AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Shadow Killing: ಭೀತಿ ಹುಟ್ಟಿಸುತ್ತಿರುವ ಹತ್ಯೆ, ಕಾಶ್ಮೀರ ತೊರೆಯುತ್ತಿರುವ ಹಿಂದೂಗಳು, ನಾಳೆ ಅಮಿತ್ ಶಾ ಭೇಟಿ

ಕಾಶ್ಮೀರದಿಂದ ಪಂಡಿತ ಸಮುದಾಯಕ್ಕೆ ಸೇರಿದವರು ಜಮ್ಮುವಿನತ್ತ ವಲಸೆ ಹೋಗುತ್ತಿದ್ದಾರೆ.

Shadow Killing: ಭೀತಿ ಹುಟ್ಟಿಸುತ್ತಿರುವ ಹತ್ಯೆ, ಕಾಶ್ಮೀರ ತೊರೆಯುತ್ತಿರುವ ಹಿಂದೂಗಳು, ನಾಳೆ ಅಮಿತ್ ಶಾ ಭೇಟಿ
ಕೇಂದ್ರ ಗೃಹ ಸಚಿವ ಅಮಿತ್ ಶಾ
TV9 Web
| Updated By: Ghanashyam D M | ಡಿ.ಎಂ.ಘನಶ್ಯಾಮ|

Updated on:Jun 02, 2022 | 3:30 PM

Share

ದೆಹಲಿ: ಭಯೋತ್ಪಾದಕರು ಹಿಂದೂಗಳನ್ನು ಪ್ರತ್ಯೇಕಿಸಿ, ಬೆನ್ನಟ್ಟಿ ಹತ್ಯೆ ಮಾಡುವ ಪ್ರಕರಣಗಳು ಹೆಚ್ಚಾಗಿರುವ ಹಿನ್ನೆಲೆಯಲ್ಲಿ ಕಾಶ್ಮೀರದಿಂದ (Jammu Kashmir) ಪಂಡಿತ ಸಮುದಾಯಕ್ಕೆ ಸೇರಿದವರು ಜಮ್ಮುವಿನತ್ತ ವಲಸೆ ಹೋಗುತ್ತಿದ್ದಾರೆ. ಕಳೆದ ಒಂದು ವಾರದಲ್ಲಿಯೇ 100ಕ್ಕೂ ಹೆಚ್ಚು ಕುಟುಂಬಗಳು ಕಾಶ್ಮೀರ ಕಣಿವೆ ತೊರೆದು, ಜಮ್ಮುವಿಗೆ ವಲಸೆ ಬಂದಿವೆ. ಕುಲ್ಗಾಮ್​ನಲ್ಲಿ ಶಿಕ್ಷಕಿ ರಜನಿ ಬಾಲಾ ಹತ್ಯೆಯ ನಂತರ ಪಂಡಿತ ಸಮುದಾಯದಲ್ಲಿ ಭೀತಿ ಆವರಿಸಿದ್ದು, ಭದ್ರತೆ ಹೆಚ್ಚಿಸಬೇಕೆಂಬ ಆಗ್ರಹ ಕೇಳಿ ಬರುತ್ತಿದೆ.

ಬಾರಾಮುಲ್ಲಾದ ಕಾಶ್ಮೀರಿ ಪಂಡಿತ್ ಕಾಲೊನಿಯಲ್ಲಿ ನೆಲೆಸಿದ್ದ 300 ಹಿಂದೂ ಕುಟುಂಬಗಳ ಪೈಕಿ ಅರ್ಧದಷ್ಟು ಜನರು ಈಗಾಗಲೇ ಕಾಶ್ಮೀರ ತೊರೆದಿದ್ದಾರೆ. ಕಳೆದ 26 ದಿನಗಳಲ್ಲಿ 8 ಮಂದಿಯನ್ನು ಉಗ್ರಗಾಮಿಗಳು ಹತ್ಯೆ ಮಾಡಿದ್ದಾರೆ.

