AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಕ್ರಮ ವಲಸಿಗರಿಗೆ ಡೆಡ್​ಲೈನ್ ನೀಡಿದ ಅಮಿತ್ ಶಾ

ದೇಶಾದ್ಯಂತ ಎನ್‌ಆರ್‌ಸಿ ಅನುಷ್ಠಾನಗೊಳಿಸುವುದರ ಮೂಲಕ 2024ರ ಸಂಸತ್‌ ಚುನಾವಣೆಗೂ ಮುನ್ನ ಎಲ್ಲಾ ಅಕ್ರಮ ವಲಸಿಗರನ್ನು ಹೊರ ಹಾಕುತ್ತೇವೆ ಅಂತ ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿದ್ದಾರೆ. ಜಾರ್ಖಂಡ್‌ ವಿಧಾನಸಭಾ ಚುನಾವಣೆ ಪ್ರಚಾರದ ವೇಳೆ ಮಾತನಾಡುವಾಗ ಈ ರೀತಿ ಹೇಳಿದ್ದಾರೆ. ಮೋದಿ ಆಫರ್ ಕೊಟ್ಟಿದ್ರು: ಮಹಾರಾಷ್ಟ್ರ ಸರ್ಕಾರ ರಚನೆ ಬೆನ್ನಲ್ಲೇ ಎನ್​ಸಿಪಿ ಮುಖ್ಯಸ್ಥ ಶರದ್ ಪವಾರ್ ಸ್ಫೋಟಕ ಟ್ವಿಸ್ಟ್ ಕೊಟ್ಟಿದ್ದಾರೆ. ಪ್ರಧಾನಿ ಮೋದಿ ನಮ್ಮೊಂದಿಗೆ ಕೆಲಸ ಮಾಡುವಂತೆ ಆಫರ್ ಕೊಟ್ರು. ಆದ್ರೆ ನಾನು ಅದನ್ನು ತಿರಸ್ಕರಿಸಿದೆ. ನಮ್ಮ-ನಿಮ್ಮ […]

ಅಕ್ರಮ ವಲಸಿಗರಿಗೆ ಡೆಡ್​ಲೈನ್ ನೀಡಿದ ಅಮಿತ್ ಶಾ
ಸಾಧು ಶ್ರೀನಾಥ್​
|

Updated on: Dec 03, 2019 | 8:01 AM

Share

ದೇಶಾದ್ಯಂತ ಎನ್‌ಆರ್‌ಸಿ ಅನುಷ್ಠಾನಗೊಳಿಸುವುದರ ಮೂಲಕ 2024ರ ಸಂಸತ್‌ ಚುನಾವಣೆಗೂ ಮುನ್ನ ಎಲ್ಲಾ ಅಕ್ರಮ ವಲಸಿಗರನ್ನು ಹೊರ ಹಾಕುತ್ತೇವೆ ಅಂತ ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿದ್ದಾರೆ. ಜಾರ್ಖಂಡ್‌ ವಿಧಾನಸಭಾ ಚುನಾವಣೆ ಪ್ರಚಾರದ ವೇಳೆ ಮಾತನಾಡುವಾಗ ಈ ರೀತಿ ಹೇಳಿದ್ದಾರೆ.

ಮೋದಿ ಆಫರ್ ಕೊಟ್ಟಿದ್ರು: ಮಹಾರಾಷ್ಟ್ರ ಸರ್ಕಾರ ರಚನೆ ಬೆನ್ನಲ್ಲೇ ಎನ್​ಸಿಪಿ ಮುಖ್ಯಸ್ಥ ಶರದ್ ಪವಾರ್ ಸ್ಫೋಟಕ ಟ್ವಿಸ್ಟ್ ಕೊಟ್ಟಿದ್ದಾರೆ. ಪ್ರಧಾನಿ ಮೋದಿ ನಮ್ಮೊಂದಿಗೆ ಕೆಲಸ ಮಾಡುವಂತೆ ಆಫರ್ ಕೊಟ್ರು. ಆದ್ರೆ ನಾನು ಅದನ್ನು ತಿರಸ್ಕರಿಸಿದೆ. ನಮ್ಮ-ನಿಮ್ಮ ವೈಯಕ್ತಿಕ ಸಂಬಂಧ ಚೆನ್ನಾಗಿದೆ. ಹಾಗೇ ಮುಂದುವರಿಯೋಣ. ಆದ್ರೆ, ಜತೆಯಾಗಿ ಕೆಲಸ ಅಸಾಧ್ಯವೆಂದೆ ಅಂದಿದ್ದಾರೆ.

