ಮಣಿಪುರದಲ್ಲಿ ಹೆಚ್ಚಿದ ಹಿಂಸಾಚಾರ; ಅಮಿತ್ ಶಾ ಮಹತ್ವದ ಸಭೆ, 50 ಕೇಂದ್ರೀಯ ತುಕಡಿಗಳ ನಿಯೋಜನೆ

ಕೇಂದ್ರ ಗೃಹ ಸಚಿವ ಅಮಿತ್ ಶಾ ನೇತೃತ್ವದಲ್ಲಿ ಇಂದು (ಸೋಮವಾರ) ಉನ್ನತ ಮಟ್ಟದ ಸಭೆ ನಡೆಸಲಾಗಿದ್ದು, ಮಣಿಪುರದಲ್ಲಿ ನಡೆಯುತ್ತಿರುವ ಹಿಂಸಾಚಾರದ ಪರಿಸ್ಥಿತಿಯ ಕುರಿತು ಚರ್ಚಿಸಲಾಯಿತು. ಇದು ರಾಜ್ಯದ ಭದ್ರತಾ ಕಾಳಜಿಗಳ ಕುರಿತು ಗೃಹ ಸಚಿವರ ನೇತೃತ್ವದಲ್ಲಿ ನಡೆದ ಸತತ ಎರಡನೇ ದಿನದ ಚರ್ಚೆಯಾಗಿದೆ.

ಮಣಿಪುರದಲ್ಲಿ ಹೆಚ್ಚಿದ ಹಿಂಸಾಚಾರ; ಅಮಿತ್ ಶಾ ಮಹತ್ವದ ಸಭೆ, 50 ಕೇಂದ್ರೀಯ ತುಕಡಿಗಳ ನಿಯೋಜನೆ
ಅಮಿತ್ ಶಾ

Updated on: Nov 18, 2024 | 5:29 PM

ಮಣಿಪುರ: ಮಣಿಪುರದಲ್ಲಿ ನಡೆಯುತ್ತಿರುವ ಹಿಂಸಾಚಾರದ ಬಗ್ಗೆ ಚರ್ಚಿಸಲು ಕೇಂದ್ರ ಗೃಹ ಸಚಿವ ಅಮಿತ್ ಶಾ ಇಂದು ಉನ್ನತ ಮಟ್ಟದ ಸಭೆ ನಡೆಸಿದ್ದಾರೆ ಎಂದು ಮೂಲಗಳು ತಿಳಿಸಿವೆ. ಇದು ಮಣಿಪುರ ರಾಜ್ಯದ ಭದ್ರತಾ ಕಾಳಜಿಗಳ ಕುರಿತು ಗೃಹ ಸಚಿವರ ನೇತೃತ್ವದಲ್ಲಿ ಸತತ ಎರಡನೇ ದಿನ ನಡೆದ ಚರ್ಚೆಯಾಗಿದೆ.

ಈ ಪ್ರದೇಶದಲ್ಲಿ ಉದ್ವಿಗ್ನತೆ ಹೆಚ್ಚಿರುವ ಕಾರಣದಿಂದ ಗೃಹ ಸಚಿವಾಲಯವು ಮಣಿಪುರದಲ್ಲಿ ತನ್ನ ಭದ್ರತಾ ನಿಯೋಜನೆಯನ್ನು ತೀವ್ರಗೊಳಿಸಲು ನಿರ್ಧರಿಸಿದೆ. ಈ ಸಭೆಯಲ್ಲಿ ಗೃಹ ಸಚಿವ ಅಮಿತ್ ಶಾ ಮಣಿಪುರದಲ್ಲಿ ಭದ್ರತಾ ನಿಯೋಜನೆಯನ್ನು ಪರಿಶೀಲಿಸಿದರು. ಈ ಪ್ರದೇಶದಲ್ಲಿ ಶಾಂತಿ ಮತ್ತು ಸುವ್ಯವಸ್ಥೆಯನ್ನು ಕಾಪಾಡಲು ಕೇಂದ್ರ ಸಶಸ್ತ್ರ ಪೊಲೀಸ್ ಪಡೆಗಳು (CAPF) ಮತ್ತು ರಾಜ್ಯ ಪೊಲೀಸ್ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.

ಇದನ್ನೂ ಓದಿ: ಮಣಿಪುರ ಹಿಂಸಾಚಾರ: 6 ಶವ ಪತ್ತೆ, ಭುಗಿಲೆದ್ದ ಪ್ರತಿಭಟನೆ, ಮುಖ್ಯಮಂತ್ರಿ, ಶಾಸಕರ ಮನೆಗೆ ನುಗ್ಗಲು ಯತ್ನ

ಕೇಂದ್ರ ಸರ್ಕಾರವು ಸಿಎಪಿಎಫ್‌ನ ಹೆಚ್ಚುವರಿ 50 ಕಂಪನಿಗಳನ್ನು ರಾಜ್ಯಕ್ಕೆ ಕಳುಹಿಸುತ್ತಿದೆ. ಇದು 20 ಕಂಪನಿಗಳ ಹಿಂದಿನ ನಿಯೋಜನೆಯ ನಂತರ ಬಂದಿದೆ. ಮಣಿಪುರದಲ್ಲಿ ಕಾನೂನು ಮತ್ತು ಸುವ್ಯವಸ್ಥೆಗಾಗಿ ಈಗ ಒಟ್ಟು 70 CAPF ಘಟಕಗಳನ್ನು ಸಜ್ಜುಗೊಳಿಸಲಾಗಿದೆ.

