Sign In

By signing in or creating an account, you agree with Associated Broadcasting Company's Terms & Conditions and Privacy Policy.

Shadow Killing: ಭೀತಿ ಹುಟ್ಟಿಸುತ್ತಿರುವ ಹತ್ಯೆ, ಕಾಶ್ಮೀರ ತೊರೆಯುತ್ತಿರುವ ಹಿಂದೂಗಳು, ನಾಳೆ ಅಮಿತ್ ಶಾ ಭೇಟಿ

ಕಾಶ್ಮೀರದಿಂದ ಪಂಡಿತ ಸಮುದಾಯಕ್ಕೆ ಸೇರಿದವರು ಜಮ್ಮುವಿನತ್ತ ವಲಸೆ ಹೋಗುತ್ತಿದ್ದಾರೆ.

Shadow Killing: ಭೀತಿ ಹುಟ್ಟಿಸುತ್ತಿರುವ ಹತ್ಯೆ, ಕಾಶ್ಮೀರ ತೊರೆಯುತ್ತಿರುವ ಹಿಂದೂಗಳು, ನಾಳೆ ಅಮಿತ್ ಶಾ ಭೇಟಿ
ಕೇಂದ್ರ ಗೃಹ ಸಚಿವ ಅಮಿತ್ ಶಾ
Follow us
TV9 Web
| Updated By: Ghanashyam D M | ಡಿ.ಎಂ.ಘನಶ್ಯಾಮ

Updated on:Jun 02, 2022 | 3:30 PM

ದೆಹಲಿ: ಭಯೋತ್ಪಾದಕರು ಹಿಂದೂಗಳನ್ನು ಪ್ರತ್ಯೇಕಿಸಿ, ಬೆನ್ನಟ್ಟಿ ಹತ್ಯೆ ಮಾಡುವ ಪ್ರಕರಣಗಳು ಹೆಚ್ಚಾಗಿರುವ ಹಿನ್ನೆಲೆಯಲ್ಲಿ ಕಾಶ್ಮೀರದಿಂದ (Jammu Kashmir) ಪಂಡಿತ ಸಮುದಾಯಕ್ಕೆ ಸೇರಿದವರು ಜಮ್ಮುವಿನತ್ತ ವಲಸೆ ಹೋಗುತ್ತಿದ್ದಾರೆ. ಕಳೆದ ಒಂದು ವಾರದಲ್ಲಿಯೇ 100ಕ್ಕೂ ಹೆಚ್ಚು ಕುಟುಂಬಗಳು ಕಾಶ್ಮೀರ ಕಣಿವೆ ತೊರೆದು, ಜಮ್ಮುವಿಗೆ ವಲಸೆ ಬಂದಿವೆ. ಕುಲ್ಗಾಮ್​ನಲ್ಲಿ ಶಿಕ್ಷಕಿ ರಜನಿ ಬಾಲಾ ಹತ್ಯೆಯ ನಂತರ ಪಂಡಿತ ಸಮುದಾಯದಲ್ಲಿ ಭೀತಿ ಆವರಿಸಿದ್ದು, ಭದ್ರತೆ ಹೆಚ್ಚಿಸಬೇಕೆಂಬ ಆಗ್ರಹ ಕೇಳಿ ಬರುತ್ತಿದೆ.

ಬಾರಾಮುಲ್ಲಾದ ಕಾಶ್ಮೀರಿ ಪಂಡಿತ್ ಕಾಲೊನಿಯಲ್ಲಿ ನೆಲೆಸಿದ್ದ 300 ಹಿಂದೂ ಕುಟುಂಬಗಳ ಪೈಕಿ ಅರ್ಧದಷ್ಟು ಜನರು ಈಗಾಗಲೇ ಕಾಶ್ಮೀರ ತೊರೆದಿದ್ದಾರೆ. ಕಳೆದ 26 ದಿನಗಳಲ್ಲಿ 8 ಮಂದಿಯನ್ನು ಉಗ್ರಗಾಮಿಗಳು ಹತ್ಯೆ ಮಾಡಿದ್ದಾರೆ.