ಮರು ಪರಿಶೀಲನಾ ಅರ್ಜಿ ಸಲ್ಲಿಸಿದ ಜಮಾತ್‌: ಅಯೋಧ್ಯಾ ಭೂವಿವಾದ ಪ್ರಕರಣದಲ್ಲಿ ಸುಪ್ರೀಂಕೋರ್ಟ್ ನೀಡಿರುವ ತೀರ್ಪಿನ ಮರು ಪರಿಶೀಲನೆ ಕೋರಿ ಜಮಾತ್ ಉಲೇಮಾ ಇ ಹಿಂದ್ ಸಂಘಟನೆ ಅರ್ಜಿ ಸಲ್ಲಿಸಿದೆ. ಅಲ್ಲದೆ ರಾಮ ಮಂದಿರ ನಿರ್ಮಿಸಲು 3 ತಿಂಗಳ ಒಳಗೆ ಟ್ರಸ್ಟ್ ರಚಿಸುವಂತೆ ಸರ್ಕಾರಕ್ಕೆ ನಿರ್ದೇಶನ ನೀಡಿರುವ ತೀರ್ಪಿನ ಜಾರಿಗೂ ಮಧ್ಯಂತರ ತಡೆ ಕೋರಿದೆ.

ಸೇನೆಯಿಂದ ಪೂರ್ವಾಭ್ಯಾಸ: ನೌಕಾಪಡೆ ದಿನಾಚರಣೆ ಹಿನ್ನೆಲೆಯಲ್ಲಿ ಕಾರ್ಯಾಚರಣಾ ಪ್ರದರ್ಶನಗಳ ಪೂರ್ವಾಭ್ಯಾಸವನ್ನು ಆಂಧ್ರಪ್ರದೇಶದ ವಿಶಾಖಪಟ್ಟಣಂನಲ್ಲಿ ನಡೆಸಲಾಯಿತು. ಡಿಸೆಂಬರ್ 4 ಅಂದ್ರೆ ನಾಳೆ ನೌಕಾಪಡೆ ದಿನಾಚರಣೆ ಹಿನ್ನೆಲೆ ಸೇನೆಯಿಂದ ಪೂರ್ವಾಭ್ಯಾಸ ನಡೆಯಿತು.

ನಗದು ರಹಿತ ವಹಿವಾಟಿಗೆ ಉತ್ತೇಜನ: ನಗದು ರಹಿತ ವಹಿವಾಟಿಗೆ ಉತ್ತೇಜನ ನೀಡುವ ಸಲುವಾಗಿ ಎಲ್‌ಐಸಿ ಕ್ರಿಡೆಟ್ ಕಾರ್ಡ್‌ ಮೂಲಕ ಹಣ ಪಾವತಿಸುವುದಕ್ಕೆ ವಿಧಿಸುತ್ತಿದ್ದ ಶುಲ್ಕವನ್ನ ರದ್ದುಪಡಿಸಿದೆ. ಕ್ರೆಡಿಟ್ ಕಾರ್ಡ್ ಮೂಲಕ ಮುಂಗಡ ಕಂತು, ಕಂತು ನವೀಕರಣ, ಸಾಲ ಮರುಪಾವತಿ, ಸಾಲದ ಬಡ್ಡಿಗೆ ವಿಧಿಸುತ್ತಿದ್ದ ಶುಲ್ಕವನ್ನ ಎಲ್‌ಐಸಿ ರದ್ದುಪಡಿಸಿದೆ.

