AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪೆಟ್ರೋಲ್ ಬೆಲೆ ತುಟ್ಟಿಯಾಯ್ತು ಅಂತಾ ವಿದ್ಯುತ್​ ಇಲಾಖೆಯ ಈ ನೌಕರ ತನ್ನ ಕರ್ತವ್ಯ ನಿಭಾಯಿಸಲು ಏನು ಮಾಡಿದ್ದಾರೆ ನೋಡಿ!

ತೈಲ ಬೆಲೆ ಏರಿಕೆ ನಿಯಂತ್ರಿಸದಿರುವುದನ್ನು ಪ್ರತಿಭಟಿಸಿದಂತೆಯೂ ಇರುತ್ತದೆ ಎಂದು ಸೀದಾ ಕುದುರೆಯೇರಿ ವಿದ್ಯುತ್​ ಬಿಲ್ ವಿತರಣೆ ಕಾರ್ಯಕ್ಕೆ ಮುಂದಾಗಿದ್ದಾರೆ. ಹಳ್ಳಿಯಿಂದ ಹಳ್ಳಿಗೆ ತೆರಳಿ, ವಿದ್ಯುತ್​ ಬಿಲ್​ ಪಾವತಿ ಕಾರ್ಯವನ್ನೂ ಪೂರ್ಣಗೊಳಿಸಿಕೊಂಡು ಬಂದಿದ್ದಾರೆ. ಒಟ್ಟಿನಲ್ಲಿ ಪೆಟ್ರೋಲ್, ಡೀಸೆಲ್ ಮತ್ತು ಅನಿಲ ಬೆಲೆಗಳು ತುಟ್ಟಿಯಾಗಿದ್ದು ಜನಸಾಮಾನ್ಯರು ಹೈರಾಣಗೊಂಡಿದ್ದಾರೆ.

ಪೆಟ್ರೋಲ್ ಬೆಲೆ ತುಟ್ಟಿಯಾಯ್ತು ಅಂತಾ ವಿದ್ಯುತ್​ ಇಲಾಖೆಯ ಈ ನೌಕರ ತನ್ನ ಕರ್ತವ್ಯ ನಿಭಾಯಿಸಲು ಏನು ಮಾಡಿದ್ದಾರೆ ನೋಡಿ!
ಪೆಟ್ರೋಲ್ ಬೆಲೆ ತುಟ್ಟಿಯಾಯ್ತು ಅಂತಾ ವಿದ್ಯುತ್​ ಇಲಾಖೆಯ ಈ ನೌಕರ ತನ್ನ ಕರ್ತವ್ಯ ನಿಭಾಯಿಸಲು ಏನು ಮಾಡಿದ್ದಾರೆ ನೋಡಿ!
TV9 Web
| Updated By: ಸಾಧು ಶ್ರೀನಾಥ್​|

Updated on:Apr 02, 2022 | 6:27 PM

Share

ಶಿವಹರ (ಬಿಹಾರ): ದೇಶದಲ್ಲಿ ಇಂಧನ ಬೆಲೆ ಗಗನಕ್ಕೇರಿ ಯಾವುದೋ ಕಾಲವಾಯ್ತು ಬಿಡಿ. ಆತಂಕದ ವಿಚಾರವೆಂದರೆ ಪೆಟ್ರೋಲ್ ಬೆಲೆ ಇಳಿಕೆ ಎಂಬುದು ಗಗನಕುಸುಮವಾಗಿದ್ದು, ಅದು ಗ್ರಾಹಕರ ಕೈಗೆ ಸಿಗದೆ ಎತ್ತರೆತ್ತರಕ್ಕೆ ಆಕಾಶದಲ್ಲಿ ಗಿರಕಿ ಹೊಡೆಯುತ್ತಿದೆ. ಪರಿಸ್ಥಿತಿ ಹೀಗಿರುವಾಗ ಜನಸಾಮಾನ್ಯರು ನಾನಾ ರೂದಲ್ಲಿ ತಮ್ಮಾಕ್ರೋಶವನ್ನು ಹೊರಹಾಕುತ್ತಿದ್ದಾರೆ. ಕೆಲವು ಸೈರಿಸಿಕೊಂಡು ಹೇಗೋ ನಿಭಾಯಿಸಿಕೊಂಡು ಹೋಗುತ್ತಿದ್ದಾರೆ. ಇನ್ನು ಕೆಲವರು ಉದ್ಯೋಗನಿಮಿತ್ತಂ ಅನಿವಾರ್ಯವಾಗಿ ವಾಹನ ಬಳಸಬೇಕಾಗಿದ್ದು, ತೈಲದ ಮೇಲೆ ಅವಲಂಬಿತರಾಗಿದ್ದಾರೆ. ಉತ್ತರ ಭಾರತದ ಬಿಹಾರದಲ್ಲಿ ವಿದ್ಯುತ್​ ಇಲಾಖೆಯ ಈ ನೌಕರ ತನ್ನ ಕರ್ತವ್ಯ ನಿಭಾಯಿಸಲು ಏನು ಮಾಡಿದ್ದಾರೆ ನೋಡಿ!

