ಐತಿಹಾಸಿಕ ತೀರ್ಪು; ರಾಜ್ಯಪಾಲರ ವಿರುದ್ಧದ ಸುಪ್ರೀಂ ಕೋರ್ಟ್ ತೀರ್ಪಿಗೆ ತಮಿಳುನಾಡು ಸಿಎಂ ಸ್ಟಾಲಿನ್ ಶ್ಲಾಘನೆ

ತಮಿಳುನಾಡು ರಾಜ್ಯಪಾಲರು 10 ಮಸೂದೆಗಳನ್ನು ಕಾಯ್ದಿರಿಸಿದ ಕುರಿತು ಸುಪ್ರೀಂ ಕೋರ್ಟ್ ತರಾಟೆಗೆ ತೆಗೆದುಕೊಂಡಿದೆ. ಮಸೂದೆಗಳಿಗೆ ಅನುಮೋದನೆ ನೀಡುವಲ್ಲಿ ತಮಿಳುನಾಡು ರಾಜ್ಯಪಾಲ ಆರ್ ಎನ್ ರವಿ ಅವರ ವಿಳಂಬವು ಅಸಂವಿಧಾನಿಕ ಎಂದು ಸುಪ್ರೀಂ ಕೋರ್ಟ್ ತೀರ್ಪು ನೀಡಿದೆ. ತಮಿಳುನಾಡು ರಾಜ್ಯಪಾಲ ಆರ್.ಎನ್. ರವಿ ಅವರ ಮಸೂದೆ ಅನುಮೋದನೆ ವಿಳಂಬದ ವಿರುದ್ಧ ಸುಪ್ರೀಂ ಕೋರ್ಟ್ ನೀಡಿದ ತೀರ್ಪನ್ನು ರಾಜ್ಯ ಸ್ವಾಯತ್ತತೆಗೆ ದೊರೆತ ಮಹತ್ವದ ಗೆಲುವು ಎಂದು ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಶ್ಲಾಘಿಸಿದ್ದಾರೆ. ತಮಿಳುನಾಡು ಒಕ್ಕೂಟಕ್ಕಾಗಿ ಹೋರಾಡುತ್ತಲೇ ಇರುತ್ತದೆ ಮತ್ತು ಗೆಲ್ಲುತ್ತದೆ ಎಂದು ಅವರು ಹೇಳಿದ್ದಾರೆ.

ಐತಿಹಾಸಿಕ ತೀರ್ಪು; ರಾಜ್ಯಪಾಲರ ವಿರುದ್ಧದ ಸುಪ್ರೀಂ ಕೋರ್ಟ್ ತೀರ್ಪಿಗೆ ತಮಿಳುನಾಡು ಸಿಎಂ ಸ್ಟಾಲಿನ್ ಶ್ಲಾಘನೆ
Tamil Nadu Cm Stalin

Updated on: Apr 08, 2025 | 3:54 PM

ಚೆನ್ನೈ, ಏಪ್ರಿಲ್ 8: ತಮಿಳುನಾಡು ರಾಜ್ಯ ಶಾಸಕಾಂಗವು ಅಂಗೀಕರಿಸಿದ ಹಲವಾರು ಮಸೂದೆಗಳ ಕುರಿತು ನಿರ್ಧಾರ ತೆಗೆದುಕೊಳ್ಳುವುದನ್ನು ವಿಳಂಬ ಮಾಡಿದ್ದಕ್ಕಾಗಿ ತಮಿಳುನಾಡು ರಾಜ್ಯಪಾಲ ಆರ್.ಎನ್. ರವಿ ಅವರನ್ನು ಸುಪ್ರೀಂ ಕೋರ್ಟ್ (Supreme court) ಇಂದು ತೀವ್ರ ತರಾಟೆಗೆ ತೆಗೆದುಕೊಂಡಿದೆ. ರಾಜ್ಯಪಾಲ ಆರ್.ಎನ್. ರವಿ ಅವರ ಪದೇ ಪದೇ ವಿಳಂಬ ಮತ್ತು ರಾಜ್ಯ ಶಾಸನಕ್ಕೆ ಒಪ್ಪಿಗೆ ನೀಡಲು ನಿರಾಕರಿಸುವುದರ ವಿರುದ್ಧ ತಮಿಳುನಾಡು ಸರ್ಕಾರ ಸಲ್ಲಿಸಿದ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ರಾಜ್ಯಪಾಲರ ವಿವೇಚನೆಗೆ ಸ್ಪಷ್ಟ ಮಿತಿಗಳನ್ನು ನಿಗದಿಪಡಿಸಿದೆ. ರಾಜ್ಯಪಾಲರು ಒಪ್ಪಿಗೆಯನ್ನು ತಡೆಹಿಡಿಯಲು ಅಥವಾ ಅನಿರ್ದಿಷ್ಟವಾಗಿ ವಿಳಂಬ ಮಾಡಲು ಸಾಧ್ಯವಿಲ್ಲ. ಅವರು ರಾಜ್ಯ ಸಚಿವ ಸಂಪುಟದ ಸಲಹೆಯ ಮೇರೆಗೆ ಕಾರ್ಯನಿರ್ವಹಿಸಬೇಕು ಎಂದು ಅದು ಸ್ಪಷ್ಟಪಡಿಸಿದೆ. ಹೀಗಾಗಿ, ತಮಿಳುನಾಡು ರಾಜ್ಯಪಾಲರ ಬಳಿ ಬಾಕಿ ಇರುವ ಎಲ್ಲಾ 10 ಮಸೂದೆಗಳನ್ನು ಈಗ ತೆರವುಗೊಳಿಸಲಾಗಿದೆ.

