AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Gujarat: ಮುಳುಗುತ್ತಿದ್ದ ಯುವಕರನ್ನು ರಕ್ಷಿಸಲು ಸಮುದ್ರಕ್ಕೆ ಧುಮುಕಿದ ಬಿಜೆಪಿ ಶಾಸಕ, ಜನರಿಂದ ಭಾರಿ ಪ್ರಶಂಸೆ

ಬಿಜೆಪಿ ಶಾಸಕರೊಬ್ಬರು ಸಮುದ್ರಕ್ಕೆ ಹಾರಿ ಮೂವರು ಯುವಕರನ್ನು ರಕ್ಷಿಸಿದ್ದು, ಜನರ ಪ್ರಶಂಸೆಗೆ ಪಾತ್ರರಾಗಿದ್ದಾರೆ. ಗುಜರಾತ್‌ನ ಅಮ್ರೇಲಿ ಜಿಲ್ಲೆಯಲ್ಲಿ ರಾಜುಲಾ ಶಾಸಕ ಹೀರಾ ಸೋಲಂಕಿ ಯುವಕರನ್ನು ರಕ್ಷಿಸಿದ್ದಾರೆ.

Gujarat: ಮುಳುಗುತ್ತಿದ್ದ ಯುವಕರನ್ನು ರಕ್ಷಿಸಲು ಸಮುದ್ರಕ್ಕೆ ಧುಮುಕಿದ ಬಿಜೆಪಿ ಶಾಸಕ, ಜನರಿಂದ ಭಾರಿ ಪ್ರಶಂಸೆ
ಹೀರಾ ಸೋಲಂಕಿImage Credit source: Hindustan Times
ನಯನಾ ರಾಜೀವ್
|

Updated on: Jun 01, 2023 | 11:45 AM

Share

ಬಿಜೆಪಿ ಶಾಸಕರೊಬ್ಬರು ಸಮುದ್ರಕ್ಕೆ ಹಾರಿ ಮೂವರು ಯುವಕರನ್ನು ರಕ್ಷಿಸಿದ್ದು, ಜನರ ಪ್ರಶಂಸೆಗೆ ಪಾತ್ರರಾಗಿದ್ದಾರೆ. ಗುಜರಾತ್‌ನ ಅಮ್ರೇಲಿ ಜಿಲ್ಲೆಯಲ್ಲಿ ರಾಜುಲಾ ಶಾಸಕ ಹೀರಾ ಸೋಲಂಕಿ ಯುವಕರನ್ನು ರಕ್ಷಿಸಿದ್ದಾರೆ. ಮೂವರು ಯುವಕರು ಪ್ರಾಣಾಪಾಯದಿಂದ ಪಾರಾಗಿದ್ದು ಓರ್ವ ಸಾವನ್ನಪ್ಪಿದ್ದಾರೆ. ಬುಧವಾರ ಮಧ್ಯಾಹ್ನ ನಾಲ್ವರು ಯುವಕರು ಸಮುದ್ರ ಕೊಲ್ಲಿಯಲ್ಲಿ ಸ್ನಾನಕ್ಕೆ ತೆರಳಿದ್ದರು. ಈ ಸಮಯದಲ್ಲಿ, ಅವರು ಆಳವಾದ ನೀರಿನಲ್ಲಿ ಮುಳುಗುತ್ತಿದ್ದರು. ಇದನ್ನು ಕಂಡ ಸ್ಥಳೀಯರು ಕಡಲ ತೀರದಲ್ಲಿರುವ ರಾಜುಲಾ ಬಿಜೆಪಿ ಶಾಸಕ ಹೀರಾ ಸೋಲಂಕಿ ಅವರಿಗೆ ಮಾಹಿತಿ ನೀಡಿದ್ದಾರೆ.

