Sign In

By signing in or creating an account, you agree with Associated Broadcasting Company's Terms & Conditions and Privacy Policy.

ದೆಹಲಿ ಚುನಾವಣೆಗೆ ಬಿಜೆಪಿಯಿಂದ ಸಂಕಲ್ಪ ಪತ್ರ ಬಿಡುಗಡೆ; ಪ್ರಮುಖ ಭರವಸೆಗಳು ಹೀಗಿವೆ

ಕೇಂದ್ರ ಗೃಹ ಸಚಿವ ಅಮಿತ್ ಶಾ ದೆಹಲಿ ವಿಧಾನಸಭಾ ಚುನಾವಣೆಗೆ ಬಿಜೆಪಿಯ 'ಸಂಕಲ್ಪ ಪತ್ರ'ವನ್ನು ಅನಾವರಣಗೊಳಿಸಿದ್ದಾರೆ. ಅಭಿವೃದ್ಧಿ, ಮಹಿಳಾ ಸುರಕ್ಷತೆ, ಉತ್ತಮ ಸಾರಿಗೆ ಮತ್ತು ಕೈಗೆಟುಕುವ ವಸತಿಗಳ ಮೇಲೆ ಬಿಜೆಪಿ ಕೇಂದ್ರೀಕರಿಸಿದೆ. ಸಾರ್ವಜನಿಕ ಸಲಹೆಗಳ ಆಧಾರದ ಮೇಲೆ ಸಂಕಲ್ಪ ಪತ್ರ ಬಿಡುಗಡೆ ಮಾಡಲಾಗಿದೆ.

ದೆಹಲಿ ಚುನಾವಣೆಗೆ ಬಿಜೆಪಿಯಿಂದ ಸಂಕಲ್ಪ ಪತ್ರ ಬಿಡುಗಡೆ; ಪ್ರಮುಖ ಭರವಸೆಗಳು ಹೀಗಿವೆ
Amit Shah
Follow us
ಸುಷ್ಮಾ ಚಕ್ರೆ
|

Updated on: Jan 25, 2025 | 6:24 PM

ನವದೆಹಲಿ: ಕೇಂದ್ರ ಗೃಹ ಸಚಿವ ಅಮಿತ್ ಶಾ ದೆಹಲಿ ಬಿಜೆಪಿ ಪ್ರಧಾನ ಕಚೇರಿಯಲ್ಲಿ ಬಿಜೆಪಿಯ ‘ವಿಕಸಿತ್ ದೆಹಲಿ ಸಂಕಲ್ಪ ಪತ್ರ’ದ ಮೂರನೇ ಮತ್ತು ಅಂತಿಮ ಭಾಗವನ್ನು ಅನಾವರಣಗೊಳಿಸಿದ್ದಾರೆ. ಈ ಪ್ರಣಾಳಿಕೆಯು ಮುಂಬರುವ ದೆಹಲಿ ವಿಧಾನಸಭಾ ಚುನಾವಣೆಗೆ ಬಿಜೆಪಿಯ ದೃಷ್ಟಿಕೋನ ಮತ್ತು ಪ್ರಮುಖ ಭರವಸೆಗಳನ್ನು ವಿವರಿಸುತ್ತದೆ. “ಬಿಜೆಪಿಗೆ ಚುನಾವಣೆ ಪ್ರಣಾಳಿಕೆಯು ನಂಬಿಕೆಯ ವಿಷಯವಾಗಿದೆಯೇ ವಿನಃ ಖಾಲಿ ಭರವಸೆಗಳಲ್ಲ” ಎಂದು ಹೇಳುವ ಮೂಲಕ ಅಮಿತ್ ಶಾ ಪ್ರಣಾಳಿಕೆಯ ವಿಶ್ವಾಸಾರ್ಹತೆಯನ್ನು ಒತ್ತಿ ಹೇಳಿದ್ದಾರೆ.

1.8 ಲಕ್ಷ ವ್ಯಕ್ತಿಗಳು ಮತ್ತು 62,000 ಗುಂಪುಗಳ ಇನ್‌ಪುಟ್‌ಗಳ ಆಧಾರದ ಮೇಲೆ ದಾಖಲೆಯನ್ನು ಸಿದ್ಧಪಡಿಸಲಾಗಿದೆ ಎಂದು ಅಮಿತ್ ಶಾ ಬಹಿರಂಗಪಡಿಸಿದ್ದಾರೆ. ಇದು ಜನರ ಆಕಾಂಕ್ಷೆಗಳನ್ನು ಪ್ರತಿಬಿಂಬಿಸುತ್ತದೆ.