ರಾಜ್ಯ ವಿಧಾನಸಭೆಯಿಂದ ಈಗಾಗಲೇ ಹಿಂದಿರುಗಿಸಲ್ಪಟ್ಟ ಮತ್ತು ಮರು-ಅಂಗೀಕಾರಗೊಂಡ 10 ಮಸೂದೆಗಳನ್ನು ರಾಷ್ಟ್ರಪತಿಗಳ ಪರಿಗಣನೆಗೆ ಕಾಯ್ದಿರಿಸುವ ರಾಜ್ಯಪಾಲರ ಕ್ರಮವು ಸಂವಿಧಾನದ 200ನೇ ವಿಧಿಗೆ ವಿರುದ್ಧವಾಗಿದೆ ಎಂದು ನ್ಯಾಯಮೂರ್ತಿಗಳಾದ ಜೆ.ಬಿ. ಪಾರ್ದಿವಾಲಾ ಮತ್ತು ಆರ್. ಮಹಾದೇವನ್ ಅವರನ್ನೊಳಗೊಂಡ ನ್ಯಾಯಪೀಠವು ತೀರ್ಪು ನೀಡಿದೆ. ಇದು ರಾಜ್ಯಪಾಲರ ಮಸೂದೆಗಳಿಗೆ ಒಪ್ಪಿಗೆಯನ್ನು ನಿಯಂತ್ರಿಸುವ ಸಂವಿಧಾನದ 200ನೇ ವಿಧಿಗೆ ವಿರುದ್ಧವಾಗಿದೆ. ರಾಜ್ಯಪಾಲರು ಅಂತಹ ವಿಷಯಗಳಲ್ಲಿ ಯಾವುದೇ ವಿವೇಚನೆಯನ್ನು ಹೊಂದಿಲ್ಲ. ಅವರು ಮಂತ್ರಿ ಮಂಡಳಿಯ ಸಹಾಯ ಮತ್ತು ಸಲಹೆಯ ಮೇರೆಗೆ ಕಾರ್ಯನಿರ್ವಹಿಸಲು ಬದ್ಧರಾಗಿರಬೇಕು ಎಂದು ನ್ಯಾಯಾಲಯ ಸ್ಪಷ್ಟಪಡಿಸಿದೆ. ರಾಜ್ಯಪಾಲರು ಅನಿರ್ದಿಷ್ಟವಾಗಿ ಅನುಮೋದನೆಯನ್ನು ತಡೆಹಿಡಿಯಲು ಸಾಧ್ಯವಿಲ್ಲ ಎಂದು ನ್ಯಾಯಪೀಠವು ಹೇಳಿದೆ.

ಇದನ್ನೂ ಓದಿ
ರಾಜ್ಯಸಭೆಯಲ್ಲಿ ಅಸಂಸದೀಯ ಹೇಳಿಕೆಗೆ ಮಲ್ಲಿಕಾರ್ಜುನ ಖರ್ಗೆ ಕ್ಷಮೆಯಾಚನೆ
ಬಸ್‌ ತಡೆದು ನಡು ರಸ್ತೆಯಲ್ಲಿ ಪಾನಮತ್ತ ಮಹಿಳೆಯ ಕಿರಿಕ್; ವಿಡಿಯೋ ವೈರಲ್‌
ಛತ್ತೀಸ್​ಗಢ ಮಾಜಿ ಸಿಎಂ ಭೂಪೇಶ್ ಬಘೇಲ್ ಮನೆ ಸೇರಿ ಹಲವೆಡೆ ಇಡಿ ದಾಳಿ
ಮೊಬೈಲ್​ನಲ್ಲಿ ಮಾತನಾಡುತ್ತಾ ಬಾವಿಗೆ ಬಿದ್ದು ವಿದ್ಯಾರ್ಥಿ ಸಾವು


ಇದನ್ನೂ ಓದಿ: Annamalai: ನಾನು ರೇಸ್​ನಲ್ಲಿಲ್ಲ; ತಮಿಳುನಾಡು ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನಕ್ಕೆ ಅಣ್ಣಾಮಲೈ ರಾಜೀನಾಮೆಗೆ ನಿರ್ಧಾರ

