AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹಿಟ್​​​ ಆ್ಯಂಡ್​​​​ ರನ್ ಪ್ರಕರಣ: ವ್ಯಕ್ತಿಯೊಬ್ಬರನ್ನು ಬಾನೆಟ್‌ ಮೇಲೆ ಎಳೆದೊಯ್ದ ಟಿಟಿ ಚಾಲಕ

ದಕ್ಷಿಣ ದಿಲ್ಲಿಯ ಲಜ್‌ಪತ್‌ ನಗರ ಪ್ರದೇಶದಲ್ಲಿ ವ್ಯಕ್ತಿಯೊಬ್ಬರಿಗೆ ಟಿಟಿ ವಾಹನ ಡಿಕ್ಕಿ ಹೊಡೆದು ಅದರ ಬಾನೆಟ್‌ ಮೇಲೆ ಸ್ವಲ್ಪ ದೂರದವರೆಗೆ ಎಳೆದಕೊಂಡು ಹೋಗಿರುವ ಘಟನೆ ನಡೆದಿದೆ. ಈ ಬಗ್ಗೆ ಒಂದು ವಿಡಿಯೋ ವೈರಲ್​​​ ಆಗಿದೆ. ಭಾನುವಾರ ರಾತ್ರಿ ನಡೆದ ಈ ಘಟನೆಯ ವಿಡಿಯೋಗಳು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಳ್ಳಲಾಗಿದೆ.

ಹಿಟ್​​​ ಆ್ಯಂಡ್​​​​ ರನ್ ಪ್ರಕರಣ: ವ್ಯಕ್ತಿಯೊಬ್ಬರನ್ನು ಬಾನೆಟ್‌ ಮೇಲೆ ಎಳೆದೊಯ್ದ ಟಿಟಿ ಚಾಲಕ
ವೈರಲ್​​ ವಿಡಿಯೋ
ಅಕ್ಷಯ್​ ಪಲ್ಲಮಜಲು​​
|

Updated on: Dec 18, 2023 | 2:06 PM

Share

ದೆಹಲಿ, ಡಿ.18: ಹಿಟ್​​​ ಆ್ಯಂಡ್​​​​ ರನ್ (Hit and run case)​​​ ಪ್ರಕರಣಗಳು ದೆಹಲಿಯಲ್ಲಿ ಹೆಚ್ಚಾಗಿದೆ. ಇಲ್ಲಿ ಅನೇಕ ಪ್ರಕರಣಗಳು ಬೆಳಕಿಗೆ ಬಂದಿದೆ. ನೆನ್ನೆ (ಡಿ.17) ರಾತ್ರಿ ದಕ್ಷಿಣ ದಿಲ್ಲಿಯ ಲಜ್‌ಪತ್‌ ನಗರ ಪ್ರದೇಶದಲ್ಲಿ ವ್ಯಕ್ತಿಯೊಬ್ಬರಿಗೆ ಟಿಟಿ ವಾಹನ ಡಿಕ್ಕಿ ಹೊಡೆದು ಅದರ ಬಾನೆಟ್‌ ಮೇಲೆ ಸ್ವಲ್ಪ ದೂರದವರೆಗೆ ಎಳೆದಕೊಂಡು ಹೋಗಿರುವ ಘಟನೆ ನಡೆದಿದೆ. ಈ ಬಗ್ಗೆ ಒಂದು ವಿಡಿಯೋ ವೈರಲ್​​​ ಆಗಿದೆ. ಭಾನುವಾರ ರಾತ್ರಿ ನಡೆದ ಈ ಘಟನೆಯ ವಿಡಿಯೋಗಳು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಳ್ಳಲಾಗಿದೆ.

