AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಿಎಂ ಯಡಿಯೂರಪ್ಪಗೆ ಕೊರೊನಾ ಸೋಂಕು, ಮಣಿಪಾಲ್ ಆಸ್ಪತ್ರೆಗೆ ದಾಖಲು

ದೆಹಲಿ: ಕೊರೊನಾ ಮಹಾಮಾರಿ ಯಾರನ್ನೂ ಬಿಡಲ್ಲ ಅನ್ನೋದಕ್ಕೆ ರಾಜ್ಯದ ಸಿಎಂ ಯಡಿಯೂರಪ್ಪ, ಕೇಂದ್ರ ಗೃಹ ಸಚಿವ ಅಮಿತ್​ ಶಾ ಸಾಕ್ಷಿ. ಯಾಕಂದ್ರೆ, ಇವರಿಬ್ಬರಿಗೂ ಈಗ ಕೊರೊನಾ ಪಾಸಿಟಿವ್ ಆಗಿದೆ. ಈ ಕುರಿತು ಇಬ್ಬರೂ ನಾಯಕರು ಟ್ವೀಟ್ ಮಾಡಿ ತಮಗೆ ಕೊರೊನಾ ಪಾಸಿಟಿವ್ ಆಗಿದೆ ಅಂತಾ ತಿಳಿಸಿದ್ದಾರೆ. ಸಿಎಂ ಯಡಿಯೂರಪ್ಪಗೆ ಮಣಿಪಾಲ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೀತಿದ್ರೆ, ಅಮಿತ್ ಶಾ ಏಮ್ಸ್​ಗೆ ದಾಖಲಾಗಿದ್ದಾರೆ. ಕೊರೊನಾ.. ಇದೊಂದು ಡೆಡ್ಲಿ ವೈರಸ್ ವಿಶ್ವದಲ್ಲಿ ಆಡ್ತಿರೋ ಆಟಕ್ಕೆ ಜನ ಬೆಚ್ಚಿ ಬಿದ್ದಿದ್ದಾರೆ. ಕಣ್ಣಿಗೆ ಕಾಣದ […]

ಸಿಎಂ ಯಡಿಯೂರಪ್ಪಗೆ ಕೊರೊನಾ ಸೋಂಕು, ಮಣಿಪಾಲ್ ಆಸ್ಪತ್ರೆಗೆ ದಾಖಲು
ಮುಖ್ಯಮಂತ್ರಿ ಬಿ.ಎಸ್​ ಯಡಿಯೂರಪ್ಪ
ಆಯೇಷಾ ಬಾನು
| Updated By: ಸಾಧು ಶ್ರೀನಾಥ್​|

Updated on:Aug 03, 2020 | 8:40 AM

Share

ದೆಹಲಿ: ಕೊರೊನಾ ಮಹಾಮಾರಿ ಯಾರನ್ನೂ ಬಿಡಲ್ಲ ಅನ್ನೋದಕ್ಕೆ ರಾಜ್ಯದ ಸಿಎಂ ಯಡಿಯೂರಪ್ಪ, ಕೇಂದ್ರ ಗೃಹ ಸಚಿವ ಅಮಿತ್​ ಶಾ ಸಾಕ್ಷಿ. ಯಾಕಂದ್ರೆ, ಇವರಿಬ್ಬರಿಗೂ ಈಗ ಕೊರೊನಾ ಪಾಸಿಟಿವ್ ಆಗಿದೆ. ಈ ಕುರಿತು ಇಬ್ಬರೂ ನಾಯಕರು ಟ್ವೀಟ್ ಮಾಡಿ ತಮಗೆ ಕೊರೊನಾ ಪಾಸಿಟಿವ್ ಆಗಿದೆ ಅಂತಾ ತಿಳಿಸಿದ್ದಾರೆ. ಸಿಎಂ ಯಡಿಯೂರಪ್ಪಗೆ ಮಣಿಪಾಲ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೀತಿದ್ರೆ, ಅಮಿತ್ ಶಾ ಏಮ್ಸ್​ಗೆ ದಾಖಲಾಗಿದ್ದಾರೆ.