ತೀರ್ಪಿನ ಪ್ರಕಾರ, ವಿಧಾನಸಭೆಯಿಂದ ಮಸೂದೆಯನ್ನು ಅಂಗೀಕರಿಸಿ ಎರಡನೇ ಬಾರಿಗೆ ರಾಜ್ಯಪಾಲರಿಗೆ ಕಳುಹಿಸಿದ ನಂತರ, ರಾಜ್ಯಪಾಲರು ಅದಕ್ಕೆ ಒಪ್ಪಿಗೆ ನೀಡುವುದು ಅಥವಾ ಅಪರೂಪದ ಸಂದರ್ಭಗಳಲ್ಲಿ, ಮಸೂದೆಯು ಅದರ ಹಿಂದಿನ ಆವೃತ್ತಿಗಿಂತ ಗಣನೀಯವಾಗಿ ಭಿನ್ನವಾಗಿದ್ದರೆ ಒಪ್ಪಿಗೆಯನ್ನು ತಡೆಹಿಡಿಯುವುದು ಮಾತ್ರ ಸಾಂವಿಧಾನಿಕ ಕ್ರಮವಾಗಿದೆ. ಅದನ್ನು ಮತ್ತೆ ರಾಷ್ಟ್ರಪತಿಗಳ ಪರಿಗಣನೆಗೆ ಕಾಯ್ದಿರಿಸಲು ಅನುಮತಿ ಇಲ್ಲ. ನ್ಯಾಯಾಲಯದ ಹಸ್ತಕ್ಷೇಪದ ನಂತರ, ಬಾಕಿ ಇರುವ ಎಲ್ಲಾ 10 ಮಸೂದೆಗಳನ್ನು ಈಗ ತೆರವುಗೊಳಿಸಲಾಗಿದೆ.


ಇದನ್ನೂ ಓದಿ: Waqf Amendment Bill: ವಕ್ಫ್ ತಿದ್ದುಪಡಿ ಮಸೂದೆಯನ್ನು ಹಿಂತೆಗೆದುಕೊಳ್ಳಿ; ಪ್ರಧಾನಿ ಮೋದಿಗೆ ತಮಿಳುನಾಡು ಸಿಎಂ ಸ್ಟಾಲಿನ್ ಒತ್ತಾಯ

ಈ ತೀರ್ಪಿಗೆ ಪ್ರತಿಕ್ರಿಯಿಸಿದ ತಮಿಳುನಾಡು ಮುಖ್ಯಮಂತ್ರಿ ಎಂ.ಕೆ ಸ್ಟಾಲಿನ್ ರಾಜ್ಯ ವಿಧಾನಸಭೆಯಲ್ಲಿ ಹೇಳಿಕೆ ನೀಡಿದ್ದು, ಇದನ್ನು “ಐತಿಹಾಸಿಕ ತೀರ್ಪು” ಎಂದು ಕರೆದಿದ್ದಾರೆ. “ರಾಜ್ಯಪಾಲರು ತಮ್ಮ ಒಪ್ಪಿಗೆ ನೀಡದೆ ಹಲವಾರು ಮಸೂದೆಗಳನ್ನು ಹಿಂತಿರುಗಿಸಿದ್ದಾರೆ. ನಾವು ಸುಪ್ರೀಂ ಕೋರ್ಟ್‌ಗೆ ಹೋಗಿದ್ದೇವೆ. ಈಗ ಅದು ಒಪ್ಪಿಗೆಯನ್ನು ತಡೆಹಿಡಿಯುವುದು ಕಾನೂನುಬಾಹಿರ ಎಂದು ತೀರ್ಪು ನೀಡಿದೆ. ಇದು ತಮಿಳುನಾಡಿಗೆ ಮಾತ್ರವಲ್ಲದೆ ಭಾರತದ ಎಲ್ಲಾ ರಾಜ್ಯ ಸರ್ಕಾರಗಳಿಗೆ ಒಂದು ಪ್ರಮುಖ ವಿಜಯವಾಗಿದೆ” ಎಂದಿದ್ದಾರೆ.

 

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 3:37 pm, Tue, 8 April 25

Sushma Chakre

ಮೂಲತಃ ಮಲೆನಾಡ ಹೆಬ್ಬಾಗಿಲು ಶಿವಮೊಗ್ಗದವಳು. ಬೆಂಗಳೂರಿನಲ್ಲಿ ವಾಸ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದೇನೆ. 10 ವರ್ಷಗಳಿಂದ ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡ, ಟಿವಿ9 ಡಿಜಿಟಲ್ ವಿಭಾಗದಲ್ಲಿ ಕೆಲಸ ಮಾಡಿದ ಅನುಭವವಿದೆ. ಸಾಹಿತ್ಯ, ಸಂಗೀತ, ಸಿನಿಮಾ, ಬರವಣಿಗೆಯಲ್ಲಿ ಆಸಕ್ತಿ.

Read More
Follow Us