ಗುರಿಯಾಗಿಸಿ ಕೊಲ್ಲುವ ಸಂಚು ವಿಫಲಗೊಳಿಸುವುದು ಮತ್ತು ಕಾಶ್ಮೀರಿ ಪಂಡಿತ ಸಮುದಾಯದಲ್ಲಿ ಧೈರ್ಯ ತುಂಬಲು ತೆಗೆದುಕೊಳ್ಳಬೇಕಾದ ಕ್ರಮಗಳ ಬಗ್ಗೆ ಚರ್ಚಿಸಲು ನಾಳೆ ದೆಹಲಿಯಲ್ಲಿ ಉನ್ನತ ಮಟ್ಟದ ಸಭೆ ನಡೆಯಲಿದೆ. ಜಮ್ಮು ಮತ್ತು ಕಾಶ್ಮೀರದ ಲೆಫ್ಟಿನೆಂಟ್​ ಗವರ್ನರ್​ ಮನೋಜ್ ಸಿನ್ಹಾ ಜೊತೆಗೆ ಅಮಿತ್ ಶಾ ಚರ್ಚೆ ನಡೆಸಲಿದ್ದಾರೆ. ಸಭೆಯಲ್ಲಿ ಜಮ್ಮು-ಕಾಶ್ಮೀರದ ಡಿಜಿಪಿ, ಗೃಹ ಇಲಾಖೆ ಅಧಿಕಾರಿಗಳು, ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್ ಡೊಬಾಲ್ ಸಹ ಭಾಗವಹಿಸಲಿದ್ದಾರೆ.

ಬ್ಯಾಂಕ್ ಮ್ಯಾನೇಜರ್ ಮೇಲೆ ಗುಂಡು ಹಾರಿಸಿ ಬರ್ಬರ ಹತ್ಯೆ

ಕುಲ್ಗಾಂ ಜಿಲ್ಲೆಯ ಶಾಲೆಯ ಹೊರಗೆ ಮಹಿಳಾ ಶಿಕ್ಷಕಿಯೊಬ್ಬರನ್ನು ಕೊಲೆ ಮಾಡಿದ ಬೆನ್ನಲ್ಲೇ ದಕ್ಷಿಣ ಕಾಶ್ಮೀರದ ಕುಲ್ಗಾಮ್‌ನಲ್ಲಿ ಶಂಕಿತ ಉಗ್ರಗಾಮಿಗಳು ರಾಜಸ್ಥಾನದ (Rajasthan) ಬ್ಯಾಂಕ್ ಮ್ಯಾನೇಜರ್ ಅನ್ನು ಗುಂಡಿಕ್ಕಿ ಕೊಂದಿದ್ದಾರೆ. ಈ ಘಟನೆ ದೇಶಾದ್ಯಂತ ಮತ್ತೆ ಸಂಚಲನ ಮೂಡಿಸಿದೆ. ಕುಲ್ಗಾಮ್‌ನ ಅರೆಹ್ ಮೋಹನ್‌ಪೋರಾ ಗ್ರಾಮದಲ್ಲಿ ಎಲ್ಲಕಿ ದೇಹತಿ ಬ್ಯಾಂಕ್‌ನ (ಇಡಿಬಿ) ಹನುಮಾನ್‌ಗಢದ ವಿಜಯ್ ಕುಮಾರ್ ಎಂದು ಗುರುತಿಸಲಾದ ಬ್ಯಾಂಕ್ ಮ್ಯಾನೇಜರ್ ಮೇಲೆ ಉಗ್ರರು ಗುಂಡಿನ (Terrorist Attack) ದಾಳಿ ನಡೆಸಿದ್ದಾರೆ. ಈ ಗುಂಡಿನ ದಾಳಿಯಲ್ಲಿ ತೀವ್ರವಾಗಿ ಗಾಯಗೊಂಡ ಕುಮಾರ್ ಅವರನ್ನು ಆಸ್ಪತ್ರೆಗೆ ಸಾಗಿಸಲಾಗಿದೆ. ಅಲ್ಲಿ ಅವರು ಮೃತಪಟ್ಟಿರುವುದಾಗಿ ವೈದ್ಯರು ಘೋಷಿಸಿದ್ದಾರೆ.

