AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Tirupati Balaji Temple: ಜಮ್ಮುವಿನಲ್ಲಿ ತಿರುಪತಿ ಬಾಲಾಜಿ ದೇವಸ್ಥಾನ ಉದ್ಘಾಟಿಸಿದ ಗೃಹ ಸಚಿವ ಅಮಿತ್ ಶಾ

ಜಮ್ಮುವಿನಲ್ಲಿ ನೂತನವಾಗಿ ನಿರ್ಮಾಣವಾಗಿರುವ ತಿರುಪತಿ ಬಾಲಾಜಿ ದೇವಸ್ಥಾನವನ್ನು ಗೃಹ ಸಚಿವ ಅಮಿತ್ ಶಾ ಇಂದು ಉದ್ಘಾಟಿಸಿದ್ದಾರೆ.

Tirupati Balaji Temple: ಜಮ್ಮುವಿನಲ್ಲಿ ತಿರುಪತಿ ಬಾಲಾಜಿ ದೇವಸ್ಥಾನ ಉದ್ಘಾಟಿಸಿದ ಗೃಹ ಸಚಿವ ಅಮಿತ್ ಶಾ
ತಿರುಪತಿ ಬಾಲಾಜಿ ದೇವಸ್ಥಾನ
ನಯನಾ ರಾಜೀವ್
|

Updated on:Jun 08, 2023 | 11:26 AM

Share

ಜಮ್ಮುವಿನಲ್ಲಿ ನೂತನವಾಗಿ ನಿರ್ಮಾಣವಾಗಿರುವ ತಿರುಪತಿ ಬಾಲಾಜಿ ದೇವಸ್ಥಾನವನ್ನು ಗೃಹ ಸಚಿವ ಅಮಿತ್ ಶಾ ಇಂದು ಉದ್ಘಾಟಿಸಿದ್ದಾರೆ. ಜಮ್ಮು ದೇವಾಲಯವು ಆಂಧ್ರಪ್ರದೇಶದ ಹೊರಗೆ ನಿರ್ಮಿಸಲಾದ ಆರನೇ ಬಾಲಾಜಿ ದೇವಾಲಯವಾಗಿದೆ, ತಿರುಮಲ ತಿರುಪತಿ ದೇವಸ್ಥಾನಗಳು (ಟಿಟಿಡಿ) ಈ ಹಿಂದೆ ಹೈದರಾಬಾದ್, ಚೆನ್ನೈ, ಕನ್ಯಾಕುಮಾರಿ, ದೆಹಲಿ ಮತ್ತು ಭುವನೇಶ್ವರದಲ್ಲಿ ನಿರ್ಮಿಸಲಾಗಿದೆ.

ಜಮ್ಮುವಿನ ತಿರುಪತಿ ಬಾಲಾಜಿ ದೇವಸ್ಥಾನ ದರ್ಶನಕ್ಕೆ ತೆರೆದುಕೊಳ್ಳುವುದರಿಂದ ಕೇಂದ್ರಾಡಳಿತ ಪ್ರದೇಶದಲ್ಲಿ ಧಾರ್ಮಿಕ ಮತ್ತು ತೀರ್ಥಯಾತ್ರೆಯ ಪ್ರವಾಸೋದ್ಯಮವನ್ನು ಹೆಚ್ಚಿಸುವ ಸಾಧ್ಯತೆಯಿದೆ. ಟಿಟಿಡಿ ದೇಶಾದ್ಯಂತ ಬಾಲಾಜಿ ದೇವಾಲಯಗಳನ್ನು ನಿರ್ಮಿಸುತ್ತಿದೆ, ಇದರಿಂದಾಗಿ ಆಂಧ್ರಪ್ರದೇಶದ ತಿರುಪತಿ ಬಾಲಾಜಿ ದೇವಾಲಯಕ್ಕೆ ಭೇಟಿ ನೀಡಲು ಸಾಧ್ಯವಾಗದವರು ಇತರ ನಗರಗಳಲ್ಲಿನ ಈ ದೇವಾಲಯಗಳಿಗೆ ಭೇಟಿ ನೀಡಬಹುದು.

ಜಮ್ಮುವಿನ ತಿರುಪತಿ ಬಾಲಾಜಿ ದೇವಸ್ಥಾನವನ್ನು 62 ಎಕರೆ ಜಾಗದಲ್ಲಿ ನಿರ್ಮಿಸಲಾಗಿದೆ. ದೇವಾಲಯದ ಆವರಣದಲ್ಲಿ ವೇದ ಪಾಠಶಾಲೆ, ಹಾಸ್ಟೆಲ್​, ಕೊಠಡಿಗಳು, ಕಲ್ಯಾಣಮಂಟಪವನ್ನು ನಿರ್ಮಿಸಲಾಗಿದೆ. ಅಷ್ಟೇ ಅಲ್ಲ, ಗರ್ಭಗುಡಿಯಲ್ಲಿ 8 ಅಡಿ ಎತ್ತರದ ವೆಂಕಟೇಶ್ವರನ ವಿಗ್ರಹವನ್ನು ಸಹ ಸ್ಥಾಪಿಸಲಾಗಿದೆ.

