Amit Shah Speech ಸಹಕಾರ ಕ್ಷೇತ್ರದ ಸದಸ್ಯರಿಗೆ, ರೈತರಿಗೆ ಅನ್ಯಾಯವಾಗಲು ಬಿಡುವುದಿಲ್ಲ: ಮೆಗಾ ಡೇರಿ ಉದ್ಘಾಟಿಸಿ ಅಮಿತ್​​ ಶಾ ಮಾತು

| Updated By: ರಶ್ಮಿ ಕಲ್ಲಕಟ್ಟ

Updated on: Dec 30, 2022 | 1:10 PM

Amit Shah Speech Highlights ಮಂಡ್ಯದ ಗೆಜ್ಜಲಗೆರೆಯಲ್ಲಿ ಮೆಗಾ ಡೇರಿ ಉದ್ಘಾಟಿಸಿ ಮಾತನಾಡಿದ ಅಮಿತ್​ ಶಾ ಸಹಕಾರಿ ಸಂಘಗಳಿಂದ ರೈತರ ಅಭಿವೃದ್ಧಿಯಾಗಿದೆ ಎಂದಿದ್ದಾರೆ.

Amit Shah Speech ಸಹಕಾರ ಕ್ಷೇತ್ರದ ಸದಸ್ಯರಿಗೆ, ರೈತರಿಗೆ ಅನ್ಯಾಯವಾಗಲು ಬಿಡುವುದಿಲ್ಲ: ಮೆಗಾ ಡೇರಿ ಉದ್ಘಾಟಿಸಿ ಅಮಿತ್​​ ಶಾ ಮಾತು
ಮಂಡ್ಯದಲ್ಲಿ ಅಮಿತ್ ಶಾ
Follow us on

ಕೇಂದ್ರ ಗೃಹ ಮತ್ತು ಸಹಕಾರ ಸಚಿವ ಅಮಿತ್ ಶಾ (Amit Shah) ಇಂದಿನಿಂದ ಎರಡು ದಿನಗಳ ಕಾಲ ಮಂಡ್ಯ ಮತ್ತು ಬೆಂಗಳೂರು ಗ್ರಾಮಾಂತರ ಜಿಲ್ಲೆಗಳಿಗೆ ಭೇಟಿ ನೀಡಲಿದ್ದಾರೆ.ಶಾ ಅವರು ಗೆಜ್ಜಲಗೆರೆ (Gejjalagere), ಮಂಡ್ಯ, ಅರಮನೆ ಮೈದಾನ, ಬೆಂಗಳೂರು , ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಸಹಕಾರ ಕ್ಷೇತ್ರಕ್ಕೆ ಸಂಬಂಧಿಸಿದ ಮೂರು ಕಾರ್ಯಕ್ರಮಗಳಲ್ಲಿ ಭಾಗವಹಿಸಲಿದ್ದಾರೆ. ಅವರು ತಮ್ಮ ಎರಡು ದಿನಗಳ ಕರ್ನಾಟಕ (Karnataka) ಪ್ರವಾಸದಲ್ಲಿ ಸಾರ್ವಜನಿಕ ಸಭೆಗಳನ್ನು ಉದ್ದೇಶಿಸಿ ಮಾತನಾಡಲಿದ್ದಾರೆ. ರಾಜ್ಯ ವಿಧಾನಸಭೆಯ ಅಧಿಕಾರಾವಧಿಯು ಮೇ 28, 2023 ರಂದು ಮುಕ್ತಾಯಗೊಳ್ಳುತ್ತಿರುವ ಕಾರಣ ಮುಂದಿನ ವರ್ಷ 224 ವಿಧಾನಸಭಾ ಸ್ಥಾನಗಳಿಗೆ ಚುನಾವಣೆ ಹಿನ್ನಲೆಯಲ್ಲಿ ಶಾ ಅವರ ಈ ಭೇಟಿ ಬಂದಿದೆ. ಗೃಹ ಸಚಿವರು ಶುಕ್ರವಾರ ಮಧ್ಯಾಹ್ನ ಮಂಡ್ಯದಲ್ಲಿ ಮೆಗಾ ಡೈರಿಯನ್ನು ಉದ್ಘಾಟಿಸಿ ಸಭೆಯನ್ನು ಉದ್ದೇಶಿಸಿ ಮಾತನಾಡಿದ್ದಾರೆ.ಸಹಕಾರಿಸಂಘಗಳಿಂದ ರೈತರ ಅಭಿವೃದ್ಧಿ ಆಗಿದೆ. ಮೋದಿ ಸಹಕಾರಿ ಸಚಿವಾಲಯ ಮಾಡಿದರು,ಅದಕ್ಕಾಗಿ ನಾನು ಅವರನ್ನು ಅಭಿನಂದಿಸುತ್ತೇನೆ ಎಂದು  ಶಾ ಹೇಳಿದ್ದಾರೆ. ಅಮೂಲ್ ಹಾಗೂ ನಂದಿನಿ ಒಟ್ಟಿಗೆ ಕೆಲಸ ಮಾಬೇಕು ಎಂದು ಹೇಳಿದ ಗೃಹ ಸಚಿವರು ಪ್ರತಿ ಪಂಚಾಯತಿಯಲ್ಲಿಯೂ ಡೇರಿ ಘಟಕ ಸ್ಥಾಪನೆಯಾಗಬೇಕು ಎಂದಿದ್ದಾರೆ.