ಎಕ್ಸ್​​​ನಲ್ಲಿ ಹಂಚಿಕೊಂಡಿರುವ ಒಂದು ವಿಡಿಯೋದಲ್ಲಿ ಒಬ್ಬ ವ್ಯಕ್ತಿಗೆ ಟಿಟಿ ವಾಹನ ಬಂದು ಡಿಕ್ಕಿ ಹೊಡೆದಿದೆ. ಈ ವೇಳೆ ಆ ವ್ಯಕ್ತಿ ಟಿಟಿ ಬಾನೆಟ್‌ ಮೇಲೆ ನಿಂತಿದ್ದಾನೆ. ಇದನ್ನು ಲೆಕ್ಕಿಸದೆ ಟಿಟಿ ಚಾಲಕ ಸ್ವಲ್ಪ ದೂರುವರೆಗೆ ಎಳೆದುಕೊಂಡು ಹೋಗಿದ್ದಾನೆ. ಮತ್ತೊಂದು ವಿಡಿಯೋದಲ್ಲಿ ಇಳಿಯುತ್ತಿರುವುದನ್ನು ಕಾಣಬಹುದು. ಪೊಲೀಸರಿಗೆ ಬಂದಿರುವ ವರದಿ ಪ್ರಕಾರ ಭಾನುವಾರ ರಾತ್ರಿ 11:30ರ ಸುಮಾರಿಗೆ ಪಿಸಿಆರ್​​​ಗೆ ಒಂದು ಕರೆ ಬಂದಿತ್ತು. ಡಿಎನ್‌ಡಿ ಫ್ಲೈಓವರ್‌ನಿಂದ ನೋಯ್ಡಾ ಕಡೆಗೆ ಹೋಗುತ್ತಿದ್ದಾಗ ಟಿಟಿ ವಾಹನದ ಚಾಲಕ ಲಜಪತ್ ನಗರದಲ್ಲಿ ವ್ಯಕ್ತಿಯೊಬ್ಬರಿಗೆ ಡಿಕ್ಕಿ ಹೊಡೆದು ತನ್ನ ವಾಹನದ ಬಾನೆಟ್ ಮೇಲೆ ಸ್ವಲ್ಪ ದೂರದವೆರಗೆ ಎಳೆದುಕೊಂಡು ಹೋಗಿದ್ದಾನೆ ಎಂದು ದೂರು ನೀಡಿದ್ದಾರೆ.

ಇದನ್ನೂ ಓದಿ: ಈ ದೃಶ್ಯ ನೋಡಿದ್ರೆ ಎದೆ ಝಲ್​ ಎನ್ನುತ್ತೆ, ಬೀದಿ ನಾಯಿಗೆ ಆಹಾರ ನೀಡುತ್ತಿದ್ದ ವೇಳೆ ಯುವತಿಗೆ ಕಾರು ಡಿಕ್ಕಿ

ವೈರಲ್​​ ವಿಡಿಯೋ ಇಲ್ಲಿದೆ:

ಟಿಟಿ ವಾಹನವನ್ನು ಹಿಂಬಾಲಿಸುತ್ತಿದ್ದ ವ್ಯಕ್ತಿಗಳು ದೂರು ನೀಡಿದ್ದಾರೆ. ಈ ಘಟನೆಯಿಂದ ಆ ವ್ಯಕ್ತಿಗೆ ಯಾವುದೇ ಗಾಯಗಳಾಗಿಲ್ಲ ಎಂದು ಹೇಳಿದ್ದಾರೆ. ಇನ್ನು ಈ ಬಗ್ಗೆ ದೂರು ನೀಡಿದವರು ಉತ್ತರಪ್ರದೇಶದವರಾಗಿದ್ದು, ನಾವು ದೂರು ನೀಡಲು ದೆಹಲಿ ಬರಲು ಸಾಧ್ಯವಿಲ್ಲ ಎಂದು ಹೇಳಿದ್ದಾರೆ. ಈ ಬಗ್ಗೆ ಪೊಲೀಸರು ಅವರಲ್ಲಿ ದೂರು ನೀಡಲು ದೆಹಲಿಗೆ ಬರುವಂತೆ ಮನವಿ ಮಾಡಿಕೊಂಡಿದ್ದಾರೆ. ಒಂದು ಬಾರಿ ದೆಹಲಿಗೆ ಬಂದು ದೂರು ನೀಡಿದರೆ, ಕಾನೂನು ಪ್ರಕಾರ ಅವರ ಮೇಲ್ಲೆ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದ್ದಾರೆ.