ಗುರಿಯಾಗಿಸಿ ಕೊಲ್ಲುವ ಸಂಚು ವಿಫಲಗೊಳಿಸುವುದು ಮತ್ತು ಕಾಶ್ಮೀರಿ ಪಂಡಿತ ಸಮುದಾಯದಲ್ಲಿ ಧೈರ್ಯ ತುಂಬಲು ತೆಗೆದುಕೊಳ್ಳಬೇಕಾದ ಕ್ರಮಗಳ ಬಗ್ಗೆ ಚರ್ಚಿಸಲು ನಾಳೆ ದೆಹಲಿಯಲ್ಲಿ ಉನ್ನತ ಮಟ್ಟದ ಸಭೆ ನಡೆಯಲಿದೆ. ಜಮ್ಮು ಮತ್ತು ಕಾಶ್ಮೀರದ ಲೆಫ್ಟಿನೆಂಟ್​ ಗವರ್ನರ್​ ಮನೋಜ್ ಸಿನ್ಹಾ ಜೊತೆಗೆ ಅಮಿತ್ ಶಾ ಚರ್ಚೆ ನಡೆಸಲಿದ್ದಾರೆ. ಸಭೆಯಲ್ಲಿ ಜಮ್ಮು-ಕಾಶ್ಮೀರದ ಡಿಜಿಪಿ, ಗೃಹ ಇಲಾಖೆ ಅಧಿಕಾರಿಗಳು, ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್ ಡೊಬಾಲ್ ಸಹ ಭಾಗವಹಿಸಲಿದ್ದಾರೆ.

ಬ್ಯಾಂಕ್ ಮ್ಯಾನೇಜರ್ ಮೇಲೆ ಗುಂಡು ಹಾರಿಸಿ ಬರ್ಬರ ಹತ್ಯೆ

ಕುಲ್ಗಾಂ ಜಿಲ್ಲೆಯ ಶಾಲೆಯ ಹೊರಗೆ ಮಹಿಳಾ ಶಿಕ್ಷಕಿಯೊಬ್ಬರನ್ನು ಕೊಲೆ ಮಾಡಿದ ಬೆನ್ನಲ್ಲೇ ದಕ್ಷಿಣ ಕಾಶ್ಮೀರದ ಕುಲ್ಗಾಮ್‌ನಲ್ಲಿ ಶಂಕಿತ ಉಗ್ರಗಾಮಿಗಳು ರಾಜಸ್ಥಾನದ (Rajasthan) ಬ್ಯಾಂಕ್ ಮ್ಯಾನೇಜರ್ ಅನ್ನು ಗುಂಡಿಕ್ಕಿ ಕೊಂದಿದ್ದಾರೆ. ಈ ಘಟನೆ ದೇಶಾದ್ಯಂತ ಮತ್ತೆ ಸಂಚಲನ ಮೂಡಿಸಿದೆ. ಕುಲ್ಗಾಮ್‌ನ ಅರೆಹ್ ಮೋಹನ್‌ಪೋರಾ ಗ್ರಾಮದಲ್ಲಿ ಎಲ್ಲಕಿ ದೇಹತಿ ಬ್ಯಾಂಕ್‌ನ (ಇಡಿಬಿ) ಹನುಮಾನ್‌ಗಢದ ವಿಜಯ್ ಕುಮಾರ್ ಎಂದು ಗುರುತಿಸಲಾದ ಬ್ಯಾಂಕ್ ಮ್ಯಾನೇಜರ್ ಮೇಲೆ ಉಗ್ರರು ಗುಂಡಿನ (Terrorist Attack) ದಾಳಿ ನಡೆಸಿದ್ದಾರೆ. ಈ ಗುಂಡಿನ ದಾಳಿಯಲ್ಲಿ ತೀವ್ರವಾಗಿ ಗಾಯಗೊಂಡ ಕುಮಾರ್ ಅವರನ್ನು ಆಸ್ಪತ್ರೆಗೆ ಸಾಗಿಸಲಾಗಿದೆ. ಅಲ್ಲಿ ಅವರು ಮೃತಪಟ್ಟಿರುವುದಾಗಿ ವೈದ್ಯರು ಘೋಷಿಸಿದ್ದಾರೆ.