ಶನಿವಾರ (ನವೆಂಬರ್ 16) ಮಣಿಪುರದಲ್ಲಿ 6 ಜನರ ಹತ್ಯೆಯ ನಂತರ ಹೊಸ ಪ್ರತಿಭಟನೆಗಳು ಭುಗಿಲೆದ್ದವು. ಉಗ್ರಗಾಮಿಗಳಿಂದ ಅಪಹರಣಕ್ಕೊಳಗಾಗಿದ್ದ ಜಿರಿಬಾಮ್ ಜಿಲ್ಲೆಯಲ್ಲಿ ಅವರ ಶವಗಳು ಪತ್ತೆಯಾಗಿವೆ. ಪ್ರತಿಭಟನೆಯ ನಂತರ, ಹಿಂಸಾಚಾರ ಪೀಡಿತ ಮಣಿಪುರದ ಇಂಫಾಲ್ ಪಶ್ಚಿಮ ಮತ್ತು ಇಂಫಾಲ್ ಪೂರ್ವದಲ್ಲಿ ಕರ್ಫ್ಯೂ ವಿಧಿಸಲಾಯಿತು. ಏಳು ಜಿಲ್ಲೆಗಳಲ್ಲಿ ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಯಿತು.

ಇದನ್ನೂ ಓದಿ: ಮಣಿಪುರದಲ್ಲಿ ಹೆಚ್ಚಿದ ಹಿಂಸಾಚಾರ; 7 ಜಿಲ್ಲೆಗಳಲ್ಲಿ ಕರ್ಫ್ಯೂ ಜಾರಿ, ಇಂಟರ್ನೆಟ್ ಸ್ಥಗಿತ

ಭಾನುವಾರ ಮಣಿಪುರದಲ್ಲಿ ಪ್ರತಿಭಟನೆಗಳು ಮತ್ತು ಹಿಂಸಾಚಾರಗಳು ಉಲ್ಬಣಗೊಂಡವು. ಜನಸಂದಣಿಯನ್ನು ನಿಯಂತ್ರಿಸಲು ಭದ್ರತಾ ಪಡೆಗಳು ಗುಂಡಿನ ದಾಳಿ ನಡೆಸಿದ ನಂತರ ರಾಜ್ಯದ ಜಿರಿಬಾಮ್ ಜಿಲ್ಲೆಯಲ್ಲಿ 20 ವರ್ಷದ ಯುವಕ ಸಾವನ್ನಪ್ಪಿದ್ದಾನೆ. ಮಣಿಪುರದಲ್ಲಿ ಶಾಂತಿಯನ್ನು ಮರುಸ್ಥಾಪಿಸುವಲ್ಲಿ ವಿಫಲವಾಗಿದೆ ಎಂಬ ಕಾರಣಕ್ಕೆ ನ್ಯಾಷನಲ್ ಪೀಪಲ್ಸ್ ಪಾರ್ಟಿ (ಎನ್‌ಪಿಪಿ) ಬಿಜೆಪಿ ನೇತೃತ್ವದ ಮಣಿಪುರ ಸರ್ಕಾರಕ್ಕೆ ತನ್ನ ಬೆಂಬಲವನ್ನು ಹಿಂತೆಗೆದುಕೊಂಡಿತು.

ಕೇಂದ್ರ ಗೃಹ ಸಚಿವಾಲಯದ ನಿರ್ದೇಶನದ ಮೇರೆಗೆ ಮಣಿಪುರದಲ್ಲಿ ಇತ್ತೀಚೆಗೆ ನಡೆದ ಹಿಂಸಾಚಾರಕ್ಕೆ ಸಂಬಂಧಿಸಿದ ಮೂರು ಪ್ರಕರಣಗಳ ತನಿಖೆಯನ್ನು ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‌ಐಎ) ವಹಿಸಿಕೊಂಡಿದೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Sushma Chakre

ಮೂಲತಃ ಮಲೆನಾಡ ಹೆಬ್ಬಾಗಿಲು ಶಿವಮೊಗ್ಗದವಳು. ಬೆಂಗಳೂರಿನಲ್ಲಿ ವಾಸ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದೇನೆ. 10 ವರ್ಷಗಳಿಂದ ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡ, ಟಿವಿ9 ಡಿಜಿಟಲ್ ವಿಭಾಗದಲ್ಲಿ ಕೆಲಸ ಮಾಡಿದ ಅನುಭವವಿದೆ. ಸಾಹಿತ್ಯ, ಸಂಗೀತ, ಸಿನಿಮಾ, ಬರವಣಿಗೆಯಲ್ಲಿ ಆಸಕ್ತಿ.

Read More
Follow Us