AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Tirupati Balaji Temple: ಜಮ್ಮುವಿನಲ್ಲಿ ತಿರುಪತಿ ಬಾಲಾಜಿ ದೇವಸ್ಥಾನ ಉದ್ಘಾಟಿಸಿದ ಗೃಹ ಸಚಿವ ಅಮಿತ್ ಶಾ

ಜಮ್ಮುವಿನಲ್ಲಿ ನೂತನವಾಗಿ ನಿರ್ಮಾಣವಾಗಿರುವ ತಿರುಪತಿ ಬಾಲಾಜಿ ದೇವಸ್ಥಾನವನ್ನು ಗೃಹ ಸಚಿವ ಅಮಿತ್ ಶಾ ಇಂದು ಉದ್ಘಾಟಿಸಿದ್ದಾರೆ.

Tirupati Balaji Temple: ಜಮ್ಮುವಿನಲ್ಲಿ ತಿರುಪತಿ ಬಾಲಾಜಿ ದೇವಸ್ಥಾನ ಉದ್ಘಾಟಿಸಿದ ಗೃಹ ಸಚಿವ ಅಮಿತ್ ಶಾ
ತಿರುಪತಿ ಬಾಲಾಜಿ ದೇವಸ್ಥಾನ
ನಯನಾ ರಾಜೀವ್
|

Updated on:Jun 08, 2023 | 11:26 AM

Share

ಜಮ್ಮುವಿನಲ್ಲಿ ನೂತನವಾಗಿ ನಿರ್ಮಾಣವಾಗಿರುವ ತಿರುಪತಿ ಬಾಲಾಜಿ ದೇವಸ್ಥಾನವನ್ನು ಗೃಹ ಸಚಿವ ಅಮಿತ್ ಶಾ ಇಂದು ಉದ್ಘಾಟಿಸಿದ್ದಾರೆ. ಜಮ್ಮು ದೇವಾಲಯವು ಆಂಧ್ರಪ್ರದೇಶದ ಹೊರಗೆ ನಿರ್ಮಿಸಲಾದ ಆರನೇ ಬಾಲಾಜಿ ದೇವಾಲಯವಾಗಿದೆ, ತಿರುಮಲ ತಿರುಪತಿ ದೇವಸ್ಥಾನಗಳು (ಟಿಟಿಡಿ) ಈ ಹಿಂದೆ ಹೈದರಾಬಾದ್, ಚೆನ್ನೈ, ಕನ್ಯಾಕುಮಾರಿ, ದೆಹಲಿ ಮತ್ತು ಭುವನೇಶ್ವರದಲ್ಲಿ ನಿರ್ಮಿಸಲಾಗಿದೆ.

ಜಮ್ಮುವಿನ ತಿರುಪತಿ ಬಾಲಾಜಿ ದೇವಸ್ಥಾನ ದರ್ಶನಕ್ಕೆ ತೆರೆದುಕೊಳ್ಳುವುದರಿಂದ ಕೇಂದ್ರಾಡಳಿತ ಪ್ರದೇಶದಲ್ಲಿ ಧಾರ್ಮಿಕ ಮತ್ತು ತೀರ್ಥಯಾತ್ರೆಯ ಪ್ರವಾಸೋದ್ಯಮವನ್ನು ಹೆಚ್ಚಿಸುವ ಸಾಧ್ಯತೆಯಿದೆ. ಟಿಟಿಡಿ ದೇಶಾದ್ಯಂತ ಬಾಲಾಜಿ ದೇವಾಲಯಗಳನ್ನು ನಿರ್ಮಿಸುತ್ತಿದೆ, ಇದರಿಂದಾಗಿ ಆಂಧ್ರಪ್ರದೇಶದ ತಿರುಪತಿ ಬಾಲಾಜಿ ದೇವಾಲಯಕ್ಕೆ ಭೇಟಿ ನೀಡಲು ಸಾಧ್ಯವಾಗದವರು ಇತರ ನಗರಗಳಲ್ಲಿನ ಈ ದೇವಾಲಯಗಳಿಗೆ ಭೇಟಿ ನೀಡಬಹುದು.

ಜಮ್ಮುವಿನ ತಿರುಪತಿ ಬಾಲಾಜಿ ದೇವಸ್ಥಾನವನ್ನು 62 ಎಕರೆ ಜಾಗದಲ್ಲಿ ನಿರ್ಮಿಸಲಾಗಿದೆ. ದೇವಾಲಯದ ಆವರಣದಲ್ಲಿ ವೇದ ಪಾಠಶಾಲೆ, ಹಾಸ್ಟೆಲ್​, ಕೊಠಡಿಗಳು, ಕಲ್ಯಾಣಮಂಟಪವನ್ನು ನಿರ್ಮಿಸಲಾಗಿದೆ. ಅಷ್ಟೇ ಅಲ್ಲ, ಗರ್ಭಗುಡಿಯಲ್ಲಿ 8 ಅಡಿ ಎತ್ತರದ ವೆಂಕಟೇಶ್ವರನ ವಿಗ್ರಹವನ್ನು ಸಹ ಸ್ಥಾಪಿಸಲಾಗಿದೆ.

ಜಮ್ಮು ಮತ್ತು ಕಾಶ್ಮೀರ ಸರ್ಕಾರ ಈ ಭೂಮಿಯನ್ನು ಟಿಟಿಡಿ ಮಂಡಳಿಗೆ 40 ವರ್ಷಗಳ ಕಾಲ ಭೋಗ್ಯಕ್ಕೆ ನೀಡಿದೆ. ಅದರ ನಂತರ ತಿರುಪತಿ ದೇವಸ್ಥಾನವು ಇಲ್ಲಿ ದೇವಾಲಯ ನಿರ್ಮಾಣ ಕಾರ್ಯವನ್ನು ಆರಂಭಿಸಿತ್ತು. ಈ ದೇವಾಲಯದ ಭೂಮಿ ಪೂಜೆಯನ್ನು 2021ರ ಜೂನ್ 13ರಂದು ಮಾಡಲಾಗಿತ್ತು.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 11:15 am, Thu, 8 June 23

Follow Us
ಅತ್ಯಂತ ದುರಾದೃಷ್ಟಕರ ರೀತಿಯಲ್ಲಿ ಔಟಾದ ರಹಾನೆ, ರಘುವಂಶಿ
ಅತ್ಯಂತ ದುರಾದೃಷ್ಟಕರ ರೀತಿಯಲ್ಲಿ ಔಟಾದ ರಹಾನೆ, ರಘುವಂಶಿ
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್