ಚುನಾವಣೆಯ ಸಮಯದಲ್ಲಿ ಸುಳ್ಳು ಭರವಸೆಗಳನ್ನು ನೀಡಿ ಮತದಾರರನ್ನು ದಾರಿ ತಪ್ಪಿಸಿದ್ದಕ್ಕಾಗಿ ಅಮಿತ್ ಶಾ ತಮ್ಮ ಭಾಷಣದಲ್ಲಿ ಟೀಕಿಸಿದ್ದಾರೆ. ಸಚಿವರಿಗೆ ಅಧಿಕೃತ ಬಂಗಲೆಗಳನ್ನು ನೀಡುವುದಿಲ್ಲ ಎಂಬ ಅರವಿಂದ್ ಕೇಜ್ರಿವಾಲ್ ಅವರ ಹಿಂದಿನ ಬದ್ಧತೆಯನ್ನು ಉಲ್ಲೇಖಿಸಿದ ಅಮಿತ್ ಶಾ “ಯಾವುದೇ ಸಚಿವರು ಸರ್ಕಾರಿ ಬಂಗಲೆಗಳನ್ನು ತೆಗೆದುಕೊಳ್ಳುವುದಿಲ್ಲ ಎಂದು ಕೇಜ್ರಿವಾಲ್ ಭರವಸೆ ನೀಡಿದ್ದರು. ಆದರೆ, ಅವರು ಐಷಾರಾಮಿ ‘ಶೀಶ್ ಮಹಲ್’ ಸೇರಿದಂತೆ ಐಷಾರಾಮಿ ಮನೆಗಳಲ್ಲಿ ವಾಸಿಸುತ್ತಿದ್ದರು” ಎಂದು ಅಮಿತ್ ಶಾ ಹೇಳಿದ್ದಾರೆ.

ಇದನ್ನೂ ಓದಿ: ಮೋದಿ ಅಮಿತ್ ಶಾಗೆ ಸುದ್ದಿ ಮುಟ್ಟಿಸಿದ್ದೇವೆ, ನಿಮ್ಮ ಪರ ನಾವಿದ್ದೇವೆ: ಶ್ರೀರಾಮುಲುಗೆ ಭರವಸೆ ಕೊಟ್ರಂತೆ ನಡ್ಡಾ

ಬಿಜೆಪಿಯ ಸಂಕಲ್ಪ ಪತ್ರ ದೆಹಲಿ ನಿವಾಸಿಗಳು ಎದುರಿಸುತ್ತಿರುವ ಪ್ರಮುಖ ಸವಾಲುಗಳನ್ನು ಪರಿಹರಿಸಲು ಭರವಸೆ ನೀಡುತ್ತದೆ ಮತ್ತು ಅಭಿವೃದ್ಧಿ ಹೊಂದಿದ ಮತ್ತು ಪ್ರಗತಿಪರ ರಾಷ್ಟ್ರೀಯ ರಾಜಧಾನಿಗಾಗಿ ಮಾರ್ಗಸೂಚಿಯನ್ನು ರೂಪಿಸುತ್ತದೆ. ಆಪ್ ನೇತೃತ್ವದ ದೆಹಲಿ ಸರ್ಕಾರದ ವಿರುದ್ಧ ಭ್ರಷ್ಟಾಚಾರದ ಆರೋಪ ಮಾಡಿದ ಅಮಿತ್ ಶಾ, ಈಡೇರಿಸದ ಭರವಸೆಗಳು ಮತ್ತು ವಿವಿಧ ಕ್ಷೇತ್ರಗಳಲ್ಲಿನ ಹಗರಣಗಳೊಂದಿಗೆ ಸರ್ಕಾರವು ಸಾರ್ವಜನಿಕ ನಂಬಿಕೆಗೆ ದ್ರೋಹ ಮಾಡಿದೆ ಎಂದು ಟೀಕಿಸಿದರು.

ಯಮುನಾ ನದಿಯನ್ನು ಸ್ವಚ್ಛಗೊಳಿಸಿ ಅದರಲ್ಲಿ ಪವಿತ್ರ ಸ್ನಾನ ಮಾಡುವ ಕೇಜ್ರಿವಾಲ್ ಸರ್ಕಾರದ 7 ವರ್ಷಗಳ ಹಿಂದಿನ ಭರವಸೆಯನ್ನು ಅಮಿತ್ ಶಾ ಅಣಕಿಸಿದರು. “ದೆಹಲಿಗರು ಇನ್ನೂ ಕಾಯುತ್ತಿದ್ದಾರೆ. ಕೇಜ್ರಿವಾಲ್ ಯಮುನಾ ನದಿಯಲ್ಲಿ ಸ್ನಾನ ಮಾಡಲು ಸಾಧ್ಯವಾಗದಿದ್ದರೆ ಅವರು ಕನಿಷ್ಠ ಕುಂಭಕ್ಕೆ ಹೋಗಿ ತಮ್ಮ ಭರವಸೆಯನ್ನು ಈಡೇರಿಸಬೇಕು” ಎಂದು ಶಾ ಟೀಕಿಸಿದರು.

