AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Gujarat: ಮುಳುಗುತ್ತಿದ್ದ ಯುವಕರನ್ನು ರಕ್ಷಿಸಲು ಸಮುದ್ರಕ್ಕೆ ಧುಮುಕಿದ ಬಿಜೆಪಿ ಶಾಸಕ, ಜನರಿಂದ ಭಾರಿ ಪ್ರಶಂಸೆ

ಬಿಜೆಪಿ ಶಾಸಕರೊಬ್ಬರು ಸಮುದ್ರಕ್ಕೆ ಹಾರಿ ಮೂವರು ಯುವಕರನ್ನು ರಕ್ಷಿಸಿದ್ದು, ಜನರ ಪ್ರಶಂಸೆಗೆ ಪಾತ್ರರಾಗಿದ್ದಾರೆ. ಗುಜರಾತ್‌ನ ಅಮ್ರೇಲಿ ಜಿಲ್ಲೆಯಲ್ಲಿ ರಾಜುಲಾ ಶಾಸಕ ಹೀರಾ ಸೋಲಂಕಿ ಯುವಕರನ್ನು ರಕ್ಷಿಸಿದ್ದಾರೆ.

Gujarat: ಮುಳುಗುತ್ತಿದ್ದ ಯುವಕರನ್ನು ರಕ್ಷಿಸಲು ಸಮುದ್ರಕ್ಕೆ ಧುಮುಕಿದ ಬಿಜೆಪಿ ಶಾಸಕ, ಜನರಿಂದ ಭಾರಿ ಪ್ರಶಂಸೆ
ಹೀರಾ ಸೋಲಂಕಿImage Credit source: Hindustan Times
ನಯನಾ ರಾಜೀವ್
|

Updated on: Jun 01, 2023 | 11:45 AM

Share

ಬಿಜೆಪಿ ಶಾಸಕರೊಬ್ಬರು ಸಮುದ್ರಕ್ಕೆ ಹಾರಿ ಮೂವರು ಯುವಕರನ್ನು ರಕ್ಷಿಸಿದ್ದು, ಜನರ ಪ್ರಶಂಸೆಗೆ ಪಾತ್ರರಾಗಿದ್ದಾರೆ. ಗುಜರಾತ್‌ನ ಅಮ್ರೇಲಿ ಜಿಲ್ಲೆಯಲ್ಲಿ ರಾಜುಲಾ ಶಾಸಕ ಹೀರಾ ಸೋಲಂಕಿ ಯುವಕರನ್ನು ರಕ್ಷಿಸಿದ್ದಾರೆ. ಮೂವರು ಯುವಕರು ಪ್ರಾಣಾಪಾಯದಿಂದ ಪಾರಾಗಿದ್ದು ಓರ್ವ ಸಾವನ್ನಪ್ಪಿದ್ದಾರೆ. ಬುಧವಾರ ಮಧ್ಯಾಹ್ನ ನಾಲ್ವರು ಯುವಕರು ಸಮುದ್ರ ಕೊಲ್ಲಿಯಲ್ಲಿ ಸ್ನಾನಕ್ಕೆ ತೆರಳಿದ್ದರು. ಈ ಸಮಯದಲ್ಲಿ, ಅವರು ಆಳವಾದ ನೀರಿನಲ್ಲಿ ಮುಳುಗುತ್ತಿದ್ದರು. ಇದನ್ನು ಕಂಡ ಸ್ಥಳೀಯರು ಕಡಲ ತೀರದಲ್ಲಿರುವ ರಾಜುಲಾ ಬಿಜೆಪಿ ಶಾಸಕ ಹೀರಾ ಸೋಲಂಕಿ ಅವರಿಗೆ ಮಾಹಿತಿ ನೀಡಿದ್ದಾರೆ.