ಕೊರೊನಾ.. ಇದೊಂದು ಡೆಡ್ಲಿ ವೈರಸ್ ವಿಶ್ವದಲ್ಲಿ ಆಡ್ತಿರೋ ಆಟಕ್ಕೆ ಜನ ಬೆಚ್ಚಿ ಬಿದ್ದಿದ್ದಾರೆ. ಕಣ್ಣಿಗೆ ಕಾಣದ ಇದೊಂದು ಸೂಕ್ಷ್ಮಾಣು ಜೀವಿ ಜಗತ್ತನ್ನೇ ನಿಲ್ಲಿಸುವ ಮಟ್ಟಿಗೆ ಅಬ್ಬರಿಸಿದೆ. ಇಂತಾ ಹೆಮ್ಮಾರಿಗೆ ಬಡವ-ಬಲ್ಲಿದ ಅನ್ನೋ ಭೇದಭಾವವಿಲ್ಲ. ಅಧಿಕಾರ ಇದೆಯಾ.. ಇಲ್ವಾ ಅನ್ನೋದು ಮುಖ್ಯವಾಗ್ತಿಲ್ಲ. ಅಷ್ಟರ ಮಟ್ಟಿಗೆ ಸಿಕ್ಕಸಿಕ್ಕವರಿಗೆ ವಕ್ಕರಿಸ್ತಿದೆ. ರಾಜ್ಯದಲ್ಲಿ ಕೊರೊನಾ ವೈರಸ್ ಅಬ್ಬರ ಆರಂಭವಾದಾಗಿನಿಂದಲೂ ರಾಜ್ಯ ಮುಖ್ಯಮಂತ್ರಿ ಯಡಿಯೂರಪ್ಪ, ಅದನ್ನ ಸಮರ್ಥವಾಗಿ ಎದುರಿಸಲು ಬೇಕಿರೋ ಕ್ರಮಗಳನ್ನ ಕೈಗೊಂಡಿದ್ರು. ಇಂತಾ ಯಡಿಯೂರಪ್ಪನವರಿಗೇ ಈಗ ಡೆಡ್ಲಿ ವೈರಸ್ ಅಟ್ಯಾಕ್ ಮಾಡಿದೆ.

ಸಿಎಂ ಯಡಿಯೂರಪ್ಪಗೂ ವಕ್ಕರಿಸಿದ ಮಹಾಮಾರಿ ಕೊರೊನಾ! ರಾಜ್ಯದಲ್ಲಿ ಕೊರೊನಾ ವಿರುದ್ಧದ ಹೋರಾಟದಲ್ಲಿ ತೊಡಗಿಸಿಕೊಂಡಿದ್ದ ಸಿಎಂ ಬಿ.ಎಸ್.ಯಡಿಯೂರಪ್ಪಗೆ ಕೊರೊನಾ ವೈರಸ್ ಅಂಟಿಕೊಂಡಿದೆ. ಈ ಕುರಿತು ಸಿಎಂ ತಮ್ಮ ಟ್ವಿಟ್ಟರ್ ಅಕೌಂಟ್​ನಲ್ಲಿ ಬರೆದುಕೊಂಡಿದ್ದಾರೆ. ತಮಗೆ ಕೊರೊನಾ ಪಾಸಿಟಿವ್ ಆಗಿದ್ದು, ವೈದ್ಯರ ಸಲಹೆ ಮೇರೆಗೆ ಆಸ್ಪತ್ರೆಗೆ ದಾಖಲಾಗ್ತಿರೋದಾಗಿ ಹೇಳಿಕೊಂಡಿದ್ದಾರೆ. ಸಿಎಂ ಯಡಿಯೂರಪ್ಪ ಈಗಾಗಲೇ ಮಣಿಪಾಲ್ ಆಸ್ಪತ್ರೆಗೆ ದಾಖಲಾಗಿದ್ದಾರೆ. ಅಲ್ದೆ, ತಮಗೆ ಕೊರೊನಾ ಗುಣಲಕ್ಷಣಗಳು ಇಲ್ಲ ಅಂತಾ ಹೇಳಿದ್ದಾರೆ. ಜೊತೆಗೆ ತಮ್ಮ ಸಂಪರ್ಕಕ್ಕೆ ಬಂದಿದ್ದವರು ಕ್ವಾರಂಟೈನ್ ಆಗಿ ಅಂತಾ ಮನವಿ ಮಾಡಿದ್ದಾರೆ.

ಸಿಎಂ ಯಡಿಯೂರಪ್ಪನವರಿಗೆ ಕೊರೊನಾ ಪಾಸಿಟಿವ್ ಆಗಿದೆ ಅಂತಾ ಗೊತ್ತಾದ ತಕ್ಷಣ ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಟ್ವೀಟ್​ ಮಾಡಿ, ಯಡಿಯೂರಪ್ಪ ಶೀಘ್ರ ಚೇತರಿಸಿಕೊಳ್ಳಲಿ ಅಂತಾ ಹಾರೈಸಿದ್ದಾರೆ. ಇದೇ ರೀತಿ ವಿಪಕ್ಷ ನಾಯಕ ಸಿದ್ದರಾಮಯ್ಯನವರೂ ಟ್ವೀಟ್ ಮಾಡಿದ್ದು, ಯಡಿಯೂರಪ್ಪ ಬೇಗ ಚೇತರಿಸಿಕೊಳ್ಳಲಿ. ಬೇಗ ಗುಣಮುಖರಾಗಿ ಮತ್ತೆ ಜನಸೇವೆಯಲ್ಲಿ ತೊಡಗಿಸಿಕೊಳ್ಳಲಿ ಅಂತಾ ಹಾರೈಸಿದ್ದಾರೆ.