ಬಿಜೆಪಿ ನಾಯಕರು ಎಎಪಿ ಸರ್ಕಾರದ ಅಡಿಯಲ್ಲಿ ಕಂಡುಬಂದ ಆಪಾದಿತ ಹಗರಣಗಳನ್ನು ಪಟ್ಟಿ ಮಾಡಿದ್ದಾರೆ. ಅವುಗಳೆಂದರೆ,

ಇದನ್ನೂ ಓದಿ: ರಕ್ಷಣಾ, ವ್ಯಾಪಾರ ಸಂಬಂಧ ಗಟ್ಟಿಗೊಳಿಸಲು ಒಪ್ಪಿಗೆ; ಇಂಡೋನೇಷ್ಯಾ ಅಧ್ಯಕ್ಷ ಸುಬಿಯಾಂಟೊ ಜೊತೆ ಮೋದಿ ಮಾತುಕತೆ

– ದೆಹಲಿ ಜಲ ಮಂಡಳಿ ಹಗರಣ

– ಪಡಿತರ ವಿತರಣಾ ಹಗರಣ

– ಡಿಟಿಸಿ ಹಗರಣ

– ಸಿಸಿಟಿವಿ ಸ್ಥಾಪನೆ ಹಗರಣ

– ವೈದ್ಯಕೀಯ ಪರೀಕ್ಷಾ ಹಗರಣ

ದೆಹಲಿಗಾಗಿ ಅಮಿತ್ ಶಾ ಈ ಕೆಳಗಿನ ಭರವಸೆಗಳನ್ನು ನೀಡಿದರು…

– ರಾಜಧಾನಿ ದೆಹಲಿಯಲ್ಲಿ ಭ್ರಷ್ಟಾಚಾರ ಮುಕ್ತ ಆಡಳಿತ.

– 1,700ಕ್ಕೂ ಹೆಚ್ಚು ಅನಧಿಕೃತ ವಸಾಹತುಗಳನ್ನು ಕ್ರಮಬದ್ಧಗೊಳಿಸುವುದು.

– ನ್ಯಾಯಾಂಗ ಪ್ರಾಧಿಕಾರದ ಮೂಲಕ 1,300 ಸೀಲ್ ಮಾಡಲಾದ ಅಂಗಡಿಗಳನ್ನು ಪುನಃ ತೆರೆಯುವುದು.

– ಗುತ್ತಿಗೆ ಪಡೆದ ಆಸ್ತಿಗಳಲ್ಲಿ ವಾಸಿಸುವ ಪಾಕಿಸ್ತಾನಿ ನಿರಾಶ್ರಿತರಿಗೆ ಮಾಲೀಕತ್ವದ ಹಕ್ಕುಗಳು.

