AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Shadow Killing: ಭೀತಿ ಹುಟ್ಟಿಸುತ್ತಿರುವ ಹತ್ಯೆ, ಕಾಶ್ಮೀರ ತೊರೆಯುತ್ತಿರುವ ಹಿಂದೂಗಳು, ನಾಳೆ ಅಮಿತ್ ಶಾ ಭೇಟಿ

ಕಾಶ್ಮೀರದಿಂದ ಪಂಡಿತ ಸಮುದಾಯಕ್ಕೆ ಸೇರಿದವರು ಜಮ್ಮುವಿನತ್ತ ವಲಸೆ ಹೋಗುತ್ತಿದ್ದಾರೆ.

Shadow Killing: ಭೀತಿ ಹುಟ್ಟಿಸುತ್ತಿರುವ ಹತ್ಯೆ, ಕಾಶ್ಮೀರ ತೊರೆಯುತ್ತಿರುವ ಹಿಂದೂಗಳು, ನಾಳೆ ಅಮಿತ್ ಶಾ ಭೇಟಿ
ಕೇಂದ್ರ ಗೃಹ ಸಚಿವ ಅಮಿತ್ ಶಾ
TV9 Web
| Edited By: |

Updated on:Jun 02, 2022 | 3:30 PM

Share

ದೆಹಲಿ: ಭಯೋತ್ಪಾದಕರು ಹಿಂದೂಗಳನ್ನು ಪ್ರತ್ಯೇಕಿಸಿ, ಬೆನ್ನಟ್ಟಿ ಹತ್ಯೆ ಮಾಡುವ ಪ್ರಕರಣಗಳು ಹೆಚ್ಚಾಗಿರುವ ಹಿನ್ನೆಲೆಯಲ್ಲಿ ಕಾಶ್ಮೀರದಿಂದ (Jammu Kashmir) ಪಂಡಿತ ಸಮುದಾಯಕ್ಕೆ ಸೇರಿದವರು ಜಮ್ಮುವಿನತ್ತ ವಲಸೆ ಹೋಗುತ್ತಿದ್ದಾರೆ. ಕಳೆದ ಒಂದು ವಾರದಲ್ಲಿಯೇ 100ಕ್ಕೂ ಹೆಚ್ಚು ಕುಟುಂಬಗಳು ಕಾಶ್ಮೀರ ಕಣಿವೆ ತೊರೆದು, ಜಮ್ಮುವಿಗೆ ವಲಸೆ ಬಂದಿವೆ. ಕುಲ್ಗಾಮ್​ನಲ್ಲಿ ಶಿಕ್ಷಕಿ ರಜನಿ ಬಾಲಾ ಹತ್ಯೆಯ ನಂತರ ಪಂಡಿತ ಸಮುದಾಯದಲ್ಲಿ ಭೀತಿ ಆವರಿಸಿದ್ದು, ಭದ್ರತೆ ಹೆಚ್ಚಿಸಬೇಕೆಂಬ ಆಗ್ರಹ ಕೇಳಿ ಬರುತ್ತಿದೆ.

ಬಾರಾಮುಲ್ಲಾದ ಕಾಶ್ಮೀರಿ ಪಂಡಿತ್ ಕಾಲೊನಿಯಲ್ಲಿ ನೆಲೆಸಿದ್ದ 300 ಹಿಂದೂ ಕುಟುಂಬಗಳ ಪೈಕಿ ಅರ್ಧದಷ್ಟು ಜನರು ಈಗಾಗಲೇ ಕಾಶ್ಮೀರ ತೊರೆದಿದ್ದಾರೆ. ಕಳೆದ 26 ದಿನಗಳಲ್ಲಿ 8 ಮಂದಿಯನ್ನು ಉಗ್ರಗಾಮಿಗಳು ಹತ್ಯೆ ಮಾಡಿದ್ದಾರೆ.

