸಿಕೊಳ್ಳದ ರಾಜಕಾರಣಿ: ಗುಲಾಂ ನಬಿ ಆಜಾದ್

ಹಿಂದೂ-ಮುಸ್ಲಿಂ ಎನ್ನುವ ಬೇಧಭಾವವೇಕೆ? ಭಾರತೀಯ ಮುಸ್ಲಿಮರ ಬಗ್ಗೆ ಮಾತನಾಡಿದ ಆಜಾದ್, ಹಿಂದೂಗಳಂತೆಯೇ ಮುಸ್ಲಿಮರು ಕೂಡ ಈ ನೆಲದೊಳಗೆ ಹೋಗುತ್ತಾರೆ, ಅವರ ದೇಹ ಹಾಗೂ ಎಲುಬುಗಳು ಕೂಡ ಭಾರತ ಮಾತೆಯ ಭಾಗವಾಗುತ್ತದೆ, ಹಾಗಿದ್ದಾಗ ಹಿಂದೂ-ಮುಸ್ಲಿಂ ಎನ್ನುವ ಭಾವನೆ ಏಕೆ ಎಂದು ಪ್ರಶ್ನಿಸಿದರು.

ಗುಲಾಂ ನಬಿ ಆಜಾದ್ ಕಳೆದ ವರ್ಷ ಕಾಂಗ್ರೆಸ್ ತೊರೆದು ತಮ್ಮದೇ ಆದ ಹೊಸ ಪಕ್ಷವನ್ನು ಕಟ್ಟಿದ್ದರು. ಇದು ಕಾಂಗ್ರೆಸ್​ ಪಕ್ಷಕ್ಕೆ ದೊಡ್ಡ ಹೊಡೆತ ಎಂದೇ ಹೇಳಬಹುದು. ಗುಜರಾತ್ ಮತ್ತು ಹಿಮಾಚಲ ಪ್ರದೇಶ ವಿಧಾನಸಭೆ ಚುನಾವಣೆಗೂ ಮುನ್ನ ರಾಜೀನಾಮೆ ನೀಡಿದ್ದರು. ಸೆ.7 ರಿಂದ ಕಾಂಗ್ರೆಸ್​ನ ಭಾರತ್ ಜೋಡೋ ಯಾತ್ರೆ ಶುರುವಾಗಲಿದೆ. ಅವರು ಪಕ್ಷವನ್ನು ಟೀಕಿಸುವ ಭರದಲ್ಲಿ ಕಟುವಾದ ಭಾಷೆ ಬಳಕೆ ಮಾಡಿದ್ದಾರೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
Nayana Rajeev
Nayana Rajeev

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More
ಹಂಸಲೇಖ-ರವಿಚಂದ್ರನ್ ಹಾಡುಗಳ ಕಾನ್ಸರ್ಟ್ ‘ಕ್ರೇಜಿಬ್ರಹ್ಮಂ’: ಎಲ್ಲಿ? ಯಾವಾಗ?
ಹಂಸಲೇಖ-ರವಿಚಂದ್ರನ್ ಹಾಡುಗಳ ಕಾನ್ಸರ್ಟ್ ‘ಕ್ರೇಜಿಬ್ರಹ್ಮಂ’: ಎಲ್ಲಿ? ಯಾವಾಗ?
ಬಿಜೆಪಿ ಮುಖಂಡನ ವಿರುದ್ಧ ಅತ್ಯಾಚಾರ ಆರೋಪ: ಕೇಸ್ ದಾಖಲಾಗ್ತಿದ್ದಂತೆ ಪರಾರಿ
ಬಿಜೆಪಿ ಮುಖಂಡನ ವಿರುದ್ಧ ಅತ್ಯಾಚಾರ ಆರೋಪ: ಕೇಸ್ ದಾಖಲಾಗ್ತಿದ್ದಂತೆ ಪರಾರಿ
ತಮ್ಮ ‘ಯಜಮಾನ್ರು’ ರವಿಚಂದ್ರನ್ ಬಗ್ಗೆ ಹಂಸಲೇಖ ಮಾತು
ತಮ್ಮ ‘ಯಜಮಾನ್ರು’ ರವಿಚಂದ್ರನ್ ಬಗ್ಗೆ ಹಂಸಲೇಖ ಮಾತು
ಅಬ್ಬರದ ಮಳೆಗೆ ರಾಯರ ಭಕ್ತರು ಕಂಗಾಲು: ನೆರವಿಗೆ ದೌಡಾಯಿಸಿದ ಶ್ರೀಗಳು
ಅಬ್ಬರದ ಮಳೆಗೆ ರಾಯರ ಭಕ್ತರು ಕಂಗಾಲು: ನೆರವಿಗೆ ದೌಡಾಯಿಸಿದ ಶ್ರೀಗಳು
ಮೂರಿಕಟ್ಟೆ ಒಡೆದ ಮುಸ್ಲಿಮರು; ಕರ್ತವ್ಯದಲ್ಲಿದ್ದ ಪೊಲೀಸರ ಮೇಲೂ ಹಲ್ಲೆ
ಮೂರಿಕಟ್ಟೆ ಒಡೆದ ಮುಸ್ಲಿಮರು; ಕರ್ತವ್ಯದಲ್ಲಿದ್ದ ಪೊಲೀಸರ ಮೇಲೂ ಹಲ್ಲೆ
ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆಶಿಗೆ ಹೈಕಮಾಂಡ್ ತುರ್ತು ಬುಲಾವ್!
ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆಶಿಗೆ ಹೈಕಮಾಂಡ್ ತುರ್ತು ಬುಲಾವ್!
ಭಟ್ಕಳದಲ್ಲಿ ಘನಘೋರ ದುರಂತ: ಸಾವಿನ ಸಂಖ್ಯೆ 10ಕ್ಕೆ ಏರಿಕೆ
ಭಟ್ಕಳದಲ್ಲಿ ಘನಘೋರ ದುರಂತ: ಸಾವಿನ ಸಂಖ್ಯೆ 10ಕ್ಕೆ ಏರಿಕೆ
ಕರ್ನಾಟಕದಲ್ಲಿ ಅನ್ನಭಾಗ್ಯ ಅಕ್ಕಿ ವಿತರಣೆಯಲ್ಲಿ ಗೊಂದಲ
ಕರ್ನಾಟಕದಲ್ಲಿ ಅನ್ನಭಾಗ್ಯ ಅಕ್ಕಿ ವಿತರಣೆಯಲ್ಲಿ ಗೊಂದಲ
ಕುಮಾರಣ್ಣ ಸಮ್ಮುಖದಲ್ಲಿ ಜೆಡಿಎಸ್‌ಗೆ ಸೇರಿದ ಬಿಗ್‌ಬಾಸ್‌ ಜಾಹ್ನವಿ
ಕುಮಾರಣ್ಣ ಸಮ್ಮುಖದಲ್ಲಿ ಜೆಡಿಎಸ್‌ಗೆ ಸೇರಿದ ಬಿಗ್‌ಬಾಸ್‌ ಜಾಹ್ನವಿ
ಸಭೆ ಬಳಿಕ ಕರ್ನಾಟಕ ರಾಜಕೀಯ ಬಗ್ಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಖಡಕ್ ಮಾತು
ಸಭೆ ಬಳಿಕ ಕರ್ನಾಟಕ ರಾಜಕೀಯ ಬಗ್ಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಖಡಕ್ ಮಾತು