ಪ್ರಧಾನಿ ನರೇಂದ್ರ ಮೋದಿಯವರ ನಾಯಕತ್ವದಲ್ಲಿ ಬಿಜೆಪಿ ಮಾತ್ರ ಈ ಭರವಸೆಗಳನ್ನು ಈಡೇರಿಸಲು ಸಾಧ್ಯ ಎಂದು ಅಮಿತ್ ಶಾ ದೆಹಲಿಯ ಮತದಾರರಿಗೆ ಭರವಸೆ ನೀಡಿದರು. “ಇತರರು ಕೇವಲ ಭರವಸೆಗಳನ್ನು ನೀಡುತ್ತಾರೆ, ಆದರೆ ಮೋದಿ ಅವುಗಳನ್ನು ಈಡೇರಿಸುತ್ತಾರೆ” ಎಂದು ಅವರು ಪ್ರತಿಪಾದಿಸಿದರು.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ನೀರಿಗಾಗಿ ಪ್ರಾಣ ಕಳೆದುಕೊಂಡ ಕೋತಿ ಮರಿ: ಇಲ್ಲಿದೆ ಮನಕಲಕುವ ದೃಶ್ಯ
ನೀರಿಗಾಗಿ ಪ್ರಾಣ ಕಳೆದುಕೊಂಡ ಕೋತಿ ಮರಿ: ಇಲ್ಲಿದೆ ಮನಕಲಕುವ ದೃಶ್ಯ
ರೋಹಿತ್ ಶರ್ಮಾಗೆ ಬಿಸಿಸಿಐನಿಂದ ವಿಶೇಷ ಗೌರವ; ವಿಡಿಯೋ ನೋಡಿ
ರೋಹಿತ್ ಶರ್ಮಾಗೆ ಬಿಸಿಸಿಐನಿಂದ ವಿಶೇಷ ಗೌರವ; ವಿಡಿಯೋ ನೋಡಿ
ಬುಸ್ ಬುಸ್ ನಾಗಪ್ಪನಿಂದ ಬೈಕ್ ಸವಾರ ಬಚಾವ್: ಎದೆ ಝಲ್​ ಎನ್ನಿಸುವ ವಿಡಿಯೋ
ಬುಸ್ ಬುಸ್ ನಾಗಪ್ಪನಿಂದ ಬೈಕ್ ಸವಾರ ಬಚಾವ್: ಎದೆ ಝಲ್​ ಎನ್ನಿಸುವ ವಿಡಿಯೋ
‘ಹಾಯ್ ಜನರೇ’: ರೀಲ್ಸ್ ಮಾತ್ರವಲ್ಲ ಈಗ ಸಿನಿಮಾಕ್ಕೂ ಬಂದ ಕಿಪಿ ಕೀರ್ತಿ
‘ಹಾಯ್ ಜನರೇ’: ರೀಲ್ಸ್ ಮಾತ್ರವಲ್ಲ ಈಗ ಸಿನಿಮಾಕ್ಕೂ ಬಂದ ಕಿಪಿ ಕೀರ್ತಿ
ವರದಿಯ ಬಗ್ಗೆ ಸಿಎಂ ಎಲ್ಲರ ಅಭಿಪ್ರಾಯ ಕೇಳಿದ್ದಾರೆ: ರಾಮಲಿಂಗಾರೆಡ್ಡಿ
ವರದಿಯ ಬಗ್ಗೆ ಸಿಎಂ ಎಲ್ಲರ ಅಭಿಪ್ರಾಯ ಕೇಳಿದ್ದಾರೆ: ರಾಮಲಿಂಗಾರೆಡ್ಡಿ
ಬಿಜೆಪಿಯನ್ನು ಬಹುಮತದೊಂದಿಗೆ ಅಧಿಕಾರಕ್ಕೆ ತರೋದು ಎಲ್ಲರ ಸಂಕಲ್ಪ: ವಿಜಯೇಂದ್ರ
ಬಿಜೆಪಿಯನ್ನು ಬಹುಮತದೊಂದಿಗೆ ಅಧಿಕಾರಕ್ಕೆ ತರೋದು ಎಲ್ಲರ ಸಂಕಲ್ಪ: ವಿಜಯೇಂದ್ರ
ಮೋದಿಯನ್ನು ಭೇಟಿಯಾಗಿ ವಕ್ಫ್ ಕಾಯ್ದೆಗೆ ಧನ್ಯವಾದ ಸಲ್ಲಿಸಿದ ಮುಸ್ಲಿಂ ನಿಯೋಗ!
ಮೋದಿಯನ್ನು ಭೇಟಿಯಾಗಿ ವಕ್ಫ್ ಕಾಯ್ದೆಗೆ ಧನ್ಯವಾದ ಸಲ್ಲಿಸಿದ ಮುಸ್ಲಿಂ ನಿಯೋಗ!
ಮುಷ್ಕರದಿಂದ ಸಾರ್ವಜನಿಕರಿಗಾದ ತೊಂದರೆಗಾಗಿ ವಿಷಾದಿಸುತ್ತೇವೆ: ಷಣ್ಮುಗಪ್ಪ
ಮುಷ್ಕರದಿಂದ ಸಾರ್ವಜನಿಕರಿಗಾದ ತೊಂದರೆಗಾಗಿ ವಿಷಾದಿಸುತ್ತೇವೆ: ಷಣ್ಮುಗಪ್ಪ
ಎಲ್ಲ ಧರ್ಮಗಳಲ್ಲೂ ಶೋಷಿತರು ಮತ್ತು ಬಡವರಿದ್ದಾರೆ: ಡಿಕೆ ಸುರೇಶ್
ಎಲ್ಲ ಧರ್ಮಗಳಲ್ಲೂ ಶೋಷಿತರು ಮತ್ತು ಬಡವರಿದ್ದಾರೆ: ಡಿಕೆ ಸುರೇಶ್
ಅಡುಗೆ ಅನಿಲ ಸಿಲಿಂಡರ್ ಬೆಲೆಯೇರಿಕೆ ವಿರುದ್ಧ ಕಾಂಗ್ರೆಸ್ ನಾಯಕರ ಪ್ರತಿಭಟನೆ
ಅಡುಗೆ ಅನಿಲ ಸಿಲಿಂಡರ್ ಬೆಲೆಯೇರಿಕೆ ವಿರುದ್ಧ ಕಾಂಗ್ರೆಸ್ ನಾಯಕರ ಪ್ರತಿಭಟನೆ