ಇದಾದ ಬಳಿಕ ಶಾಸಕ ಬೋಟ್ ಸಹಾಯದಿಂದ ಸ್ಥಳಕ್ಕಾಗಮಿಸಿ ನೀರಿನಲ್ಲಿ ಮುಳುಗುತ್ತಿದ್ದ ಯುವಕರನ್ನು ರಕ್ಷಿಸಲು ಸಮುದ್ರಕ್ಕೆ ಹಾರಿದ್ದು, ಮೂವರು ಯುವಕರು ಸಕಾಲದಲ್ಲಿ ಹೊರಬಂದಿದ್ದಾರೆ. ಅದೇ ಸಮಯದಲ್ಲಿ, ಒಬ್ಬ ಯುವಕ ಪತ್ತೆಯಾಗಿಲ್ಲ, ಅವರ ಹುಡುಕಾಟದಲ್ಲಿ ಸುಮಾರು 2 ಗಂಟೆಗಳ ಕಾಲ ರಕ್ಷಣಾ ಕಾರ್ಯಾಚರಣೆಯನ್ನು ನಡೆಸಲಾಯಿತು. ಇದಾದ ಬಳಿಕ ನಾಲ್ಕನೇ ಯುವಕನ ಮೃತದೇಹ ಪತ್ತೆಯಾಗಿದೆ.

ಮಾಹಿತಿ ಪ್ರಕಾರ, ನಾಲ್ವರು ಸ್ನೇಹಿತರಾದ ಕಲ್ಪೇಶ್ ಶಿಯಾಲ್, ವಿಜಯ್ ಗುಜಾರಿಯಾ, ನಿಕುಲ್ ಗುಜಾರಿಯಾ ಮತ್ತು ಜೀವನ್ ಗುಜಾರಿಯಾ ಅವರು ಮಧ್ಯಾಹ್ನ ಪಟ್ವಾ ಗ್ರಾಮದ ಬಳಿ ಸ್ನಾನ ಮಾಡಲು ಹೋಗಿದ್ದರು.

ಮತ್ತಷ್ಟು ಓದಿ: ದೇವನಹಳ್ಳಿ: ಈಜಲು ಹೋಗಿ ನಾಲ್ವರು ನೀರುಪಾಲು, ಸ್ನೇಹಿತರ ಮೃತದೇಹಗಳು ಪತ್ತೆ

ಸಮುದ್ರದಲ್ಲಿ ಬಲವಾದ ಪ್ರವಾಹ ಮತ್ತು ಬಲವಾದ ಅಲೆಗಳ ಕಾರಣ, ಈ ನಾಲ್ವರು ಯುವಕರು ಆಳವಾದ ನೀರಿನ ಕಡೆಗೆ ತಿರುಗಿ ಮುಳುಗಲು ಪ್ರಾರಂಭಿಸಿದರು. ಇದಾದ ನಂತರ ಸ್ಥಳದಲ್ಲಿ ನೂಕುನುಗ್ಗಲು ಉಂಟಾಯಿತು. ಅದೇ ಸಮಯದಲ್ಲಿ ಜೀವನ್ ಗುಜ್ರಿಯಾ ಎಂಬ ಬಾಲಕ ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ್ದಾನೆ.

ಗುಜರಾತಿನ ಬೊಟಾಡ್ ಜಿಲ್ಲೆಯ ಐವರು ಮಕ್ಕಳು ಇತ್ತೀಚೆಗೆ ಕೃಷ್ಣ ಸಾಗರ ಸರೋವರದಲ್ಲಿ ಮುಳುಗಿ ಸಾವನ್ನಪ್ಪಿದ್ದರು. ವರದಿಯ ಪ್ರಕಾರ, ಇಬ್ಬರು ಮಕ್ಕಳು ಸರೋವರದಲ್ಲಿ ಈಜುತ್ತಿದ್ದಾಗ ಅವರು ಮುಳುಗಲು ಪ್ರಾರಂಭಿಸಿದರು. ಈ ಹಿನ್ನೆಲೆಯಲ್ಲಿ ಅವರನ್ನು ರಕ್ಷಿಸಲು ಇನ್ನೂ ಮೂವರು ಕೆರೆಗೆ ಹಾರಿದ್ದು, ಕೊನೆಗೆ ಅವರೂ ನೀರಿನಲ್ಲಿ ಮುಳುಗಿದ್ದರು.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಇಂದು ಏಕಾದಶಿ; ಯಾವೆಲ್ಲಾ ರಾಶಿಗಳ ಅದೃಷ್ಟ ಹೇಗಿದೆ?
ಇಂದು ಏಕಾದಶಿ; ಯಾವೆಲ್ಲಾ ರಾಶಿಗಳ ಅದೃಷ್ಟ ಹೇಗಿದೆ?