ಜಮ್ಮು ಮತ್ತು ಕಾಶ್ಮೀರ ಸರ್ಕಾರ ಈ ಭೂಮಿಯನ್ನು ಟಿಟಿಡಿ ಮಂಡಳಿಗೆ 40 ವರ್ಷಗಳ ಕಾಲ ಭೋಗ್ಯಕ್ಕೆ ನೀಡಿದೆ. ಅದರ ನಂತರ ತಿರುಪತಿ ದೇವಸ್ಥಾನವು ಇಲ್ಲಿ ದೇವಾಲಯ ನಿರ್ಮಾಣ ಕಾರ್ಯವನ್ನು ಆರಂಭಿಸಿತ್ತು. ಈ ದೇವಾಲಯದ ಭೂಮಿ ಪೂಜೆಯನ್ನು 2021ರ ಜೂನ್ 13ರಂದು ಮಾಡಲಾಗಿತ್ತು.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 11:15 am, Thu, 8 June 23

Follow Us
ಕೆಪಿಎಸ್​ಸಿಯಲ್ಲಿ ಮತ್ತೊಂದು ಅಕ್ರಮ: ಅವ್ಯವಹಾರ ಗೊತ್ತಾದ್ಮೇಲೂ ಪೋಸ್ಟಿಂಗ್!
ಕೆಪಿಎಸ್​ಸಿಯಲ್ಲಿ ಮತ್ತೊಂದು ಅಕ್ರಮ: ಅವ್ಯವಹಾರ ಗೊತ್ತಾದ್ಮೇಲೂ ಪೋಸ್ಟಿಂಗ್!
‘ನನ್ನತ್ರ ನಡ್ಯಲ್ಲ’; ಕಾವ್ಯಾಗೆ ಖಡಕ್ ವಾರ್ನಿಂಗ್ ಕೊಟ್ಟ ಗಗನ್ ಚಿನ್ನಪ್ಪ
‘ನನ್ನತ್ರ ನಡ್ಯಲ್ಲ’; ಕಾವ್ಯಾಗೆ ಖಡಕ್ ವಾರ್ನಿಂಗ್ ಕೊಟ್ಟ ಗಗನ್ ಚಿನ್ನಪ್ಪ
ಜಿಬಿಎ ಪೌರಕಾರ್ಮಿಕನ ಮೇಲೆ ಹಲ್ಲೆ; ಕೇರಳದ ಯುವಕ, ಯುವತಿ ಪೊಲೀಸ್ ವಶಕ್ಕೆ
ಜಿಬಿಎ ಪೌರಕಾರ್ಮಿಕನ ಮೇಲೆ ಹಲ್ಲೆ; ಕೇರಳದ ಯುವಕ, ಯುವತಿ ಪೊಲೀಸ್ ವಶಕ್ಕೆ
ದೆಹಲಿಗೆ ಆಗಮಿಸಿದ ರಷ್ಯಾ ಅಧ್ಯಕ್ಷ ಪುಟಿನ್
ದೆಹಲಿಗೆ ಆಗಮಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಇಂದು ಈ ರಾಶಿಯವರು ಹಣಕಾಸಿನ ವಿಚಾರದಲ್ಲಿ ಜಾಗೃತರಾಗಿರಿ
ಇಂದು ಈ ರಾಶಿಯವರು ಹಣಕಾಸಿನ ವಿಚಾರದಲ್ಲಿ ಜಾಗೃತರಾಗಿರಿ
ಮುಂಬೈನ ರೈಲಿನಲ್ಲಿ ನೇತಾಡುತ್ತಿದ್ದಾಗ ಕೆಳಗೆ ಬಿದ್ದ ಮಹಿಳೆ!
ಮುಂಬೈನ ರೈಲಿನಲ್ಲಿ ನೇತಾಡುತ್ತಿದ್ದಾಗ ಕೆಳಗೆ ಬಿದ್ದ ಮಹಿಳೆ!
ಬಿಜೆಪಿ ಪಾದಯಾತ್ರೆಗೆ ತೆರೆ: ಹೋರಾಟ ಅಂತ್ಯವಲ್ಲ, ಆರಂಭ ಎಂದ ಕೇಸರಿ ಪಡೆ
ಬಿಜೆಪಿ ಪಾದಯಾತ್ರೆಗೆ ತೆರೆ: ಹೋರಾಟ ಅಂತ್ಯವಲ್ಲ, ಆರಂಭ ಎಂದ ಕೇಸರಿ ಪಡೆ
ಜಾರಕಿಹೊಳಿ ಮನೆಯಲ್ಲಿ ED ಶೋಧ ಅಂತ್ಯ, 37 ಗಂಟೆಗಳ ಕಾಲ ನಡೆದ ಪರಿಶೀಲನೆ
ಜಾರಕಿಹೊಳಿ ಮನೆಯಲ್ಲಿ ED ಶೋಧ ಅಂತ್ಯ, 37 ಗಂಟೆಗಳ ಕಾಲ ನಡೆದ ಪರಿಶೀಲನೆ
ಮಂಜನ ಮಾತಿನಿಂದ ಬಿಗ್ ಬಾಸ್ ಮನೆಯಲ್ಲಿ ಕಿರಿಕಿರಿ; ಕಣ್ಣೀರು ಹಾಕಿದ ಸ್ಪರ್ಧಿ
ಮಂಜನ ಮಾತಿನಿಂದ ಬಿಗ್ ಬಾಸ್ ಮನೆಯಲ್ಲಿ ಕಿರಿಕಿರಿ; ಕಣ್ಣೀರು ಹಾಕಿದ ಸ್ಪರ್ಧಿ
'ಬ್ರಿಕ್ಸ್ ಶೃಂಗಸಭೆಗೆ ಭಾರತ ಸಿದ್ಧ'; ವಿಡಿಯೋ ಹಂಚಿಕೊಂಡ ಪ್ರಧಾನಿ ಮೋದಿ
'ಬ್ರಿಕ್ಸ್ ಶೃಂಗಸಭೆಗೆ ಭಾರತ ಸಿದ್ಧ'; ವಿಡಿಯೋ ಹಂಚಿಕೊಂಡ ಪ್ರಧಾನಿ ಮೋದಿ