AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹಿಟ್​​​ ಆ್ಯಂಡ್​​​​ ರನ್ ಪ್ರಕರಣ: ವ್ಯಕ್ತಿಯೊಬ್ಬರನ್ನು ಬಾನೆಟ್‌ ಮೇಲೆ ಎಳೆದೊಯ್ದ ಟಿಟಿ ಚಾಲಕ

ದಕ್ಷಿಣ ದಿಲ್ಲಿಯ ಲಜ್‌ಪತ್‌ ನಗರ ಪ್ರದೇಶದಲ್ಲಿ ವ್ಯಕ್ತಿಯೊಬ್ಬರಿಗೆ ಟಿಟಿ ವಾಹನ ಡಿಕ್ಕಿ ಹೊಡೆದು ಅದರ ಬಾನೆಟ್‌ ಮೇಲೆ ಸ್ವಲ್ಪ ದೂರದವರೆಗೆ ಎಳೆದಕೊಂಡು ಹೋಗಿರುವ ಘಟನೆ ನಡೆದಿದೆ. ಈ ಬಗ್ಗೆ ಒಂದು ವಿಡಿಯೋ ವೈರಲ್​​​ ಆಗಿದೆ. ಭಾನುವಾರ ರಾತ್ರಿ ನಡೆದ ಈ ಘಟನೆಯ ವಿಡಿಯೋಗಳು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಳ್ಳಲಾಗಿದೆ.

ಹಿಟ್​​​ ಆ್ಯಂಡ್​​​​ ರನ್ ಪ್ರಕರಣ: ವ್ಯಕ್ತಿಯೊಬ್ಬರನ್ನು ಬಾನೆಟ್‌ ಮೇಲೆ ಎಳೆದೊಯ್ದ ಟಿಟಿ ಚಾಲಕ
ವೈರಲ್​​ ವಿಡಿಯೋ
Follow us
ಅಕ್ಷಯ್​ ಪಲ್ಲಮಜಲು​​
|

Updated on: Dec 18, 2023 | 2:06 PM

ದೆಹಲಿ, ಡಿ.18: ಹಿಟ್​​​ ಆ್ಯಂಡ್​​​​ ರನ್ (Hit and run case)​​​ ಪ್ರಕರಣಗಳು ದೆಹಲಿಯಲ್ಲಿ ಹೆಚ್ಚಾಗಿದೆ. ಇಲ್ಲಿ ಅನೇಕ ಪ್ರಕರಣಗಳು ಬೆಳಕಿಗೆ ಬಂದಿದೆ. ನೆನ್ನೆ (ಡಿ.17) ರಾತ್ರಿ ದಕ್ಷಿಣ ದಿಲ್ಲಿಯ ಲಜ್‌ಪತ್‌ ನಗರ ಪ್ರದೇಶದಲ್ಲಿ ವ್ಯಕ್ತಿಯೊಬ್ಬರಿಗೆ ಟಿಟಿ ವಾಹನ ಡಿಕ್ಕಿ ಹೊಡೆದು ಅದರ ಬಾನೆಟ್‌ ಮೇಲೆ ಸ್ವಲ್ಪ ದೂರದವರೆಗೆ ಎಳೆದಕೊಂಡು ಹೋಗಿರುವ ಘಟನೆ ನಡೆದಿದೆ. ಈ ಬಗ್ಗೆ ಒಂದು ವಿಡಿಯೋ ವೈರಲ್​​​ ಆಗಿದೆ. ಭಾನುವಾರ ರಾತ್ರಿ ನಡೆದ ಈ ಘಟನೆಯ ವಿಡಿಯೋಗಳು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಳ್ಳಲಾಗಿದೆ.