ಆತ ಬಿಹಾರ ರಾಜ್ಯದಲ್ಲಿ ವಿದ್ಯುತ್​ ಇಲಾಖೆಯ ನೌಕರ. ತಮ್ಮ ಇಲಾಖೆಯ ವತಿಯಿಂದ ಗ್ರಾಹಕರಿಗೆ ವಿದ್ಯುತ್​ ಬಿಲ್ ಕೊಡುವುದು ಅವರ ಕರ್ತವ್ಯ. ಆದರೆ ಪೆಟ್ರೋಲ್ ಬೆಲೆ ಹೆಚ್ಚಾಗುತ್ತಿದ್ದು, ವಾಹನವನ್ನು ಅವಲಂಬಿಸುವುದು ದುಬಾರಿ ಆಗಿದೆ. ಹಾಗಾಗಿ ತೈಲ ಬೆಲೆ ಏರಿಕೆ ನಿಯಂತ್ರಿಸದಿರುವುದನ್ನು ಪ್ರತಿಭಟಿಸಿದಂತೆಯೂ ಇರುತ್ತದೆ ಎಂದು ಸೀದಾ ಕುದುರೆಯೇರಿ ವಿದ್ಯುತ್​ ಬಿಲ್ ವಿತರಣೆ ಕಾರ್ಯಕ್ಕೆ ಮುಂದಾಗಿದ್ದಾರೆ. ಹಳ್ಳಿಯಿಂದ ಹಳ್ಳಿಗೆ ತೆರಳಿ, ವಿದ್ಯುತ್​ ಬಿಲ್​ ಪಾವತಿ ಕಾರ್ಯವನ್ನೂ ಪೂರ್ಣಗೊಳಿಸಿಕೊಂಡು ಬಂದಿದ್ದಾರೆ. ಒಟ್ಟಿನಲ್ಲಿ ಪೆಟ್ರೋಲ್, ಡೀಸೆಲ್ ಮತ್ತು ಅನಿಲ ಬೆಲೆಗಳು ತುಟ್ಟಿಯಾಗಿದ್ದು ಜನಸಾಮಾನ್ಯರು ಹೈರಾಣಗೊಂಡಿದ್ದಾರೆ.

ಬಿಹಾರ ರಾಜ್ಯದ ಶಿವಹರ ಜಿಲ್ಲೆಯ ಬಿಷಣಪುರ್ ಕಿಶನದೇವ್ ಗ್ರಾಮದ ಅಭಿಜೀತ್ ತಿವಾರಿ ದಿನಾ ಬೆಳಗ್ಗೆ ತನ್ನ ಗ್ರಾಮದಿಂದ ಹೊರಟು ಸುತ್ತಮುತ್ತಲ ಗ್ರಾಮದ ವಿದ್ಯುತ್​ ಗ್ರಾಹಕರಿಂದ ವಿದ್ಯುತ್​ ಶುಲ್ಕ ಸಂಗ್ರಹಸಿಕೊಂಡು ಅದನ್ನು ಇಲಾಖೆಗೆ ಕಟ್ಟಿ ಬರುವ ಕಾಯಕ ಮಾಡುತ್ತಿದ್ದಾರೆ. ಆದರೆ ಇದಕ್ಕಾಗಿ ಅವರು ಇದುವರೆಗೂ ದ್ವಿಚಕ್ರ ವಾಹನ ಬಳಸುತ್ತಿದ್ದರಾದರೂ ಈಗ ತೈಲ ಬೆಲೆಗಳು ಏರಿಕೆಯಾಗಿರುವುದರಿಂದ ಅನಿವಾರ್ಯವಾಗಿ ವಾಹನ ಬಳಕೆಯನ್ನ ನಿಲ್ಲಿಸಿಬಿಟ್ಟಿದ್ದಾರೆ. ಅದರ ಬದಲು ಕುದುರೆಯೇರಿ ಗ್ರಾಮಗಳಿಗೆ ತಲುಪುತ್ತಿದ್ದಾರೆ. ಅಂದಹಾಗೆ ದಿನಗೂಲಿ ನೌಕರರನಾಗಿ ಅಭಿಜೀತ್ ತಿವಾರಿ ಬಿಹಾರದ ವಿದ್ಯತ್​ ಇಲಾಖೆಯಲ್ಲಿ ಕಾರ್ಯನಿರ್ವಹಿಸುತಿದ್ದಾರೆ.

ಇದನ್ನೂ ಓದಿ:

Galaxy M33 5G: 6000mAh ಬ್ಯಾಟರಿ, 50MP ಕ್ಯಾಮೆರಾ: ಭಾರತಕ್ಕೆ ಕಾಲಿಟ್ಟ ಬಜೆಟ್ ಬೆಲೆಯ ಗ್ಯಾಲಕ್ಸಿ M33 5G

One Plus 10 Pro: 66,999 ರೂ. ಬೆಲೆಯ ಹೊಸ ಒನ್​ಪ್ಲಸ್ 10 ಪ್ರೊ ಫೋನ್ ಖರೀದಿಸಬಹುದೇ?

Published On - 6:24 pm, Sat, 2 April 22

ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?