ಸುಮಾರು 5 ಎಕರೆಯಲ್ಲಿ ನಿರ್ಮಾಣವಾಗಿರುವ ಗೆಜ್ಜಲಗೆರೆ ಮೆಗಾಡೇರಿಯಲ್ಲಿ ಹಾಲಿನ ಪುಡಿ ಉತ್ಪಾದನಾ ಘಟಕ, ಹಾಲು ಸಂಸ್ಕರಣಾ ಘಟಕಗಳಿವೆ. ಡೇರಿ ನಿರ್ಮಾಣಕ್ಕಾಗಿ ₹ 260 ಕೋಟಿ ವೆಚ್ಚವಾಗಿದ್ದು, ಕಟ್ಟಡದ ಹೊರಭಾಗದಲ್ಲಿ ಒಟ್ಟು 6 ಲಕ್ಷ ಲೀಟರ್ ಸಾಮರ್ಥ್ಯದ 4 ಬೃಹತ್ ಹಾಲು ಸಂಗ್ರಹಣಾ ಟ್ಯಾಂಕ್‌ಗಳಿವೆ. ಪ್ರತಿ ಟ್ಯಾಂಕ್​ಗಳಲ್ಲಿ ತಲಾ 1.5 ಲಕ್ಷ ಲೀಟರ್ ಹಾಲು ಸಂಗ್ರಹ ಸಾಧ್ಯವಿದೆ. ಇದು ರಾಜ್ಯದ ಎರಡನೇ ಅತಿ ದೊಡ್ಡ ಮೆಗಾ ಡೇರಿ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ.

ಇದನ್ನೂ ಓದಿ: Deve Gowda With Amit Shah: ರಾಜಕೀಯ ಮಾಡಲು ಬಂದಿಲ್ಲ; ಗೆಜ್ಜಲಗೆರೆ ಮೆಗಾ ಡೇರಿ ಉದ್ಘಾಟನೆಯಲ್ಲಿ ಅಮಿತ್ ಶಾ ಜತೆ ದೇವೇಗೌಡ ಭಾಗಿ

ನಮ್ಮೆಲ್ಲರ ಪ್ರೀತಿಯ ನೇತಾರ ಎಚ್ ಡಿ ದೇವೇಗೌಡ ಎಂದು ಅಮಿತ್ ಶಾ ಭಾಷಣ ಆರಂಭಿಸಿದ್ದಾರೆ. ಅಮಿತ್ ಶಾ ಅವರು ಹಿಂದಿಯಲ್ಲಿ ಭಾಷಣ ಮಾಡಿದ್ದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಅದನ್ನು ಕನ್ನಡಕ್ಕೆ ಅನುವಾದ ಮಾಡಿದ್ದಾರೆ