ಎಕ್ಸ್​​​ನಲ್ಲಿ ಹಂಚಿಕೊಂಡಿರುವ ಒಂದು ವಿಡಿಯೋದಲ್ಲಿ ಒಬ್ಬ ವ್ಯಕ್ತಿಗೆ ಟಿಟಿ ವಾಹನ ಬಂದು ಡಿಕ್ಕಿ ಹೊಡೆದಿದೆ. ಈ ವೇಳೆ ಆ ವ್ಯಕ್ತಿ ಟಿಟಿ ಬಾನೆಟ್‌ ಮೇಲೆ ನಿಂತಿದ್ದಾನೆ. ಇದನ್ನು ಲೆಕ್ಕಿಸದೆ ಟಿಟಿ ಚಾಲಕ ಸ್ವಲ್ಪ ದೂರುವರೆಗೆ ಎಳೆದುಕೊಂಡು ಹೋಗಿದ್ದಾನೆ. ಮತ್ತೊಂದು ವಿಡಿಯೋದಲ್ಲಿ ಇಳಿಯುತ್ತಿರುವುದನ್ನು ಕಾಣಬಹುದು. ಪೊಲೀಸರಿಗೆ ಬಂದಿರುವ ವರದಿ ಪ್ರಕಾರ ಭಾನುವಾರ ರಾತ್ರಿ 11:30ರ ಸುಮಾರಿಗೆ ಪಿಸಿಆರ್​​​ಗೆ ಒಂದು ಕರೆ ಬಂದಿತ್ತು. ಡಿಎನ್‌ಡಿ ಫ್ಲೈಓವರ್‌ನಿಂದ ನೋಯ್ಡಾ ಕಡೆಗೆ ಹೋಗುತ್ತಿದ್ದಾಗ ಟಿಟಿ ವಾಹನದ ಚಾಲಕ ಲಜಪತ್ ನಗರದಲ್ಲಿ ವ್ಯಕ್ತಿಯೊಬ್ಬರಿಗೆ ಡಿಕ್ಕಿ ಹೊಡೆದು ತನ್ನ ವಾಹನದ ಬಾನೆಟ್ ಮೇಲೆ ಸ್ವಲ್ಪ ದೂರದವೆರಗೆ ಎಳೆದುಕೊಂಡು ಹೋಗಿದ್ದಾನೆ ಎಂದು ದೂರು ನೀಡಿದ್ದಾರೆ.

ಇದನ್ನೂ ಓದಿ: ಈ ದೃಶ್ಯ ನೋಡಿದ್ರೆ ಎದೆ ಝಲ್​ ಎನ್ನುತ್ತೆ, ಬೀದಿ ನಾಯಿಗೆ ಆಹಾರ ನೀಡುತ್ತಿದ್ದ ವೇಳೆ ಯುವತಿಗೆ ಕಾರು ಡಿಕ್ಕಿ

ವೈರಲ್​​ ವಿಡಿಯೋ ಇಲ್ಲಿದೆ:

ಟಿಟಿ ವಾಹನವನ್ನು ಹಿಂಬಾಲಿಸುತ್ತಿದ್ದ ವ್ಯಕ್ತಿಗಳು ದೂರು ನೀಡಿದ್ದಾರೆ. ಈ ಘಟನೆಯಿಂದ ಆ ವ್ಯಕ್ತಿಗೆ ಯಾವುದೇ ಗಾಯಗಳಾಗಿಲ್ಲ ಎಂದು ಹೇಳಿದ್ದಾರೆ. ಇನ್ನು ಈ ಬಗ್ಗೆ ದೂರು ನೀಡಿದವರು ಉತ್ತರಪ್ರದೇಶದವರಾಗಿದ್ದು, ನಾವು ದೂರು ನೀಡಲು ದೆಹಲಿ ಬರಲು ಸಾಧ್ಯವಿಲ್ಲ ಎಂದು ಹೇಳಿದ್ದಾರೆ. ಈ ಬಗ್ಗೆ ಪೊಲೀಸರು ಅವರಲ್ಲಿ ದೂರು ನೀಡಲು ದೆಹಲಿಗೆ ಬರುವಂತೆ ಮನವಿ ಮಾಡಿಕೊಂಡಿದ್ದಾರೆ. ಒಂದು ಬಾರಿ ದೆಹಲಿಗೆ ಬಂದು ದೂರು ನೀಡಿದರೆ, ಕಾನೂನು ಪ್ರಕಾರ ಅವರ ಮೇಲ್ಲೆ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದ್ದಾರೆ.