ಇದೇ ರೀತಿ ಕೇಂದ್ರ ಗೃಹ ಸಚಿವ ಅಮಿತ್ ಶಾಗೆ ಕೂಡ ಕೊರೊನಾ ವೈರಸ್ ವಕ್ಕರಿಸಿದೆ. ಈ ಕುರಿತು ಅಮಿತ್ ಶಾ ಟ್ವೀಟ್ ಮಾಡಿದ್ದು, ವೈದ್ಯರ ಸಲಹೆ ಮೇರೆಗೆ ಆಸ್ಪತ್ರೆಗೆ ದಾಖಲಾಗ್ತಿರೋದಾಗಿ ಹೇಳಿದ್ದಾರೆ. ಅಮಿತ್ ಶಾಗೆ ದೆಹಲಿಯ ಏಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗ್ತಿದೆ. ಅಮಿತ್ ಶಾಗೆ ಕೊರೊನಾ ಪಾಸಿಟಿವ್ ಆಗಿದೆ ಅಂತಾ ಗೊತ್ತಾದ ಕೂಡಲೇ ಹಲವು ನಾಯಕರು ಅವರು ಗುಣಮುಖರಾಗಲಿ ಅಂತಾ ಹಾರೈಸಿದ್ದಾರೆ. ಎಐಸಿಸಿ ಮಾಜಿ ಅಧ್ಯಕ್ಷ ರಾಹುಲ್ ಗಾಂಧಿ, ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್, ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನಜಿ, ಒಡಿಶಾ ಸಿಎಂ ನವೀನ್ ಪಟ್ನಾಯಕ್, ಜನಸೇನೆ ಮುಖ್ಯಸ್ಥ ಪವನ್ ಕಲ್ಯಾಣ್ ಸೇರಿ ನಾನಾ ರಾಜಕೀಯ ಪಕ್ಷಗಳ ಮುಖಂಡರು ಅಮಿತ್ ಶಾ ಶೀಘ್ರ ಗುಣಮುಖರಾಗಲಿ ಅಂತಾ ಟ್ವೀಟ್ ಮಾಡಿದ್ದಾರೆ.

ಕೊರೊನಾ ಅನ್ನೋ ಮಹಾಮಾರಿಗೆ ಬಡವರು-ಶ್ರೀಮಂತರು, ಅಧಿಕಾರದಲ್ಲಿರೋರು, ಇಲ್ಲದಿರೋರು ಯಾರು ಅನ್ನೋದು ಲೆಕ್ಕಕ್ಕೇ ಇಲ್ಲ. ಸಿಕ್ಕ ಸಿಕ್ಕವರಿಗೆ ಸಿಕ್ಕ ಸಿಕ್ಕ ರೀತಿ ಅಟ್ಯಾಕ್ ಮಾಡ್ತಿದೆ. ಹೀಗಾಗಿ ಸಿಎಂ ಯಡಿಯೂರಪ್ಪ, ಕೇಂದ್ರ ಗೃಹ ಸಚಿವ ಅಮಿತ್ ಶಾ ಶೀಘ್ರ ಕೊರೊನಾದಿಂದ ಮುಕ್ತರಾಗಲಿ ಅಂತಾ ನಾವೂ ಹಾರೈಸೋಣ.