Published On - 3:29 pm, Thu, 2 June 22

VIDEO: ಗುಜರಾತ್ ಟೈಟಾನ್ಸ್​ ತಂಡಕ್ಕೆ ಸ್ಕೂಟರ್​ನಲ್ಲಿ ಸಿರಾಜ್ ಎಂಟ್ರಿ
VIDEO: ಗುಜರಾತ್ ಟೈಟಾನ್ಸ್​ ತಂಡಕ್ಕೆ ಸ್ಕೂಟರ್​ನಲ್ಲಿ ಸಿರಾಜ್ ಎಂಟ್ರಿ
ಹುಲಿಗೆಮ್ಮ ದೇವಸ್ಥಾನ ಹುಂಡಿ ಎಣಿಕೆ: 40 ದಿನಗಳಲ್ಲಿ 99 ಲಕ್ಷ ರೂ. ಸಂಗ್ರಹ
ಹುಲಿಗೆಮ್ಮ ದೇವಸ್ಥಾನ ಹುಂಡಿ ಎಣಿಕೆ: 40 ದಿನಗಳಲ್ಲಿ 99 ಲಕ್ಷ ರೂ. ಸಂಗ್ರಹ
ಯಾವ ಮನೆಯಲ್ಲಿ ಲಕ್ಷ್ಮೀ ದೇವಿ ನೆಲೆಸುವುದಿಲ್ಲ ಅಂತ ನಿಮಗೆ ಗೊತ್ತಾ?
ಯಾವ ಮನೆಯಲ್ಲಿ ಲಕ್ಷ್ಮೀ ದೇವಿ ನೆಲೆಸುವುದಿಲ್ಲ ಅಂತ ನಿಮಗೆ ಗೊತ್ತಾ?
ಚಂದ್ರ ಸಿಂಹ ರಾಶಿಯಲ್ಲಿ ಸಂಚರಿಸುವ ಈ ದಿನದ ರಾಶಿ ಭವಿಷ್ಯ ತಿಳಿಯಿರಿ
ಚಂದ್ರ ಸಿಂಹ ರಾಶಿಯಲ್ಲಿ ಸಂಚರಿಸುವ ಈ ದಿನದ ರಾಶಿ ಭವಿಷ್ಯ ತಿಳಿಯಿರಿ
ಕೆಟ್ಟು ಹೋದ ಸಾರಿಗೆ ಬಸ್​ ವೈಪರ್: ಮಳೆಯಲ್ಲಿ ಚಲಾಯಿಸಲು ಪರದಾಡಿದ ಚಾಲಕ
ಕೆಟ್ಟು ಹೋದ ಸಾರಿಗೆ ಬಸ್​ ವೈಪರ್: ಮಳೆಯಲ್ಲಿ ಚಲಾಯಿಸಲು ಪರದಾಡಿದ ಚಾಲಕ
ಮೃಗಾಲಯದ ಪ್ರಾಣಿಗಳಿಗೂ ತಟ್ಟಿದ ಬೇಸಿಗೆ ಬಿಸಿ: ಸ್ಪ್ರಿಂಕ್ಲರ್ ವ್ಯವಸ್ಥೆ
ಮೃಗಾಲಯದ ಪ್ರಾಣಿಗಳಿಗೂ ತಟ್ಟಿದ ಬೇಸಿಗೆ ಬಿಸಿ: ಸ್ಪ್ರಿಂಕ್ಲರ್ ವ್ಯವಸ್ಥೆ
ಕನ್ನಡ ಚಿತ್ರರಂಗದಲ್ಲಿ ಪುನೀತ್ ರೀತಿ ಡ್ಯಾನ್ಸ್ ಮಾಡೋರು ಯಾರೂ ಇಲ್ಲ: ರಕ್ಷಿತ
ಕನ್ನಡ ಚಿತ್ರರಂಗದಲ್ಲಿ ಪುನೀತ್ ರೀತಿ ಡ್ಯಾನ್ಸ್ ಮಾಡೋರು ಯಾರೂ ಇಲ್ಲ: ರಕ್ಷಿತ
ಬಜೆಟ್​ ಅಧಿವೇಶನ ಸಂದರ್ಭದಲ್ಲೇ ವಿಧಾನಸೌಧಕ್ಕೆ ಬಂದ ಬುಸ್​ ಬುಸ್ ನಾಗಪ್ಪ..!
ಬಜೆಟ್​ ಅಧಿವೇಶನ ಸಂದರ್ಭದಲ್ಲೇ ವಿಧಾನಸೌಧಕ್ಕೆ ಬಂದ ಬುಸ್​ ಬುಸ್ ನಾಗಪ್ಪ..!
ಯಾರ ಬಗ್ಗೆಯೂ ಪುನೀತ್ ನೆಗೆಟಿವ್ ಮಾತಾಡಿದ್ದು ನಾನು ಕೇಳಿಲ್ಲ: ಕೆ. ಕಲ್ಯಾಣ್
ಯಾರ ಬಗ್ಗೆಯೂ ಪುನೀತ್ ನೆಗೆಟಿವ್ ಮಾತಾಡಿದ್ದು ನಾನು ಕೇಳಿಲ್ಲ: ಕೆ. ಕಲ್ಯಾಣ್
ಸಿಎಂ ನೀಡಿರುವ ಸ್ಪಷ್ಟನೆ ರಾಜ್ಯದ ಜನತೆಗೆ ನೆಮ್ಮದಿ ನೀಡಿದೆ: ಸ್ಪೀಕರ್
ಸಿಎಂ ನೀಡಿರುವ ಸ್ಪಷ್ಟನೆ ರಾಜ್ಯದ ಜನತೆಗೆ ನೆಮ್ಮದಿ ನೀಡಿದೆ: ಸ್ಪೀಕರ್