ಅಮಿತ್ ಶಾ ಭಾಷಣದ ಮುಖ್ಯಾಂಶಗಳು

  1. ಸ್ವಾತಂತ್ರ್ಯ ಬಂದಾಗಲೇ ಸಹಕಾರ ಇಲಾಖೆಗೆ ರೈತರ ಬೇಡಿಕೆ. ಅಂದೇ ಬೇಡಿಕೆ ಈಡೇರಿಸಿದ್ದರೆ ಪರಿಸ್ಥಿತಿಯೇ ಬೇರೆ ಇರುತಿತ್ತು. ನಮ್ಮ ಸರ್ಕಾರ ಹೊಸದಾಗಿ ಸಹಕಾರ ಇಲಾಖೆಯನ್ನು ಸ್ಥಾಪಿಸಿದೆ. ಮೋದಿಯವರು ಸಹಕಾರ ಇಲಾಖೆ ಸ್ಥಾಪಿಸಿದ್ದಕ್ಕೆ ಅಭಿನಂದನೆ ಸಲ್ಲಿಸುತ್ತೇನೆ.
  2. ಸಹಕಾರ ಕ್ಷೇತ್ರದ ಸದಸ್ಯರಿಗೆ ಅನ್ಯಾಯವಾಗಲು ಬಿಡುವುದಿಲ್ಲ. ರೈತರಿಗೆ ಯಾವುದೇ ಅನ್ಯಾಯವಾಗಲು ನಾವು ಬಿಡುವುದಿಲ್ಲ. . ಕರ್ನಾಟಕದಲ್ಲಿ ಸಹಕಾರ ಕ್ಷೇತ್ರದಲ್ಲಿ ತುಂಬಾ ಚೆನ್ನಾಗಿ ಕೆಲಸ ಆಗುತ್ತಿದೆ.
  3. 15,210 ಸಹಕಾರಿ ಹಾಲು ಉತ್ಪಾದನಾ ಡೇರಿಗಳಿವೆ.210 ಗ್ರಾಮಗಳು ಇದರಲ್ಲಿ ಭಾಗಿ 22 ಲಕ್ಷ ರೈತರು ಭಾಗಿಯಾಗಿದ್ದಾರೆ. 16 ಜಿಲ್ಲೆಗಳಿಂದ ಪ್ರತಿ ತಿಂಗಳು 28 ಕೋಟಿ 26 ಲಕ್ಷ ರೈತರಿಗೆ ಸಿಗುತ್ತಿದೆ.1975ರಿಂದ 2022ರವರೆಗೂ ಡೇರಿ ಕ್ಷೇತ್ರದಲ್ಲಿ ಉತ್ತಮ ಬೆಳವಣಿಗೆ ಆಗಿದೆ.
  4. ಒಟ್ಟು 260 ಕೋಟಿ ವೆಚ್ಚದಲ್ಲಿ ಮೆಗಾ ಡೇರಿ ನಿರ್ಮಾಣವಾಗಿದೆ. ಪ್ರತಿದಿನ 10 ಲಕ್ಷ ಲೀಟರ್ ಹಾಲು ಸಂಗ್ರಹ ಸಾಮರ್ಥ್ಯ ಇದೆ.14 ಲಕ್ಷ ಲೀಟರ್ ಹಾಲು ಸಂಗ್ರಹದ ಘಟಕ ನಿರ್ಮಾಣದ ಗುರಿ ಹೊಂದಿದ್ದೇವೆ.
  5. ಸಹಕಾರ ಕ್ಷೇತ್ರದಲ್ಲಿ ಕರ್ನಾಟಕ ರಾಜ್ಯ ಮುಂಚೂಣಿಯಲ್ಲಿದೆ.
  6. ಅಮೂಲ್ ಹಾಗೂ ನಂದಿನಿ ಒಟ್ಟಾಗಿ ಕೆಲಸ ಮಾಡಬೇಕಿದೆ. ಒಟ್ಟಿಗೆ ಕೆಲಸ ಮಾಡಿದರೆ ಎಲ್ಲ ಹಳ್ಳಿಗಳಲ್ಲಿ ಘಟಕ ಸ್ಥಾಪಿಸಬಹುದು.
  7. ಮೂರು ವರ್ಷದಲ್ಲಿ ಪ್ರತಿ ಪಂಚಾಯತಿಯಲ್ಲಿ ಡೇರಿ ಸ್ಥಾಪನೆಗೆ ಯೋಜನೆ ಮಾಡಿದ್ದು,ಈ ಮೂಲಕ ದೇಶದ ಎಲ್ಲಾ ರೈತರನ್ನು ಹಾಲಿನ ಕ್ರಾಂತಿ  ಮೂಲಕ ಸೇರಿಸುತ್ತೇವೆ. ತಾಂತ್ರಿಕ ಸಹಕಾರ ಸೇರಿ ಎಲ್ಲಾ ಸಹಕಾರ ನೀಡಲು ನಾವು ಬದ್ದ.
  8. 2 ಲಕ್ಷ ಪ್ರೈಮರಿ ಡೇರಿ ನಿರ್ಮಿಸಲು ತೀರ್ಮಾನ ತೆಗೆದುಕೊಂಡಿದ್ದೇವೆ.
  9. ಗುಜರಾತ್ ಕರ್ನಾಟಕ ಎರಡು ರಾಜ್ಯಗಳು ದೇಶಕ್ಕಾಗಿ ಒಳ್ಳೆ ಕೆಲಸ ಮಾಡಬಹುದು.ಇದಕ್ಕೆ ಬೇಕಾದ ಸೌಲಭ್ಯವನ್ನು ನಮ್ಮ ಇಲಾಖೆ ನೀಡುತ್ತದೆ.
  10. ರೈತರ ಖಾತೆಗೆ ನೇರ ಹಣ ಜಮಾವಣೆ ಮಾಡಿದಕ್ಕೆ ಅಭಿನಂದನೆ. ಮಕ್ಕಳಿಗೆ ಹಾಲಿನ ವ್ಯವಸ್ಥೆ ಮಾಡಿದಕ್ಕೂ ಅಭಿನಂದನೆ ಎಂದು ಬೊಮ್ಮಾಯಿ‌ ಸರ್ಕಾರಕ್ಕೆ ಅಭಿನಂದನೆ ಸಲ್ಲಿಸಿದ ಅಮಿತ್ ಶಾ.
  11. ಮನ್‌ಮುಲ್ ಅಧ್ಯಕ್ಷರಿಗೆ ಧನ್ಯವಾದ ತಿಳಿಸಿದ ಅಮಿತ್ ಶಾ
  12. ನರೇಂದ್ರ ಮೋದಿ ತಾಯಿ ನಿಧನಕ್ಕೆ ಶ್ರದ್ಧಾಂಜಲಿ ಸಲ್ಲಿಸಿದ ಅಮಿತ್ ಶಾ ಇಡೀ ದೇಶ ಮೋದಿ ಅವರ ಜೊತೆಗಿದೆ ಎಂದು ಹೇಳುವ  ಮೂಲಕ ಭಾಷಣ ಮುಗಿಸಿದ್ದಾರೆ

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 12:39 pm, Fri, 30 December 22