Published On - 3:29 pm, Thu, 2 June 22

ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆಶಿ ತಂಡದ ಡಿನ್ನರ್​​ ಮೀಟಿಂಗ್​​ ಬಗ್ಗೆ ಸೋಮಶೇಖರ್​​ ಬಿಗ್​​ ಅಪ್ಡೇಟ್​​
ಡಿಕೆಶಿ ತಂಡದ ಡಿನ್ನರ್​​ ಮೀಟಿಂಗ್​​ ಬಗ್ಗೆ ಸೋಮಶೇಖರ್​​ ಬಿಗ್​​ ಅಪ್ಡೇಟ್​​
ಕಾಂಗ್ರೆಸ್​ನ ನೂರಕ್ಕೂ ಹೆಚ್ಚು ಶಾಸಕರು ಡಿಕೆಶಿ ತೆಕ್ಕೆಗೆ?
ಕಾಂಗ್ರೆಸ್​ನ ನೂರಕ್ಕೂ ಹೆಚ್ಚು ಶಾಸಕರು ಡಿಕೆಶಿ ತೆಕ್ಕೆಗೆ?
ಕಷ್ಟಪಟ್ಟಿದ್ದ ಡಿಕೆಶಿಗೆ ಕೊನೆಗೂ ಫಲ, ಅಧಿವೇಶನದ ಬಳಿಕ ಶುಭಸುದ್ದಿ?
ಕಷ್ಟಪಟ್ಟಿದ್ದ ಡಿಕೆಶಿಗೆ ಕೊನೆಗೂ ಫಲ, ಅಧಿವೇಶನದ ಬಳಿಕ ಶುಭಸುದ್ದಿ?
‘ಕರ್ನಾಟಕ ಸಹೋದರನ ಮನೆ, ಕನ್ನಡವೇ ಸತ್ಯ, ಕನ್ನಡವೇ ನಿತ್ಯ: ಬಾಲಯ್ಯ
‘ಕರ್ನಾಟಕ ಸಹೋದರನ ಮನೆ, ಕನ್ನಡವೇ ಸತ್ಯ, ಕನ್ನಡವೇ ನಿತ್ಯ: ಬಾಲಯ್ಯ
ಸ್ಕೈಡೈವ್ ಮಾಡುವಾಗ ವಿಮಾನದ ರೆಕ್ಕೆಗೆ ಸಿಲುಕಿದ ಪ್ಯಾರಾಚೂಟ್
ಸ್ಕೈಡೈವ್ ಮಾಡುವಾಗ ವಿಮಾನದ ರೆಕ್ಕೆಗೆ ಸಿಲುಕಿದ ಪ್ಯಾರಾಚೂಟ್
ಡಿಕೆ ಶಿವಕುಮಾರ್ ಡಿನ್ನರ್ ಮೀಟಿಂಗ್ ರಹಸ್ಯ ಇಲ್ಲಿದೆ ನೋಡಿ
ಡಿಕೆ ಶಿವಕುಮಾರ್ ಡಿನ್ನರ್ ಮೀಟಿಂಗ್ ರಹಸ್ಯ ಇಲ್ಲಿದೆ ನೋಡಿ
ಹುಬ್ಬಳ್ಳಿ: ಮಹಿಳೆಯರ ಮುಂದೆ ಅಸಭ್ಯವಾಗಿ ವರ್ತಿಸಿದವನಿಗೆ ಧರ್ಮದೇಟು!
ಹುಬ್ಬಳ್ಳಿ: ಮಹಿಳೆಯರ ಮುಂದೆ ಅಸಭ್ಯವಾಗಿ ವರ್ತಿಸಿದವನಿಗೆ ಧರ್ಮದೇಟು!