Follow Us
ಕೆಂಪೇಗೌಡ ಏರ್‌ಪೋರ್ಟ್ ಟೋಲ್‌ನಲ್ಲಿ ಆ್ಯಂಬುಲೆನ್ಸ್ ಸುಗಮ ಸಂಚಾರಕ್ಕೆ ಸಮಸ್ಯೆ
ಕೆಂಪೇಗೌಡ ಏರ್‌ಪೋರ್ಟ್ ಟೋಲ್‌ನಲ್ಲಿ ಆ್ಯಂಬುಲೆನ್ಸ್ ಸುಗಮ ಸಂಚಾರಕ್ಕೆ ಸಮಸ್ಯೆ
ಇನ್ಸ್​ಸ್ಟಾ ಚೆಲುವೆಯ ಸಾವಿನ ಸುತ್ತ-ಅನುಮಾನದ ಹುತ್ತ!
ಇನ್ಸ್​ಸ್ಟಾ ಚೆಲುವೆಯ ಸಾವಿನ ಸುತ್ತ-ಅನುಮಾನದ ಹುತ್ತ!
ಬಿಜೆಪಿ ನಾಯಕರಿಗೆ ಓಪನ್​​ ಚಾಲೆಂಜ್​​ ಹಾಕಿದ ಗೃಹ ಸಚಿವ ಪ್ರಿಯಾಂಕ್​​ ಖರ್ಗೆ
ಬಿಜೆಪಿ ನಾಯಕರಿಗೆ ಓಪನ್​​ ಚಾಲೆಂಜ್​​ ಹಾಕಿದ ಗೃಹ ಸಚಿವ ಪ್ರಿಯಾಂಕ್​​ ಖರ್ಗೆ
ಕೋಲಾರಮ್ಮನಿಗೆ 10,108 ತಾವರೆ ಹೂವಿನ ಅಲಂಕಾರ
ಕೋಲಾರಮ್ಮನಿಗೆ 10,108 ತಾವರೆ ಹೂವಿನ ಅಲಂಕಾರ
ಪರಪ್ಪನ ಅಗ್ರಹಾರ ಜೈಲಲ್ಲೇ ಮಾರಾಟವಾಗುತ್ತಿತ್ತು ಫೋನ್! 1 ಲಕ್ಷ ರೂ.ಗೆ ಸೇಲ್
ಪರಪ್ಪನ ಅಗ್ರಹಾರ ಜೈಲಲ್ಲೇ ಮಾರಾಟವಾಗುತ್ತಿತ್ತು ಫೋನ್! 1 ಲಕ್ಷ ರೂ.ಗೆ ಸೇಲ್
ಕೆಪಿಎಸ್​ಸಿಯಲ್ಲಿ ಮತ್ತೊಂದು ಅಕ್ರಮ: ಅವ್ಯವಹಾರ ಗೊತ್ತಾದ್ಮೇಲೂ ಪೋಸ್ಟಿಂಗ್!
ಕೆಪಿಎಸ್​ಸಿಯಲ್ಲಿ ಮತ್ತೊಂದು ಅಕ್ರಮ: ಅವ್ಯವಹಾರ ಗೊತ್ತಾದ್ಮೇಲೂ ಪೋಸ್ಟಿಂಗ್!
ದೇಶಾದ್ಯಂತ ಇಂದಿನಿಂದ ನಾಲ್ಕು ದಿನಗಳ ಕಾಲ ಬ್ಯಾಂಕ್​ಗಳು ಬಂದ್
ದೇಶಾದ್ಯಂತ ಇಂದಿನಿಂದ ನಾಲ್ಕು ದಿನಗಳ ಕಾಲ ಬ್ಯಾಂಕ್​ಗಳು ಬಂದ್
‘ನನ್ನತ್ರ ನಡ್ಯಲ್ಲ’; ಕಾವ್ಯಾಗೆ ಖಡಕ್ ವಾರ್ನಿಂಗ್ ಕೊಟ್ಟ ಗಗನ್ ಚಿನ್ನಪ್ಪ
‘ನನ್ನತ್ರ ನಡ್ಯಲ್ಲ’; ಕಾವ್ಯಾಗೆ ಖಡಕ್ ವಾರ್ನಿಂಗ್ ಕೊಟ್ಟ ಗಗನ್ ಚಿನ್ನಪ್ಪ
ಜಿಬಿಎ ಪೌರಕಾರ್ಮಿಕನ ಮೇಲೆ ಹಲ್ಲೆ; ಕೇರಳದ ಯುವಕ, ಯುವತಿ ಪೊಲೀಸ್ ವಶಕ್ಕೆ
ಜಿಬಿಎ ಪೌರಕಾರ್ಮಿಕನ ಮೇಲೆ ಹಲ್ಲೆ; ಕೇರಳದ ಯುವಕ, ಯುವತಿ ಪೊಲೀಸ್ ವಶಕ್ಕೆ
ದೆಹಲಿಗೆ ಆಗಮಿಸಿದ ರಷ್ಯಾ ಅಧ್ಯಕ್ಷ ಪುಟಿನ್
ದೆಹಲಿಗೆ ಆಗಮಿಸಿದ ರಷ್ಯಾ ಅಧ್ಯಕ್ಷ ಪುಟಿನ್