ಇದಾದ ಬಳಿಕ ಶಾಸಕ ಬೋಟ್ ಸಹಾಯದಿಂದ ಸ್ಥಳಕ್ಕಾಗಮಿಸಿ ನೀರಿನಲ್ಲಿ ಮುಳುಗುತ್ತಿದ್ದ ಯುವಕರನ್ನು ರಕ್ಷಿಸಲು ಸಮುದ್ರಕ್ಕೆ ಹಾರಿದ್ದು, ಮೂವರು ಯುವಕರು ಸಕಾಲದಲ್ಲಿ ಹೊರಬಂದಿದ್ದಾರೆ. ಅದೇ ಸಮಯದಲ್ಲಿ, ಒಬ್ಬ ಯುವಕ ಪತ್ತೆಯಾಗಿಲ್ಲ, ಅವರ ಹುಡುಕಾಟದಲ್ಲಿ ಸುಮಾರು 2 ಗಂಟೆಗಳ ಕಾಲ ರಕ್ಷಣಾ ಕಾರ್ಯಾಚರಣೆಯನ್ನು ನಡೆಸಲಾಯಿತು. ಇದಾದ ಬಳಿಕ ನಾಲ್ಕನೇ ಯುವಕನ ಮೃತದೇಹ ಪತ್ತೆಯಾಗಿದೆ.

ಮಾಹಿತಿ ಪ್ರಕಾರ, ನಾಲ್ವರು ಸ್ನೇಹಿತರಾದ ಕಲ್ಪೇಶ್ ಶಿಯಾಲ್, ವಿಜಯ್ ಗುಜಾರಿಯಾ, ನಿಕುಲ್ ಗುಜಾರಿಯಾ ಮತ್ತು ಜೀವನ್ ಗುಜಾರಿಯಾ ಅವರು ಮಧ್ಯಾಹ್ನ ಪಟ್ವಾ ಗ್ರಾಮದ ಬಳಿ ಸ್ನಾನ ಮಾಡಲು ಹೋಗಿದ್ದರು.

ಮತ್ತಷ್ಟು ಓದಿ: ದೇವನಹಳ್ಳಿ: ಈಜಲು ಹೋಗಿ ನಾಲ್ವರು ನೀರುಪಾಲು, ಸ್ನೇಹಿತರ ಮೃತದೇಹಗಳು ಪತ್ತೆ

ಸಮುದ್ರದಲ್ಲಿ ಬಲವಾದ ಪ್ರವಾಹ ಮತ್ತು ಬಲವಾದ ಅಲೆಗಳ ಕಾರಣ, ಈ ನಾಲ್ವರು ಯುವಕರು ಆಳವಾದ ನೀರಿನ ಕಡೆಗೆ ತಿರುಗಿ ಮುಳುಗಲು ಪ್ರಾರಂಭಿಸಿದರು. ಇದಾದ ನಂತರ ಸ್ಥಳದಲ್ಲಿ ನೂಕುನುಗ್ಗಲು ಉಂಟಾಯಿತು. ಅದೇ ಸಮಯದಲ್ಲಿ ಜೀವನ್ ಗುಜ್ರಿಯಾ ಎಂಬ ಬಾಲಕ ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ್ದಾನೆ.

ಗುಜರಾತಿನ ಬೊಟಾಡ್ ಜಿಲ್ಲೆಯ ಐವರು ಮಕ್ಕಳು ಇತ್ತೀಚೆಗೆ ಕೃಷ್ಣ ಸಾಗರ ಸರೋವರದಲ್ಲಿ ಮುಳುಗಿ ಸಾವನ್ನಪ್ಪಿದ್ದರು. ವರದಿಯ ಪ್ರಕಾರ, ಇಬ್ಬರು ಮಕ್ಕಳು ಸರೋವರದಲ್ಲಿ ಈಜುತ್ತಿದ್ದಾಗ ಅವರು ಮುಳುಗಲು ಪ್ರಾರಂಭಿಸಿದರು. ಈ ಹಿನ್ನೆಲೆಯಲ್ಲಿ ಅವರನ್ನು ರಕ್ಷಿಸಲು ಇನ್ನೂ ಮೂವರು ಕೆರೆಗೆ ಹಾರಿದ್ದು, ಕೊನೆಗೆ ಅವರೂ ನೀರಿನಲ್ಲಿ ಮುಳುಗಿದ್ದರು.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