ರಾಕೇಶ್ ಪೂಜಾರಿ ಪ್ರತಿಭೆ ಕಂಡು ದರ್ಶನ್ ಕೂಡ ಫೋಟೋ ತೆಗೆಸಿಕೊಂಡಿದ್ರು: ರಘು
ರಾಕೇಶ್ ಪೂಜಾರಿ ಪ್ರತಿಭೆ ಕಂಡು ದರ್ಶನ್ ಕೂಡ ಫೋಟೋ ತೆಗೆಸಿಕೊಂಡಿದ್ರು: ರಘು
ಗಂಗಾವತಿಯಲ್ಲಿ ಬೆಂಬಲಿಗರ ಸಭೆ ನಡೆಸಿದ ಜನಾರ್ಧನ ರೆಡ್ಡಿ ಪತ್ನಿ ಅರುಣಾ
ಗಂಗಾವತಿಯಲ್ಲಿ ಬೆಂಬಲಿಗರ ಸಭೆ ನಡೆಸಿದ ಜನಾರ್ಧನ ರೆಡ್ಡಿ ಪತ್ನಿ ಅರುಣಾ
ಲಿಫ್ಟ್​ನಲ್ಲಿದ್ದ9 ಜನರನ್ನ ಗೋಡೆ ಕೊರೆದು ರಕ್ಷಿಸಿದ ರೋಚಕ ವಿಡಿಯೋ!
ಲಿಫ್ಟ್​ನಲ್ಲಿದ್ದ9 ಜನರನ್ನ ಗೋಡೆ ಕೊರೆದು ರಕ್ಷಿಸಿದ ರೋಚಕ ವಿಡಿಯೋ!
ಪುರುಷರು ವಾಹನ ಓಡಿಸಲು ಪರದಾಡಿದ ರಸ್ತೇಲಿ ಸಲೀಸಾಗಿ ಸ್ಕೂಟರ್ ಓಡಿಸಿದ ಯುವತಿ
ಪುರುಷರು ವಾಹನ ಓಡಿಸಲು ಪರದಾಡಿದ ರಸ್ತೇಲಿ ಸಲೀಸಾಗಿ ಸ್ಕೂಟರ್ ಓಡಿಸಿದ ಯುವತಿ
ರಾಕೇಶ್ ಪೂಜಾರಿಗೆ ಆರೋಗ್ಯ ಸಮಸ್ಯೆ ಇತ್ತ: ಗೆಳೆಯ ಕೊಟ್ಟ ಉತ್ತರ
ರಾಕೇಶ್ ಪೂಜಾರಿಗೆ ಆರೋಗ್ಯ ಸಮಸ್ಯೆ ಇತ್ತ: ಗೆಳೆಯ ಕೊಟ್ಟ ಉತ್ತರ
ಮಳೆಗಾಲ ಸಮೀಪದಲ್ಲಿದೆ, ನಗರದಲ್ಲಿ ಮರ ಗಣತಿ ಶುರುಮಾಡಲು ಇದು ಸಕಾಲ
ಮಳೆಗಾಲ ಸಮೀಪದಲ್ಲಿದೆ, ನಗರದಲ್ಲಿ ಮರ ಗಣತಿ ಶುರುಮಾಡಲು ಇದು ಸಕಾಲ
ಹೊತ್ತಿ ಉರಿದ ಗೋದಾಮು, 60ಕ್ಕೂ ಹೆಚ್ಚು ಗಾಡಿ ನೀರು ಹಾಕಿದ್ರೂ ಆರದ ಬೆಂಕಿ
ಹೊತ್ತಿ ಉರಿದ ಗೋದಾಮು, 60ಕ್ಕೂ ಹೆಚ್ಚು ಗಾಡಿ ನೀರು ಹಾಕಿದ್ರೂ ಆರದ ಬೆಂಕಿ
ಸಾಮಾನ್ಯ ಸಂಗತಿಯೆಂಬಂತೆ ಘಟನೆ ವಿವರಿಸಿದ ಮೃತ ಬಾಲಕನ ತಂದೆ
ಸಾಮಾನ್ಯ ಸಂಗತಿಯೆಂಬಂತೆ ಘಟನೆ ವಿವರಿಸಿದ ಮೃತ ಬಾಲಕನ ತಂದೆ
ಮದುವೆಗೆಂದು ಮಂಗಳೂರಿಗೆ ಹೊರಟ್ಟಿದ್ದ ಬಸ್ ಶಿರಾಡಿ ಘಾಟಿನಲ್ಲಿ ಪಲ್ಟಿ
ಮದುವೆಗೆಂದು ಮಂಗಳೂರಿಗೆ ಹೊರಟ್ಟಿದ್ದ ಬಸ್ ಶಿರಾಡಿ ಘಾಟಿನಲ್ಲಿ ಪಲ್ಟಿ
ಆದಂಪುರ ಏರ್​ಬೇಸ್​​ ಭೇಟಿ ಬಳಿಕ ಮೋದಿ ಮಾತು: ಇಲ್ಲಿದೆ ನೇರಪ್ರಸಾರ
ಆದಂಪುರ ಏರ್​ಬೇಸ್​​ ಭೇಟಿ ಬಳಿಕ ಮೋದಿ ಮಾತು: ಇಲ್ಲಿದೆ ನೇರಪ್ರಸಾರ