Follow Us
ರೇಷ್ಮೆ ಸೀರೆ ಉಟ್ಟು ಬಂದ ನೋರಾ ಫತೇಹಿ, ಹೇಳಿದ್ದೇನು? ವಿಡಿಯೋ ನೋಡಿ
ರೇಷ್ಮೆ ಸೀರೆ ಉಟ್ಟು ಬಂದ ನೋರಾ ಫತೇಹಿ, ಹೇಳಿದ್ದೇನು? ವಿಡಿಯೋ ನೋಡಿ
ನೋರಾ ಫತೇಹಿ ಬಗ್ಗೆ ನಟಿ ರಕ್ಷಿತಾ ಮಾತು: ವಿಡಿಯೋ ನೋಡಿ
ನೋರಾ ಫತೇಹಿ ಬಗ್ಗೆ ನಟಿ ರಕ್ಷಿತಾ ಮಾತು: ವಿಡಿಯೋ ನೋಡಿ
ಮುನಿಸು ಮರೆತು ಲೋಕ ಅದಾಲತ್​​ನಲ್ಲಿ ಮತ್ತೆ ಒಂದಾದ ಮೂರು ಜೋಡಿಗಳು
ಮುನಿಸು ಮರೆತು ಲೋಕ ಅದಾಲತ್​​ನಲ್ಲಿ ಮತ್ತೆ ಒಂದಾದ ಮೂರು ಜೋಡಿಗಳು
ಬಿರು ಬೇಸಿಗೆಯಲ್ಲೂ ಆಲಿಕಲ್ಲು ಮಳೆ: ಧಾರವಾಡ ಮಂದಿಗೆ ತಂಪೆರೆದ ವರುಣ
ಬಿರು ಬೇಸಿಗೆಯಲ್ಲೂ ಆಲಿಕಲ್ಲು ಮಳೆ: ಧಾರವಾಡ ಮಂದಿಗೆ ತಂಪೆರೆದ ವರುಣ
ನೆಲಮಂಗಲದಲ್ಲಿ 6 ನವಿಲು ಸಾವು: ವಿಷ ಪ್ರಾಶನಮಾಡಿ ಕೊಂದಿರುವ ಶಂಕೆ
ನೆಲಮಂಗಲದಲ್ಲಿ 6 ನವಿಲು ಸಾವು: ವಿಷ ಪ್ರಾಶನಮಾಡಿ ಕೊಂದಿರುವ ಶಂಕೆ
ತಮ್ಮ ಕ್ಷೇತ್ರದ ಜಾತ್ರೆಗೆ ಸಿಎಂ ಒಂದು ಲೋಡ್ ಸಿಲಿಂಡರ್ ಕೊಡಿಸಿದ್ರಾ ?
ತಮ್ಮ ಕ್ಷೇತ್ರದ ಜಾತ್ರೆಗೆ ಸಿಎಂ ಒಂದು ಲೋಡ್ ಸಿಲಿಂಡರ್ ಕೊಡಿಸಿದ್ರಾ ?
ಹೊಸ ಜೆರ್ಸಿ ಪ್ರೋಮೋದಲ್ಲಿ ಆರ್​ಸಿಬಿಯನ್ನು ಗೇಲಿ ಮಾಡಿದ ಕೆಕೆಆರ್
ಹೊಸ ಜೆರ್ಸಿ ಪ್ರೋಮೋದಲ್ಲಿ ಆರ್​ಸಿಬಿಯನ್ನು ಗೇಲಿ ಮಾಡಿದ ಕೆಕೆಆರ್
ಅಪಾರ್ಟ್​ಮೆಂಟ್ ಲಿಫ್ಟ್​ ಗೇಟಿನೊಳಗೆ ಸಿಲುಕಿತು ಮಗುವಿನ ಕೈ
ಅಪಾರ್ಟ್​ಮೆಂಟ್ ಲಿಫ್ಟ್​ ಗೇಟಿನೊಳಗೆ ಸಿಲುಕಿತು ಮಗುವಿನ ಕೈ
ಬಜೆಟ್​ ಬಗ್ಗೆ ಅಸಮಾಧಾನಗೊಂಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ ಕೈ ಶಾಸಕ
ಬಜೆಟ್​ ಬಗ್ಗೆ ಅಸಮಾಧಾನಗೊಂಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ ಕೈ ಶಾಸಕ
ತಂದೆಯ ಅಂತ್ಯಸಂಸ್ಕಾರ ನೆರವೇರಿಸಿ ಲಿಂಗಸಮಾನತೆಯ ಸಂದೇಶ ಸಾರಿದ ಸಹೋದರಿಯರು
ತಂದೆಯ ಅಂತ್ಯಸಂಸ್ಕಾರ ನೆರವೇರಿಸಿ ಲಿಂಗಸಮಾನತೆಯ ಸಂದೇಶ ಸಾರಿದ ಸಹೋದರಿಯರು