Published On - 6:46 am, Mon, 3 August 20

ಬನ್ನೇರುಘಟ್ಟ ಝೂಗೆ ದಕ್ಷಿಣ ಆಫ್ರಿಕಾದ ಕ್ಯಾಪುಚಿನ್ ಕೋತಿಗಳ ಎಂಟ್ರಿ
ಬನ್ನೇರುಘಟ್ಟ ಝೂಗೆ ದಕ್ಷಿಣ ಆಫ್ರಿಕಾದ ಕ್ಯಾಪುಚಿನ್ ಕೋತಿಗಳ ಎಂಟ್ರಿ
ಮನೆ ಭೋಗ್ಯ ಸಂಬಂಧ ಇಬ್ಬರ ಗಲಾಟೆ,  ಮೂರನೆಯವರಿಗೆ ಬಿತ್ತು ಗೂಸಾ!
ಮನೆ ಭೋಗ್ಯ ಸಂಬಂಧ ಇಬ್ಬರ ಗಲಾಟೆ,  ಮೂರನೆಯವರಿಗೆ ಬಿತ್ತು ಗೂಸಾ!
ಬರ್ತ್​ಡೇಗೆ ಕುಮಾರಸ್ವಾಮಿಗೆ ಅಭಿಮಾನಿ ಕೊಟ್ಟ ಚಿನ್ನದ ಚೈನ್ ಹೇಗಿದೆ ನೋಡಿ!
ಬರ್ತ್​ಡೇಗೆ ಕುಮಾರಸ್ವಾಮಿಗೆ ಅಭಿಮಾನಿ ಕೊಟ್ಟ ಚಿನ್ನದ ಚೈನ್ ಹೇಗಿದೆ ನೋಡಿ!
ಚಾಮರಾಜನಗರದಲ್ಲಿ ಬೃಹದಾಕಾರದ ಹುಲಿ ಪ್ರತ್ಯಕ್ಷ!
ಚಾಮರಾಜನಗರದಲ್ಲಿ ಬೃಹದಾಕಾರದ ಹುಲಿ ಪ್ರತ್ಯಕ್ಷ!
ಸದನದಲ್ಲಿ ಸಿಎಂ ಸಿದ್ದರಾಮಯ್ಯ ಕಾಲೆಳೆದ ಸುರೇಶ್ ಕುಮಾರ್: ಸ್ವಾರಸ್ಯಕರ ಚರ್ಚೆ
ಸದನದಲ್ಲಿ ಸಿಎಂ ಸಿದ್ದರಾಮಯ್ಯ ಕಾಲೆಳೆದ ಸುರೇಶ್ ಕುಮಾರ್: ಸ್ವಾರಸ್ಯಕರ ಚರ್ಚೆ
ಮಾಗಡಿ ಯುವಕ- ಉಡುಪಿ ಯುವತಿ, ಆನ್​​ಲೈನ್​​ನಲ್ಲೇ ನಿಶ್ಚಿತಾರ್ಥ
ಮಾಗಡಿ ಯುವಕ- ಉಡುಪಿ ಯುವತಿ, ಆನ್​​ಲೈನ್​​ನಲ್ಲೇ ನಿಶ್ಚಿತಾರ್ಥ
ಲೇಡಿ ಗೆಟಪ್ ವಿಷಯಕ್ಕೆ ಶಿವಣ್ಣನ ಕಾಲೆಳೆದ ಉಪೇಂದ್ರ; ಎಷ್ಟು ಕ್ಯೂಟ್ ನೋಡಿ
ಲೇಡಿ ಗೆಟಪ್ ವಿಷಯಕ್ಕೆ ಶಿವಣ್ಣನ ಕಾಲೆಳೆದ ಉಪೇಂದ್ರ; ಎಷ್ಟು ಕ್ಯೂಟ್ ನೋಡಿ
ಬಿಗ್​​ಬಾಸ್ ಫಿನಾಲೆಗೆ ಕನ್ನಡತಿಯರ ಎಂಟ್ರಿ: ಗೆದ್ದವರಿಗೆ ಸಿಗುವ ಹಣವೆಷ್ಟು?
ಬಿಗ್​​ಬಾಸ್ ಫಿನಾಲೆಗೆ ಕನ್ನಡತಿಯರ ಎಂಟ್ರಿ: ಗೆದ್ದವರಿಗೆ ಸಿಗುವ ಹಣವೆಷ್ಟು?
ಮುಂದೆ ನಮ್ರತೆ ಕಲಿತುಕೊಳ್ಳೋಣ ಬಿಡಿ: ಮೋಹನ್ ದಾಸ್ ಪೈಗೆ ಡಿಕೆಶಿ ಟಾಂಗ್
ಮುಂದೆ ನಮ್ರತೆ ಕಲಿತುಕೊಳ್ಳೋಣ ಬಿಡಿ: ಮೋಹನ್ ದಾಸ್ ಪೈಗೆ ಡಿಕೆಶಿ ಟಾಂಗ್
8 ಮಂದಿ ಪೊಲೀಸ್ ಸಸ್ಪೆಂಡ್: ಅಧಿವೇಶನದಲ್ಲಿ ಸದ್ದು ಮಾಡಲಿದೆ ಖಾಕಿ ಕಳ್ಳಾಟ
8 ಮಂದಿ ಪೊಲೀಸ್ ಸಸ್ಪೆಂಡ್: ಅಧಿವೇಶನದಲ್ಲಿ ಸದ್ದು ಮಾಡಲಿದೆ ಖಾಕಿ ಕಳ್ಳಾಟ