ಗುರಿಯಾಗಿಸಿ ಕೊಲ್ಲುವ ಸಂಚು ವಿಫಲಗೊಳಿಸುವುದು ಮತ್ತು ಕಾಶ್ಮೀರಿ ಪಂಡಿತ ಸಮುದಾಯದಲ್ಲಿ ಧೈರ್ಯ ತುಂಬಲು ತೆಗೆದುಕೊಳ್ಳಬೇಕಾದ ಕ್ರಮಗಳ ಬಗ್ಗೆ ಚರ್ಚಿಸಲು ನಾಳೆ ದೆಹಲಿಯಲ್ಲಿ ಉನ್ನತ ಮಟ್ಟದ ಸಭೆ ನಡೆಯಲಿದೆ. ಜಮ್ಮು ಮತ್ತು ಕಾಶ್ಮೀರದ ಲೆಫ್ಟಿನೆಂಟ್​ ಗವರ್ನರ್​ ಮನೋಜ್ ಸಿನ್ಹಾ ಜೊತೆಗೆ ಅಮಿತ್ ಶಾ ಚರ್ಚೆ ನಡೆಸಲಿದ್ದಾರೆ. ಸಭೆಯಲ್ಲಿ ಜಮ್ಮು-ಕಾಶ್ಮೀರದ ಡಿಜಿಪಿ, ಗೃಹ ಇಲಾಖೆ ಅಧಿಕಾರಿಗಳು, ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್ ಡೊಬಾಲ್ ಸಹ ಭಾಗವಹಿಸಲಿದ್ದಾರೆ.

ಬ್ಯಾಂಕ್ ಮ್ಯಾನೇಜರ್ ಮೇಲೆ ಗುಂಡು ಹಾರಿಸಿ ಬರ್ಬರ ಹತ್ಯೆ

ಕುಲ್ಗಾಂ ಜಿಲ್ಲೆಯ ಶಾಲೆಯ ಹೊರಗೆ ಮಹಿಳಾ ಶಿಕ್ಷಕಿಯೊಬ್ಬರನ್ನು ಕೊಲೆ ಮಾಡಿದ ಬೆನ್ನಲ್ಲೇ ದಕ್ಷಿಣ ಕಾಶ್ಮೀರದ ಕುಲ್ಗಾಮ್‌ನಲ್ಲಿ ಶಂಕಿತ ಉಗ್ರಗಾಮಿಗಳು ರಾಜಸ್ಥಾನದ (Rajasthan) ಬ್ಯಾಂಕ್ ಮ್ಯಾನೇಜರ್ ಅನ್ನು ಗುಂಡಿಕ್ಕಿ ಕೊಂದಿದ್ದಾರೆ. ಈ ಘಟನೆ ದೇಶಾದ್ಯಂತ ಮತ್ತೆ ಸಂಚಲನ ಮೂಡಿಸಿದೆ. ಕುಲ್ಗಾಮ್‌ನ ಅರೆಹ್ ಮೋಹನ್‌ಪೋರಾ ಗ್ರಾಮದಲ್ಲಿ ಎಲ್ಲಕಿ ದೇಹತಿ ಬ್ಯಾಂಕ್‌ನ (ಇಡಿಬಿ) ಹನುಮಾನ್‌ಗಢದ ವಿಜಯ್ ಕುಮಾರ್ ಎಂದು ಗುರುತಿಸಲಾದ ಬ್ಯಾಂಕ್ ಮ್ಯಾನೇಜರ್ ಮೇಲೆ ಉಗ್ರರು ಗುಂಡಿನ (Terrorist Attack) ದಾಳಿ ನಡೆಸಿದ್ದಾರೆ. ಈ ಗುಂಡಿನ ದಾಳಿಯಲ್ಲಿ ತೀವ್ರವಾಗಿ ಗಾಯಗೊಂಡ ಕುಮಾರ್ ಅವರನ್ನು ಆಸ್ಪತ್ರೆಗೆ ಸಾಗಿಸಲಾಗಿದೆ. ಅಲ್ಲಿ ಅವರು ಮೃತಪಟ್ಟಿರುವುದಾಗಿ ವೈದ್ಯರು ಘೋಷಿಸಿದ್ದಾರೆ.

Published On - 3:29 pm, Thu, 2 June 22

Follow Us
Web contact
Web contact

TV9 Kannada

Read More
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